Homeಕರ್ನಾಟಕ‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

- Advertisement -
- Advertisement -

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ನಡೆಯುವ ಜಾತೀಯತೆ ಮತ್ತು ರಾಜಕೀಯದ ಸುತ್ತ ನಡೆಯುವ ಘಟನೆಗಳನ್ನು ‘ಧೀರ ಭಗತ್ ರಾಯ್‌’ ಸಿನಿಮಾ ಮೂಲಕ ಹೇಳಲು ಹೊರಟಿದ್ದಾರೆ ಕನ್ನಡ ಚಿತ್ರರಂಗದ ಹೊಸ ನಿರ್ದೇಶಕ ಕರ್ಣನ್ ಎ.ಎಸ್.

ಚಿತ್ರರಂಗದಲ್ಲಿ ಎಂಟು ವರ್ಷದ ಅನುಭವವಿರುವ ನೆಲಮಂಗಲದ ಕರ್ಣನ್, ನಿರ್ದೇಶಕ ಪುಟ್ಟಣ್ಣ ಕಣಗಾಲ್ ಮತ್ತು ಪಾ. ರಂಚಿತ್ ಅವರೇ ನನಗೆ ಇಂತಹ ಸಿನಿಮಾ ಮಾಡಲು ಸ್ಪೂರ್ತಿ. ಎನ್ನುವ ಕಲೆಯ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ಜನರಿಗೆ ಮನಮುಟ್ಟುವಂತೆ ತೋರಿಸಬಹುದು ಎನ್ನುತ್ತಾರೆ.

ಚಿತ್ರದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕರ್ಣನ್, “ನರಗುಂದ ಎಂಬ ಕಾಲ್ಪನಿಕ ಹಳ್ಳಿಯೊಂದರಲ್ಲಿ sc ಮೀಸಲಾತಿ ಕ್ಷೇತ್ರದಲ್ಲಿ ನಡೆಯುವ ಜಾತಿ, ರಾಜಕೀಯದ ಸುತ್ತ ನಡೆಯುವ ಕತೆಯಿದು. 1975, 85, 97, 2004 ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಒಂದು ಗ್ಯಾಂಗ್ ಸ್ಟಾರ್‌, ಪೊಲಿಟಿಕಲ್ ಸಿನಿಮಾವನ್ನು ನಾನ್ ಲೀನಿಯರ್‌ ಆಗಿ ಪರಿಚಯಿಸುತ್ತಿದ್ದೇವೆ. ತುಂಬಾ ರಿಸರ್ಚ್ ಮಾಡಿ, ಪ್ಲ್ಯಾನ್ ಮಾಡಿ ಚಿತ್ರದ ತಯಾರಿ ಮಾಡಿದ್ದೇವೆ” ಎಂದಿದ್ದಾರೆ.

“ಒಂದು ಮೀಸಲು ಕ್ಷೇತ್ರದಲ್ಲಿ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ. ನಾವು ಆಯ್ಕೆ ಮಾಡಿ ಕಳುಹಿಸುವವರು ನಮಗಾಗಿ ಕೆಲಸ ಮಾಡುತ್ತಾರೆಯೇ…? ಗೆದ್ದ ಶಾಸಕನನ್ನು ಕಂಟ್ರೋಲ್ ಮಾಡುವ ಕೈಗಳು ಯಾವುವು…? ಮೀಸಲು ಕ್ಷೇತ್ರದಲ್ಲಿ ಹೇಗೆ ತಮಗೆ ಬೇಕಾದವರನ್ನು ಗೆಲ್ಲಿಸಿಕೊಳ್ಳುತ್ತಾರೆ. ಆ ಕ್ಷೇತ್ರದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸುಧಾರಣೆಗಳಗಿವೆಯೇ ಎಂಬುದು ಮುಖ್ಯ. ನಾನು ಕೂಡ ಒಬ್ಬ ಮೀಸಲು ಕ್ಷೇತ್ರದಲ್ಲಿ ಬೆಳೆದವನಾದ್ದರಿಂದ, ಅಲ್ಲಿನ ಸಮಸ್ಯೆಗಳ ಜೊತೆಯಲ್ಲಿಯೇ ಬದುಕು ಸಾಗಿಸುತ್ತಿರುವ ಕಾರಣ ಇದರ ಕುರಿತು ಏಕೆ ಸಿನಿಮಾ ಮಾಡಬಾರದು ಎಂಬ ಆಯೋಚನೆ ಬಂತು. 2 ವರ್ಷ ಒಂದು ಕಥೆಯ ಮೇಲೆ ಕೆಲಸ ಮಾಡಿ ಸಿನಿಮಾ ನಿರ್ದೇಶಿಸಿದ್ದೇನೆ” ಎನ್ನುತ್ತಾರೆ ಕರ್ಣನ್.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ಮುಂದುವರಿದು, ಸಿನಿಮಾಗೆ ‘ಧೀರ ಭಗತ್ ರಾಯ್‌’ ಎಂಬ ಹೆಸರು ಇಡಲು ಮುಖ್ಯ ಕಾರಣವಿದೆ ಎಂದಿದ್ದಾರೆ. ಚಿತ್ರದಲ್ಲಿ ಈ ಹೇಸರು ಹೇಗೆ ರಾಜಕೀಯ ಅಜೆಂಡಾವಾಗಿ ಕೆಲಸ ಮಾಡುತ್ತದೆ ಎಂದುದನ್ನು ಚಿತ್ರ ನೋಡಿ ಎನ್ನುತ್ತಾರೆ ನಿರ್ದೇಶಕ.

’ಕಥಾ ನಾಯಕ ಭಗತ್ ಎಂಬುವವ ಒಬ್ಬ ವಕೀಲ. ಆತ ತನ್ನ ಜನರಿಗಾಗಿ ಹೇಗೆ ಗ್ಯಾಂಗ್‌ಸ್ಟರ್‌ ಆಗಿ ಬಳಿಕ ರಾಜಕೀಯ ನಾಯಕನಾಗುತ್ತಾನೆ ಎಂಬುದು ಕಥೆ. ರಾಜಕೀಯ ಶಕ್ತಿ ಇದ್ದರೇ ಸಮಾಜದಲ್ಲಿ ಬದಲಾವಣೆ ಸಾಧ್ಯ. ಜಾತಿಮುಕ್ತ ಸಮಾಜ ನಿರ್ಮಾಣಕ್ಕೆ ನಾವು ಆಳುವ ವರ್ಗದಲ್ಲಿರಬೇಕು. ಅಧಿಕಾರದಿಂದ ವಂಚಿತರಿಗೆ ರಾಜಕೀಯ ಶಕ್ತಿ ದೊರಕಬೇಕು’ ಎಂದಿದ್ದಾರೆ.

ಕಾಲ್ಪನಿಕ ಚಿತ್ರದಲ್ಲಿ ತಮ್ಮ ಅನುಭವಗಳನ್ನು ಸೇರಸಿ ಕಥೆ ಬರೆದಿದ್ದಾರೆ ನಿರ್ದೇಶಕ. ಕಮರ್ಷಿಲ್‌ ಆಗಿ ಈ ಚಿತ್ರವನ್ನು ತಯಾರು ಮಾಡಿದ್ದೇವೆ. ಮಾಸ್ ಪ್ರೇಕ್ಷಕರಿಗೆ ಯಾವುದೇ ಬೇಸರವಾಗುವುದಿಲ್ಲ. ಚಿತ್ರದಲ್ಲಿ ನಾಲ್ಕು ಸಾಹಸ ದೃಶ್ಯಗಳಿದ್ದು, ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ಥ್ರಿಲ್ಲರ್‌ ಮಂಜು ಅವರ ನಿರ್ದೇಶನವಿದೆ ಎಂದು ಭರವಸೆ ನೀಡಿದ್ದಾರೆ.

ರಂಗಭೂಮಿ ಕಲಾವಿದ ರಾಕೇಶ್ ದಳವಾಯಿ, ನಟ ಶರತ್ ಲೋಹಿತಾಶ್ವ, ನಟಿ ಸುಚರಿತ, ಚೈತ್ರಾ ಕೊಟ್ಟೂರು ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರಕ್ಕೆ ಲೂಸಿಯಾ, ಯೂಟರ್ನ್ ಖ್ಯಾತಿಯ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ. ಜ.15 ಕ್ಕೆ ಟ್ರೈಲರ್‌ ಬಿಡುಗಡೆಯಾಗಲಿದ್ದು, ನಂತರ ತೆಲುಗು, ತಮಿಳು ಭಾಷೆಗೂ ಚಿತ್ರ ತರುವ ಯೋಜನೆಯಿದೆ. ಮಾರ್ಚ್‌ಗೆ ಸಿನಿಮಾ ಚಿತ್ರಮಂದಿರಗಳಿಗೆ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ವಿದಾಯ 2021: ಕಳೆದ ವರ್ಷ ನಮ್ಮನ್ನಗಲಿದ ಚಿತ್ರರಂಗದ ತಾರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...