Homeಕರ್ನಾಟಕಅಮೃತಮತಿ: ನಟಿ ಹರಿಪ್ರಿಯಾಗೆ ಒಲಿದು ಬಂತು ಹಾಲಿವುಡ್ ಪ್ರಶಸ್ತಿ

ಅಮೃತಮತಿ: ನಟಿ ಹರಿಪ್ರಿಯಾಗೆ ಒಲಿದು ಬಂತು ಹಾಲಿವುಡ್ ಪ್ರಶಸ್ತಿ

- Advertisement -
- Advertisement -

ಕನ್ನಡದ ನಟಿ ಹರಿಪ್ರಿಯಾಗೆ ಹಾಲಿವುಡ್ ಪ್ರಶಸ್ತಿ ದೊರೆತಿದೆ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ’ಯ ಪ್ರಸಂಗ ಆಧರಿಸಿ ಸಿದ್ಧವಾಗಿರುವ ‘ಅಮೃತಮತಿ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿದೆ.

ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್‌ ಮೂಲಕ ನಿರ್ಮಾಣಗೊಂಡು ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರ ಈಗಾಗಲೇ ಹತ್ತಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿದೆ. ‘ಹಾಲಿವುಡ್ ಇಂಟರ್‌ನ್ಯಾಷನಲ್ ಗೋಲ್ಡನ್ ಏಜ್ ಚಿತ್ರೋತ್ಸವ’ದಲ್ಲಿ ಪ್ರದರ್ಶನ ಕಂಡಿದ್ದು, ನಟಿ ಹರಿಪ್ರಿಯಾಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ಲಭಿಸಿದೆ.

ನಟಿ ಹರಿಪ್ರಿಯಾ ಈ ಹಿಂದೆ ನೋಯ್ಡಾದ ನಾಲ್ಕನೇ ಭಾರತೀಯ ವಿಶ್ವ ಸಿನಿಮೋತ್ಸವದಲ್ಲಿಯೂ ಅಮೃತಮತಿ ಚಿತ್ರದಲ್ಲಿನ ನಟನೆಗಾಗಿ ‘ಶ್ರೇಷ್ಠ ನಟಿ’ ಪ್ರಶಸ್ತಿಗೆ ಭಾಜನರಾಗಿದ್ದರು. ಒಟ್ಟು ಮೂರು ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅವರು ಶ್ರೇಷ್ಠ ನಟಿ ಪ್ರಶಸ್ತಿ ಪಡೆದಿದ್ದಾರೆ.

ಅಟ್ಲಾಂಟ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ವಿದೇಶಿ ಭಾಷೆಯ ಚಿತ್ರ’ ಪ್ರಶಸ್ತಿ ಅಮೃತಮತಿ ಸಿನಿಮಾಕ್ಕೆ ಲಭಿಸಿತ್ತು. ಲಾಸ್ ಏಂಜಲೀಸ್ ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ಚಿತ್ರ’ ಮತ್ತು ‘ಶ್ರೇಷ್ಠ ಚಿತ್ರಕತೆ’ ಪ್ರಶಸ್ತಿ ಲಭಿಸಿತ್ತು. ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ವಿಶೇಷ ಚಿತ್ರ ಮನ್ನಣೆಗೆ ಚಿತ್ರ ಪಾತ್ರವಾಗಿತ್ತು.

ಇದನ್ನೂ ಓದಿ: ಸಿನಿಮಾಟೋಗ್ರಾಫ್ ಆಕ್ಟ್‌ಗೆ ಸ್ಟಾಲಿನ್ ವಿರೋಧ: ನಿರ್ಧಾರ ಹಿಂಪಡೆಯುವಂತೆ ಒಕ್ಕೂಟ ಸಚಿವರಿಗೆ ಪತ್ರ

ಕನ್ನಡದ ಕವಿ ಜನ್ನ ರಚಿಸಿರುವ ‘ಯಶೋಧರಚರಿತೆ’ ಕಾವ್ಯವನ್ನು ಆಧರಿಸಿ ಅಮೃತಮತಿ ಸಿನಿಮಾ ತಯಾರಾಗಿದೆ. ಬರಗೂರು ರಾಮಚಂದ್ರಪ್ಪ ಅವರು ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ. ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಸಂಕಲನಕಾರರಾಗಿ ಸುರೇಶ ಅರಸು, ಛಾಯಾಗ್ರಾಹಕರಾಗಿ ನಾಗರಾಜ ಆದವಾನಿ, ಸಂಗೀತ ನಿರ್ದೇಶಕರಾಗಿ ಶಮಿತಾ ಮಲ್ನಾಡ್ ಕಾರ್ಯ ನಿರ್ವಹಿಸಿದ್ದಾರೆ.

ಅಮೃತಮತಿ ಚಿತ್ರದಲ್ಲಿ ಹರಿಪ್ರಿಯಾ ಮತ್ತು ಕಿಶೋರ್‌

ಪರಪುರುಷನ ಜೊತೆಗಿನ ಸಂಬಂಧ ಮತ್ತು ಮಹಿಳಾ ಮನಸ್ಸಿನ ತಲ್ಲಣಗಳ ಸುತ್ತ ಹೆಣೆದಿರುವ ಚಿತ್ರ ಇದು. ಯಶೋಧರನ ಪಾತ್ರದಲ್ಲಿ ನಟ ಕಿಶೋರ್ ಅಭಿನಯಿಸಿದ್ದಾರೆ. ಸುಂದರರಾಜ್, ಪ್ರಮೀಳಾ ಜೋಷಾಯ್ ತಿಲಕ್, ಸುಪ್ರಿಯಾರಾವ್, ವತ್ಸಲಾಮೋಹನ್, ಅಂಬರೀಷ್​ ಸಾರಂಗಿ ಮೊದಲಾದ ಕಲಾವಿದರ ಸಾಥ್ ಅಮೃತಮತಿಗಿದೆ.

ಸ್ಯಾಂಡಲ್‌ವುಡ್‌ನ ಬ್ಯುಸಿ ನಟಿಯರ ಸಾಲಿನಲ್ಲಿ ಹರಿಪ್ರಿಯಾ ಕೂಡ ಇದ್ದು, ಅವರ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಸತೀಶ್​ ನೀನಾಸಂ ನಟನೆಯ ಪೆಟ್ರೋಮ್ಯಾಕ್ಸ್, ಬೆಲ್​ ಬಾಟಂ-2 ಸೇರಿ ಕನಿಷ್ಠ 8 ಪ್ರಾಜೆಕ್ಟ್​ಗಳಲ್ಲಿ ಹರಿಪ್ರಿಯಾ ಬ್ಯುಸಿಯಾಗಿದ್ದಾರೆ.


ಇದನ್ನೂ ಓದಿ: ಕನ್ನಡದ ಯಶಸ್ವಿ ಚಿತ್ರ ’ಯು ಟರ್ನ್’ ಹಿಂದಿಗೆ ಕೊಂಡೊಯ್ದ ಏಕ್ತಾ ಕಪೂರ್‌, ನಾಯಕಿಯಾಗಿ ಅಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...