Homeಕರೋನಾ ತಲ್ಲಣಹೊಟ್ಟೆ ಹೊರೆಯುವ ವೃತ್ತಿಗಳಿಗೆ ಹೊಡೆತ: ಜಿಮ್ ಮಾಲೀಕರ ಪರ ನಟ ಯಶ್ ಬ್ಯಾಟಿಂಗ್

ಹೊಟ್ಟೆ ಹೊರೆಯುವ ವೃತ್ತಿಗಳಿಗೆ ಹೊಡೆತ: ಜಿಮ್ ಮಾಲೀಕರ ಪರ ನಟ ಯಶ್ ಬ್ಯಾಟಿಂಗ್

- Advertisement -
- Advertisement -

ದೇಶದಲ್ಲಿ ಕೊರೊನಾ ಎರಡನೇ ಅಲೆ ಹರಡುತ್ತಿದ್ದು, ರಾಜ್ಯದಲ್ಲಿಯೂ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿ ಹೊರಡಿಸಿರುವ ರಾಜ್ಯ ಸರ್ಕಾರ ಜಿಮ್‌ಗಳಿಗೆ ನಿರ್ಬಂಧ ಹೇರಿರುವದುನ್ನು ಖಂಡಿಸಿ ಜಿಮ್ ಮಾಲೀಕರ ಪರ ನಟ ಯಶ್ ಟ್ವೀಟ್ ಮಾಡಿದ್ದಾರೆ.

ಅನ್ನ ಹುಟ್ಟಿಸದ ಸಭೆ, ಸಮಾರಂಭ, ಮೆರವಣಿಗೆಗಳು ಮುಕ್ತವಾಗಿವೆ. ಹೊಟ್ಟೆ ಹೊರೆಯಲು ಮಾಡುವ ವೃತ್ತಿಗಳಿಗೆ ಹೊಡೆತ ಸರ್ಕಾರ ನೀಡುತ್ತಿದೆ. ಅಪಘಾತ ಆಗುವುದೆಂದು ವಾಹನ ಸಂಚಾರ ನಿಲ್ಲಿಸೋದು ಸರಿಯಾಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

ಕೊರೊನಾ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿ ಅವುಗಳಲ್ಲಿ ಜಿಮ್, ಪಾರ್ಟಿ ಹಾಲ್‌ಗಳು, ಈಜು ಕೊಳಗಳಿಗೆ ನಿರ್ಬಂಧಿಸಿತ್ತು.  ಮುಷ್ಕರ, ಧರಣಿ, ರ್‍ಯಾಲಿಗಳನ್ನು ನಿಷೇಧಿಸಿತ್ತು. ಜೊತೆಗೆ ಸಿನಿಮಾ ಹಾಲ್‌ನಲ್ಲಿ ಶೇಕಡಾ 50 ರಷ್ಟು ಆಸನ ವ್ಯವಸ್ಥೆಗೆ ತಿಳಿಸಿತ್ತು.

ಇಡೀ ಚಿತ್ರರಂಗವೇ ಒಂದಾಗಿ 100 ರಷ್ಟು ಆಸನ ವ್ಯವಸ್ಥೆ ಬೇಕೆಂದು ಸರ್ಕಾರದ ಮನವೊಲಿಸಿವೆ. ಈಗ ಜಿಮ್ ಮಾಲೀಕರ ಪರವಾಗಿ ಮಾತನಾಡಿರುವ ನಟ ಯಶ್, ಸೇವ್ ಫಿಟ್‌ನೇಸ್ ಇಂಡಸ್ಟ್ರಿ ಎಂದು ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.

ಇದನ್ನೂ ಓದಿ: ಕೊರೊನಾ ಹೆಚ್ಚುತ್ತಿರುವುದರಿಂದ ಮಾರ್ಗಸೂಚಿ ಬಿಡುಗಡೆ: ಆರೋಗ್ಯ ಸಚಿವ ಸುಧಾಕರ್‌

“ಅನ್ನ ಹುಟ್ಟಿಸದ ಸಭೆ, ಸಮಾರಂಭ, ಮೆರವಣಿಗೆಗಳು ಮುಕ್ತವಾಗಿವೆ. ಹೊಟ್ಟೆ ಹೊರೆಯಲು ಮಾಡುವ ವೃತ್ತಿಗಳಿಗೆ ಹೊಡೆತ ಸರ್ಕಾರ ನೀಡುತ್ತಿದೆ. ಅಪಘಾತ ಆಗುವುದೆಂದು ವಾಹನ ಸಂಚಾರ ನಿಲ್ಲಿಸೋದು ಸರಿಯಾಗುತ್ತದೆಯೇ…? ಕಟ್ಟುನಿಟ್ಟಿನ ಸಂಚಾರ ಕ್ರಮ ಸಾಕಲ್ಲವೇ..? ಹಾಗೆ ಸಾಲ ಸೋಲ ಮಾಡಿ, ಜಿಮ್ ನಡೆಸುವವರು ಕಷ್ಟಪಡುತ್ತಿದ್ದಾರೆ. ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಜಿಮ್ ಬಳಸಲು ಅನುಮತಿ ನೀಡಿದರೆ, ಗ್ರಾಹಕರ ಆರೋಗ್ಯಕ್ಕೂ ಒಳ್ಳೆಯದು. ಜಿಮ ಮಾಲೀಕರು ಬದುಕಿಕೊಳ್ಳುತ್ತಾರಲ್ಲವೇ…? ರೋಗಕ್ಕೆ ಪರಿಹಾರ ಏನೆಂದು ನಮಗ್ಯಾರಿಗೂ ಗೊತ್ತಿಲ್ಲ. ಆದರೆ ಹಸಿವಿಗೆ ಪರಿಹಾರ ಗೊತ್ತಿದೆಯಲ್ಲ!” ಎಂದು ನಟ ಯಶ್ ಟ್ವೀಟ್ ಮಾಡಿದ್ದಾರೆ.

ಮಾರ್ಗಸೂಚಿಗಳ ಬಗ್ಗೆ ಟ್ವೀಟ್ ಮಾಡಿದ್ದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, “ಈ ನಿರ್ಧಾರ ವೈಜ್ಞಾನಿಕ ನೆಲೆಗಟ್ಟಿಯಲ್ಲಿ ರಾಜ್ಯದ ಜನರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ತೆಗೆದುಕೊಂಡಿರುವ ಆಡಳಿತಾತ್ಮಕ ನಿರ್ಧಾರವಾಗಿದ್ದು ಇದನ್ನು ರಾಜಕೀಯ ಅಥವಾ ಇನ್ಯಾವುದೇ ದೃಷ್ಟಿಯಿಂದ ಪರಿಗಣಿಸಬಾರದು” ಎಂದು ಮನವಿ ಮಾಡಿದ್ದ‍ರು.


ಇದನ್ನೂ ಓದಿ: ಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...