Homeಕರ್ನಾಟಕಕನ್ನಡಪರ ಹೋರಾಟಗಾರರನ್ನು ಬೆಂಬಲಿಸಿದ ಕನ್ನಡ ಚಿತ್ರರಂಗ

ಕನ್ನಡಪರ ಹೋರಾಟಗಾರರನ್ನು ಬೆಂಬಲಿಸಿದ ಕನ್ನಡ ಚಿತ್ರರಂಗ

ನಟ ಶಿವ ರಾಜ್‌ಕುಮಾರ್‌, ದರ್ಶನ್‌ ತೂಗುದೀಪ, ದುನಿಯಾ ವಿಜಯ್‌ ಸೇರಿದಂತೆ ಹಲವಾರು ಜನರು ಕನ್ನಡ ಧ್ವಜವನ್ನು ಸುಟ್ಟವರಿಗೆ ತಕ್ಕ ಶಿಕ್ಷೆ ನೀಡುವಂತೆ ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟಿದ್ದನ್ನು ವಿರೋಧಿಸಿ ಮತ್ತು ಎಂಇಎಸ್ ಮುಖಂಡರು ಮುಖಕ್ಕೆ ಮಸಿಬಳಿದವರನ್ನು ಪೊಲೀಸರು ಬಂಧಿಸಿದ್ದನ್ನು ವಿರೋಧಿಸಿ ಕನ್ನಡ ಚಿತ್ರರಂಗ ಸಿಡಿದೆದ್ದಿದೆ. ನಟ ಶಿವ ರಾಜ್‌ಕುಮಾರ್‌, ದರ್ಶನ್‌ ತೂಗುದೀಪ, ದುನಿಯಾ ವಿಜಯ್ ಮತ್ತು ನಿರ್ದೇಶಕ ಪವನ್‌ ಒಡೆಯರ್‌ ಸೇರಿದಂತೆ ಹಲವಾರು ಜನರು ಕನ್ನಡ ಧ್ವಜವನ್ನು ಸುಟ್ಟವರಿಗೆ ತಕ್ಕ ಶಿಕ್ಷೆ ನೀಡುವಂತೆ ಮತ್ತು ಕನ್ನಡ ಪರ ಹೋರಾಟಗಾರರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ವಿಧಾನ ಮಂಡಲ ಅಧಿವೇಶನ ನಡೆಸುವುದನ್ನು ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ರ್‍ಯಾಲಿಯನ್ನು ನಡೆಸಲು ಉದ್ದೇಶಿಸಿತ್ತು. ಆದರೆ ಇದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಎಂಇಎಸ್‌ ಮುಖಂಡರ ಮುಖಕ್ಕೆ ಮಸಿ ಬಳಿದಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಕನ್ನಡ ಪರ ಸಂಘಟನೆಗಳ ಮೂವರನ್ನು ಬಂಧಿಸಿದ್ದರು. ಈ ಮಧ್ಯೆ ಎಂಇಎಸ್‌ ಕಾರ್ಯಕರ್ತರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ತಮ್ಮ ನಾಯಕರ ಮೇಲೆ ಮಸಿ ಬಳಿದಿದ್ದಕ್ಕೆ ಪ್ರತಿಭಟಿಸಿದ್ದರು.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರ ಶುದ್ಧ ಕನ್ನಡ ವ್ಯಾಮೋಹ ಮತ್ತು ಭಾಷೆಯ ಜಾಯಮಾನ

ಈ ಘಟನೆಗಳ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ನಟ ಶಿವ ರಾಜ್‌ಕುಮಾರ್‌, “ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ” ಎಂದು ಮುಖ್ಯಮಂತ್ರಿ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಮತ್ತು ಬೆಳಗಾವಿ ಪೊಲೀಸರಿಗೆ ಆಗ್ರಹಿಸಿದ್ದಾರೆ.

ಇಷ್ಟೇ ಅಲ್ಲದೆ, ಶಿವ ರಾಜ್‌ಕುಮಾರ್‌ ಅವರು ತಮ್ಮ ಟ್ವೀಟ್‌ನಲ್ಲಿ, “ಜೈ ಕನ್ನಡ, ಜೈ ಕರ್ನಾಟಕ” ಎಂದು ಉಲ್ಲೇಖಿಸಿದ್ದು,#ಕನ್ನಡಹೋರಾಟಗಾರರನ್ನಬಿಡುಗಡೆಗೊಳಿಸಿ ಎಂಬ ಹ್ಯಾಶ್‌ಟ್ಯಾಗ್‌ ಅನ್ನು ಬಳಿಸಿದ್ದಾರೆ.

ಇದನ್ನೂ ಓದಿ:ನಟ ಚೇತನ್‌‌ ಎತ್ತಿರುವ ಮೌಲಿಕ ಪ್ರಶ್ನೆಗಳು ಮತ್ತು ಕನ್ನಡ ಚಿತ್ರರಂಗದ ಮೌನ

ನಟ ದರ್ಶನ್ ತೂಗುದೀಪ ಅವರು, “ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು” ಎಂದು ಮುಖ್ಯಮಂತ್ರಿ ಬಸವರಾಜ್‌‌ ಬೊಮ್ಮಾಯಿ ಅವರಿಗೆ ವಿನಂತಿಸಿದ್ದಾರೆ.

ನಟ ದುನಿಯಾ ವಿಜಯ್ ಅವರು, “ನಾಡು,ನುಡಿ,ಭಾಷೆ ನಮ್ಮ ಉಸಿರಾಟದ ಒಂದು ಭಾಗ.ಕನ್ನಡಕ್ಕೆ ಮಾಡಿದ ಅವಮಾನವನ್ನು ಕನ್ನಡಾಂಬೆಯ ಮಕ್ಕಳಾಗಿ ನಾವ್ಯಾರು ಸಹಿಸೆವು. ನಾಡಧ್ವಜ ಸುಟ್ಟ ದ್ರೋಹಿಗಳನ್ನು ಬಂಧಿಸಿ ನಮ್ಮ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕೆಂದು ಸರ್ಕಾರಕ್ಕೆ ನನ್ನ ಕಳಕಳಿಯ ಮನವಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಹಳತು ವಿವೇಕ : ಕನ್ನಡ ಭಾಷೆಗೆ ಅಸಹಜವಾಗಿ ನುಸುಳಿರುವ ಮಹಾಪ್ರಾಣಗಳು

ನಿರ್ದೇಶಕ ಪವನ್‌ ಒಡೆಯರ್‌ ಅವರು, “ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜಯ ಕರ್ನಾಟಕ” ಎಂದು ಟ್ವೀಟ್ ಮಾಡಿದ್ದು #ಕನ್ನಡಹೋರಾಟಗಾರರನ್ನಬಿಡುಗಡೆಗೊಳಿಸಿ ಎಂದು ಹ್ಯಾಶ್‌ ಟ್ಯಾಗ್ ಬಳಸಿಕೊಂಡಿದ್ದಾರೆ.

ಇಷ್ಟೇ ಅಲ್ಲದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ರಾಜಕೀಯ ನಾಯಕರು ಕನ್ನಡ ಪರ ಹೋರಾಟಗಾರರ ಬೆಂಬಲಕ್ಕೆ ನಿಂತಿದ್ದಾರೆ.

ಸಿದ್ದರಾಮಯ್ಯ ಅವರು, “ಕನ್ನಡಿಗರೆಲ್ಲರ ಅಧಿಕೃತ ಬೆಂಬಲದ ಠಸ್ಸೆ ಬಿದ್ದಿರುವ ಕನ್ನಡ ಬಾವುಟ ನಮ್ಮ ಘನತೆ, ಗೌರವ ಮತ್ತು ಅಸ್ಮಿತೆಯ ಸಂಕೇತ. ಕನ್ನಡ ಧ್ವಜಕ್ಕೆ ಮಾಡುವ ಅವಮಾನ ಕನ್ನಡಿಗರಿಗೆ ಮಾತ್ರವಲ್ಲ, ಕರ್ನಾಟಕಕ್ಕೆ ಮಾಡುವ ಅವಮಾನ. ಕನ್ನಡ ಧ್ವಜವನ್ನು ಸುಟ್ಟು ಅವಮಾನಿಸಿದ ಕನ್ನಡ ದ್ರೋಹಿ ದುರುಳರನ್ನು ತಕ್ಷಣ ಬಂಧಿಸಿ, ಸೂಕ್ತ ಕ್ರಮಕೈಗೊಳ್ಳಿ” ಎಂದು ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಕಸಾಪ ನೂತನ ಅಧ್ಯಕ್ಷರ ಶುದ್ಧ ಕನ್ನಡ ವ್ಯಾಮೋಹ ಮತ್ತು ಭಾಷೆಯ ಜಾಯಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...