Homeಕರ್ನಾಟಕನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

ನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

- Advertisement -
- Advertisement -

ಚಂದನವನದ ರಾಜಕುಮಾರ ಪುನೀತ್ ರಾಜ್‌ಕುಮಾರ್ ಅವರ ಕಣ್ಣುಗಳನ್ನು ನಾಲ್ವರಿಗೆ ಅಳವಡಿಸಲಾಗಿದೆ. ಇದರಿಂದ ನಾಲ್ವರಿಗೆ ದೃಷ್ಟಿ ಬಂದಿದೆ ಎಂದು ನಾರಾಯಣ  ನೇತ್ರಾಲಯದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಭುಜಂಗ ಶೆಟ್ಟಿ ತಿಳಿಸಿದ್ದಾರೆ.

“ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಈ ರೀತಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನಾವು ಶುಕ್ರವಾರ ಅಪ್ಪು ಅವರ ಕಣ್ಣುಗಳನ್ನು ಶಸ್ತ್ರಚಿಕಿತ್ಸೆ ಮಾಡಿ ಸಂಗ್ರಹಿಸಿದೆವು. ನಂತರ, ಶುಕ್ರವಾರ ಮತ್ತು ಶನಿವಾರ ಅವರ ಕಣ್ಣುಗಳನ್ನು ಕಸಿ ಮಾಡುವ ಮೂಲಕ ನಾಲ್ವರಿಗೆ ಅಳವಡಿಸಲಾಯಿತು” ಎಂದು ಡಾ.ಭುಜಂಗ ಶೆಟ್ಟಿ ಹೇಳಿದ್ದಾರೆ.

ಯುವ ವಯಸ್ಸಿನಲ್ಲಿಯೇ ಹಠಾತ್ತನೆ ಸಾವನ್ನಪ್ಪಿದ ಪುನೀತ್‌ ರಾಜ್‌ಕುಮಾರ್‌, ತಮ್ಮ ತಂದೆ ಡಾ. ರಾಜ್‌ಕುಮಾರ್ ಮತ್ತು ತಾಯಿ ಪಾರ್ವತಮ್ಮ ಅವರ ಹಾದಿಯಲ್ಲಿಯೇ ತಮ್ಮ ನೇತ್ರಗಳನ್ನು ದಾನ ಮಾಡಿದ್ದಾರೆ. 2006ರಲ್ಲಿ ರಾಜ್‌ಕುಮಾರ್ ನೇತ್ರದಾನ ಮಾಡಿದ್ದರು ಮತ್ತು 2017 ರಲ್ಲಿ ಪಾರ್ವತಮ್ಮ ಅವರೂ ನೇತ್ರದಾನ ಮಾಡಿದ್ದರು.

ಇದನ್ನೂ ಓದಿ:   ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಎರಡು ಕಣ್ಣಿನಿಂದ ನಾಲ್ವರಿಗೆ ದೃಷ್ಟಿ ನೀಡಿದ್ದು ಹೇಗೆ..? 

ಪ್ರತಿ ಕಣ್ಣಿನ ಕಾರ್ನಿಯಾವನ್ನು ಅರ್ಧದಷ್ಟು ಕತ್ತರಿಸಿ, ಮುಂಭಾಗದ ಭಾಗವನ್ನು ಒಬ್ಬ ಫಲಾನುಭವಿಗೆ ಮತ್ತು ಎರಡನೇ ಭಾಗವನ್ನು ಇನ್ನೊಬ್ಬರಿಗೆ ನೀಡಲಾಗಿದೆ. ಸರಿಯಾದ ಫಲಾನುಭವಿಗಳನ್ನು ಹುಡುಕುವುದು ಯಾವಾಗಲೂ ಸವಾಲಾಗಿರುತ್ತದೆ. ಏಕೆಂದರೆ ಅವರು ಆ ಕಣ್ಣುಗಳನ್ನು ಅಥವಾ ಕಣ್ಣಿನ ಭಾಗವನ್ನು ಪಡೆಯಲು ಅರ್ಹರಾಗಿರಬೇಕು. ಆದರೆ ಈ ಬಾರಿ ಎಲ್ಲವೂ ಸಾಧ್ಯವಾಯಿತು ಎಂದು ವೈದ್ಯರು ತಿಳಿಸಿದ್ದಾರೆ.

“ಕಣ್ಣುಗಳು ಸುಸ್ಥಿತಿಯಲ್ಲಿದ್ದರೆ ನಾಲ್ಕು ಜನರಿಗೆ ದಾನ ಮಾಡಬಹುದು. ಎಲ್ಲಾ ಫಲಾನುಭವಿಗಳ ಕಣ್ಣುಗಳೂ ಈಗ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಪುನೀತ್‌ ಅವರ ಕಣ್ಣಿನ ಬಿಳಿಭಾಗವನ್ನೂ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಲಾಗಿದೆ. ಅದರಿಂದ ಲಿಂಬಲ್ ಸೆಲ್‌ಗಳನ್ನು ಬೆಳೆಸಿ ಬೇರೆ ರೋಗಿಗಳಿಗೂ ಬಳಸಬಹುದು” ಎಂದು ಡಾ. ಶೆಟ್ಟಿ ವಿವರಿಸಿದ್ದಾರೆ.

ಫಲಾನುಭವಿಗಳೆಲ್ಲರೂ ಕರ್ನಾಟಕ ಮೂಲದ ಯುವಕರೇ ಆಗಿದ್ದು,ಕಣ್ಣುಗಳನ್ನು ಯಾರಿಗೆ ನೀಡಲಾಗಿದೆ ಎಂದು ಹೆಚ್ಚು ವಿವರ ಬಹಿರಂಗಪಡಿಸುವುದಿಲ್ಲ. ಒಬ್ಬ ಯುವತಿ ಮತ್ತು ಮೂವರು ಯುವಕರಿಗೆ ಕಣ್ಣು ನೀಡಲಾಗಿದೆ.  ಐವರು ವೈದ್ಯರ ತಂಡದಿಂದ ಕಸಿ ಮಾಡಲಾಗಿದೆ ಎಂದು ಡಾ.ರಾಜ್‌ಕುಮಾರ್‌ ನೇತ್ರ ಬ್ಯಾಂಕ್‌ನ ವೈದ್ಯಕೀಯ ನಿರ್ದೇಶಕ ಡಾ.ಯತೀಶ್‌ ಶಿವಣ್ಣ ಹೇಳಿದ್ದಾರೆ.

“ಪುನೀತ್‌ ಅವರ ಬಹುಮುಖ ವ್ಯಕ್ತಿತ್ವವನ್ನು ಗುರುತಿಸಲು ನಾವು ನಿರ್ದಿಷ್ಟವಾಗಿ ಅವರ ಕಣ್ಣುಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಲು ಬಯಸಿದ್ದೆವು. ಕಣ್ಣು ಕಸಿ ಕಾರ್ಯವು ಬೆಳಿಗ್ಗೆ 11.30ಕ್ಕೆ ಪ್ರಾರಂಭವಾಗಿ ಸಂಜೆ 5.30ರವರೆಗೆ ನಡೆಯಿತು. ಇದು ಸೂಕ್ಷ್ಮ ಶಸ್ತ್ರಚಿಕಿತ್ಸೆಯಾಗಿದ್ದರೂ, ಇದನ್ನು ಬೇಗನೆ ಮಾಡಲಾಯಿತು. ಆದ್ದರಿಂದ, ಜನರು ಇದರ ಸದುಪಯೋಗ ಪಡೆದುಕೊಳ್ಳಲು ಸಾಧ್ಯವಾಯಿತು” ಎಂದು ಮಾಹಿತಿ ನೀಡಿದ್ದಾರೆ.

ಡಾ.ರೋಹಿತ್ ಶೆಟ್ಟಿ ಅವರ ನೇತೃತ್ವದಲ್ಲಿ ಡಾ.ಯತೀಶ್ ಶಿವಣ್ಣ, ಪ್ರಾರ್ಥನಾ ಭಂಡಾರಿ, ಡಾ.ಶರೋನ್ ಡಿಸೋಜಾ, ಮತ್ತು ಡಾ.ಹರ್ಷ ನಾಗರಾಜ್ ಅವರು ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದಾರೆ. ಕಾರ್ನಿಯಾ ತಂಡದ ಡಾ.ಗೈರಿಕ್ ಕುಂದು ಮತ್ತು ವೀರೇಶ್ ನೆರವು ನೀಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದ ’ಯುವರತ್ನ’ ಪುನೀತ್ ರಾಜ್‌ಕುಮಾರ್‌ ಅವರ ಅಪರೂಪದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...