Homeಕರ್ನಾಟಕನಟ ಪುನೀತ್ ರಾಜ್‌ಕುಮಾರ್‌ ಕನಸಿನ ಸಾಕ್ಷ್ಯಚಿತ್ರ ’ಗಂಧದಗುಡಿ’ ಟೀಸರ್‌ ಬಿಡುಗಡೆ

ನಟ ಪುನೀತ್ ರಾಜ್‌ಕುಮಾರ್‌ ಕನಸಿನ ಸಾಕ್ಷ್ಯಚಿತ್ರ ’ಗಂಧದಗುಡಿ’ ಟೀಸರ್‌ ಬಿಡುಗಡೆ

- Advertisement -
- Advertisement -

ಕಳೆದ ಅಕ್ಟೋಬರ್‌ 29 ರಂದು ನಮ್ಮನ್ನಗಲಿದ ಕನ್ನಡ ಚಿತ್ರರಂಗದ ದೈತ್ಯ ಪ್ರತಿಭೆ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಯೋಜನೆಯ ಸಾಕ್ಷ್ಯಚಿತ್ರದ ಟೈಟಲ್​ ಹಾಗೂ ಟೀಸರ್​​ ಇಂದು (ಡಿ.6) ಬಿಡುಗಡೆಯಾಗಿದೆ. ಕರ್ನಾಟಕದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಕುರಿತು ಮಾಡಿರುವ ಈ ಡಾಕ್ಯುಮೆಂಟರಿಗೆ “ಗಂಧದಗುಡಿ” ಎಂದು ಹೆಸರಿಡಲಾಗಿದೆ.

ನಾಡಿನ ಕಾಡು, ಮೇಡು ಅಲೆದು ಪುನೀತ್‌ ರಾಜ್‌ಕುಮಾರ್‌ ಅವರು ಈ ಡಾಕ್ಯುಮೆಂಟರಿ​ ಮಾಡಿದ್ದರು. ಇದರ ಬಗ್ಗೆ ಅಕ್ಟೋಬರ್‌ 27 ರಂದು ಚಿಕ್ಕ ಸುಳಿವು ಕೂಡ ನೀಡಿದ್ದರು. ಆದರೆ ಅಷ್ಟರಲ್ಲಿ ಅನಿರೀಕ್ಷಿತ ಘಟನೆ ನಡೆದುಹೋಯಿತು.

ಪಿಆರ್‌ಕೆ ಆಡಿಯೋ ಯೂಟ್ಯೂಬ್ ಚಾನೆಲ್‌ ಮೂಲಕ ಗಂಧದಗುಡಿ ಟೀಸರ್‌ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್​ ಮತ್ತು ಮಡ್‌ಸ್ಕಿಪ್ಪರ್‌ ಸಂಸ್ಥೆಯವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಖ್ಯಾತ ವೈಲ್ಡ್ ಲೈಫ್ ಛಾಯಾಗ್ರಾಹಕ ಅಮೋಘವರ್ಷ ನಿರ್ದೇಶನ ಗಂಧದಗುಡಿಗಿದೆ.

ಇದನ್ನೂ ಓದಿ: ಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

ಕಳೆದ ಅಕ್ಟೋಬರ್‌ 27 ರಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಸಾಕ್ಷ್ಯಚಿತ್ರದ ಬಗ್ಗೆ ಅಪ್ಪು ಬರೆದುಕೊಂಡಿದ್ದು ಹೀಗೆ…”ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ” ಎಂದಿದ್ದರು. ನವೆಂಬರ್‌ 1 ರಂದು ಟೀಸರ್‌ ಬಿಡುಗಡೆಯಾಗಬೇಕಿತ್ತು.

ಸಾಕ್ಷ್ಯಚಿತ್ರಗಳು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವುದು ಬಹಳ ವಿರಳ. ಆದರೆ, ಗಂಧದಗುಡಿ ಚಿತ್ರಿಕರಣ ಮುಗಿಸಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. 2022 ಕ್ಕೆ ಚಿತ್ರಮಂದಿರಗಳಿಗೆ ಕಾಲಿಡಲಿದೆ ಎಂದು ಚಿತ್ರತಂಡ ತಿಳಿಸಿದೆ.

ಗಂಧಧಗುಡಿ ಟೀಸರ್‌ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಚಿತ್ರರಂಗದವರು, ಅಭಿಮಾನಿಗಳು ಸೇರಿದಂತೆ ಹಲವರು ಹಂಚಿಕೊಂಡಿದ್ದು ಮಿಸ್ ಯು ಅಪ್ಪು ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಸರ್‌ ಹಂಚಿಕೊಂಡಿದ್ದು, “ನಮ್ಮೆಲ್ಲರ ಪ್ರೀತಿಯ ಅಪ್ಪು ದಿ. ಪುನೀತ್ ರಾಜಕುಮಾರ್ ಅಭಿನಯದ ಪಿ.ಆರ್.ಕೆ ಪ್ರೊಡಕ್ಷನ್ ನಿರ್ಮಿಸಿರುವ ‘ಗಂಧದ ಗುಡಿ’ ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ, ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ. ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು. ಪ್ರತಿ ಭಾರತೀಯ, ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಕನ್ನಡಿಗ ಕರುನಾಡಿನ ಈ ಕಥಾನಕವನ್ನು ನೋಡುವಂತಾಗಲಿ. ನಮ್ಮ ಅರಣ್ಯ, ನಮ್ಮ ಪರಿಸರ, ವೈವಿಧ್ಯಮಯ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.


ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...