Homeಕರ್ನಾಟಕಆರ್‌ಎಸ್‌ಎಸ್‌ ಅಜೆಂಡಾಗಳನ್ನು ಬಯಲುಗೊಳಿಸುವ ಕನ್ನಡ ಕೃತಿಗಳು

ಆರ್‌ಎಸ್‌ಎಸ್‌ ಅಜೆಂಡಾಗಳನ್ನು ಬಯಲುಗೊಳಿಸುವ ಕನ್ನಡ ಕೃತಿಗಳು

- Advertisement -
- Advertisement -

ನಾಡಿನ ಖ್ಯಾತ ಹಿರಿಯ ಸಾಹಿತಿ, ಸಾಕ್ಷಿಪ್ರಜ್ಞೆ ದೇವನೂರ ಮಹಾದೇವರ ನೂತನ ಪುಸ್ತಕ ಆರ್‌ಎಸ್‌ಎಸ್‌ ಆಳ ಮತ್ತು ಅಗಲ ರಾಜ್ಯದಲ್ಲಿ ದೊಡ್ಡ ಸಂಚಲನ ಸೃಷ್ಟಿ ಮಾಡಿದೆ. ಪ್ರಕಟಗೊಂಡ ಎರಡು ವಾರಗಳಲ್ಲಿಯೇ 86,000 ಪ್ರತಿಗಳು ಮಾರಾಟವಾಗಿವೆ. ಕನ್ನಡ ಪುಸ್ತಕ ಪ್ರಕಟಣೆಯ ಇತಿಹಾಸದಲ್ಲಿ ಇದೊಂದು ದಾಖಲೆಯೆ ಸರಿ. ಸಾಂಸ್ಕೃತಿಕ ಸಂಘಟನೆ ಎಂದು ಹೇಳಿಕೊಳ್ಳುವ ಆರ್‌ಎಸ್‌ಎಸ್‌ ಸಮಾಜದಲ್ಲಿ ಉಂಟು ಮಾಡುತ್ತಿರುವ ದುಷ್ಪರಿಣಾಮಗಳು ಮತ್ತು ಅದು ಸಾರುವ ವರ್ಣಾಶ್ರಮ ಸಿದ್ದಾಂತವನ್ನು ದೇವನೂರು ತಮ್ಮ ಕೃತಿಯಲ್ಲಿ ಬಿಚ್ಚಿಟ್ಟಿದ್ದಾರೆ. ಈ ಬಗ್ಗೆ ರಾಜ್ಯದಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಕುರಿತು ಪ್ರಕಟಗೊಂಡಿರುವ ಇತರ ಕೃತಿಗಳ ಕುರಿತು ತಿಳಿಯೋಣ.

ಆರ್‌ಎಸ್‌ಎಸ್‌ ಅಂತರಂಗ

ಆರ್‌ಎಸ್‌ಎಸ್‌ನ ಕಾರ್ಯಕರ್ತರು ಮತ್ತು ಕರ್ನಾಟಕ ಬಿಜೆಪಿಯ ಪ್ರಥಮ ರಾಜ್ಯಾಧ್ಯಕ್ಷರಾಗಿದ್ದ ಹಿರಿಯ ಹೋರಾಟಗಾರ ಎ.ಕೆ ಸುಬ್ಬಯ್ಯನವರು ಬರೆದಿರುವ ಆರ್‌ಎಸ್‌ಎಸ್‌ ಅಂತರಂಗ ಕೃತಿಯನ್ನು ಲಂಕೇಶ್ ಪ್ರಕಾಶನ ಪ್ರಕಟಿಸಿದೆ. ಇದರ ಬೆಲೆ 80 ರೂ ಇದ್ದು, ಪುಸ್ತಕ ಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

ಆರ್ ಎಸ್ ಎಸ್ ಬಚ್ಚಿಟ್ಟ ಸತ್ಯಗಳು

ಹಿರಿಯ ಸಂಶೋಧಕ ಡಾ.ಶಂಶುಲ್ ಇಸ್ಲಾಂರವರು ಆರ್‌ಎಸ್‌ಎಸ್‌ ಮುಚ್ಚಿಡುತ್ತಿರುವ ಸತ್ಯಗಳನ್ನು ಅನಾವರಣಗೊಳಿಸಿದ್ದಾರೆ. ಈ ಪುಸ್ತಕವನ್ನು ಮಾ ವರದರಾಜುರವರು ಕನ್ನಡಕರಿಸಿದ್ದು, ಸಮೈಕ್ಯ ಪ್ರಕಾಶನ ಪ್ರಕಟಿಸಿದೆ. ಬೆಲೆ 130 ರೂಗಳಾಗಿವೆ.

ನರಕದ ಗರ್ಭಗುಡಿಯೊಳಗೆ

ಆರ್‌ಎಸ್‌ಎಸ್‌ನಲ್ಲಿದ್ದು ಬೇಸೆತ್ತು ಹೊರಗೆ ಬಂದಿದ್ದ ಸುಧೀಶ್ ಮಿನ್ನಿಯವರು ಬರೆದಿರುವ ನರಕದ ಗರ್ಭ ಗುಡಿಯೊಳಗೆ ಪುಸ್ತಕವನ್ನು ಪಿ.ಕೆ.ಇ ಕೃಷ್ಣನ್‌ರವರ ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಕ್ರಿಯಾ ಪ್ರಕಾಶನ ಮುದ್ರಿಸಿದೆ. ಬೆಲೆ 120 ರೂಗಳು.

ಆರ್‌ಎಸ್‌ಎಸ್‌ ಮತ್ತು ಬಿಜೆಪಿ – ಒಂದೇ ಹಾದಿ ಭಿನ್ನ ಶ್ರಮ

ಹಲವಾರು ಕಡೆ ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಬೇರೆ ಬೇರೆ ಎಂದು ಅದರ ಮುಖಂಡರು ಹೇಳುತ್ತಾರೆ. ಆದರೆ ಒಟ್ಟಿಗೆ ಕೆಲಸ ಮಾಡುತ್ತಾರೆ. ಈ ಕುರಿತು ಎ.ಜೆ ನೂರಾನಿಯವರು ಸವಿಸ್ತಾರವಾಗಿ ಬರೆದಿರುವ ಪುಸ್ತಕ ಆರ್‌ಎಸ್‌ಎಸ್‌ ಮತ್ತು ಬಿಜೆಪಿ – ಒಂದೇ ಹಾದಿ ಭಿನ್ನ ಶ್ರಮ. ಸುರೇಶ್ ಭಟ್ ಭಾಕ್ರಬೈಲುರವರು ಕನ್ನಡಕ್ಕೆ ಅನುವಾದ ಮಾಡಿದ್ದು, ಇದನ್ನು ಲಡಾಯಿ ಪ್ರಕಾಶನ ಪ್ರಕಟಿಸಿದೆ. ಇದರ ಬೆಲೆ 150 ರೂಗಳು.

ಹಿಂದುತ್ವ ಮತ್ತು ದಲಿತರು

ಖ್ಯಾತ ಅಂಬೇಡ್ಕರ್‌ವಾದಿ ಚಿಂತಕ ಡಾ. ಆನಂದ್ ತೇಲ್ತುಂಬ್ಡೆಯವರು ರಚಿಸಿರುವ ಹಿಂದುತ್ವ ಮತ್ತು ದಲಿತರು ಪುಸ್ತಕವನ್ನು ಪ್ರೊ.ಬಿ.ಗಂಗಾಧರ ಮೂರ್ತಿಯವರು ಕನ್ನಡಕ್ಕೆ ಅನುವಾದಿಸಿದ್ದಾರೆ. ದಲಿತರನ್ನು ಆರ್‌ಎಸ್‌ಎಸ್ ಹೇಗೆ ಪರಿಭಾವಿಸುತ್ತದೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ಈ ಪುಸ್ತಕವನ್ನು ಲಡಾಯಿ ಪ್ರಕಾಶನ ಪ್ರಕಟಿಸಿದೆ. ಇದರ ಬೆಲೆ 160 ರೂಗಳು.

ಕೋಮುವಾದಿ ಕಾರ್ಯಾಚರಣೆ ಮತ್ತು ದಲಿತ ಪ್ರತಿಸ್ಪಂದನೆ

ಆನಂದ್‌ ತೆಲ್ತುಂಬ್ಡೆಯವರ ಮತ್ತೊಂದು ಮಹತ್ವದ ಪುಸ್ತಕವಿದೆ. ಕೋಮುವಾದದ ಮೂಲಕ ಅಧಿಕಾರ ಹಿಡಿಯುವ ಆರ್‌ಎಸ್‌ಎಸ್‌ ಬಿಜೆಪಿಗೆ ದಲಿತ ಹೋರಾಟ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ಪ್ರೊ.ಬಿ.ಗಂಗಾಧರ ಮೂರ್ತಿ ಮತ್ತು ಶಿವಸುಂದರ್‌ರವರು ಅನುವಾದಿಸಿದ್ದಾರೆ. ಪುಸ್ತಕದ ಬೆಲೆ 140 ರೂಗಳು.

ಹಿಂದೂಗಳ ಬೇರೊಂದು ಚರಿತ್ರೆ

ಖ್ಯಾತ ಲೇಖಕ ವೆಂಡಿ ಡೊನಿಗರ್‌ರವರ ಈ ಮಹತ್ವದ ಪುಸ್ತಕವನ್ನು ಡಾ. ಬಂಜಗೆರೆ ಜಯಪ್ರಕಾಶ್‌ರವರು ಕನ್ನಡೀಕರಿಸಿದ್ದಾರೆ. ಸಿರಿವರ ಪ್ರಕಾಶನ ಪ್ರಕಟಿಸಿದ್ದು, ಪುಸ್ತಕದ ಬೆಲೆ 500 ರೂಗಳು.

ನಾನು ಹಿಂದೂ ಆಗಿ ಸಾಯಲಾರೆ

ಡಾ.ಬಿ.ಆರ್ ಅಂಬೇಡ್ಕರ್‌ರವರು ಏಕೆ ನಾನು ಹಿಂದೂ ಆಗಿ ಸಾಯಲಾರೆ ಎಂದು ವಿವರಿಸಿದರು ಎಂಬುದನ್ನು ಈ ಪುಸ್ತಕದಲ್ಲಿ ಬರೆಯಲಾಗಿದೆ. ಇದನ್ನು ಸದಾಶಿವ ಮರ್ಜಿಯವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಪುಸ್ತಕದ ಬೆಲೆ 60/- ರೂಗಳು.

ಸಾವರ್ಕರ್ ಗೋಡ್ಸೆ ನಂಟು ಮತ್ತು ಆತನ ಹಿಂದುತ್ವ ಸಿದ್ಧಾಂತ

ಗಾಂಧಿ ಹಂತಕ ನಾಥೂರಾಮ್ ಗೂಡ್ಸೆಗೂ, ಸಾವರ್ಕರ್‌ಗೂ ಸಂಬಂಧವೇನು ಇಲ್ಲ ಎಂದು ಹೇಳುತ್ತಾರೆ. ಆದರೆ ಸಾವರ್ಕರ್ ಕೂಡ ಗಾಂಧಿ ಕೊಲೆ ಆರೋಪಿಗಳಲ್ಲಿ ಒಬ್ಬರು ಎಂದು ಆರೋಪಿಸಲಾಗಿದೆ. ಈ ಕುರಿತು ವಿವರಿಸುವ ಪುಸ್ತಕವನ್ನು ಎ.ಜಿ ನೂರಾನಿಯವರು ಬರೆದಿದ್ದಾರೆ. ಸುರೇಶ್ ಭಟ್ ಭಾಕ್ರಬೈಲುರವರು ಕನ್ನಡಕ್ಕೆ ಅನುವಾದಿಸಿದ್ದಾರೆ.

ಕೇಸರಿ ಭಯೋತ್ಪಾದನೆ

ಆರ್‌ಎಸ್‌ಎಸ್‌ ಸಂಘಟನೆ ಹೇಳುವುದೇನು, ಮಾಡುವುದೇನು ಎಂಬುದನ್ನು ವಿವರಿಸುವ ಸುರೇಶ ಭಟ್ ಭಾಕ್ರಬೈಲು ಅಂಕಣಗಳ ಸಂಗ್ರಹವೇ ಕೇಸರಿ ಭಯೋತ್ಪಾದನೆ. ಭಾರತದಲ್ಲಿ ಹಿಂದುತ್ವದ ಹೆಸರಿನಲ್ಲಿ ನಡೆದ ಭಯೋತ್ಪಾದನಾ ಚಟುವಟಿಕೆಗಳನ್ನು ಈ ಪುಸ್ತಕದಲ್ಲಿ ವಿವರಿಸಲಾಗಿದೆ. ಲಂಕೇಶ್ ಪ್ರಕಾಶನ ಇದನ್ನು ಮುದ್ರಿಸಿದ್ದು, 135 ರೂ ಬೆಲೆ ಹೊಂದಿದೆ.

ಬಹುಸಂಖ್ಯಾತವಾದ- ಚಿಂತಕರು ಕಂಡಂತೆ, ಹಿಂದುತ್ವ ರಾಜಕಾರಣ

ಸಂಘ ಪರಿವಾರದ ಹಿಡನ್‌ ಅಜೆಂಡಾಗಳ ಕುರಿತು ನಿರಂತರ ಬರೆಯುತ್ತಿರುವ ಬಿ.ಶ್ರೀಪಾದ ಭಟ್ ಅವರ ಎರಡು ಕೃತಿಗಳು ಹಿಂದುತ್ವ ರಾಜಕಾರಣದ ಆಳ ಅಗಲಗಳನ್ನು ಬಿಚ್ಚಿಡುತ್ತವೆ. ‘ಹಿಂದುತ್ವ ರಾಜಕಾರಣದ- ಅಂದು ಮತ್ತು ಮುಂದು’, ‘ಬಹುಸಂಖ್ಯಾತವಾದ- ಚಿಂತಕರು ಕಂಡಂತೆ’ ಕೃತಿಗಳು ಸಂಘಪರಿವಾರದ ಕುರಿತು ವಿಶಿಷ್ಟ ಒಳನೋಟಗಳನ್ನು ನೀಡುತ್ತವೆ.

ಆರ್ ಎಸ್ ಎಸ್ ಆಳ ಮತ್ತು ಅಗಲ 

ದೇವನೂರು ಮಹಾದೇವರವರ ಇತ್ತೀಚಿನ ಪುಸ್ತಕ. ಆರ್‌ಎಸ್‌ಎಸ್‌ನ ಪ್ರಾಣ ಎಲ್ಲಿದೆ ಎಂಬುದರಿಂದ ಅರಂಭವಾಗಿ ಕರ್ನಾಟಕದ ವರ್ತಮಾನದ ಸವಾಲುಗಳವರೆಗೂ ಈ ಪುಸ್ತಕದಲ್ಲಿ ವಿವರಿಸಿದ್ದಾರೆ. ಗೌರಿ ಮೀಡಿಯಾ ಟ್ರಸ್ಟ್ ಸೇರಿದಂತೆ ಸುಮಾರು 20 ಪ್ರಕಾಶನ ಸಂಸ್ಥೆಗಳು ಮುದ್ರಿಸಿವೆ. ಬೆಲೆ 40 ರೂ. ಪುಸ್ತಕ ಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ’ಆರ್‌ಎಸ್‌ಎಸ್ ಆಳ ಮತ್ತು ಅಗಲ’ ಪುಸ್ತಕ ಪ್ರಕಟಣೆ ಮತ್ತು ಹಂಚಿಕೆ ಕರ್ನಾಟಕದ ಉದ್ದಗಲಕ್ಕೆ ಆಂದೋಲನವಾಗಿದ್ದರ ಕುರಿತು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. RSS ಬಗ್ಗೆ ಮಾತಾಡೋ ಅಯೋಗ್ಯರು ,ಅದೇ ಭಯೋತ್ಪಾದನೆಗೆ ಕಾರಣವಾಗಿ ಪ್ರಪಂಚದಲ್ಲಿ ಹಿಂಸೆಯನ್ನು,ಕೊಲೆ ಮಾಡೋದನ್ನೇ ಮೂಲ ಕಸಬು ಮಾಡಿಕೊಂಡಿರುವ ನರ ರಾಕ್ಷಸ ಕಲಬೆರಕೆ SDPI ,PFI ಮೂಲಭೂತವಾದಿಗಳ ಬಗ್ಗೆ ಮಾತಾಡ್ರೋ ಅಯೋಗ್ಯರ ,RSS ಬಗ್ಗೆ ಅರಿವೇ ಇಲ್ಲದ ರೋಲ್ ಕಾಲ್ ಲದ್ದಿ ಜೀವಿಗಳ ಬಂಡವಾಳ ದೇಶದ ಪ್ರತಿ ವ್ಯಕ್ತಿಗೆ ತಿಳಿದಿದೆ

  2. RSS = SDPI = PFI ಈ ಮೂವರು ಮಾಡುವುದು ದೇಶವನ್ನು ಒಡೆಯುವ ಕೆಲಸ , ಇವರಿಂದ ಈ ದೇಶ ಶುಚಿಯಾಗಬೇಕಿದೆ , ಮೂವರೂ ಭಯವನ್ನ ಉತ್ಪಾದಿಸುವವರು …..!

  3. ಅತ್ಯತ್ತಮವಾದ ಕೆಲಸ. ಈ ಪುಸ್ತಕಗಳು “ರಾಕ್ಷಸ ಸಂತತಿಯ ಸಂಘ” ಹಾಗೂ ಬ್ಲೂ ಜೋಕರ್ಸ್ ಪಾರ್ಟಿಯ ನಿಜ ಬಣ್ಣ ಬಯಲು ಮಾಡುವ ಕನ್ನಡಿಗಳಾಗಿವೆ. ಅದ್ಯಾವುದೋ ರಾಕ್ಷಸಕುಲದ ನಾಯಿಯೊಂದು ಮೇಲೆ ಈ ಪುಸ್ತಕಗಳ ಲೇಖಕರನ್ನ ಕಲಬೆರಕೆಗಳೆಂದು ಹೇಳಿ ತನ್ನ ಪೂರ್ವಾಗ್ರಹ ಪೀಡಿತ ಮನಸ್ಥಿತಿಯನ್ನು ತೋರಪಡಿಸಿದ್ದನೆ, ಇಂತಹ ಹರಾಮಿ ಕಲಬೆರಕೆಗಳನ್ನ ಮಟ್ಟ ಹಾಕಬೇಕಿದೆ.

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...