Homeಕರ್ನಾಟಕನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

ನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

- Advertisement -
- Advertisement -

ಚಂದನವನದ ರಾಜಕುಮಾರ ಪುನೀತ್ ರಾಜ್‌ಕುಮಾರ್ ಅವರ ಕಣ್ಣುಗಳನ್ನು ನಾಲ್ವರಿಗೆ ಅಳವಡಿಸಲಾಗಿದೆ. ಇದರಿಂದ ನಾಲ್ವರಿಗೆ ದೃಷ್ಟಿ ಬಂದಿದೆ ಎಂದು ನಾರಾಯಣ  ನೇತ್ರಾಲಯದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಭುಜಂಗ ಶೆಟ್ಟಿ ತಿಳಿಸಿದ್ದಾರೆ.

“ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಈ ರೀತಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನಾವು ಶುಕ್ರವಾರ ಅಪ್ಪು ಅವರ ಕಣ್ಣುಗಳನ್ನು ಶಸ್ತ್ರಚಿಕಿತ್ಸೆ ಮಾಡಿ ಸಂಗ್ರಹಿಸಿದೆವು. ನಂತರ, ಶುಕ್ರವಾರ ಮತ್ತು ಶನಿವಾರ ಅವರ ಕಣ್ಣುಗಳನ್ನು ಕಸಿ ಮಾಡುವ ಮೂಲಕ ನಾಲ್ವರಿಗೆ ಅಳವಡಿಸಲಾಯಿತು” ಎಂದು ಡಾ.ಭುಜಂಗ ಶೆಟ್ಟಿ ಹೇಳಿದ್ದಾರೆ.

ಯುವ ವಯಸ್ಸಿನಲ್ಲಿಯೇ ಹಠಾತ್ತನೆ ಸಾವನ್ನಪ್ಪಿದ ಪುನೀತ್‌ ರಾಜ್‌ಕುಮಾರ್‌, ತಮ್ಮ ತಂದೆ ಡಾ. ರಾಜ್‌ಕುಮಾರ್ ಮತ್ತು ತಾಯಿ ಪಾರ್ವತಮ್ಮ ಅವರ ಹಾದಿಯಲ್ಲಿಯೇ ತಮ್ಮ ನೇತ್ರಗಳನ್ನು ದಾನ ಮಾಡಿದ್ದಾರೆ. 2006ರಲ್ಲಿ ರಾಜ್‌ಕುಮಾರ್ ನೇತ್ರದಾನ ಮಾಡಿದ್ದರು ಮತ್ತು 2017 ರಲ್ಲಿ ಪಾರ್ವತಮ್ಮ ಅವರೂ ನೇತ್ರದಾನ ಮಾಡಿದ್ದರು.

ಇದನ್ನೂ ಓದಿ:   ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಎರಡು ಕಣ್ಣಿನಿಂದ ನಾಲ್ವರಿಗೆ ದೃಷ್ಟಿ ನೀಡಿದ್ದು ಹೇಗೆ..? 

ಪ್ರತಿ ಕಣ್ಣಿನ ಕಾರ್ನಿಯಾವನ್ನು ಅರ್ಧದಷ್ಟು ಕತ್ತರಿಸಿ, ಮುಂಭಾಗದ ಭಾಗವನ್ನು ಒಬ್ಬ ಫಲಾನುಭವಿಗೆ ಮತ್ತು ಎರಡನೇ ಭಾಗವನ್ನು ಇನ್ನೊಬ್ಬರಿಗೆ ನೀಡಲಾಗಿದೆ. ಸರಿಯಾದ ಫಲಾನುಭವಿಗಳನ್ನು ಹುಡುಕುವುದು ಯಾವಾಗಲೂ ಸವಾಲಾಗಿರುತ್ತದೆ. ಏಕೆಂದರೆ ಅವರು ಆ ಕಣ್ಣುಗಳನ್ನು ಅಥವಾ ಕಣ್ಣಿನ ಭಾಗವನ್ನು ಪಡೆಯಲು ಅರ್ಹರಾಗಿರಬೇಕು. ಆದರೆ ಈ ಬಾರಿ ಎಲ್ಲವೂ ಸಾಧ್ಯವಾಯಿತು ಎಂದು ವೈದ್ಯರು ತಿಳಿಸಿದ್ದಾರೆ.

“ಕಣ್ಣುಗಳು ಸುಸ್ಥಿತಿಯಲ್ಲಿದ್ದರೆ ನಾಲ್ಕು ಜನರಿಗೆ ದಾನ ಮಾಡಬಹುದು. ಎಲ್ಲಾ ಫಲಾನುಭವಿಗಳ ಕಣ್ಣುಗಳೂ ಈಗ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಪುನೀತ್‌ ಅವರ ಕಣ್ಣಿನ ಬಿಳಿಭಾಗವನ್ನೂ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಲಾಗಿದೆ. ಅದರಿಂದ ಲಿಂಬಲ್ ಸೆಲ್‌ಗಳನ್ನು ಬೆಳೆಸಿ ಬೇರೆ ರೋಗಿಗಳಿಗೂ ಬಳಸಬಹುದು” ಎಂದು ಡಾ. ಶೆಟ್ಟಿ ವಿವರಿಸಿದ್ದಾರೆ.

ಫಲಾನುಭವಿಗಳೆಲ್ಲರೂ ಕರ್ನಾಟಕ ಮೂಲದ ಯುವಕರೇ ಆಗಿದ್ದು,ಕಣ್ಣುಗಳನ್ನು ಯಾರಿಗೆ ನೀಡಲಾಗಿದೆ ಎಂದು ಹೆಚ್ಚು ವಿವರ ಬಹಿರಂಗಪಡಿಸುವುದಿಲ್ಲ. ಒಬ್ಬ ಯುವತಿ ಮತ್ತು ಮೂವರು ಯುವಕರಿಗೆ ಕಣ್ಣು ನೀಡಲಾಗಿದೆ.  ಐವರು ವೈದ್ಯರ ತಂಡದಿಂದ ಕಸಿ ಮಾಡಲಾಗಿದೆ ಎಂದು ಡಾ.ರಾಜ್‌ಕುಮಾರ್‌ ನೇತ್ರ ಬ್ಯಾಂಕ್‌ನ ವೈದ್ಯಕೀಯ ನಿರ್ದೇಶಕ ಡಾ.ಯತೀಶ್‌ ಶಿವಣ್ಣ ಹೇಳಿದ್ದಾರೆ.

“ಪುನೀತ್‌ ಅವರ ಬಹುಮುಖ ವ್ಯಕ್ತಿತ್ವವನ್ನು ಗುರುತಿಸಲು ನಾವು ನಿರ್ದಿಷ್ಟವಾಗಿ ಅವರ ಕಣ್ಣುಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಲು ಬಯಸಿದ್ದೆವು. ಕಣ್ಣು ಕಸಿ ಕಾರ್ಯವು ಬೆಳಿಗ್ಗೆ 11.30ಕ್ಕೆ ಪ್ರಾರಂಭವಾಗಿ ಸಂಜೆ 5.30ರವರೆಗೆ ನಡೆಯಿತು. ಇದು ಸೂಕ್ಷ್ಮ ಶಸ್ತ್ರಚಿಕಿತ್ಸೆಯಾಗಿದ್ದರೂ, ಇದನ್ನು ಬೇಗನೆ ಮಾಡಲಾಯಿತು. ಆದ್ದರಿಂದ, ಜನರು ಇದರ ಸದುಪಯೋಗ ಪಡೆದುಕೊಳ್ಳಲು ಸಾಧ್ಯವಾಯಿತು” ಎಂದು ಮಾಹಿತಿ ನೀಡಿದ್ದಾರೆ.

ಡಾ.ರೋಹಿತ್ ಶೆಟ್ಟಿ ಅವರ ನೇತೃತ್ವದಲ್ಲಿ ಡಾ.ಯತೀಶ್ ಶಿವಣ್ಣ, ಪ್ರಾರ್ಥನಾ ಭಂಡಾರಿ, ಡಾ.ಶರೋನ್ ಡಿಸೋಜಾ, ಮತ್ತು ಡಾ.ಹರ್ಷ ನಾಗರಾಜ್ ಅವರು ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದಾರೆ. ಕಾರ್ನಿಯಾ ತಂಡದ ಡಾ.ಗೈರಿಕ್ ಕುಂದು ಮತ್ತು ವೀರೇಶ್ ನೆರವು ನೀಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದ ’ಯುವರತ್ನ’ ಪುನೀತ್ ರಾಜ್‌ಕುಮಾರ್‌ ಅವರ ಅಪರೂಪದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...