Homeಕರ್ನಾಟಕ‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

- Advertisement -
- Advertisement -

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ನಡೆಯುವ ಜಾತೀಯತೆ ಮತ್ತು ರಾಜಕೀಯದ ಸುತ್ತ ನಡೆಯುವ ಘಟನೆಗಳನ್ನು ‘ಧೀರ ಭಗತ್ ರಾಯ್‌’ ಸಿನಿಮಾ ಮೂಲಕ ಹೇಳಲು ಹೊರಟಿದ್ದಾರೆ ಕನ್ನಡ ಚಿತ್ರರಂಗದ ಹೊಸ ನಿರ್ದೇಶಕ ಕರ್ಣನ್ ಎ.ಎಸ್.

ಚಿತ್ರರಂಗದಲ್ಲಿ ಎಂಟು ವರ್ಷದ ಅನುಭವವಿರುವ ನೆಲಮಂಗಲದ ಕರ್ಣನ್, ನಿರ್ದೇಶಕ ಪುಟ್ಟಣ್ಣ ಕಣಗಾಲ್ ಮತ್ತು ಪಾ. ರಂಚಿತ್ ಅವರೇ ನನಗೆ ಇಂತಹ ಸಿನಿಮಾ ಮಾಡಲು ಸ್ಪೂರ್ತಿ. ಎನ್ನುವ ಕಲೆಯ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ಜನರಿಗೆ ಮನಮುಟ್ಟುವಂತೆ ತೋರಿಸಬಹುದು ಎನ್ನುತ್ತಾರೆ.

ಚಿತ್ರದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕರ್ಣನ್, “ನರಗುಂದ ಎಂಬ ಕಾಲ್ಪನಿಕ ಹಳ್ಳಿಯೊಂದರಲ್ಲಿ sc ಮೀಸಲಾತಿ ಕ್ಷೇತ್ರದಲ್ಲಿ ನಡೆಯುವ ಜಾತಿ, ರಾಜಕೀಯದ ಸುತ್ತ ನಡೆಯುವ ಕತೆಯಿದು. 1975, 85, 97, 2004 ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಒಂದು ಗ್ಯಾಂಗ್ ಸ್ಟಾರ್‌, ಪೊಲಿಟಿಕಲ್ ಸಿನಿಮಾವನ್ನು ನಾನ್ ಲೀನಿಯರ್‌ ಆಗಿ ಪರಿಚಯಿಸುತ್ತಿದ್ದೇವೆ. ತುಂಬಾ ರಿಸರ್ಚ್ ಮಾಡಿ, ಪ್ಲ್ಯಾನ್ ಮಾಡಿ ಚಿತ್ರದ ತಯಾರಿ ಮಾಡಿದ್ದೇವೆ” ಎಂದಿದ್ದಾರೆ.

“ಒಂದು ಮೀಸಲು ಕ್ಷೇತ್ರದಲ್ಲಿ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ. ನಾವು ಆಯ್ಕೆ ಮಾಡಿ ಕಳುಹಿಸುವವರು ನಮಗಾಗಿ ಕೆಲಸ ಮಾಡುತ್ತಾರೆಯೇ…? ಗೆದ್ದ ಶಾಸಕನನ್ನು ಕಂಟ್ರೋಲ್ ಮಾಡುವ ಕೈಗಳು ಯಾವುವು…? ಮೀಸಲು ಕ್ಷೇತ್ರದಲ್ಲಿ ಹೇಗೆ ತಮಗೆ ಬೇಕಾದವರನ್ನು ಗೆಲ್ಲಿಸಿಕೊಳ್ಳುತ್ತಾರೆ. ಆ ಕ್ಷೇತ್ರದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸುಧಾರಣೆಗಳಗಿವೆಯೇ ಎಂಬುದು ಮುಖ್ಯ. ನಾನು ಕೂಡ ಒಬ್ಬ ಮೀಸಲು ಕ್ಷೇತ್ರದಲ್ಲಿ ಬೆಳೆದವನಾದ್ದರಿಂದ, ಅಲ್ಲಿನ ಸಮಸ್ಯೆಗಳ ಜೊತೆಯಲ್ಲಿಯೇ ಬದುಕು ಸಾಗಿಸುತ್ತಿರುವ ಕಾರಣ ಇದರ ಕುರಿತು ಏಕೆ ಸಿನಿಮಾ ಮಾಡಬಾರದು ಎಂಬ ಆಯೋಚನೆ ಬಂತು. 2 ವರ್ಷ ಒಂದು ಕಥೆಯ ಮೇಲೆ ಕೆಲಸ ಮಾಡಿ ಸಿನಿಮಾ ನಿರ್ದೇಶಿಸಿದ್ದೇನೆ” ಎನ್ನುತ್ತಾರೆ ಕರ್ಣನ್.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ಮುಂದುವರಿದು, ಸಿನಿಮಾಗೆ ‘ಧೀರ ಭಗತ್ ರಾಯ್‌’ ಎಂಬ ಹೆಸರು ಇಡಲು ಮುಖ್ಯ ಕಾರಣವಿದೆ ಎಂದಿದ್ದಾರೆ. ಚಿತ್ರದಲ್ಲಿ ಈ ಹೇಸರು ಹೇಗೆ ರಾಜಕೀಯ ಅಜೆಂಡಾವಾಗಿ ಕೆಲಸ ಮಾಡುತ್ತದೆ ಎಂದುದನ್ನು ಚಿತ್ರ ನೋಡಿ ಎನ್ನುತ್ತಾರೆ ನಿರ್ದೇಶಕ.

’ಕಥಾ ನಾಯಕ ಭಗತ್ ಎಂಬುವವ ಒಬ್ಬ ವಕೀಲ. ಆತ ತನ್ನ ಜನರಿಗಾಗಿ ಹೇಗೆ ಗ್ಯಾಂಗ್‌ಸ್ಟರ್‌ ಆಗಿ ಬಳಿಕ ರಾಜಕೀಯ ನಾಯಕನಾಗುತ್ತಾನೆ ಎಂಬುದು ಕಥೆ. ರಾಜಕೀಯ ಶಕ್ತಿ ಇದ್ದರೇ ಸಮಾಜದಲ್ಲಿ ಬದಲಾವಣೆ ಸಾಧ್ಯ. ಜಾತಿಮುಕ್ತ ಸಮಾಜ ನಿರ್ಮಾಣಕ್ಕೆ ನಾವು ಆಳುವ ವರ್ಗದಲ್ಲಿರಬೇಕು. ಅಧಿಕಾರದಿಂದ ವಂಚಿತರಿಗೆ ರಾಜಕೀಯ ಶಕ್ತಿ ದೊರಕಬೇಕು’ ಎಂದಿದ್ದಾರೆ.

ಕಾಲ್ಪನಿಕ ಚಿತ್ರದಲ್ಲಿ ತಮ್ಮ ಅನುಭವಗಳನ್ನು ಸೇರಸಿ ಕಥೆ ಬರೆದಿದ್ದಾರೆ ನಿರ್ದೇಶಕ. ಕಮರ್ಷಿಲ್‌ ಆಗಿ ಈ ಚಿತ್ರವನ್ನು ತಯಾರು ಮಾಡಿದ್ದೇವೆ. ಮಾಸ್ ಪ್ರೇಕ್ಷಕರಿಗೆ ಯಾವುದೇ ಬೇಸರವಾಗುವುದಿಲ್ಲ. ಚಿತ್ರದಲ್ಲಿ ನಾಲ್ಕು ಸಾಹಸ ದೃಶ್ಯಗಳಿದ್ದು, ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ಥ್ರಿಲ್ಲರ್‌ ಮಂಜು ಅವರ ನಿರ್ದೇಶನವಿದೆ ಎಂದು ಭರವಸೆ ನೀಡಿದ್ದಾರೆ.

ರಂಗಭೂಮಿ ಕಲಾವಿದ ರಾಕೇಶ್ ದಳವಾಯಿ, ನಟ ಶರತ್ ಲೋಹಿತಾಶ್ವ, ನಟಿ ಸುಚರಿತ, ಚೈತ್ರಾ ಕೊಟ್ಟೂರು ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರಕ್ಕೆ ಲೂಸಿಯಾ, ಯೂಟರ್ನ್ ಖ್ಯಾತಿಯ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ. ಜ.15 ಕ್ಕೆ ಟ್ರೈಲರ್‌ ಬಿಡುಗಡೆಯಾಗಲಿದ್ದು, ನಂತರ ತೆಲುಗು, ತಮಿಳು ಭಾಷೆಗೂ ಚಿತ್ರ ತರುವ ಯೋಜನೆಯಿದೆ. ಮಾರ್ಚ್‌ಗೆ ಸಿನಿಮಾ ಚಿತ್ರಮಂದಿರಗಳಿಗೆ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ವಿದಾಯ 2021: ಕಳೆದ ವರ್ಷ ನಮ್ಮನ್ನಗಲಿದ ಚಿತ್ರರಂಗದ ತಾರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...