Homeಮುಖಪುಟಚುನಾವಣಾ ಪ್ರಚಾರದ ವೇಳೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

ಚುನಾವಣಾ ಪ್ರಚಾರದ ವೇಳೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

- Advertisement -
- Advertisement -

ಈಶಾನ್ಯ ದೆಹಲಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ನ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಅವರಿಗೆ ಚುನಾವಣಾ ಪ್ರಚಾರದ ವೇಳೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಚುನಾವಣಾ ಪ್ರಚಾರದ ವೇಳೆ ಹೂಮಾಲೆ ಹಾಕುವ ನೆಪದಲ್ಲಿ ಅವರ ಬಳಿಗೆ ಬಂದ ಕೆಲವರು ಬಳಿಕ ಅವರಿಗೆ ಥಳಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಇದೇ ವೇಳೆ ದುಷ್ಕರ್ಮಿಗಳು ಆಮ್ ಆದ್ಮಿ ಪಕ್ಷದ ಮಹಿಳಾ ಕೌನ್ಸಿಲರ್ ಛಾಯಾ ಗೌರವ್ ಶರ್ಮ ಅವರೊಂದಿಗೂ ಅನುಚಿತವಾಗಿ ವರ್ತಿಸಿರುವ ಆರೋಪ ಕೇಳಿ ಬಂದಿದೆ.

ತನ್ನ ಶಾಲನ್ನು ಕಿತ್ತುಕೊಂಡು, ಪತಿಯನ್ನು ಪಕ್ಕಕ್ಕೆ ಕರೆದೊಯ್ದು ಬೆದರಿಕೆ ಹಾಕಿದ್ದಾರೆ. ಇದಲ್ಲದೆ ಗುಂಪಿನ ಮೇಲೆ ಕಪ್ಪು ಶಾಹಿ ಎರಚಲಾಗಿದ್ದು, ಕೆಲ ಮಹಿಳೆಯರು ಈ ವೇಳೆ ಗಾಯಗೊಂಡಿದ್ದಾರೆ ಎಂದು ಗೌರವ್ ಶರ್ಮ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪೊಲೀಸರ ಪ್ರಕಾರ, ಕೌನ್ಸಿಲರ್ ಛಾಯಾ ಶರ್ಮಾ ಅವರೊಂದಿಗಿನ ಸಭೆಯ ನಂತರ ಕನ್ಹಯ್ಯಾ ಕುಮಾರ್ ಕರ್ತಾರ್ ನಗರದಲ್ಲಿರುವ ಎಎಪಿ ಕಚೇರಿಯಿಂದ ಹೊರಗೆ ಬಂದಾಗ ಕೆಲವು ವ್ಯಕ್ತಿಗಳು ಕನ್ಹಯ್ಯಾ ಕುಮಾರ್‌ಗೆ ಹೂಮಾಲೆ ಹಾಕುವ ನೆಪದಲ್ಲಿ ಸಮೀಪಕ್ಕೆ ಬಂದು ಹಾರವನ್ನು ಹಾಕಿದ್ದಾರೆ. ಬಳಿಕ ಕನ್ಹಯ್ಯಾ ಕುಮಾರ್ ಮೇಲೆ ಶಾಯಿ ಎರಚಿ ಹಲ್ಲೆ ನಡೆಸಿದ್ದಾರೆ. ಛಾಯಾ ಶರ್ಮಾ ಅವರು ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಅವರು ಅನುಚಿತವಾಗಿ ವರ್ತಿಸಿದರು ಮತ್ತು ಬೆದರಿಕೆ ಹಾಕಿದರು ಎಂದು ಈಶಾನ್ಯ ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಘಟನೆಯ ನಂತರ, ದಾಳಿಯ ಹೊಣೆಯನ್ನು ಹೊತ್ತುಕೊಂಡು ಇಬ್ಬರು ದುಷ್ಕರ್ಮಿಗಳು ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಕನ್ಹಯ್ಯಾ ಕುಮಾರ್ ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುತ್ತಾರೆ, ಭಾರತೀಯ ಸೇನೆಯ ವಿರುದ್ಧ ಮಾತನಾಡುತ್ತಾರೆ ಮತ್ತು ಇಂದು ನಾವು ಅವರಿಗೆ ಸರಿಯಾಗಿ ಚಿಕಿತ್ಸೆ ನೀಡಿದ್ದೇವೆ ಎಂದು ವೀಡಿಯೊದಲ್ಲಿ ಹೇಳಲಾಗಿದೆ. ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುವವರಿಗೆ ದೆಹಲಿ ಪ್ರವೇಶಿಸಲು ನಾವು ಅವಕಾಶ ನೀಡುವುದಿಲ್ಲ ಎಂದು ವಿಡಿಯೋದಲ್ಲಿರುವ ವ್ಯಕ್ತಿಯೊಬ್ಬರು ಪ್ರತಿಪಾದಿಸಿದ್ದಾರೆ. ಆದರೆ ಈ ಕುರಿತ ವಿಡಿಯೋದ ಅಸಲಿಯತ್ತನ್ನು ತಕ್ಷಣಕ್ಕೆ ಪರಿಶೀಲನೆ ನಡೆಸಲಾಗಿಲ್ಲ ಎಂದು ತಿಳಿದು ಬಂದಿದೆ.

ಈಶಾನ್ಯ ದೆಹಲಿಯಲ್ಲಿ ಬಿಜೆಪಿಯ ಮನೋಜ್ ತಿವಾರಿ ವಿರುದ್ಧ ಇಂಡಿಯಾ ಬ್ಲಾಕ್ ಅಭ್ಯರ್ಥಿಯಾಗಿ ಕನ್ಹಯ್ಯ ಕುಮಾರ್ ಸ್ಪರ್ಧೆಯಲ್ಲಿದ್ದಾರೆ. ತನ್ನ ವಿರುದ್ಧದ ದಾಳಿಗೆ ಮನೋಜ್ ತಿವಾರಿಯನ್ನು ಕನ್ಹಯ್ಯ ಕುಮಾರ್ ಹೊಣೆಯಾಗಿಸಿದ್ದಾರೆ. ಸಂಸದ ತಿವಾರಿ ಅವರು ನನಗೆ ಹೆಚ್ಚಿನ ಜನಬೆಂಬಲ ಸಿಗುತ್ತಿರುವ ಹಿನ್ನೆಲೆ ಹತಾಶರಾಗಿದ್ದಾರೆ. ಅದಕ್ಕಾಗಿಯೇ ಅವರು ತಮ್ಮ ಮೇಲೆ ದಾಳಿ ಮಾಡಲು ಗೂಂಡಾಗಳನ್ನು ಕಳುಹಿಸಿದ್ದಾರೆ. ಮೇ 25ರಂದು ಮತದಾನದ ಮೂಲಕ ಸಾರ್ವಜನಿಕರು ಹಿಂಸಾಚಾರಕ್ಕೆ ತಕ್ಕ ಉತ್ತರವನ್ನು ನೀಡಲಿದ್ದಾರೆ ಎಂದು ಕನ್ಹಯ್ಯ ಕುಮಾರ್ ಹೇಳಿದ್ದಾರೆ.

ಇದನ್ನು ಓದಿ: ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...