Homeಕರ್ನಾಟಕಕನ್ನಡ ಧ್ವಜಾರೋಹಣಕ್ಕೆ ನಿಷೇಧ: ಕನ್ನಡಿಗರ ತೀವ್ರ ಪ್ರತಿಭಟನೆಗೆ ಬೆದರಿದ ಸರ್ಕಾರ

ಕನ್ನಡ ಧ್ವಜಾರೋಹಣಕ್ಕೆ ನಿಷೇಧ: ಕನ್ನಡಿಗರ ತೀವ್ರ ಪ್ರತಿಭಟನೆಗೆ ಬೆದರಿದ ಸರ್ಕಾರ

- Advertisement -
- Advertisement -

64ನೇ ಕನ್ನಡ ರಾಜ್ಯೋತ್ಸವದ ದಿನ ಕನ್ನಡಿಗರೆಲ್ಲರೂ ಸಂತಸದಿಂದ, ಪ್ರೀತಿಯಿಂದ, ಅಭಿಮಾನದಿಂದ ಕನ್ನಡ ರಾಜ್ಯೋತ್ಸವ ಆಚರಿಸಿ, ಕನ್ನಡ ಧ್ವಜ ಹಾರಿಸಿ ಸಂಭ್ರಮಪಡುತ್ತಿರುವಾಗ ಕರ್ನಾಟಕ ಸರ್ಕಾರ ಮಾತ್ರ ತನ್ನ ಎಡಬಿಡಂಗಿ ನಿಲುವಿನಿಂದ ಸಾಕಷ್ಟು ಟೀಕೆಗೆ ಗುರಿಯಾಗಿದೆ.

ನವೆಂಬರ್‌ 1 ರಂದು ಕನ್ನಡ ಧ್ವಜ ಹಾರಿಸುವಂತಿಲ್ಲ, ಬದಲಿಗೆ ರಾಷ್ಟ್ರಧ್ವಜ ಮಾತ್ರ ಹಾರಿಸಬೇಕೆಂಬ ಎರಡು ಸುತ್ತೋಲೆಗಳು ಕೊಪ್ಪಳ ಮತ್ತು ಸಿಂಧನೂರಿನಲ್ಲಿ ಹರಿದಾಡಿದ್ದು ಕನ್ನಡಿಗರ ಸ್ವಾಭಿಮಾನವನ್ನು ಕೆರಳಿಸಿವೆ. ಮೊದಲಿಗೆ ಕೊಪ್ಫಳ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗೂ ಸುತ್ತೋಲೆ ಹೊರಡಿಸಿದರೆ ನಂತರ ಸಿಂಧನೂರಿನ ತಹಶೀಲ್ದಾರ್‌ ಸುತ್ತೋಲೆ ಕಳಿಸಿ ಕನ್ನಡ ಧ್ವಜ ಹಾರಿಸದಂತೆ ಆದೇಶಿಸಿದ್ದಾರೆ.

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸಹ ಕಳೆದ ಮೂರ್‍ನಾಲ್ಕು ವರ್ಷಗಳಿಂದ ಕನ್ನಡ ಧ್ವಜವನ್ನು ವಿರೋಧಿಸುತ್ತಾ ಬಂದಿದೆ. ಸಿ.ಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಕರ್ನಾಟಕಕ್ಕೆ ಪ್ರತ್ಯೇಕ ಕನ್ನಡ ಧ್ವಜ ಬೇಕಿಲ್ಲ ಎಂದು ಬಹಿರಂಗವಾಗಿ ಘೋಷಿಸಿದ್ದರು. ಆರ್‌ಎಸ್‌ಎಸ್‌ ಸಹ ಪ್ರಬಲವಾಗಿ ಕನ್ನಡ ಧ್ವಜದ ವಿರುದ್ಧ ಪ್ರಚಾರಾಂದೋಲನ ನಡೆಸಿತ್ತು. ಇಂತಹ ಸಂದರ್ಭದಲ್ಲಿ 6 ವರ್ಷಗಳ ನಂತರ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೇರಿದೆ. ಆಗಲೇ ಟಿಪ್ಪು ಜಯಂತಿ ರದ್ದು ಮಾಡುವುದಾಗಿ ಘೋಷಿಸಿದೆ. ಜೊತೆಗೆ ಕನ್ನಡ ಧ್ವಜವೂ ಬೇಡ ಎಂಬ ಹೇಳಿಕೆಗಳು ಸರ್ಕಾರದ ವತಿಯಿಂದ ಕೇಳಿಬಂದಿದ್ದವು.

ಸಾಲದೆಂಬಂತೆ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪನವರು ತಾವು ಕೊಟ್ಟ ಜಾಹಿರಾತುಗಳಲ್ಲಿ ಕನ್ನಡ ಧ್ವಜ ಇರದಂತೆ ನೋಡಿಕೊಂಡಿದ್ದು ಕನ್ನಡಿಗರ ಕೋಪವನ್ನು ತೀವ್ರಗೊಳಿಸಿತ್ತು. ಹಾಗಾಗಿ ಪಕ್ಷಭೇಧ ಮರೆದು ಲಕ್ಷಾಂತರ ಕನ್ನಡಿಗರು ಸರ್ಕಾರ ಕನ್ನಡವಿರೋಧಿ ನೀತಿಯನ್ನು ತೀವ್ರವಾಗಿ ಪ್ರತಿಭಟಿಸಿದ್ದರು. ಸರ್ಕಾರಕ್ಕೆ ಸೆಡ್ಡು ಹೊಡೆದು ಲಕ್ಷಾಂತರ ಕಡೆಗಳಲ್ಲಿ ಕನ್ನಡ ಧ್ವಜ ಹಾರಿಸಿ ತಮ್ಮ ಸ್ವಾಭಿಮಾನವನ್ನು ಮೆರೆದಿದ್ದರು.

ಸಾಮಾಜಿಕ ಜಾಲತಾಣದಲ್ಲಂತೂ ಬಿಜೆಪಿ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆಯಾಗಿತ್ತು. ಇದೆಲ್ಲದರಿಂದ ಕೊನೆಗೂ ತನ್ನ ತಪ್ಪಿನ ಅರಿವಾದ ನಂತರ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ಕನ್ನಡ ಧ್ವಜ ಹಾರಿಸುವುದಾಗಿ ಘೋಷಿಸಿದೆ ಮಾತ್ರವಲ್ಲ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರು ಕನ್ನಡ ಧ್ವಜ ಹಾರಿಸಿದ್ದಾರೆ. ಇನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ಸುತ್ತೋಲೆ ಹೊರಡಿಸಿದ ಕೊಪ್ಪಳದ ಶಿಕ್ಷಣಾಧಿಕಾರಿಯಿಂದ ವಿವರಣೆ ಕೇಳಿ ಕೊಡಬೇಕೆಂದು ಮತ್ತು ತಕ್ಷಣವೇ ಅಮಾನತಿನಲ್ಲಿ ಇಡಬೇಕೆಂದು ಸೂಚನೆ ನೀಡಿದ್ದೇನೆ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಅಂತೂ ದುರಂಹಕಾರಿ ಪ್ರದರ್ಶಿಸಿದ ರಾಜ್ಯಸರ್ಕಾರದ ವಿರುದ್ಧ ಗೆಲುವು ಸಾಧಿಸಿದ ಕನ್ನಡಾಭಿಮಾನಿಗಳು ಖುಷಿಪಟ್ಟಿದ್ದಾರೆ. ತಾವು ಏನು ಬೇಕಾದರೂ ಮಾಡಿ ತೀರುತ್ತೇವೆ ಎನ್ನುವ ಬಿಜೆಪಿಗೆ ಇದರಿಂದ ದೊಡ್ಡ ಸೋಲಾಗಿದೆ. ನಾಡಜನರನ್ನು ಎದುರು ಹಾಕಿಕೊಂಡರೆ ಏನಾಗುತ್ತದೆ ಎಂಬುದಕ್ಕೆ ಇದು ದೊಡ್ಡ ಪಾಠವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...