Homeಕರ್ನಾಟಕಕನ್ನಡ ಧ್ವಜಾರೋಹಣಕ್ಕೆ ನಿಷೇಧ: ಕನ್ನಡಿಗರ ತೀವ್ರ ಪ್ರತಿಭಟನೆಗೆ ಬೆದರಿದ ಸರ್ಕಾರ

ಕನ್ನಡ ಧ್ವಜಾರೋಹಣಕ್ಕೆ ನಿಷೇಧ: ಕನ್ನಡಿಗರ ತೀವ್ರ ಪ್ರತಿಭಟನೆಗೆ ಬೆದರಿದ ಸರ್ಕಾರ

- Advertisement -
- Advertisement -

64ನೇ ಕನ್ನಡ ರಾಜ್ಯೋತ್ಸವದ ದಿನ ಕನ್ನಡಿಗರೆಲ್ಲರೂ ಸಂತಸದಿಂದ, ಪ್ರೀತಿಯಿಂದ, ಅಭಿಮಾನದಿಂದ ಕನ್ನಡ ರಾಜ್ಯೋತ್ಸವ ಆಚರಿಸಿ, ಕನ್ನಡ ಧ್ವಜ ಹಾರಿಸಿ ಸಂಭ್ರಮಪಡುತ್ತಿರುವಾಗ ಕರ್ನಾಟಕ ಸರ್ಕಾರ ಮಾತ್ರ ತನ್ನ ಎಡಬಿಡಂಗಿ ನಿಲುವಿನಿಂದ ಸಾಕಷ್ಟು ಟೀಕೆಗೆ ಗುರಿಯಾಗಿದೆ.

ನವೆಂಬರ್‌ 1 ರಂದು ಕನ್ನಡ ಧ್ವಜ ಹಾರಿಸುವಂತಿಲ್ಲ, ಬದಲಿಗೆ ರಾಷ್ಟ್ರಧ್ವಜ ಮಾತ್ರ ಹಾರಿಸಬೇಕೆಂಬ ಎರಡು ಸುತ್ತೋಲೆಗಳು ಕೊಪ್ಪಳ ಮತ್ತು ಸಿಂಧನೂರಿನಲ್ಲಿ ಹರಿದಾಡಿದ್ದು ಕನ್ನಡಿಗರ ಸ್ವಾಭಿಮಾನವನ್ನು ಕೆರಳಿಸಿವೆ. ಮೊದಲಿಗೆ ಕೊಪ್ಫಳ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗೂ ಸುತ್ತೋಲೆ ಹೊರಡಿಸಿದರೆ ನಂತರ ಸಿಂಧನೂರಿನ ತಹಶೀಲ್ದಾರ್‌ ಸುತ್ತೋಲೆ ಕಳಿಸಿ ಕನ್ನಡ ಧ್ವಜ ಹಾರಿಸದಂತೆ ಆದೇಶಿಸಿದ್ದಾರೆ.

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸಹ ಕಳೆದ ಮೂರ್‍ನಾಲ್ಕು ವರ್ಷಗಳಿಂದ ಕನ್ನಡ ಧ್ವಜವನ್ನು ವಿರೋಧಿಸುತ್ತಾ ಬಂದಿದೆ. ಸಿ.ಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಕರ್ನಾಟಕಕ್ಕೆ ಪ್ರತ್ಯೇಕ ಕನ್ನಡ ಧ್ವಜ ಬೇಕಿಲ್ಲ ಎಂದು ಬಹಿರಂಗವಾಗಿ ಘೋಷಿಸಿದ್ದರು. ಆರ್‌ಎಸ್‌ಎಸ್‌ ಸಹ ಪ್ರಬಲವಾಗಿ ಕನ್ನಡ ಧ್ವಜದ ವಿರುದ್ಧ ಪ್ರಚಾರಾಂದೋಲನ ನಡೆಸಿತ್ತು. ಇಂತಹ ಸಂದರ್ಭದಲ್ಲಿ 6 ವರ್ಷಗಳ ನಂತರ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೇರಿದೆ. ಆಗಲೇ ಟಿಪ್ಪು ಜಯಂತಿ ರದ್ದು ಮಾಡುವುದಾಗಿ ಘೋಷಿಸಿದೆ. ಜೊತೆಗೆ ಕನ್ನಡ ಧ್ವಜವೂ ಬೇಡ ಎಂಬ ಹೇಳಿಕೆಗಳು ಸರ್ಕಾರದ ವತಿಯಿಂದ ಕೇಳಿಬಂದಿದ್ದವು.

ಸಾಲದೆಂಬಂತೆ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪನವರು ತಾವು ಕೊಟ್ಟ ಜಾಹಿರಾತುಗಳಲ್ಲಿ ಕನ್ನಡ ಧ್ವಜ ಇರದಂತೆ ನೋಡಿಕೊಂಡಿದ್ದು ಕನ್ನಡಿಗರ ಕೋಪವನ್ನು ತೀವ್ರಗೊಳಿಸಿತ್ತು. ಹಾಗಾಗಿ ಪಕ್ಷಭೇಧ ಮರೆದು ಲಕ್ಷಾಂತರ ಕನ್ನಡಿಗರು ಸರ್ಕಾರ ಕನ್ನಡವಿರೋಧಿ ನೀತಿಯನ್ನು ತೀವ್ರವಾಗಿ ಪ್ರತಿಭಟಿಸಿದ್ದರು. ಸರ್ಕಾರಕ್ಕೆ ಸೆಡ್ಡು ಹೊಡೆದು ಲಕ್ಷಾಂತರ ಕಡೆಗಳಲ್ಲಿ ಕನ್ನಡ ಧ್ವಜ ಹಾರಿಸಿ ತಮ್ಮ ಸ್ವಾಭಿಮಾನವನ್ನು ಮೆರೆದಿದ್ದರು.

ಸಾಮಾಜಿಕ ಜಾಲತಾಣದಲ್ಲಂತೂ ಬಿಜೆಪಿ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆಯಾಗಿತ್ತು. ಇದೆಲ್ಲದರಿಂದ ಕೊನೆಗೂ ತನ್ನ ತಪ್ಪಿನ ಅರಿವಾದ ನಂತರ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ಕನ್ನಡ ಧ್ವಜ ಹಾರಿಸುವುದಾಗಿ ಘೋಷಿಸಿದೆ ಮಾತ್ರವಲ್ಲ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರು ಕನ್ನಡ ಧ್ವಜ ಹಾರಿಸಿದ್ದಾರೆ. ಇನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ಸುತ್ತೋಲೆ ಹೊರಡಿಸಿದ ಕೊಪ್ಪಳದ ಶಿಕ್ಷಣಾಧಿಕಾರಿಯಿಂದ ವಿವರಣೆ ಕೇಳಿ ಕೊಡಬೇಕೆಂದು ಮತ್ತು ತಕ್ಷಣವೇ ಅಮಾನತಿನಲ್ಲಿ ಇಡಬೇಕೆಂದು ಸೂಚನೆ ನೀಡಿದ್ದೇನೆ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಅಂತೂ ದುರಂಹಕಾರಿ ಪ್ರದರ್ಶಿಸಿದ ರಾಜ್ಯಸರ್ಕಾರದ ವಿರುದ್ಧ ಗೆಲುವು ಸಾಧಿಸಿದ ಕನ್ನಡಾಭಿಮಾನಿಗಳು ಖುಷಿಪಟ್ಟಿದ್ದಾರೆ. ತಾವು ಏನು ಬೇಕಾದರೂ ಮಾಡಿ ತೀರುತ್ತೇವೆ ಎನ್ನುವ ಬಿಜೆಪಿಗೆ ಇದರಿಂದ ದೊಡ್ಡ ಸೋಲಾಗಿದೆ. ನಾಡಜನರನ್ನು ಎದುರು ಹಾಕಿಕೊಂಡರೆ ಏನಾಗುತ್ತದೆ ಎಂಬುದಕ್ಕೆ ಇದು ದೊಡ್ಡ ಪಾಠವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...