Homeಕರ್ನಾಟಕ‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

- Advertisement -
- Advertisement -

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ನಡೆಯುವ ಜಾತೀಯತೆ ಮತ್ತು ರಾಜಕೀಯದ ಸುತ್ತ ನಡೆಯುವ ಘಟನೆಗಳನ್ನು ‘ಧೀರ ಭಗತ್ ರಾಯ್‌’ ಸಿನಿಮಾ ಮೂಲಕ ಹೇಳಲು ಹೊರಟಿದ್ದಾರೆ ಕನ್ನಡ ಚಿತ್ರರಂಗದ ಹೊಸ ನಿರ್ದೇಶಕ ಕರ್ಣನ್ ಎ.ಎಸ್.

ಚಿತ್ರರಂಗದಲ್ಲಿ ಎಂಟು ವರ್ಷದ ಅನುಭವವಿರುವ ನೆಲಮಂಗಲದ ಕರ್ಣನ್, ನಿರ್ದೇಶಕ ಪುಟ್ಟಣ್ಣ ಕಣಗಾಲ್ ಮತ್ತು ಪಾ. ರಂಚಿತ್ ಅವರೇ ನನಗೆ ಇಂತಹ ಸಿನಿಮಾ ಮಾಡಲು ಸ್ಪೂರ್ತಿ. ಎನ್ನುವ ಕಲೆಯ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ಜನರಿಗೆ ಮನಮುಟ್ಟುವಂತೆ ತೋರಿಸಬಹುದು ಎನ್ನುತ್ತಾರೆ.

ಚಿತ್ರದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕರ್ಣನ್, “ನರಗುಂದ ಎಂಬ ಕಾಲ್ಪನಿಕ ಹಳ್ಳಿಯೊಂದರಲ್ಲಿ sc ಮೀಸಲಾತಿ ಕ್ಷೇತ್ರದಲ್ಲಿ ನಡೆಯುವ ಜಾತಿ, ರಾಜಕೀಯದ ಸುತ್ತ ನಡೆಯುವ ಕತೆಯಿದು. 1975, 85, 97, 2004 ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಒಂದು ಗ್ಯಾಂಗ್ ಸ್ಟಾರ್‌, ಪೊಲಿಟಿಕಲ್ ಸಿನಿಮಾವನ್ನು ನಾನ್ ಲೀನಿಯರ್‌ ಆಗಿ ಪರಿಚಯಿಸುತ್ತಿದ್ದೇವೆ. ತುಂಬಾ ರಿಸರ್ಚ್ ಮಾಡಿ, ಪ್ಲ್ಯಾನ್ ಮಾಡಿ ಚಿತ್ರದ ತಯಾರಿ ಮಾಡಿದ್ದೇವೆ” ಎಂದಿದ್ದಾರೆ.

“ಒಂದು ಮೀಸಲು ಕ್ಷೇತ್ರದಲ್ಲಿ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ. ನಾವು ಆಯ್ಕೆ ಮಾಡಿ ಕಳುಹಿಸುವವರು ನಮಗಾಗಿ ಕೆಲಸ ಮಾಡುತ್ತಾರೆಯೇ…? ಗೆದ್ದ ಶಾಸಕನನ್ನು ಕಂಟ್ರೋಲ್ ಮಾಡುವ ಕೈಗಳು ಯಾವುವು…? ಮೀಸಲು ಕ್ಷೇತ್ರದಲ್ಲಿ ಹೇಗೆ ತಮಗೆ ಬೇಕಾದವರನ್ನು ಗೆಲ್ಲಿಸಿಕೊಳ್ಳುತ್ತಾರೆ. ಆ ಕ್ಷೇತ್ರದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸುಧಾರಣೆಗಳಗಿವೆಯೇ ಎಂಬುದು ಮುಖ್ಯ. ನಾನು ಕೂಡ ಒಬ್ಬ ಮೀಸಲು ಕ್ಷೇತ್ರದಲ್ಲಿ ಬೆಳೆದವನಾದ್ದರಿಂದ, ಅಲ್ಲಿನ ಸಮಸ್ಯೆಗಳ ಜೊತೆಯಲ್ಲಿಯೇ ಬದುಕು ಸಾಗಿಸುತ್ತಿರುವ ಕಾರಣ ಇದರ ಕುರಿತು ಏಕೆ ಸಿನಿಮಾ ಮಾಡಬಾರದು ಎಂಬ ಆಯೋಚನೆ ಬಂತು. 2 ವರ್ಷ ಒಂದು ಕಥೆಯ ಮೇಲೆ ಕೆಲಸ ಮಾಡಿ ಸಿನಿಮಾ ನಿರ್ದೇಶಿಸಿದ್ದೇನೆ” ಎನ್ನುತ್ತಾರೆ ಕರ್ಣನ್.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ಮುಂದುವರಿದು, ಸಿನಿಮಾಗೆ ‘ಧೀರ ಭಗತ್ ರಾಯ್‌’ ಎಂಬ ಹೆಸರು ಇಡಲು ಮುಖ್ಯ ಕಾರಣವಿದೆ ಎಂದಿದ್ದಾರೆ. ಚಿತ್ರದಲ್ಲಿ ಈ ಹೇಸರು ಹೇಗೆ ರಾಜಕೀಯ ಅಜೆಂಡಾವಾಗಿ ಕೆಲಸ ಮಾಡುತ್ತದೆ ಎಂದುದನ್ನು ಚಿತ್ರ ನೋಡಿ ಎನ್ನುತ್ತಾರೆ ನಿರ್ದೇಶಕ.

’ಕಥಾ ನಾಯಕ ಭಗತ್ ಎಂಬುವವ ಒಬ್ಬ ವಕೀಲ. ಆತ ತನ್ನ ಜನರಿಗಾಗಿ ಹೇಗೆ ಗ್ಯಾಂಗ್‌ಸ್ಟರ್‌ ಆಗಿ ಬಳಿಕ ರಾಜಕೀಯ ನಾಯಕನಾಗುತ್ತಾನೆ ಎಂಬುದು ಕಥೆ. ರಾಜಕೀಯ ಶಕ್ತಿ ಇದ್ದರೇ ಸಮಾಜದಲ್ಲಿ ಬದಲಾವಣೆ ಸಾಧ್ಯ. ಜಾತಿಮುಕ್ತ ಸಮಾಜ ನಿರ್ಮಾಣಕ್ಕೆ ನಾವು ಆಳುವ ವರ್ಗದಲ್ಲಿರಬೇಕು. ಅಧಿಕಾರದಿಂದ ವಂಚಿತರಿಗೆ ರಾಜಕೀಯ ಶಕ್ತಿ ದೊರಕಬೇಕು’ ಎಂದಿದ್ದಾರೆ.

ಕಾಲ್ಪನಿಕ ಚಿತ್ರದಲ್ಲಿ ತಮ್ಮ ಅನುಭವಗಳನ್ನು ಸೇರಸಿ ಕಥೆ ಬರೆದಿದ್ದಾರೆ ನಿರ್ದೇಶಕ. ಕಮರ್ಷಿಲ್‌ ಆಗಿ ಈ ಚಿತ್ರವನ್ನು ತಯಾರು ಮಾಡಿದ್ದೇವೆ. ಮಾಸ್ ಪ್ರೇಕ್ಷಕರಿಗೆ ಯಾವುದೇ ಬೇಸರವಾಗುವುದಿಲ್ಲ. ಚಿತ್ರದಲ್ಲಿ ನಾಲ್ಕು ಸಾಹಸ ದೃಶ್ಯಗಳಿದ್ದು, ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ಥ್ರಿಲ್ಲರ್‌ ಮಂಜು ಅವರ ನಿರ್ದೇಶನವಿದೆ ಎಂದು ಭರವಸೆ ನೀಡಿದ್ದಾರೆ.

ರಂಗಭೂಮಿ ಕಲಾವಿದ ರಾಕೇಶ್ ದಳವಾಯಿ, ನಟ ಶರತ್ ಲೋಹಿತಾಶ್ವ, ನಟಿ ಸುಚರಿತ, ಚೈತ್ರಾ ಕೊಟ್ಟೂರು ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರಕ್ಕೆ ಲೂಸಿಯಾ, ಯೂಟರ್ನ್ ಖ್ಯಾತಿಯ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ. ಜ.15 ಕ್ಕೆ ಟ್ರೈಲರ್‌ ಬಿಡುಗಡೆಯಾಗಲಿದ್ದು, ನಂತರ ತೆಲುಗು, ತಮಿಳು ಭಾಷೆಗೂ ಚಿತ್ರ ತರುವ ಯೋಜನೆಯಿದೆ. ಮಾರ್ಚ್‌ಗೆ ಸಿನಿಮಾ ಚಿತ್ರಮಂದಿರಗಳಿಗೆ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ವಿದಾಯ 2021: ಕಳೆದ ವರ್ಷ ನಮ್ಮನ್ನಗಲಿದ ಚಿತ್ರರಂಗದ ತಾರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...