Homeಕರ್ನಾಟಕಅಮೃತಮತಿ: ನಟಿ ಹರಿಪ್ರಿಯಾಗೆ ಒಲಿದು ಬಂತು ಹಾಲಿವುಡ್ ಪ್ರಶಸ್ತಿ

ಅಮೃತಮತಿ: ನಟಿ ಹರಿಪ್ರಿಯಾಗೆ ಒಲಿದು ಬಂತು ಹಾಲಿವುಡ್ ಪ್ರಶಸ್ತಿ

- Advertisement -
- Advertisement -

ಕನ್ನಡದ ನಟಿ ಹರಿಪ್ರಿಯಾಗೆ ಹಾಲಿವುಡ್ ಪ್ರಶಸ್ತಿ ದೊರೆತಿದೆ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ’ಯ ಪ್ರಸಂಗ ಆಧರಿಸಿ ಸಿದ್ಧವಾಗಿರುವ ‘ಅಮೃತಮತಿ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿದೆ.

ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್‌ ಮೂಲಕ ನಿರ್ಮಾಣಗೊಂಡು ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರ ಈಗಾಗಲೇ ಹತ್ತಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿದೆ. ‘ಹಾಲಿವುಡ್ ಇಂಟರ್‌ನ್ಯಾಷನಲ್ ಗೋಲ್ಡನ್ ಏಜ್ ಚಿತ್ರೋತ್ಸವ’ದಲ್ಲಿ ಪ್ರದರ್ಶನ ಕಂಡಿದ್ದು, ನಟಿ ಹರಿಪ್ರಿಯಾಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ಲಭಿಸಿದೆ.

ನಟಿ ಹರಿಪ್ರಿಯಾ ಈ ಹಿಂದೆ ನೋಯ್ಡಾದ ನಾಲ್ಕನೇ ಭಾರತೀಯ ವಿಶ್ವ ಸಿನಿಮೋತ್ಸವದಲ್ಲಿಯೂ ಅಮೃತಮತಿ ಚಿತ್ರದಲ್ಲಿನ ನಟನೆಗಾಗಿ ‘ಶ್ರೇಷ್ಠ ನಟಿ’ ಪ್ರಶಸ್ತಿಗೆ ಭಾಜನರಾಗಿದ್ದರು. ಒಟ್ಟು ಮೂರು ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅವರು ಶ್ರೇಷ್ಠ ನಟಿ ಪ್ರಶಸ್ತಿ ಪಡೆದಿದ್ದಾರೆ.

ಅಟ್ಲಾಂಟ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ವಿದೇಶಿ ಭಾಷೆಯ ಚಿತ್ರ’ ಪ್ರಶಸ್ತಿ ಅಮೃತಮತಿ ಸಿನಿಮಾಕ್ಕೆ ಲಭಿಸಿತ್ತು. ಲಾಸ್ ಏಂಜಲೀಸ್ ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ಚಿತ್ರ’ ಮತ್ತು ‘ಶ್ರೇಷ್ಠ ಚಿತ್ರಕತೆ’ ಪ್ರಶಸ್ತಿ ಲಭಿಸಿತ್ತು. ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ವಿಶೇಷ ಚಿತ್ರ ಮನ್ನಣೆಗೆ ಚಿತ್ರ ಪಾತ್ರವಾಗಿತ್ತು.

ಇದನ್ನೂ ಓದಿ: ಸಿನಿಮಾಟೋಗ್ರಾಫ್ ಆಕ್ಟ್‌ಗೆ ಸ್ಟಾಲಿನ್ ವಿರೋಧ: ನಿರ್ಧಾರ ಹಿಂಪಡೆಯುವಂತೆ ಒಕ್ಕೂಟ ಸಚಿವರಿಗೆ ಪತ್ರ

ಕನ್ನಡದ ಕವಿ ಜನ್ನ ರಚಿಸಿರುವ ‘ಯಶೋಧರಚರಿತೆ’ ಕಾವ್ಯವನ್ನು ಆಧರಿಸಿ ಅಮೃತಮತಿ ಸಿನಿಮಾ ತಯಾರಾಗಿದೆ. ಬರಗೂರು ರಾಮಚಂದ್ರಪ್ಪ ಅವರು ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ. ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಸಂಕಲನಕಾರರಾಗಿ ಸುರೇಶ ಅರಸು, ಛಾಯಾಗ್ರಾಹಕರಾಗಿ ನಾಗರಾಜ ಆದವಾನಿ, ಸಂಗೀತ ನಿರ್ದೇಶಕರಾಗಿ ಶಮಿತಾ ಮಲ್ನಾಡ್ ಕಾರ್ಯ ನಿರ್ವಹಿಸಿದ್ದಾರೆ.

ಅಮೃತಮತಿ ಚಿತ್ರದಲ್ಲಿ ಹರಿಪ್ರಿಯಾ ಮತ್ತು ಕಿಶೋರ್‌

ಪರಪುರುಷನ ಜೊತೆಗಿನ ಸಂಬಂಧ ಮತ್ತು ಮಹಿಳಾ ಮನಸ್ಸಿನ ತಲ್ಲಣಗಳ ಸುತ್ತ ಹೆಣೆದಿರುವ ಚಿತ್ರ ಇದು. ಯಶೋಧರನ ಪಾತ್ರದಲ್ಲಿ ನಟ ಕಿಶೋರ್ ಅಭಿನಯಿಸಿದ್ದಾರೆ. ಸುಂದರರಾಜ್, ಪ್ರಮೀಳಾ ಜೋಷಾಯ್ ತಿಲಕ್, ಸುಪ್ರಿಯಾರಾವ್, ವತ್ಸಲಾಮೋಹನ್, ಅಂಬರೀಷ್​ ಸಾರಂಗಿ ಮೊದಲಾದ ಕಲಾವಿದರ ಸಾಥ್ ಅಮೃತಮತಿಗಿದೆ.

ಸ್ಯಾಂಡಲ್‌ವುಡ್‌ನ ಬ್ಯುಸಿ ನಟಿಯರ ಸಾಲಿನಲ್ಲಿ ಹರಿಪ್ರಿಯಾ ಕೂಡ ಇದ್ದು, ಅವರ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಸತೀಶ್​ ನೀನಾಸಂ ನಟನೆಯ ಪೆಟ್ರೋಮ್ಯಾಕ್ಸ್, ಬೆಲ್​ ಬಾಟಂ-2 ಸೇರಿ ಕನಿಷ್ಠ 8 ಪ್ರಾಜೆಕ್ಟ್​ಗಳಲ್ಲಿ ಹರಿಪ್ರಿಯಾ ಬ್ಯುಸಿಯಾಗಿದ್ದಾರೆ.


ಇದನ್ನೂ ಓದಿ: ಕನ್ನಡದ ಯಶಸ್ವಿ ಚಿತ್ರ ’ಯು ಟರ್ನ್’ ಹಿಂದಿಗೆ ಕೊಂಡೊಯ್ದ ಏಕ್ತಾ ಕಪೂರ್‌, ನಾಯಕಿಯಾಗಿ ಅಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...