Homeಕರ್ನಾಟಕಕಾರು ಅಪಘಾತದಲ್ಲಿ ಮಹಿಳೆ ಸಾವು: ನಟ ನಾಗಭೂಷಣ ಬಂಧನ

ಕಾರು ಅಪಘಾತದಲ್ಲಿ ಮಹಿಳೆ ಸಾವು: ನಟ ನಾಗಭೂಷಣ ಬಂಧನ

- Advertisement -
- Advertisement -

ಕನ್ನಡ ನಟ ನಾಗಭೂಷಣ ಅವರ ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು, ಘಟನೆ ಬಳಿಕ ನಟ ನಾಗಭೂಷಣ ಅವರನ್ನು ಬಂಧಿಸಲಾಗಿದೆ.

ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಟ ನಾಗಭೂಷಣ ಕಾರು ಅಪಘಾತವಾಗಿದ್ದು, ಪಾದಚಾರಿ ಮಹಿಳೆ ಎಸ್.ಪ್ರೇಮಾ (48) ಅವರು ಮೃತಪಟ್ಟಿದ್ದಾರೆ.

ಉತ್ತರಹಳ್ಳಿಯ ವಸಂತಪುರ ಮುಖ್ಯರಸ್ತೆ ನಿವಾಸಿ ಪ್ರೇಮಾ ಅವರು ಪತಿ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ನಾಗಭೂಷಣ ಅವರ ಕಾರು ಅತೀ ವೇಗದಲ್ಲಿ ಬಂದು ದಂಪತಿಗೆ ಢಿಕ್ಕಿ ಹೊಡೆದು ಬಳಿಕ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರವಾಗಿದ್ದ ಪ್ರೇಮಾ ಅವರು ಮೃತಪಟ್ಟಿದ್ದಾರೆ. ಕೃಷ್ಣ ಅವರಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ನಾಗಭೂಷಣ ಕಾರು ಚಲಾಯಿಸಿದ್ದರು. ಇದರಿಂದಲೇ ಅಪಘಾತ ಆಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಬಗ್ಗೆ ಮೃತ ಪ್ರೇಮಾ ಅವರ ಸಂಬಂಧಿಕರು ದೂರು ನೀಡಿದ್ದು, ಅದರಂತೆ ನಾಗಭೂಷಣ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದೀಗ ಕಾರು ಜಪ್ತಿ ಮಾಡಿ, ನಾಗಭೂಷಣ ಅವರನ್ನು ಬಂಧಿಸಲಾಗಿದೆ.

ಅಪಘಾತದ ಬಳಿಕ‌ ಕಾರು ಸ್ಥಳದಲ್ಲೇ ಬಿಟ್ಟು ನಾಗಭೂಷಣ ಅವರು ಪರಾರಿಯಾಗಲು ಯತ್ನಿಸಿದ್ದರು. ಅವರನ್ನು ತಡೆದು‌ ನಿಲ್ಲಿಸಿದ್ದೆವು. ಜನರು ಹೆಚ್ಚು ಸೇರುತ್ತಿದ್ದಂತೆ ಮಾಸ್ಕ್ ಹಾಕಿಕೊಂಡಿದ್ದಾರೆ. ಬಳಿಕ ಹೊಯ್ಸಳ ವಾಹನ ಸ್ಥಳಕ್ಕೆ ಬಂದಿದ್ದು ಅದರಲ್ಲಿ ಅವರನ್ನು ಕೂರಿಸಿ‌ ಠಾಣೆಗೆ ಕಳುಹಿಸಿದೆವು ಎಂದು ಸ್ಥಳೀಯರೋರ್ವರು ಹೇಳಿದ್ದಾರೆ.

ಇದನ್ನು ಓದಿ: ಛತ್ತೀಸ್‌ಗಢ: ಸರಕಾರಿ ಆಸ್ಪತ್ರೆಯಲ್ಲಿ ಅಪಘಾತದ ಗಾಯಾಳುಗಳಿಗೆ ಮೊಬೈಲ್ ಬೆಳಕಿನಲ್ಲಿ ಚಿಕಿತ್ಸೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನಾನು ಆರ್‌ಎಸ್‌ಎಸ್ ಸದಸ್ಯ, ಕರೆದರೆ ಸಂಸ್ಥೆಗೆ ಹಿಂತಿರುಗಲು ಸಿದ್ಧ..’; ಬೀಳ್ಕೊಡುಗೆ ಸಮಾರಂಭದಲ್ಲಿ ಘೋಷಿಸಿದ ಹೈಕೋರ್ಟ್‌...

0
ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೋಮವಾರ ನಿವೃತ್ತರಾದ ನ್ಯಾಯಮೂರ್ತಿ ಚಿತ್ತ ರಂಜನ್ ದಾಶ್ ಅವರು, 'ನಾನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯ' ಎಂದು ಹೇಳಿದ್ದಾರೆ. ನ್ಯಾಯಾಧೀಶರು ಮತ್ತು ಬಾರ್‌ ಕೌನ್ಸಿಲ್‌ ಸದಸ್ಯರ ಸಮ್ಮುಖದಲ್ಲಿ...