Homeಕರ್ನಾಟಕಕನ್ನಡ ಧ್ವಜಾರೋಹಣಕ್ಕೆ ನಿಷೇಧ: ಕನ್ನಡಿಗರ ತೀವ್ರ ಪ್ರತಿಭಟನೆಗೆ ಬೆದರಿದ ಸರ್ಕಾರ

ಕನ್ನಡ ಧ್ವಜಾರೋಹಣಕ್ಕೆ ನಿಷೇಧ: ಕನ್ನಡಿಗರ ತೀವ್ರ ಪ್ರತಿಭಟನೆಗೆ ಬೆದರಿದ ಸರ್ಕಾರ

- Advertisement -
- Advertisement -

64ನೇ ಕನ್ನಡ ರಾಜ್ಯೋತ್ಸವದ ದಿನ ಕನ್ನಡಿಗರೆಲ್ಲರೂ ಸಂತಸದಿಂದ, ಪ್ರೀತಿಯಿಂದ, ಅಭಿಮಾನದಿಂದ ಕನ್ನಡ ರಾಜ್ಯೋತ್ಸವ ಆಚರಿಸಿ, ಕನ್ನಡ ಧ್ವಜ ಹಾರಿಸಿ ಸಂಭ್ರಮಪಡುತ್ತಿರುವಾಗ ಕರ್ನಾಟಕ ಸರ್ಕಾರ ಮಾತ್ರ ತನ್ನ ಎಡಬಿಡಂಗಿ ನಿಲುವಿನಿಂದ ಸಾಕಷ್ಟು ಟೀಕೆಗೆ ಗುರಿಯಾಗಿದೆ.

ನವೆಂಬರ್‌ 1 ರಂದು ಕನ್ನಡ ಧ್ವಜ ಹಾರಿಸುವಂತಿಲ್ಲ, ಬದಲಿಗೆ ರಾಷ್ಟ್ರಧ್ವಜ ಮಾತ್ರ ಹಾರಿಸಬೇಕೆಂಬ ಎರಡು ಸುತ್ತೋಲೆಗಳು ಕೊಪ್ಪಳ ಮತ್ತು ಸಿಂಧನೂರಿನಲ್ಲಿ ಹರಿದಾಡಿದ್ದು ಕನ್ನಡಿಗರ ಸ್ವಾಭಿಮಾನವನ್ನು ಕೆರಳಿಸಿವೆ. ಮೊದಲಿಗೆ ಕೊಪ್ಫಳ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗೂ ಸುತ್ತೋಲೆ ಹೊರಡಿಸಿದರೆ ನಂತರ ಸಿಂಧನೂರಿನ ತಹಶೀಲ್ದಾರ್‌ ಸುತ್ತೋಲೆ ಕಳಿಸಿ ಕನ್ನಡ ಧ್ವಜ ಹಾರಿಸದಂತೆ ಆದೇಶಿಸಿದ್ದಾರೆ.

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸಹ ಕಳೆದ ಮೂರ್‍ನಾಲ್ಕು ವರ್ಷಗಳಿಂದ ಕನ್ನಡ ಧ್ವಜವನ್ನು ವಿರೋಧಿಸುತ್ತಾ ಬಂದಿದೆ. ಸಿ.ಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಕರ್ನಾಟಕಕ್ಕೆ ಪ್ರತ್ಯೇಕ ಕನ್ನಡ ಧ್ವಜ ಬೇಕಿಲ್ಲ ಎಂದು ಬಹಿರಂಗವಾಗಿ ಘೋಷಿಸಿದ್ದರು. ಆರ್‌ಎಸ್‌ಎಸ್‌ ಸಹ ಪ್ರಬಲವಾಗಿ ಕನ್ನಡ ಧ್ವಜದ ವಿರುದ್ಧ ಪ್ರಚಾರಾಂದೋಲನ ನಡೆಸಿತ್ತು. ಇಂತಹ ಸಂದರ್ಭದಲ್ಲಿ 6 ವರ್ಷಗಳ ನಂತರ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೇರಿದೆ. ಆಗಲೇ ಟಿಪ್ಪು ಜಯಂತಿ ರದ್ದು ಮಾಡುವುದಾಗಿ ಘೋಷಿಸಿದೆ. ಜೊತೆಗೆ ಕನ್ನಡ ಧ್ವಜವೂ ಬೇಡ ಎಂಬ ಹೇಳಿಕೆಗಳು ಸರ್ಕಾರದ ವತಿಯಿಂದ ಕೇಳಿಬಂದಿದ್ದವು.

ಸಾಲದೆಂಬಂತೆ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪನವರು ತಾವು ಕೊಟ್ಟ ಜಾಹಿರಾತುಗಳಲ್ಲಿ ಕನ್ನಡ ಧ್ವಜ ಇರದಂತೆ ನೋಡಿಕೊಂಡಿದ್ದು ಕನ್ನಡಿಗರ ಕೋಪವನ್ನು ತೀವ್ರಗೊಳಿಸಿತ್ತು. ಹಾಗಾಗಿ ಪಕ್ಷಭೇಧ ಮರೆದು ಲಕ್ಷಾಂತರ ಕನ್ನಡಿಗರು ಸರ್ಕಾರ ಕನ್ನಡವಿರೋಧಿ ನೀತಿಯನ್ನು ತೀವ್ರವಾಗಿ ಪ್ರತಿಭಟಿಸಿದ್ದರು. ಸರ್ಕಾರಕ್ಕೆ ಸೆಡ್ಡು ಹೊಡೆದು ಲಕ್ಷಾಂತರ ಕಡೆಗಳಲ್ಲಿ ಕನ್ನಡ ಧ್ವಜ ಹಾರಿಸಿ ತಮ್ಮ ಸ್ವಾಭಿಮಾನವನ್ನು ಮೆರೆದಿದ್ದರು.

ಸಾಮಾಜಿಕ ಜಾಲತಾಣದಲ್ಲಂತೂ ಬಿಜೆಪಿ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆಯಾಗಿತ್ತು. ಇದೆಲ್ಲದರಿಂದ ಕೊನೆಗೂ ತನ್ನ ತಪ್ಪಿನ ಅರಿವಾದ ನಂತರ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ಕನ್ನಡ ಧ್ವಜ ಹಾರಿಸುವುದಾಗಿ ಘೋಷಿಸಿದೆ ಮಾತ್ರವಲ್ಲ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರು ಕನ್ನಡ ಧ್ವಜ ಹಾರಿಸಿದ್ದಾರೆ. ಇನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ಸುತ್ತೋಲೆ ಹೊರಡಿಸಿದ ಕೊಪ್ಪಳದ ಶಿಕ್ಷಣಾಧಿಕಾರಿಯಿಂದ ವಿವರಣೆ ಕೇಳಿ ಕೊಡಬೇಕೆಂದು ಮತ್ತು ತಕ್ಷಣವೇ ಅಮಾನತಿನಲ್ಲಿ ಇಡಬೇಕೆಂದು ಸೂಚನೆ ನೀಡಿದ್ದೇನೆ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಅಂತೂ ದುರಂಹಕಾರಿ ಪ್ರದರ್ಶಿಸಿದ ರಾಜ್ಯಸರ್ಕಾರದ ವಿರುದ್ಧ ಗೆಲುವು ಸಾಧಿಸಿದ ಕನ್ನಡಾಭಿಮಾನಿಗಳು ಖುಷಿಪಟ್ಟಿದ್ದಾರೆ. ತಾವು ಏನು ಬೇಕಾದರೂ ಮಾಡಿ ತೀರುತ್ತೇವೆ ಎನ್ನುವ ಬಿಜೆಪಿಗೆ ಇದರಿಂದ ದೊಡ್ಡ ಸೋಲಾಗಿದೆ. ನಾಡಜನರನ್ನು ಎದುರು ಹಾಕಿಕೊಂಡರೆ ಏನಾಗುತ್ತದೆ ಎಂಬುದಕ್ಕೆ ಇದು ದೊಡ್ಡ ಪಾಠವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...