Homeಕರ್ನಾಟಕಅಮೃತಮತಿ: ನಟಿ ಹರಿಪ್ರಿಯಾಗೆ ಒಲಿದು ಬಂತು ಹಾಲಿವುಡ್ ಪ್ರಶಸ್ತಿ

ಅಮೃತಮತಿ: ನಟಿ ಹರಿಪ್ರಿಯಾಗೆ ಒಲಿದು ಬಂತು ಹಾಲಿವುಡ್ ಪ್ರಶಸ್ತಿ

- Advertisement -
- Advertisement -

ಕನ್ನಡದ ನಟಿ ಹರಿಪ್ರಿಯಾಗೆ ಹಾಲಿವುಡ್ ಪ್ರಶಸ್ತಿ ದೊರೆತಿದೆ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ’ಯ ಪ್ರಸಂಗ ಆಧರಿಸಿ ಸಿದ್ಧವಾಗಿರುವ ‘ಅಮೃತಮತಿ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿದೆ.

ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್‌ ಮೂಲಕ ನಿರ್ಮಾಣಗೊಂಡು ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರ ಈಗಾಗಲೇ ಹತ್ತಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿದೆ. ‘ಹಾಲಿವುಡ್ ಇಂಟರ್‌ನ್ಯಾಷನಲ್ ಗೋಲ್ಡನ್ ಏಜ್ ಚಿತ್ರೋತ್ಸವ’ದಲ್ಲಿ ಪ್ರದರ್ಶನ ಕಂಡಿದ್ದು, ನಟಿ ಹರಿಪ್ರಿಯಾಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ಲಭಿಸಿದೆ.

ನಟಿ ಹರಿಪ್ರಿಯಾ ಈ ಹಿಂದೆ ನೋಯ್ಡಾದ ನಾಲ್ಕನೇ ಭಾರತೀಯ ವಿಶ್ವ ಸಿನಿಮೋತ್ಸವದಲ್ಲಿಯೂ ಅಮೃತಮತಿ ಚಿತ್ರದಲ್ಲಿನ ನಟನೆಗಾಗಿ ‘ಶ್ರೇಷ್ಠ ನಟಿ’ ಪ್ರಶಸ್ತಿಗೆ ಭಾಜನರಾಗಿದ್ದರು. ಒಟ್ಟು ಮೂರು ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅವರು ಶ್ರೇಷ್ಠ ನಟಿ ಪ್ರಶಸ್ತಿ ಪಡೆದಿದ್ದಾರೆ.

ಅಟ್ಲಾಂಟ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ವಿದೇಶಿ ಭಾಷೆಯ ಚಿತ್ರ’ ಪ್ರಶಸ್ತಿ ಅಮೃತಮತಿ ಸಿನಿಮಾಕ್ಕೆ ಲಭಿಸಿತ್ತು. ಲಾಸ್ ಏಂಜಲೀಸ್ ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ಚಿತ್ರ’ ಮತ್ತು ‘ಶ್ರೇಷ್ಠ ಚಿತ್ರಕತೆ’ ಪ್ರಶಸ್ತಿ ಲಭಿಸಿತ್ತು. ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ವಿಶೇಷ ಚಿತ್ರ ಮನ್ನಣೆಗೆ ಚಿತ್ರ ಪಾತ್ರವಾಗಿತ್ತು.

ಇದನ್ನೂ ಓದಿ: ಸಿನಿಮಾಟೋಗ್ರಾಫ್ ಆಕ್ಟ್‌ಗೆ ಸ್ಟಾಲಿನ್ ವಿರೋಧ: ನಿರ್ಧಾರ ಹಿಂಪಡೆಯುವಂತೆ ಒಕ್ಕೂಟ ಸಚಿವರಿಗೆ ಪತ್ರ

ಕನ್ನಡದ ಕವಿ ಜನ್ನ ರಚಿಸಿರುವ ‘ಯಶೋಧರಚರಿತೆ’ ಕಾವ್ಯವನ್ನು ಆಧರಿಸಿ ಅಮೃತಮತಿ ಸಿನಿಮಾ ತಯಾರಾಗಿದೆ. ಬರಗೂರು ರಾಮಚಂದ್ರಪ್ಪ ಅವರು ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ. ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಸಂಕಲನಕಾರರಾಗಿ ಸುರೇಶ ಅರಸು, ಛಾಯಾಗ್ರಾಹಕರಾಗಿ ನಾಗರಾಜ ಆದವಾನಿ, ಸಂಗೀತ ನಿರ್ದೇಶಕರಾಗಿ ಶಮಿತಾ ಮಲ್ನಾಡ್ ಕಾರ್ಯ ನಿರ್ವಹಿಸಿದ್ದಾರೆ.

ಅಮೃತಮತಿ ಚಿತ್ರದಲ್ಲಿ ಹರಿಪ್ರಿಯಾ ಮತ್ತು ಕಿಶೋರ್‌

ಪರಪುರುಷನ ಜೊತೆಗಿನ ಸಂಬಂಧ ಮತ್ತು ಮಹಿಳಾ ಮನಸ್ಸಿನ ತಲ್ಲಣಗಳ ಸುತ್ತ ಹೆಣೆದಿರುವ ಚಿತ್ರ ಇದು. ಯಶೋಧರನ ಪಾತ್ರದಲ್ಲಿ ನಟ ಕಿಶೋರ್ ಅಭಿನಯಿಸಿದ್ದಾರೆ. ಸುಂದರರಾಜ್, ಪ್ರಮೀಳಾ ಜೋಷಾಯ್ ತಿಲಕ್, ಸುಪ್ರಿಯಾರಾವ್, ವತ್ಸಲಾಮೋಹನ್, ಅಂಬರೀಷ್​ ಸಾರಂಗಿ ಮೊದಲಾದ ಕಲಾವಿದರ ಸಾಥ್ ಅಮೃತಮತಿಗಿದೆ.

ಸ್ಯಾಂಡಲ್‌ವುಡ್‌ನ ಬ್ಯುಸಿ ನಟಿಯರ ಸಾಲಿನಲ್ಲಿ ಹರಿಪ್ರಿಯಾ ಕೂಡ ಇದ್ದು, ಅವರ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಸತೀಶ್​ ನೀನಾಸಂ ನಟನೆಯ ಪೆಟ್ರೋಮ್ಯಾಕ್ಸ್, ಬೆಲ್​ ಬಾಟಂ-2 ಸೇರಿ ಕನಿಷ್ಠ 8 ಪ್ರಾಜೆಕ್ಟ್​ಗಳಲ್ಲಿ ಹರಿಪ್ರಿಯಾ ಬ್ಯುಸಿಯಾಗಿದ್ದಾರೆ.


ಇದನ್ನೂ ಓದಿ: ಕನ್ನಡದ ಯಶಸ್ವಿ ಚಿತ್ರ ’ಯು ಟರ್ನ್’ ಹಿಂದಿಗೆ ಕೊಂಡೊಯ್ದ ಏಕ್ತಾ ಕಪೂರ್‌, ನಾಯಕಿಯಾಗಿ ಅಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...