Homeಕರ್ನಾಟಕನಟ ಪುನೀತ್ ರಾಜ್‌ಕುಮಾರ್‌ ಕನಸಿನ ಸಾಕ್ಷ್ಯಚಿತ್ರ ’ಗಂಧದಗುಡಿ’ ಟೀಸರ್‌ ಬಿಡುಗಡೆ

ನಟ ಪುನೀತ್ ರಾಜ್‌ಕುಮಾರ್‌ ಕನಸಿನ ಸಾಕ್ಷ್ಯಚಿತ್ರ ’ಗಂಧದಗುಡಿ’ ಟೀಸರ್‌ ಬಿಡುಗಡೆ

- Advertisement -
- Advertisement -

ಕಳೆದ ಅಕ್ಟೋಬರ್‌ 29 ರಂದು ನಮ್ಮನ್ನಗಲಿದ ಕನ್ನಡ ಚಿತ್ರರಂಗದ ದೈತ್ಯ ಪ್ರತಿಭೆ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಯೋಜನೆಯ ಸಾಕ್ಷ್ಯಚಿತ್ರದ ಟೈಟಲ್​ ಹಾಗೂ ಟೀಸರ್​​ ಇಂದು (ಡಿ.6) ಬಿಡುಗಡೆಯಾಗಿದೆ. ಕರ್ನಾಟಕದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಕುರಿತು ಮಾಡಿರುವ ಈ ಡಾಕ್ಯುಮೆಂಟರಿಗೆ “ಗಂಧದಗುಡಿ” ಎಂದು ಹೆಸರಿಡಲಾಗಿದೆ.

ನಾಡಿನ ಕಾಡು, ಮೇಡು ಅಲೆದು ಪುನೀತ್‌ ರಾಜ್‌ಕುಮಾರ್‌ ಅವರು ಈ ಡಾಕ್ಯುಮೆಂಟರಿ​ ಮಾಡಿದ್ದರು. ಇದರ ಬಗ್ಗೆ ಅಕ್ಟೋಬರ್‌ 27 ರಂದು ಚಿಕ್ಕ ಸುಳಿವು ಕೂಡ ನೀಡಿದ್ದರು. ಆದರೆ ಅಷ್ಟರಲ್ಲಿ ಅನಿರೀಕ್ಷಿತ ಘಟನೆ ನಡೆದುಹೋಯಿತು.

ಪಿಆರ್‌ಕೆ ಆಡಿಯೋ ಯೂಟ್ಯೂಬ್ ಚಾನೆಲ್‌ ಮೂಲಕ ಗಂಧದಗುಡಿ ಟೀಸರ್‌ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್​ ಮತ್ತು ಮಡ್‌ಸ್ಕಿಪ್ಪರ್‌ ಸಂಸ್ಥೆಯವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಖ್ಯಾತ ವೈಲ್ಡ್ ಲೈಫ್ ಛಾಯಾಗ್ರಾಹಕ ಅಮೋಘವರ್ಷ ನಿರ್ದೇಶನ ಗಂಧದಗುಡಿಗಿದೆ.

ಇದನ್ನೂ ಓದಿ: ಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

ಕಳೆದ ಅಕ್ಟೋಬರ್‌ 27 ರಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಸಾಕ್ಷ್ಯಚಿತ್ರದ ಬಗ್ಗೆ ಅಪ್ಪು ಬರೆದುಕೊಂಡಿದ್ದು ಹೀಗೆ…”ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ” ಎಂದಿದ್ದರು. ನವೆಂಬರ್‌ 1 ರಂದು ಟೀಸರ್‌ ಬಿಡುಗಡೆಯಾಗಬೇಕಿತ್ತು.

ಸಾಕ್ಷ್ಯಚಿತ್ರಗಳು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವುದು ಬಹಳ ವಿರಳ. ಆದರೆ, ಗಂಧದಗುಡಿ ಚಿತ್ರಿಕರಣ ಮುಗಿಸಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. 2022 ಕ್ಕೆ ಚಿತ್ರಮಂದಿರಗಳಿಗೆ ಕಾಲಿಡಲಿದೆ ಎಂದು ಚಿತ್ರತಂಡ ತಿಳಿಸಿದೆ.

ಗಂಧಧಗುಡಿ ಟೀಸರ್‌ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಚಿತ್ರರಂಗದವರು, ಅಭಿಮಾನಿಗಳು ಸೇರಿದಂತೆ ಹಲವರು ಹಂಚಿಕೊಂಡಿದ್ದು ಮಿಸ್ ಯು ಅಪ್ಪು ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಸರ್‌ ಹಂಚಿಕೊಂಡಿದ್ದು, “ನಮ್ಮೆಲ್ಲರ ಪ್ರೀತಿಯ ಅಪ್ಪು ದಿ. ಪುನೀತ್ ರಾಜಕುಮಾರ್ ಅಭಿನಯದ ಪಿ.ಆರ್.ಕೆ ಪ್ರೊಡಕ್ಷನ್ ನಿರ್ಮಿಸಿರುವ ‘ಗಂಧದ ಗುಡಿ’ ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ, ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ. ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು. ಪ್ರತಿ ಭಾರತೀಯ, ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಕನ್ನಡಿಗ ಕರುನಾಡಿನ ಈ ಕಥಾನಕವನ್ನು ನೋಡುವಂತಾಗಲಿ. ನಮ್ಮ ಅರಣ್ಯ, ನಮ್ಮ ಪರಿಸರ, ವೈವಿಧ್ಯಮಯ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.


ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...