Homeಕರ್ನಾಟಕಕನ್ನಡ ಧ್ವಜಾರೋಹಣಕ್ಕೆ ನಿಷೇಧ: ಕನ್ನಡಿಗರ ತೀವ್ರ ಪ್ರತಿಭಟನೆಗೆ ಬೆದರಿದ ಸರ್ಕಾರ

ಕನ್ನಡ ಧ್ವಜಾರೋಹಣಕ್ಕೆ ನಿಷೇಧ: ಕನ್ನಡಿಗರ ತೀವ್ರ ಪ್ರತಿಭಟನೆಗೆ ಬೆದರಿದ ಸರ್ಕಾರ

- Advertisement -
- Advertisement -

64ನೇ ಕನ್ನಡ ರಾಜ್ಯೋತ್ಸವದ ದಿನ ಕನ್ನಡಿಗರೆಲ್ಲರೂ ಸಂತಸದಿಂದ, ಪ್ರೀತಿಯಿಂದ, ಅಭಿಮಾನದಿಂದ ಕನ್ನಡ ರಾಜ್ಯೋತ್ಸವ ಆಚರಿಸಿ, ಕನ್ನಡ ಧ್ವಜ ಹಾರಿಸಿ ಸಂಭ್ರಮಪಡುತ್ತಿರುವಾಗ ಕರ್ನಾಟಕ ಸರ್ಕಾರ ಮಾತ್ರ ತನ್ನ ಎಡಬಿಡಂಗಿ ನಿಲುವಿನಿಂದ ಸಾಕಷ್ಟು ಟೀಕೆಗೆ ಗುರಿಯಾಗಿದೆ.

ನವೆಂಬರ್‌ 1 ರಂದು ಕನ್ನಡ ಧ್ವಜ ಹಾರಿಸುವಂತಿಲ್ಲ, ಬದಲಿಗೆ ರಾಷ್ಟ್ರಧ್ವಜ ಮಾತ್ರ ಹಾರಿಸಬೇಕೆಂಬ ಎರಡು ಸುತ್ತೋಲೆಗಳು ಕೊಪ್ಪಳ ಮತ್ತು ಸಿಂಧನೂರಿನಲ್ಲಿ ಹರಿದಾಡಿದ್ದು ಕನ್ನಡಿಗರ ಸ್ವಾಭಿಮಾನವನ್ನು ಕೆರಳಿಸಿವೆ. ಮೊದಲಿಗೆ ಕೊಪ್ಫಳ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗೂ ಸುತ್ತೋಲೆ ಹೊರಡಿಸಿದರೆ ನಂತರ ಸಿಂಧನೂರಿನ ತಹಶೀಲ್ದಾರ್‌ ಸುತ್ತೋಲೆ ಕಳಿಸಿ ಕನ್ನಡ ಧ್ವಜ ಹಾರಿಸದಂತೆ ಆದೇಶಿಸಿದ್ದಾರೆ.

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸಹ ಕಳೆದ ಮೂರ್‍ನಾಲ್ಕು ವರ್ಷಗಳಿಂದ ಕನ್ನಡ ಧ್ವಜವನ್ನು ವಿರೋಧಿಸುತ್ತಾ ಬಂದಿದೆ. ಸಿ.ಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಕರ್ನಾಟಕಕ್ಕೆ ಪ್ರತ್ಯೇಕ ಕನ್ನಡ ಧ್ವಜ ಬೇಕಿಲ್ಲ ಎಂದು ಬಹಿರಂಗವಾಗಿ ಘೋಷಿಸಿದ್ದರು. ಆರ್‌ಎಸ್‌ಎಸ್‌ ಸಹ ಪ್ರಬಲವಾಗಿ ಕನ್ನಡ ಧ್ವಜದ ವಿರುದ್ಧ ಪ್ರಚಾರಾಂದೋಲನ ನಡೆಸಿತ್ತು. ಇಂತಹ ಸಂದರ್ಭದಲ್ಲಿ 6 ವರ್ಷಗಳ ನಂತರ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೇರಿದೆ. ಆಗಲೇ ಟಿಪ್ಪು ಜಯಂತಿ ರದ್ದು ಮಾಡುವುದಾಗಿ ಘೋಷಿಸಿದೆ. ಜೊತೆಗೆ ಕನ್ನಡ ಧ್ವಜವೂ ಬೇಡ ಎಂಬ ಹೇಳಿಕೆಗಳು ಸರ್ಕಾರದ ವತಿಯಿಂದ ಕೇಳಿಬಂದಿದ್ದವು.

ಸಾಲದೆಂಬಂತೆ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪನವರು ತಾವು ಕೊಟ್ಟ ಜಾಹಿರಾತುಗಳಲ್ಲಿ ಕನ್ನಡ ಧ್ವಜ ಇರದಂತೆ ನೋಡಿಕೊಂಡಿದ್ದು ಕನ್ನಡಿಗರ ಕೋಪವನ್ನು ತೀವ್ರಗೊಳಿಸಿತ್ತು. ಹಾಗಾಗಿ ಪಕ್ಷಭೇಧ ಮರೆದು ಲಕ್ಷಾಂತರ ಕನ್ನಡಿಗರು ಸರ್ಕಾರ ಕನ್ನಡವಿರೋಧಿ ನೀತಿಯನ್ನು ತೀವ್ರವಾಗಿ ಪ್ರತಿಭಟಿಸಿದ್ದರು. ಸರ್ಕಾರಕ್ಕೆ ಸೆಡ್ಡು ಹೊಡೆದು ಲಕ್ಷಾಂತರ ಕಡೆಗಳಲ್ಲಿ ಕನ್ನಡ ಧ್ವಜ ಹಾರಿಸಿ ತಮ್ಮ ಸ್ವಾಭಿಮಾನವನ್ನು ಮೆರೆದಿದ್ದರು.

ಸಾಮಾಜಿಕ ಜಾಲತಾಣದಲ್ಲಂತೂ ಬಿಜೆಪಿ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆಯಾಗಿತ್ತು. ಇದೆಲ್ಲದರಿಂದ ಕೊನೆಗೂ ತನ್ನ ತಪ್ಪಿನ ಅರಿವಾದ ನಂತರ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ಕನ್ನಡ ಧ್ವಜ ಹಾರಿಸುವುದಾಗಿ ಘೋಷಿಸಿದೆ ಮಾತ್ರವಲ್ಲ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರು ಕನ್ನಡ ಧ್ವಜ ಹಾರಿಸಿದ್ದಾರೆ. ಇನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ಸುತ್ತೋಲೆ ಹೊರಡಿಸಿದ ಕೊಪ್ಪಳದ ಶಿಕ್ಷಣಾಧಿಕಾರಿಯಿಂದ ವಿವರಣೆ ಕೇಳಿ ಕೊಡಬೇಕೆಂದು ಮತ್ತು ತಕ್ಷಣವೇ ಅಮಾನತಿನಲ್ಲಿ ಇಡಬೇಕೆಂದು ಸೂಚನೆ ನೀಡಿದ್ದೇನೆ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಅಂತೂ ದುರಂಹಕಾರಿ ಪ್ರದರ್ಶಿಸಿದ ರಾಜ್ಯಸರ್ಕಾರದ ವಿರುದ್ಧ ಗೆಲುವು ಸಾಧಿಸಿದ ಕನ್ನಡಾಭಿಮಾನಿಗಳು ಖುಷಿಪಟ್ಟಿದ್ದಾರೆ. ತಾವು ಏನು ಬೇಕಾದರೂ ಮಾಡಿ ತೀರುತ್ತೇವೆ ಎನ್ನುವ ಬಿಜೆಪಿಗೆ ಇದರಿಂದ ದೊಡ್ಡ ಸೋಲಾಗಿದೆ. ನಾಡಜನರನ್ನು ಎದುರು ಹಾಕಿಕೊಂಡರೆ ಏನಾಗುತ್ತದೆ ಎಂಬುದಕ್ಕೆ ಇದು ದೊಡ್ಡ ಪಾಠವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...