Homeಮುಖಪುಟಚುನಾವಣಾ ಪ್ರಚಾರದ ವೇಳೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

ಚುನಾವಣಾ ಪ್ರಚಾರದ ವೇಳೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

- Advertisement -
- Advertisement -

ಈಶಾನ್ಯ ದೆಹಲಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ನ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಅವರಿಗೆ ಚುನಾವಣಾ ಪ್ರಚಾರದ ವೇಳೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಚುನಾವಣಾ ಪ್ರಚಾರದ ವೇಳೆ ಹೂಮಾಲೆ ಹಾಕುವ ನೆಪದಲ್ಲಿ ಅವರ ಬಳಿಗೆ ಬಂದ ಕೆಲವರು ಬಳಿಕ ಅವರಿಗೆ ಥಳಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಇದೇ ವೇಳೆ ದುಷ್ಕರ್ಮಿಗಳು ಆಮ್ ಆದ್ಮಿ ಪಕ್ಷದ ಮಹಿಳಾ ಕೌನ್ಸಿಲರ್ ಛಾಯಾ ಗೌರವ್ ಶರ್ಮ ಅವರೊಂದಿಗೂ ಅನುಚಿತವಾಗಿ ವರ್ತಿಸಿರುವ ಆರೋಪ ಕೇಳಿ ಬಂದಿದೆ.

ತನ್ನ ಶಾಲನ್ನು ಕಿತ್ತುಕೊಂಡು, ಪತಿಯನ್ನು ಪಕ್ಕಕ್ಕೆ ಕರೆದೊಯ್ದು ಬೆದರಿಕೆ ಹಾಕಿದ್ದಾರೆ. ಇದಲ್ಲದೆ ಗುಂಪಿನ ಮೇಲೆ ಕಪ್ಪು ಶಾಹಿ ಎರಚಲಾಗಿದ್ದು, ಕೆಲ ಮಹಿಳೆಯರು ಈ ವೇಳೆ ಗಾಯಗೊಂಡಿದ್ದಾರೆ ಎಂದು ಗೌರವ್ ಶರ್ಮ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪೊಲೀಸರ ಪ್ರಕಾರ, ಕೌನ್ಸಿಲರ್ ಛಾಯಾ ಶರ್ಮಾ ಅವರೊಂದಿಗಿನ ಸಭೆಯ ನಂತರ ಕನ್ಹಯ್ಯಾ ಕುಮಾರ್ ಕರ್ತಾರ್ ನಗರದಲ್ಲಿರುವ ಎಎಪಿ ಕಚೇರಿಯಿಂದ ಹೊರಗೆ ಬಂದಾಗ ಕೆಲವು ವ್ಯಕ್ತಿಗಳು ಕನ್ಹಯ್ಯಾ ಕುಮಾರ್‌ಗೆ ಹೂಮಾಲೆ ಹಾಕುವ ನೆಪದಲ್ಲಿ ಸಮೀಪಕ್ಕೆ ಬಂದು ಹಾರವನ್ನು ಹಾಕಿದ್ದಾರೆ. ಬಳಿಕ ಕನ್ಹಯ್ಯಾ ಕುಮಾರ್ ಮೇಲೆ ಶಾಯಿ ಎರಚಿ ಹಲ್ಲೆ ನಡೆಸಿದ್ದಾರೆ. ಛಾಯಾ ಶರ್ಮಾ ಅವರು ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಅವರು ಅನುಚಿತವಾಗಿ ವರ್ತಿಸಿದರು ಮತ್ತು ಬೆದರಿಕೆ ಹಾಕಿದರು ಎಂದು ಈಶಾನ್ಯ ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಘಟನೆಯ ನಂತರ, ದಾಳಿಯ ಹೊಣೆಯನ್ನು ಹೊತ್ತುಕೊಂಡು ಇಬ್ಬರು ದುಷ್ಕರ್ಮಿಗಳು ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಕನ್ಹಯ್ಯಾ ಕುಮಾರ್ ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುತ್ತಾರೆ, ಭಾರತೀಯ ಸೇನೆಯ ವಿರುದ್ಧ ಮಾತನಾಡುತ್ತಾರೆ ಮತ್ತು ಇಂದು ನಾವು ಅವರಿಗೆ ಸರಿಯಾಗಿ ಚಿಕಿತ್ಸೆ ನೀಡಿದ್ದೇವೆ ಎಂದು ವೀಡಿಯೊದಲ್ಲಿ ಹೇಳಲಾಗಿದೆ. ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುವವರಿಗೆ ದೆಹಲಿ ಪ್ರವೇಶಿಸಲು ನಾವು ಅವಕಾಶ ನೀಡುವುದಿಲ್ಲ ಎಂದು ವಿಡಿಯೋದಲ್ಲಿರುವ ವ್ಯಕ್ತಿಯೊಬ್ಬರು ಪ್ರತಿಪಾದಿಸಿದ್ದಾರೆ. ಆದರೆ ಈ ಕುರಿತ ವಿಡಿಯೋದ ಅಸಲಿಯತ್ತನ್ನು ತಕ್ಷಣಕ್ಕೆ ಪರಿಶೀಲನೆ ನಡೆಸಲಾಗಿಲ್ಲ ಎಂದು ತಿಳಿದು ಬಂದಿದೆ.

ಈಶಾನ್ಯ ದೆಹಲಿಯಲ್ಲಿ ಬಿಜೆಪಿಯ ಮನೋಜ್ ತಿವಾರಿ ವಿರುದ್ಧ ಇಂಡಿಯಾ ಬ್ಲಾಕ್ ಅಭ್ಯರ್ಥಿಯಾಗಿ ಕನ್ಹಯ್ಯ ಕುಮಾರ್ ಸ್ಪರ್ಧೆಯಲ್ಲಿದ್ದಾರೆ. ತನ್ನ ವಿರುದ್ಧದ ದಾಳಿಗೆ ಮನೋಜ್ ತಿವಾರಿಯನ್ನು ಕನ್ಹಯ್ಯ ಕುಮಾರ್ ಹೊಣೆಯಾಗಿಸಿದ್ದಾರೆ. ಸಂಸದ ತಿವಾರಿ ಅವರು ನನಗೆ ಹೆಚ್ಚಿನ ಜನಬೆಂಬಲ ಸಿಗುತ್ತಿರುವ ಹಿನ್ನೆಲೆ ಹತಾಶರಾಗಿದ್ದಾರೆ. ಅದಕ್ಕಾಗಿಯೇ ಅವರು ತಮ್ಮ ಮೇಲೆ ದಾಳಿ ಮಾಡಲು ಗೂಂಡಾಗಳನ್ನು ಕಳುಹಿಸಿದ್ದಾರೆ. ಮೇ 25ರಂದು ಮತದಾನದ ಮೂಲಕ ಸಾರ್ವಜನಿಕರು ಹಿಂಸಾಚಾರಕ್ಕೆ ತಕ್ಕ ಉತ್ತರವನ್ನು ನೀಡಲಿದ್ದಾರೆ ಎಂದು ಕನ್ಹಯ್ಯ ಕುಮಾರ್ ಹೇಳಿದ್ದಾರೆ.

ಇದನ್ನು ಓದಿ: ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...