Homeಕರ್ನಾಟಕಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲ

ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲ

ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ, ವಂದಿತಾರೊಂದಿಗೆ ಅಪಾರ ಅಭಿಮಾನಿಗಳನ್ನು ಪುನೀತ್ ಅಗಲಿದ್ದಾರೆ.

- Advertisement -
- Advertisement -

ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ (45) ತೀವ್ರ ಹೃದಯಾಘಾತ ಸಂಭವಿಸಿ, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಶುಕ್ರವಾರ ಬೆಳಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಕರೆತರುವಾಗ ಮತ್ತೊಮ್ಮೆ ಹೃದಯಾಘಾತ ಸಂಭವಿಸಿದೆ. ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾದರೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಅಭಿಮಾನಿಗಳಿಂದ ಪ್ರೀತಿಯಿಂದ ಅಪ್ಪು ಎಂದು ಕರೆಸಿಕೊಳ್ಳುವ ಪವರ್‌ ಸ್ಟಾರ್ ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗದ ಪ್ರಮುಖ ನಾಯಕನಟ. ಪುನೀತ್ ರಾಜ್‌ಕುಮಾರ್‌ ನಟರಾಗಿಯಷ್ಟೇ ಅಲ್ಲದೆ ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ.

1976 ರಲ್ಲಿ ತೆರೆಕಂಡ ಡಾ.ರಾಜ್‌ಕುಮಾರ್‌ ಅಭಿನಯದ `ಪ್ರೇಮದ ಕಾಣಿಕೆ’ ಚಿತ್ರದ ಮೂಲಕ ತೆರೆಯ ಮೇಲೆ ಕಾಣಿಸಿಕೊಂಡಿದ್ದರು. ಆಗ ಪುನೀತ್ ಆರು ತಿಂಗಳು ಮಗು. ನಂತರ ವಸಂತ ಗೀತ (1980)ಮೂಲಕ ಬಾಲ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಪುನೀತ್‌ ರಾಜ್‌ಕುಮಾರ್, ಸುಮಾರು ನಾಲ್ಕು ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಚಿತ್ರಗಳು ಮತ್ತು ನಾಯಕ ನಟನಾಗಿ 28 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿರುವ ಅಣ್ಣಾವ್ರ ಕುಟುಂಬದ ಕುಡಿ ಪುನೀತ್ ರಾಜ್‌ಕುಮಾರ್. 1975 ರ ಮಾರ್ಚ್ 17 ರಂದು ವರನಟ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮರವರ ಕಿರಿಯ ಪುತ್ರನಾಗಿ ಪುನೀತ್ ರಾಜ್‌ಕುಮಾರ್ ಜನಿಸಿದರು. ಇವರ ಹಿರಿಯ ಸಹೋದರರಾದ ಶಿವರಾಜ ಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಕನ್ನಡ ಚಿತ್ರರಂಗದ ಯಶಸ್ವಿ ನಾಯಕನಟರು.

ತಂದೆ ರಾಜ್‌ಕುಮಾರ್ ಅವರ ಚಿತ್ರಗಳನ್ನು ನೋಡುತ್ತಾ, ಅವರ ಶೂಟಿಂಗ್‌ ಸೆಟ್‌ಗಳಿಗೆ ಭೇಟಿ ಕೊಡುತ್ತಿದ್ದ ಅಪ್ಪುಗೆ ಬಾಲ್ಯದಿಂದಲೇ ನಟನೆಯಲ್ಲಿ ಆಸಕ್ತಿಯಿತ್ತು. ಈ ಕಾರಣದಿಂದಲೇ ಬಾಲ ನಟನಾಗಿ ಚಿತ್ರರಂಗದಲ್ಲಿ ಅಳಿಸದ ಹೆಜ್ಜೆಗುರುತು ಮೂಡಿಸಿದ್ದಾರೆ.

ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ, ಭಾಗ್ಯವಂತ, ಚಲಿಸುವ ಮೋಡಗಳು, ಎರಡು ನಕ್ಷತ್ರಗಳು, ಪ್ರೇಮದ ಕಾಣಿಕೆ, ಬೆಟ್ಟದ ಹೂವು, ಶಿವ ಮೆಚ್ಚಿದ ಕಣ್ಣಪ್ಪ, ಪರಶುರಾಮ್, ಯಾರಿವನು, ಭಕ್ತ ಪ್ರಹ್ಲಾದ, ವಸಂತ ಗೀತ, ಭೂಮಿಗೆ ಬಂದ ಭಗವಂತ, ಸನಾದಿ ಅಪ್ಪಣ್ಣ, ತಾಯಿಗೆ ತಕ್ಕ ಮಗ ಸೇರಿದಂತೆ ಹಲವು ಚಿತ್ರಗಳ ಮೂಲಕ ಜನರ ಮನಗೆದ್ದಿದ್ದಾರೆ. ಪುನೀತ್ ಅವರ ಮೊದಲು ಹೆಸರು ಮಾ.ಲೋಹಿತ್.

ಪುನೀತ್‌ ನಟನೆಯ 1985ರಲ್ಲಿ ತೆರೆಕಂಡ ಬೆಟ್ಟದ ಹೂವು ಚಿತ್ರದ ರಾಮು ಪಾತ್ರಕ್ಕೆ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ. ಚಲಿಸುವ ಮೋಡಗಳು’ ಹಾಗೂ ‘ಎರಡು ಕನಸು’ ಚಿತ್ರಗಳಿಗಾಗಿ ಅತ್ಯುತ್ತಮ ಬಾಲ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ.

ನಂತರ ಪುನೀತ್ 2002ರ ಅಪ್ಪು ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಕಾಲಿಟ್ಟರು. ಅವರ ಅಭಿ, ಆಕಾಶ್, ಅರಸು, ಮಿಲನ, ಜಾಕಿ, ಹುಡುಗರು, ಅಣ್ಣಾ ಬಾಂಡ್, ಪವರ್, ಮೌರ್ಯ, ನಮ್ಮ ಬಸವ, ಪೃಥ್ವಿ, ವಂಶಿ, ರಾಜ್‌, ಪರಮಾತ್ಮ, ಯಾರೇ ಕೂಗಾಡಲಿ, ನಟ ಸಾರ್ವಭೌಮ, ರಾಜಕುಮಾರ, ಅಂಜನಿಪುತ್ರ, ರಣವಿಕ್ರಮ, ದೊಡ್ಮನೆ ಹುಡುಗ, ರಾಮ್, ನಿನ್ನಿಂದಲೇ, ಮೈತ್ರಿ, ಚಕ್ರವ್ಯೂಹ, ಯುವರತ್ನ ಸೇರಿದಂತೆ ಹಲವು ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ಪುನೀತ್‌ ರಾಜ್‌ಕುಮಾರ್ ಚಿತ್ರ ನಿರ್ಮಾಪಕರಾಗಿ`ಕವಲುದಾರಿ’, `ಮಾಯಾಬಜಾರ್’, ಫ್ರೆಂಚ್ ಬಿರಿಯಾನಿ, ಲಾ, ಫ್ಯಾಮಿಲಿ ಪ್ಯಾಕ್ ಎಂಬ ಚಿತ್ರಗಳನ್ನು ಪಿಆರ್‌ಕೆ ಪ್ರೊಡಕ್ಷನ್‌ ಎಂಬ ತಮ್ಮ ಹೋಮ್ ಬ್ಯಾನರ್ನಲ್ಲಿ ನಿರ್ಮಿಸಿದ್ದಾರೆ. ಜೊತೆಗೆ ಪ್ರೊಡಕ್ಸನ್ ಹೌಸ್ ಮೂಲಕ ಕಿರುತೆರೆ ಧಾರಾವಾಹಿಗಳನ್ನು ಕೂಡ ನಿರ್ಮಿಸಿದ್ದಾರೆ. ತಾಯಿಯ ನೆನಪಿನಲ್ಲಿ `ಪಿ.ಆರ್.ಕೆ ‘ ಆಡಿಯೋ ಕಂಪನಿಯೊಂದನ್ನು ಸ್ಥಾಪಿಸಿದ್ದಾರೆ.

ಇದರ ಜೊತೆಗೆ ಪ್ರಸಿದ್ಧ ಟಿವಿ ಕಾರ್ಯಕ್ರಮ ಕನ್ನಡದ ಕೋಟ್ಯಧಿಪತಿ, ಫ್ಯಾಮಿಲಿ ಪವರ್ ಶೋ ಗಳನ್ನು ನಿರೂಪಣೆ ಮಾಡಿದ್ದಾರೆ. ಚಿತ್ರನಟ ,ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕರೂ ಆಗಿದ್ದ ಪುನೀತ್‌ ರಾಜ್‌ಕುಮಾರ್, ನಾಯಕ ನಟರಾಗಿ ನಟಿಸಿದ್ದ ಮಿಲನ ಮತ್ತು ಜಾಕಿ ಚಿತ್ರಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯ ಉತ್ತಮ ನಟ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದರು. ಅಲ್ಲದೆ, ಹುಡುಗರು, ಯಾರೇ ಕೂಗಾಡಲಿ, ರಣ ವಿಕ್ರಮ, ರಾಜಕುಮಾರ ಸಿನಿಮಾಗಳಿಗೆ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ, ವಂದಿತಾರೊಂದಿಗೆ ಅಪಾರ ಅಭಿಮಾನಿಗಳನ್ನು ಪುನೀತ್ ಅಗಲಿದ್ದಾರೆ.


ಇದನ್ನೂ ಓದಿ: ನಟ ಪುನೀತ್ ರಾಜ್‌ಕುಮಾರ್‌ ಆರೋಗ್ಯದಲ್ಲಿ ಏರುಪೇರು: ವಿಕ್ರಂ ಆಸ್ಪತ್ರೆಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...