Homeಕರ್ನಾಟಕನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

ನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

- Advertisement -
- Advertisement -

ಚಂದನವನದ ರಾಜಕುಮಾರ ಪುನೀತ್ ರಾಜ್‌ಕುಮಾರ್ ಅವರ ಕಣ್ಣುಗಳನ್ನು ನಾಲ್ವರಿಗೆ ಅಳವಡಿಸಲಾಗಿದೆ. ಇದರಿಂದ ನಾಲ್ವರಿಗೆ ದೃಷ್ಟಿ ಬಂದಿದೆ ಎಂದು ನಾರಾಯಣ  ನೇತ್ರಾಲಯದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಭುಜಂಗ ಶೆಟ್ಟಿ ತಿಳಿಸಿದ್ದಾರೆ.

“ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಈ ರೀತಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನಾವು ಶುಕ್ರವಾರ ಅಪ್ಪು ಅವರ ಕಣ್ಣುಗಳನ್ನು ಶಸ್ತ್ರಚಿಕಿತ್ಸೆ ಮಾಡಿ ಸಂಗ್ರಹಿಸಿದೆವು. ನಂತರ, ಶುಕ್ರವಾರ ಮತ್ತು ಶನಿವಾರ ಅವರ ಕಣ್ಣುಗಳನ್ನು ಕಸಿ ಮಾಡುವ ಮೂಲಕ ನಾಲ್ವರಿಗೆ ಅಳವಡಿಸಲಾಯಿತು” ಎಂದು ಡಾ.ಭುಜಂಗ ಶೆಟ್ಟಿ ಹೇಳಿದ್ದಾರೆ.

ಯುವ ವಯಸ್ಸಿನಲ್ಲಿಯೇ ಹಠಾತ್ತನೆ ಸಾವನ್ನಪ್ಪಿದ ಪುನೀತ್‌ ರಾಜ್‌ಕುಮಾರ್‌, ತಮ್ಮ ತಂದೆ ಡಾ. ರಾಜ್‌ಕುಮಾರ್ ಮತ್ತು ತಾಯಿ ಪಾರ್ವತಮ್ಮ ಅವರ ಹಾದಿಯಲ್ಲಿಯೇ ತಮ್ಮ ನೇತ್ರಗಳನ್ನು ದಾನ ಮಾಡಿದ್ದಾರೆ. 2006ರಲ್ಲಿ ರಾಜ್‌ಕುಮಾರ್ ನೇತ್ರದಾನ ಮಾಡಿದ್ದರು ಮತ್ತು 2017 ರಲ್ಲಿ ಪಾರ್ವತಮ್ಮ ಅವರೂ ನೇತ್ರದಾನ ಮಾಡಿದ್ದರು.

ಇದನ್ನೂ ಓದಿ:   ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಎರಡು ಕಣ್ಣಿನಿಂದ ನಾಲ್ವರಿಗೆ ದೃಷ್ಟಿ ನೀಡಿದ್ದು ಹೇಗೆ..? 

ಪ್ರತಿ ಕಣ್ಣಿನ ಕಾರ್ನಿಯಾವನ್ನು ಅರ್ಧದಷ್ಟು ಕತ್ತರಿಸಿ, ಮುಂಭಾಗದ ಭಾಗವನ್ನು ಒಬ್ಬ ಫಲಾನುಭವಿಗೆ ಮತ್ತು ಎರಡನೇ ಭಾಗವನ್ನು ಇನ್ನೊಬ್ಬರಿಗೆ ನೀಡಲಾಗಿದೆ. ಸರಿಯಾದ ಫಲಾನುಭವಿಗಳನ್ನು ಹುಡುಕುವುದು ಯಾವಾಗಲೂ ಸವಾಲಾಗಿರುತ್ತದೆ. ಏಕೆಂದರೆ ಅವರು ಆ ಕಣ್ಣುಗಳನ್ನು ಅಥವಾ ಕಣ್ಣಿನ ಭಾಗವನ್ನು ಪಡೆಯಲು ಅರ್ಹರಾಗಿರಬೇಕು. ಆದರೆ ಈ ಬಾರಿ ಎಲ್ಲವೂ ಸಾಧ್ಯವಾಯಿತು ಎಂದು ವೈದ್ಯರು ತಿಳಿಸಿದ್ದಾರೆ.

“ಕಣ್ಣುಗಳು ಸುಸ್ಥಿತಿಯಲ್ಲಿದ್ದರೆ ನಾಲ್ಕು ಜನರಿಗೆ ದಾನ ಮಾಡಬಹುದು. ಎಲ್ಲಾ ಫಲಾನುಭವಿಗಳ ಕಣ್ಣುಗಳೂ ಈಗ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಪುನೀತ್‌ ಅವರ ಕಣ್ಣಿನ ಬಿಳಿಭಾಗವನ್ನೂ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಲಾಗಿದೆ. ಅದರಿಂದ ಲಿಂಬಲ್ ಸೆಲ್‌ಗಳನ್ನು ಬೆಳೆಸಿ ಬೇರೆ ರೋಗಿಗಳಿಗೂ ಬಳಸಬಹುದು” ಎಂದು ಡಾ. ಶೆಟ್ಟಿ ವಿವರಿಸಿದ್ದಾರೆ.

ಫಲಾನುಭವಿಗಳೆಲ್ಲರೂ ಕರ್ನಾಟಕ ಮೂಲದ ಯುವಕರೇ ಆಗಿದ್ದು,ಕಣ್ಣುಗಳನ್ನು ಯಾರಿಗೆ ನೀಡಲಾಗಿದೆ ಎಂದು ಹೆಚ್ಚು ವಿವರ ಬಹಿರಂಗಪಡಿಸುವುದಿಲ್ಲ. ಒಬ್ಬ ಯುವತಿ ಮತ್ತು ಮೂವರು ಯುವಕರಿಗೆ ಕಣ್ಣು ನೀಡಲಾಗಿದೆ.  ಐವರು ವೈದ್ಯರ ತಂಡದಿಂದ ಕಸಿ ಮಾಡಲಾಗಿದೆ ಎಂದು ಡಾ.ರಾಜ್‌ಕುಮಾರ್‌ ನೇತ್ರ ಬ್ಯಾಂಕ್‌ನ ವೈದ್ಯಕೀಯ ನಿರ್ದೇಶಕ ಡಾ.ಯತೀಶ್‌ ಶಿವಣ್ಣ ಹೇಳಿದ್ದಾರೆ.

“ಪುನೀತ್‌ ಅವರ ಬಹುಮುಖ ವ್ಯಕ್ತಿತ್ವವನ್ನು ಗುರುತಿಸಲು ನಾವು ನಿರ್ದಿಷ್ಟವಾಗಿ ಅವರ ಕಣ್ಣುಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಲು ಬಯಸಿದ್ದೆವು. ಕಣ್ಣು ಕಸಿ ಕಾರ್ಯವು ಬೆಳಿಗ್ಗೆ 11.30ಕ್ಕೆ ಪ್ರಾರಂಭವಾಗಿ ಸಂಜೆ 5.30ರವರೆಗೆ ನಡೆಯಿತು. ಇದು ಸೂಕ್ಷ್ಮ ಶಸ್ತ್ರಚಿಕಿತ್ಸೆಯಾಗಿದ್ದರೂ, ಇದನ್ನು ಬೇಗನೆ ಮಾಡಲಾಯಿತು. ಆದ್ದರಿಂದ, ಜನರು ಇದರ ಸದುಪಯೋಗ ಪಡೆದುಕೊಳ್ಳಲು ಸಾಧ್ಯವಾಯಿತು” ಎಂದು ಮಾಹಿತಿ ನೀಡಿದ್ದಾರೆ.

ಡಾ.ರೋಹಿತ್ ಶೆಟ್ಟಿ ಅವರ ನೇತೃತ್ವದಲ್ಲಿ ಡಾ.ಯತೀಶ್ ಶಿವಣ್ಣ, ಪ್ರಾರ್ಥನಾ ಭಂಡಾರಿ, ಡಾ.ಶರೋನ್ ಡಿಸೋಜಾ, ಮತ್ತು ಡಾ.ಹರ್ಷ ನಾಗರಾಜ್ ಅವರು ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದಾರೆ. ಕಾರ್ನಿಯಾ ತಂಡದ ಡಾ.ಗೈರಿಕ್ ಕುಂದು ಮತ್ತು ವೀರೇಶ್ ನೆರವು ನೀಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದ ’ಯುವರತ್ನ’ ಪುನೀತ್ ರಾಜ್‌ಕುಮಾರ್‌ ಅವರ ಅಪರೂಪದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...