Homeಕರ್ನಾಟಕಕನ್ನಡಪರ ಹೋರಾಟಗಾರರನ್ನು ಬೆಂಬಲಿಸಿದ ಕನ್ನಡ ಚಿತ್ರರಂಗ

ಕನ್ನಡಪರ ಹೋರಾಟಗಾರರನ್ನು ಬೆಂಬಲಿಸಿದ ಕನ್ನಡ ಚಿತ್ರರಂಗ

ನಟ ಶಿವ ರಾಜ್‌ಕುಮಾರ್‌, ದರ್ಶನ್‌ ತೂಗುದೀಪ, ದುನಿಯಾ ವಿಜಯ್‌ ಸೇರಿದಂತೆ ಹಲವಾರು ಜನರು ಕನ್ನಡ ಧ್ವಜವನ್ನು ಸುಟ್ಟವರಿಗೆ ತಕ್ಕ ಶಿಕ್ಷೆ ನೀಡುವಂತೆ ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟಿದ್ದನ್ನು ವಿರೋಧಿಸಿ ಮತ್ತು ಎಂಇಎಸ್ ಮುಖಂಡರು ಮುಖಕ್ಕೆ ಮಸಿಬಳಿದವರನ್ನು ಪೊಲೀಸರು ಬಂಧಿಸಿದ್ದನ್ನು ವಿರೋಧಿಸಿ ಕನ್ನಡ ಚಿತ್ರರಂಗ ಸಿಡಿದೆದ್ದಿದೆ. ನಟ ಶಿವ ರಾಜ್‌ಕುಮಾರ್‌, ದರ್ಶನ್‌ ತೂಗುದೀಪ, ದುನಿಯಾ ವಿಜಯ್ ಮತ್ತು ನಿರ್ದೇಶಕ ಪವನ್‌ ಒಡೆಯರ್‌ ಸೇರಿದಂತೆ ಹಲವಾರು ಜನರು ಕನ್ನಡ ಧ್ವಜವನ್ನು ಸುಟ್ಟವರಿಗೆ ತಕ್ಕ ಶಿಕ್ಷೆ ನೀಡುವಂತೆ ಮತ್ತು ಕನ್ನಡ ಪರ ಹೋರಾಟಗಾರರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ವಿಧಾನ ಮಂಡಲ ಅಧಿವೇಶನ ನಡೆಸುವುದನ್ನು ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ರ್‍ಯಾಲಿಯನ್ನು ನಡೆಸಲು ಉದ್ದೇಶಿಸಿತ್ತು. ಆದರೆ ಇದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಎಂಇಎಸ್‌ ಮುಖಂಡರ ಮುಖಕ್ಕೆ ಮಸಿ ಬಳಿದಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಕನ್ನಡ ಪರ ಸಂಘಟನೆಗಳ ಮೂವರನ್ನು ಬಂಧಿಸಿದ್ದರು. ಈ ಮಧ್ಯೆ ಎಂಇಎಸ್‌ ಕಾರ್ಯಕರ್ತರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ತಮ್ಮ ನಾಯಕರ ಮೇಲೆ ಮಸಿ ಬಳಿದಿದ್ದಕ್ಕೆ ಪ್ರತಿಭಟಿಸಿದ್ದರು.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರ ಶುದ್ಧ ಕನ್ನಡ ವ್ಯಾಮೋಹ ಮತ್ತು ಭಾಷೆಯ ಜಾಯಮಾನ

ಈ ಘಟನೆಗಳ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ನಟ ಶಿವ ರಾಜ್‌ಕುಮಾರ್‌, “ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ” ಎಂದು ಮುಖ್ಯಮಂತ್ರಿ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಮತ್ತು ಬೆಳಗಾವಿ ಪೊಲೀಸರಿಗೆ ಆಗ್ರಹಿಸಿದ್ದಾರೆ.

ಇಷ್ಟೇ ಅಲ್ಲದೆ, ಶಿವ ರಾಜ್‌ಕುಮಾರ್‌ ಅವರು ತಮ್ಮ ಟ್ವೀಟ್‌ನಲ್ಲಿ, “ಜೈ ಕನ್ನಡ, ಜೈ ಕರ್ನಾಟಕ” ಎಂದು ಉಲ್ಲೇಖಿಸಿದ್ದು,#ಕನ್ನಡಹೋರಾಟಗಾರರನ್ನಬಿಡುಗಡೆಗೊಳಿಸಿ ಎಂಬ ಹ್ಯಾಶ್‌ಟ್ಯಾಗ್‌ ಅನ್ನು ಬಳಿಸಿದ್ದಾರೆ.

ಇದನ್ನೂ ಓದಿ:ನಟ ಚೇತನ್‌‌ ಎತ್ತಿರುವ ಮೌಲಿಕ ಪ್ರಶ್ನೆಗಳು ಮತ್ತು ಕನ್ನಡ ಚಿತ್ರರಂಗದ ಮೌನ

ನಟ ದರ್ಶನ್ ತೂಗುದೀಪ ಅವರು, “ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು” ಎಂದು ಮುಖ್ಯಮಂತ್ರಿ ಬಸವರಾಜ್‌‌ ಬೊಮ್ಮಾಯಿ ಅವರಿಗೆ ವಿನಂತಿಸಿದ್ದಾರೆ.

ನಟ ದುನಿಯಾ ವಿಜಯ್ ಅವರು, “ನಾಡು,ನುಡಿ,ಭಾಷೆ ನಮ್ಮ ಉಸಿರಾಟದ ಒಂದು ಭಾಗ.ಕನ್ನಡಕ್ಕೆ ಮಾಡಿದ ಅವಮಾನವನ್ನು ಕನ್ನಡಾಂಬೆಯ ಮಕ್ಕಳಾಗಿ ನಾವ್ಯಾರು ಸಹಿಸೆವು. ನಾಡಧ್ವಜ ಸುಟ್ಟ ದ್ರೋಹಿಗಳನ್ನು ಬಂಧಿಸಿ ನಮ್ಮ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕೆಂದು ಸರ್ಕಾರಕ್ಕೆ ನನ್ನ ಕಳಕಳಿಯ ಮನವಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಹಳತು ವಿವೇಕ : ಕನ್ನಡ ಭಾಷೆಗೆ ಅಸಹಜವಾಗಿ ನುಸುಳಿರುವ ಮಹಾಪ್ರಾಣಗಳು

ನಿರ್ದೇಶಕ ಪವನ್‌ ಒಡೆಯರ್‌ ಅವರು, “ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜಯ ಕರ್ನಾಟಕ” ಎಂದು ಟ್ವೀಟ್ ಮಾಡಿದ್ದು #ಕನ್ನಡಹೋರಾಟಗಾರರನ್ನಬಿಡುಗಡೆಗೊಳಿಸಿ ಎಂದು ಹ್ಯಾಶ್‌ ಟ್ಯಾಗ್ ಬಳಸಿಕೊಂಡಿದ್ದಾರೆ.

ಇಷ್ಟೇ ಅಲ್ಲದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ರಾಜಕೀಯ ನಾಯಕರು ಕನ್ನಡ ಪರ ಹೋರಾಟಗಾರರ ಬೆಂಬಲಕ್ಕೆ ನಿಂತಿದ್ದಾರೆ.

ಸಿದ್ದರಾಮಯ್ಯ ಅವರು, “ಕನ್ನಡಿಗರೆಲ್ಲರ ಅಧಿಕೃತ ಬೆಂಬಲದ ಠಸ್ಸೆ ಬಿದ್ದಿರುವ ಕನ್ನಡ ಬಾವುಟ ನಮ್ಮ ಘನತೆ, ಗೌರವ ಮತ್ತು ಅಸ್ಮಿತೆಯ ಸಂಕೇತ. ಕನ್ನಡ ಧ್ವಜಕ್ಕೆ ಮಾಡುವ ಅವಮಾನ ಕನ್ನಡಿಗರಿಗೆ ಮಾತ್ರವಲ್ಲ, ಕರ್ನಾಟಕಕ್ಕೆ ಮಾಡುವ ಅವಮಾನ. ಕನ್ನಡ ಧ್ವಜವನ್ನು ಸುಟ್ಟು ಅವಮಾನಿಸಿದ ಕನ್ನಡ ದ್ರೋಹಿ ದುರುಳರನ್ನು ತಕ್ಷಣ ಬಂಧಿಸಿ, ಸೂಕ್ತ ಕ್ರಮಕೈಗೊಳ್ಳಿ” ಎಂದು ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಕಸಾಪ ನೂತನ ಅಧ್ಯಕ್ಷರ ಶುದ್ಧ ಕನ್ನಡ ವ್ಯಾಮೋಹ ಮತ್ತು ಭಾಷೆಯ ಜಾಯಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...