Homeಕರ್ನಾಟಕನಟ ಪುನೀತ್ ರಾಜ್‌ಕುಮಾರ್‌ ಕನಸಿನ ಸಾಕ್ಷ್ಯಚಿತ್ರ ’ಗಂಧದಗುಡಿ’ ಟೀಸರ್‌ ಬಿಡುಗಡೆ

ನಟ ಪುನೀತ್ ರಾಜ್‌ಕುಮಾರ್‌ ಕನಸಿನ ಸಾಕ್ಷ್ಯಚಿತ್ರ ’ಗಂಧದಗುಡಿ’ ಟೀಸರ್‌ ಬಿಡುಗಡೆ

- Advertisement -
- Advertisement -

ಕಳೆದ ಅಕ್ಟೋಬರ್‌ 29 ರಂದು ನಮ್ಮನ್ನಗಲಿದ ಕನ್ನಡ ಚಿತ್ರರಂಗದ ದೈತ್ಯ ಪ್ರತಿಭೆ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಯೋಜನೆಯ ಸಾಕ್ಷ್ಯಚಿತ್ರದ ಟೈಟಲ್​ ಹಾಗೂ ಟೀಸರ್​​ ಇಂದು (ಡಿ.6) ಬಿಡುಗಡೆಯಾಗಿದೆ. ಕರ್ನಾಟಕದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಕುರಿತು ಮಾಡಿರುವ ಈ ಡಾಕ್ಯುಮೆಂಟರಿಗೆ “ಗಂಧದಗುಡಿ” ಎಂದು ಹೆಸರಿಡಲಾಗಿದೆ.

ನಾಡಿನ ಕಾಡು, ಮೇಡು ಅಲೆದು ಪುನೀತ್‌ ರಾಜ್‌ಕುಮಾರ್‌ ಅವರು ಈ ಡಾಕ್ಯುಮೆಂಟರಿ​ ಮಾಡಿದ್ದರು. ಇದರ ಬಗ್ಗೆ ಅಕ್ಟೋಬರ್‌ 27 ರಂದು ಚಿಕ್ಕ ಸುಳಿವು ಕೂಡ ನೀಡಿದ್ದರು. ಆದರೆ ಅಷ್ಟರಲ್ಲಿ ಅನಿರೀಕ್ಷಿತ ಘಟನೆ ನಡೆದುಹೋಯಿತು.

ಪಿಆರ್‌ಕೆ ಆಡಿಯೋ ಯೂಟ್ಯೂಬ್ ಚಾನೆಲ್‌ ಮೂಲಕ ಗಂಧದಗುಡಿ ಟೀಸರ್‌ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್​ ಮತ್ತು ಮಡ್‌ಸ್ಕಿಪ್ಪರ್‌ ಸಂಸ್ಥೆಯವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಖ್ಯಾತ ವೈಲ್ಡ್ ಲೈಫ್ ಛಾಯಾಗ್ರಾಹಕ ಅಮೋಘವರ್ಷ ನಿರ್ದೇಶನ ಗಂಧದಗುಡಿಗಿದೆ.

ಇದನ್ನೂ ಓದಿ: ಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

ಕಳೆದ ಅಕ್ಟೋಬರ್‌ 27 ರಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಸಾಕ್ಷ್ಯಚಿತ್ರದ ಬಗ್ಗೆ ಅಪ್ಪು ಬರೆದುಕೊಂಡಿದ್ದು ಹೀಗೆ…”ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ” ಎಂದಿದ್ದರು. ನವೆಂಬರ್‌ 1 ರಂದು ಟೀಸರ್‌ ಬಿಡುಗಡೆಯಾಗಬೇಕಿತ್ತು.

ಸಾಕ್ಷ್ಯಚಿತ್ರಗಳು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವುದು ಬಹಳ ವಿರಳ. ಆದರೆ, ಗಂಧದಗುಡಿ ಚಿತ್ರಿಕರಣ ಮುಗಿಸಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. 2022 ಕ್ಕೆ ಚಿತ್ರಮಂದಿರಗಳಿಗೆ ಕಾಲಿಡಲಿದೆ ಎಂದು ಚಿತ್ರತಂಡ ತಿಳಿಸಿದೆ.

ಗಂಧಧಗುಡಿ ಟೀಸರ್‌ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಚಿತ್ರರಂಗದವರು, ಅಭಿಮಾನಿಗಳು ಸೇರಿದಂತೆ ಹಲವರು ಹಂಚಿಕೊಂಡಿದ್ದು ಮಿಸ್ ಯು ಅಪ್ಪು ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಸರ್‌ ಹಂಚಿಕೊಂಡಿದ್ದು, “ನಮ್ಮೆಲ್ಲರ ಪ್ರೀತಿಯ ಅಪ್ಪು ದಿ. ಪುನೀತ್ ರಾಜಕುಮಾರ್ ಅಭಿನಯದ ಪಿ.ಆರ್.ಕೆ ಪ್ರೊಡಕ್ಷನ್ ನಿರ್ಮಿಸಿರುವ ‘ಗಂಧದ ಗುಡಿ’ ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ, ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ. ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು. ಪ್ರತಿ ಭಾರತೀಯ, ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಕನ್ನಡಿಗ ಕರುನಾಡಿನ ಈ ಕಥಾನಕವನ್ನು ನೋಡುವಂತಾಗಲಿ. ನಮ್ಮ ಅರಣ್ಯ, ನಮ್ಮ ಪರಿಸರ, ವೈವಿಧ್ಯಮಯ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.


ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...