Homeಕರ್ನಾಟಕಅಮೃತಮತಿ: ನಟಿ ಹರಿಪ್ರಿಯಾಗೆ ಒಲಿದು ಬಂತು ಹಾಲಿವುಡ್ ಪ್ರಶಸ್ತಿ

ಅಮೃತಮತಿ: ನಟಿ ಹರಿಪ್ರಿಯಾಗೆ ಒಲಿದು ಬಂತು ಹಾಲಿವುಡ್ ಪ್ರಶಸ್ತಿ

- Advertisement -
- Advertisement -

ಕನ್ನಡದ ನಟಿ ಹರಿಪ್ರಿಯಾಗೆ ಹಾಲಿವುಡ್ ಪ್ರಶಸ್ತಿ ದೊರೆತಿದೆ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ’ಯ ಪ್ರಸಂಗ ಆಧರಿಸಿ ಸಿದ್ಧವಾಗಿರುವ ‘ಅಮೃತಮತಿ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿದೆ.

ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್‌ ಮೂಲಕ ನಿರ್ಮಾಣಗೊಂಡು ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರ ಈಗಾಗಲೇ ಹತ್ತಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿದೆ. ‘ಹಾಲಿವುಡ್ ಇಂಟರ್‌ನ್ಯಾಷನಲ್ ಗೋಲ್ಡನ್ ಏಜ್ ಚಿತ್ರೋತ್ಸವ’ದಲ್ಲಿ ಪ್ರದರ್ಶನ ಕಂಡಿದ್ದು, ನಟಿ ಹರಿಪ್ರಿಯಾಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ಲಭಿಸಿದೆ.

ನಟಿ ಹರಿಪ್ರಿಯಾ ಈ ಹಿಂದೆ ನೋಯ್ಡಾದ ನಾಲ್ಕನೇ ಭಾರತೀಯ ವಿಶ್ವ ಸಿನಿಮೋತ್ಸವದಲ್ಲಿಯೂ ಅಮೃತಮತಿ ಚಿತ್ರದಲ್ಲಿನ ನಟನೆಗಾಗಿ ‘ಶ್ರೇಷ್ಠ ನಟಿ’ ಪ್ರಶಸ್ತಿಗೆ ಭಾಜನರಾಗಿದ್ದರು. ಒಟ್ಟು ಮೂರು ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅವರು ಶ್ರೇಷ್ಠ ನಟಿ ಪ್ರಶಸ್ತಿ ಪಡೆದಿದ್ದಾರೆ.

ಅಟ್ಲಾಂಟ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ವಿದೇಶಿ ಭಾಷೆಯ ಚಿತ್ರ’ ಪ್ರಶಸ್ತಿ ಅಮೃತಮತಿ ಸಿನಿಮಾಕ್ಕೆ ಲಭಿಸಿತ್ತು. ಲಾಸ್ ಏಂಜಲೀಸ್ ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ಚಿತ್ರ’ ಮತ್ತು ‘ಶ್ರೇಷ್ಠ ಚಿತ್ರಕತೆ’ ಪ್ರಶಸ್ತಿ ಲಭಿಸಿತ್ತು. ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ವಿಶೇಷ ಚಿತ್ರ ಮನ್ನಣೆಗೆ ಚಿತ್ರ ಪಾತ್ರವಾಗಿತ್ತು.

ಇದನ್ನೂ ಓದಿ: ಸಿನಿಮಾಟೋಗ್ರಾಫ್ ಆಕ್ಟ್‌ಗೆ ಸ್ಟಾಲಿನ್ ವಿರೋಧ: ನಿರ್ಧಾರ ಹಿಂಪಡೆಯುವಂತೆ ಒಕ್ಕೂಟ ಸಚಿವರಿಗೆ ಪತ್ರ

ಕನ್ನಡದ ಕವಿ ಜನ್ನ ರಚಿಸಿರುವ ‘ಯಶೋಧರಚರಿತೆ’ ಕಾವ್ಯವನ್ನು ಆಧರಿಸಿ ಅಮೃತಮತಿ ಸಿನಿಮಾ ತಯಾರಾಗಿದೆ. ಬರಗೂರು ರಾಮಚಂದ್ರಪ್ಪ ಅವರು ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ. ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಸಂಕಲನಕಾರರಾಗಿ ಸುರೇಶ ಅರಸು, ಛಾಯಾಗ್ರಾಹಕರಾಗಿ ನಾಗರಾಜ ಆದವಾನಿ, ಸಂಗೀತ ನಿರ್ದೇಶಕರಾಗಿ ಶಮಿತಾ ಮಲ್ನಾಡ್ ಕಾರ್ಯ ನಿರ್ವಹಿಸಿದ್ದಾರೆ.

ಅಮೃತಮತಿ ಚಿತ್ರದಲ್ಲಿ ಹರಿಪ್ರಿಯಾ ಮತ್ತು ಕಿಶೋರ್‌

ಪರಪುರುಷನ ಜೊತೆಗಿನ ಸಂಬಂಧ ಮತ್ತು ಮಹಿಳಾ ಮನಸ್ಸಿನ ತಲ್ಲಣಗಳ ಸುತ್ತ ಹೆಣೆದಿರುವ ಚಿತ್ರ ಇದು. ಯಶೋಧರನ ಪಾತ್ರದಲ್ಲಿ ನಟ ಕಿಶೋರ್ ಅಭಿನಯಿಸಿದ್ದಾರೆ. ಸುಂದರರಾಜ್, ಪ್ರಮೀಳಾ ಜೋಷಾಯ್ ತಿಲಕ್, ಸುಪ್ರಿಯಾರಾವ್, ವತ್ಸಲಾಮೋಹನ್, ಅಂಬರೀಷ್​ ಸಾರಂಗಿ ಮೊದಲಾದ ಕಲಾವಿದರ ಸಾಥ್ ಅಮೃತಮತಿಗಿದೆ.

ಸ್ಯಾಂಡಲ್‌ವುಡ್‌ನ ಬ್ಯುಸಿ ನಟಿಯರ ಸಾಲಿನಲ್ಲಿ ಹರಿಪ್ರಿಯಾ ಕೂಡ ಇದ್ದು, ಅವರ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಸತೀಶ್​ ನೀನಾಸಂ ನಟನೆಯ ಪೆಟ್ರೋಮ್ಯಾಕ್ಸ್, ಬೆಲ್​ ಬಾಟಂ-2 ಸೇರಿ ಕನಿಷ್ಠ 8 ಪ್ರಾಜೆಕ್ಟ್​ಗಳಲ್ಲಿ ಹರಿಪ್ರಿಯಾ ಬ್ಯುಸಿಯಾಗಿದ್ದಾರೆ.


ಇದನ್ನೂ ಓದಿ: ಕನ್ನಡದ ಯಶಸ್ವಿ ಚಿತ್ರ ’ಯು ಟರ್ನ್’ ಹಿಂದಿಗೆ ಕೊಂಡೊಯ್ದ ಏಕ್ತಾ ಕಪೂರ್‌, ನಾಯಕಿಯಾಗಿ ಅಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...