Homeಮುಖಪುಟಚುನಾವಣಾ ಪ್ರಚಾರದ ವೇಳೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

ಚುನಾವಣಾ ಪ್ರಚಾರದ ವೇಳೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

- Advertisement -
- Advertisement -

ಈಶಾನ್ಯ ದೆಹಲಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ನ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಅವರಿಗೆ ಚುನಾವಣಾ ಪ್ರಚಾರದ ವೇಳೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಚುನಾವಣಾ ಪ್ರಚಾರದ ವೇಳೆ ಹೂಮಾಲೆ ಹಾಕುವ ನೆಪದಲ್ಲಿ ಅವರ ಬಳಿಗೆ ಬಂದ ಕೆಲವರು ಬಳಿಕ ಅವರಿಗೆ ಥಳಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಇದೇ ವೇಳೆ ದುಷ್ಕರ್ಮಿಗಳು ಆಮ್ ಆದ್ಮಿ ಪಕ್ಷದ ಮಹಿಳಾ ಕೌನ್ಸಿಲರ್ ಛಾಯಾ ಗೌರವ್ ಶರ್ಮ ಅವರೊಂದಿಗೂ ಅನುಚಿತವಾಗಿ ವರ್ತಿಸಿರುವ ಆರೋಪ ಕೇಳಿ ಬಂದಿದೆ.

ತನ್ನ ಶಾಲನ್ನು ಕಿತ್ತುಕೊಂಡು, ಪತಿಯನ್ನು ಪಕ್ಕಕ್ಕೆ ಕರೆದೊಯ್ದು ಬೆದರಿಕೆ ಹಾಕಿದ್ದಾರೆ. ಇದಲ್ಲದೆ ಗುಂಪಿನ ಮೇಲೆ ಕಪ್ಪು ಶಾಹಿ ಎರಚಲಾಗಿದ್ದು, ಕೆಲ ಮಹಿಳೆಯರು ಈ ವೇಳೆ ಗಾಯಗೊಂಡಿದ್ದಾರೆ ಎಂದು ಗೌರವ್ ಶರ್ಮ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪೊಲೀಸರ ಪ್ರಕಾರ, ಕೌನ್ಸಿಲರ್ ಛಾಯಾ ಶರ್ಮಾ ಅವರೊಂದಿಗಿನ ಸಭೆಯ ನಂತರ ಕನ್ಹಯ್ಯಾ ಕುಮಾರ್ ಕರ್ತಾರ್ ನಗರದಲ್ಲಿರುವ ಎಎಪಿ ಕಚೇರಿಯಿಂದ ಹೊರಗೆ ಬಂದಾಗ ಕೆಲವು ವ್ಯಕ್ತಿಗಳು ಕನ್ಹಯ್ಯಾ ಕುಮಾರ್‌ಗೆ ಹೂಮಾಲೆ ಹಾಕುವ ನೆಪದಲ್ಲಿ ಸಮೀಪಕ್ಕೆ ಬಂದು ಹಾರವನ್ನು ಹಾಕಿದ್ದಾರೆ. ಬಳಿಕ ಕನ್ಹಯ್ಯಾ ಕುಮಾರ್ ಮೇಲೆ ಶಾಯಿ ಎರಚಿ ಹಲ್ಲೆ ನಡೆಸಿದ್ದಾರೆ. ಛಾಯಾ ಶರ್ಮಾ ಅವರು ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಅವರು ಅನುಚಿತವಾಗಿ ವರ್ತಿಸಿದರು ಮತ್ತು ಬೆದರಿಕೆ ಹಾಕಿದರು ಎಂದು ಈಶಾನ್ಯ ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಘಟನೆಯ ನಂತರ, ದಾಳಿಯ ಹೊಣೆಯನ್ನು ಹೊತ್ತುಕೊಂಡು ಇಬ್ಬರು ದುಷ್ಕರ್ಮಿಗಳು ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಕನ್ಹಯ್ಯಾ ಕುಮಾರ್ ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುತ್ತಾರೆ, ಭಾರತೀಯ ಸೇನೆಯ ವಿರುದ್ಧ ಮಾತನಾಡುತ್ತಾರೆ ಮತ್ತು ಇಂದು ನಾವು ಅವರಿಗೆ ಸರಿಯಾಗಿ ಚಿಕಿತ್ಸೆ ನೀಡಿದ್ದೇವೆ ಎಂದು ವೀಡಿಯೊದಲ್ಲಿ ಹೇಳಲಾಗಿದೆ. ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುವವರಿಗೆ ದೆಹಲಿ ಪ್ರವೇಶಿಸಲು ನಾವು ಅವಕಾಶ ನೀಡುವುದಿಲ್ಲ ಎಂದು ವಿಡಿಯೋದಲ್ಲಿರುವ ವ್ಯಕ್ತಿಯೊಬ್ಬರು ಪ್ರತಿಪಾದಿಸಿದ್ದಾರೆ. ಆದರೆ ಈ ಕುರಿತ ವಿಡಿಯೋದ ಅಸಲಿಯತ್ತನ್ನು ತಕ್ಷಣಕ್ಕೆ ಪರಿಶೀಲನೆ ನಡೆಸಲಾಗಿಲ್ಲ ಎಂದು ತಿಳಿದು ಬಂದಿದೆ.

ಈಶಾನ್ಯ ದೆಹಲಿಯಲ್ಲಿ ಬಿಜೆಪಿಯ ಮನೋಜ್ ತಿವಾರಿ ವಿರುದ್ಧ ಇಂಡಿಯಾ ಬ್ಲಾಕ್ ಅಭ್ಯರ್ಥಿಯಾಗಿ ಕನ್ಹಯ್ಯ ಕುಮಾರ್ ಸ್ಪರ್ಧೆಯಲ್ಲಿದ್ದಾರೆ. ತನ್ನ ವಿರುದ್ಧದ ದಾಳಿಗೆ ಮನೋಜ್ ತಿವಾರಿಯನ್ನು ಕನ್ಹಯ್ಯ ಕುಮಾರ್ ಹೊಣೆಯಾಗಿಸಿದ್ದಾರೆ. ಸಂಸದ ತಿವಾರಿ ಅವರು ನನಗೆ ಹೆಚ್ಚಿನ ಜನಬೆಂಬಲ ಸಿಗುತ್ತಿರುವ ಹಿನ್ನೆಲೆ ಹತಾಶರಾಗಿದ್ದಾರೆ. ಅದಕ್ಕಾಗಿಯೇ ಅವರು ತಮ್ಮ ಮೇಲೆ ದಾಳಿ ಮಾಡಲು ಗೂಂಡಾಗಳನ್ನು ಕಳುಹಿಸಿದ್ದಾರೆ. ಮೇ 25ರಂದು ಮತದಾನದ ಮೂಲಕ ಸಾರ್ವಜನಿಕರು ಹಿಂಸಾಚಾರಕ್ಕೆ ತಕ್ಕ ಉತ್ತರವನ್ನು ನೀಡಲಿದ್ದಾರೆ ಎಂದು ಕನ್ಹಯ್ಯ ಕುಮಾರ್ ಹೇಳಿದ್ದಾರೆ.

ಇದನ್ನು ಓದಿ: ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...