Homeಮುಖಪುಟಚುನಾವಣಾ ಪ್ರಚಾರದ ವೇಳೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

ಚುನಾವಣಾ ಪ್ರಚಾರದ ವೇಳೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

- Advertisement -
- Advertisement -

ಈಶಾನ್ಯ ದೆಹಲಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ನ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಅವರಿಗೆ ಚುನಾವಣಾ ಪ್ರಚಾರದ ವೇಳೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಚುನಾವಣಾ ಪ್ರಚಾರದ ವೇಳೆ ಹೂಮಾಲೆ ಹಾಕುವ ನೆಪದಲ್ಲಿ ಅವರ ಬಳಿಗೆ ಬಂದ ಕೆಲವರು ಬಳಿಕ ಅವರಿಗೆ ಥಳಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಇದೇ ವೇಳೆ ದುಷ್ಕರ್ಮಿಗಳು ಆಮ್ ಆದ್ಮಿ ಪಕ್ಷದ ಮಹಿಳಾ ಕೌನ್ಸಿಲರ್ ಛಾಯಾ ಗೌರವ್ ಶರ್ಮ ಅವರೊಂದಿಗೂ ಅನುಚಿತವಾಗಿ ವರ್ತಿಸಿರುವ ಆರೋಪ ಕೇಳಿ ಬಂದಿದೆ.

ತನ್ನ ಶಾಲನ್ನು ಕಿತ್ತುಕೊಂಡು, ಪತಿಯನ್ನು ಪಕ್ಕಕ್ಕೆ ಕರೆದೊಯ್ದು ಬೆದರಿಕೆ ಹಾಕಿದ್ದಾರೆ. ಇದಲ್ಲದೆ ಗುಂಪಿನ ಮೇಲೆ ಕಪ್ಪು ಶಾಹಿ ಎರಚಲಾಗಿದ್ದು, ಕೆಲ ಮಹಿಳೆಯರು ಈ ವೇಳೆ ಗಾಯಗೊಂಡಿದ್ದಾರೆ ಎಂದು ಗೌರವ್ ಶರ್ಮ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪೊಲೀಸರ ಪ್ರಕಾರ, ಕೌನ್ಸಿಲರ್ ಛಾಯಾ ಶರ್ಮಾ ಅವರೊಂದಿಗಿನ ಸಭೆಯ ನಂತರ ಕನ್ಹಯ್ಯಾ ಕುಮಾರ್ ಕರ್ತಾರ್ ನಗರದಲ್ಲಿರುವ ಎಎಪಿ ಕಚೇರಿಯಿಂದ ಹೊರಗೆ ಬಂದಾಗ ಕೆಲವು ವ್ಯಕ್ತಿಗಳು ಕನ್ಹಯ್ಯಾ ಕುಮಾರ್‌ಗೆ ಹೂಮಾಲೆ ಹಾಕುವ ನೆಪದಲ್ಲಿ ಸಮೀಪಕ್ಕೆ ಬಂದು ಹಾರವನ್ನು ಹಾಕಿದ್ದಾರೆ. ಬಳಿಕ ಕನ್ಹಯ್ಯಾ ಕುಮಾರ್ ಮೇಲೆ ಶಾಯಿ ಎರಚಿ ಹಲ್ಲೆ ನಡೆಸಿದ್ದಾರೆ. ಛಾಯಾ ಶರ್ಮಾ ಅವರು ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಅವರು ಅನುಚಿತವಾಗಿ ವರ್ತಿಸಿದರು ಮತ್ತು ಬೆದರಿಕೆ ಹಾಕಿದರು ಎಂದು ಈಶಾನ್ಯ ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಘಟನೆಯ ನಂತರ, ದಾಳಿಯ ಹೊಣೆಯನ್ನು ಹೊತ್ತುಕೊಂಡು ಇಬ್ಬರು ದುಷ್ಕರ್ಮಿಗಳು ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಕನ್ಹಯ್ಯಾ ಕುಮಾರ್ ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುತ್ತಾರೆ, ಭಾರತೀಯ ಸೇನೆಯ ವಿರುದ್ಧ ಮಾತನಾಡುತ್ತಾರೆ ಮತ್ತು ಇಂದು ನಾವು ಅವರಿಗೆ ಸರಿಯಾಗಿ ಚಿಕಿತ್ಸೆ ನೀಡಿದ್ದೇವೆ ಎಂದು ವೀಡಿಯೊದಲ್ಲಿ ಹೇಳಲಾಗಿದೆ. ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುವವರಿಗೆ ದೆಹಲಿ ಪ್ರವೇಶಿಸಲು ನಾವು ಅವಕಾಶ ನೀಡುವುದಿಲ್ಲ ಎಂದು ವಿಡಿಯೋದಲ್ಲಿರುವ ವ್ಯಕ್ತಿಯೊಬ್ಬರು ಪ್ರತಿಪಾದಿಸಿದ್ದಾರೆ. ಆದರೆ ಈ ಕುರಿತ ವಿಡಿಯೋದ ಅಸಲಿಯತ್ತನ್ನು ತಕ್ಷಣಕ್ಕೆ ಪರಿಶೀಲನೆ ನಡೆಸಲಾಗಿಲ್ಲ ಎಂದು ತಿಳಿದು ಬಂದಿದೆ.

ಈಶಾನ್ಯ ದೆಹಲಿಯಲ್ಲಿ ಬಿಜೆಪಿಯ ಮನೋಜ್ ತಿವಾರಿ ವಿರುದ್ಧ ಇಂಡಿಯಾ ಬ್ಲಾಕ್ ಅಭ್ಯರ್ಥಿಯಾಗಿ ಕನ್ಹಯ್ಯ ಕುಮಾರ್ ಸ್ಪರ್ಧೆಯಲ್ಲಿದ್ದಾರೆ. ತನ್ನ ವಿರುದ್ಧದ ದಾಳಿಗೆ ಮನೋಜ್ ತಿವಾರಿಯನ್ನು ಕನ್ಹಯ್ಯ ಕುಮಾರ್ ಹೊಣೆಯಾಗಿಸಿದ್ದಾರೆ. ಸಂಸದ ತಿವಾರಿ ಅವರು ನನಗೆ ಹೆಚ್ಚಿನ ಜನಬೆಂಬಲ ಸಿಗುತ್ತಿರುವ ಹಿನ್ನೆಲೆ ಹತಾಶರಾಗಿದ್ದಾರೆ. ಅದಕ್ಕಾಗಿಯೇ ಅವರು ತಮ್ಮ ಮೇಲೆ ದಾಳಿ ಮಾಡಲು ಗೂಂಡಾಗಳನ್ನು ಕಳುಹಿಸಿದ್ದಾರೆ. ಮೇ 25ರಂದು ಮತದಾನದ ಮೂಲಕ ಸಾರ್ವಜನಿಕರು ಹಿಂಸಾಚಾರಕ್ಕೆ ತಕ್ಕ ಉತ್ತರವನ್ನು ನೀಡಲಿದ್ದಾರೆ ಎಂದು ಕನ್ಹಯ್ಯ ಕುಮಾರ್ ಹೇಳಿದ್ದಾರೆ.

ಇದನ್ನು ಓದಿ: ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...