Homeಕರ್ನಾಟಕಕನ್ನಡಪರ ಹೋರಾಟಗಾರರನ್ನು ಬೆಂಬಲಿಸಿದ ಕನ್ನಡ ಚಿತ್ರರಂಗ

ಕನ್ನಡಪರ ಹೋರಾಟಗಾರರನ್ನು ಬೆಂಬಲಿಸಿದ ಕನ್ನಡ ಚಿತ್ರರಂಗ

ನಟ ಶಿವ ರಾಜ್‌ಕುಮಾರ್‌, ದರ್ಶನ್‌ ತೂಗುದೀಪ, ದುನಿಯಾ ವಿಜಯ್‌ ಸೇರಿದಂತೆ ಹಲವಾರು ಜನರು ಕನ್ನಡ ಧ್ವಜವನ್ನು ಸುಟ್ಟವರಿಗೆ ತಕ್ಕ ಶಿಕ್ಷೆ ನೀಡುವಂತೆ ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟಿದ್ದನ್ನು ವಿರೋಧಿಸಿ ಮತ್ತು ಎಂಇಎಸ್ ಮುಖಂಡರು ಮುಖಕ್ಕೆ ಮಸಿಬಳಿದವರನ್ನು ಪೊಲೀಸರು ಬಂಧಿಸಿದ್ದನ್ನು ವಿರೋಧಿಸಿ ಕನ್ನಡ ಚಿತ್ರರಂಗ ಸಿಡಿದೆದ್ದಿದೆ. ನಟ ಶಿವ ರಾಜ್‌ಕುಮಾರ್‌, ದರ್ಶನ್‌ ತೂಗುದೀಪ, ದುನಿಯಾ ವಿಜಯ್ ಮತ್ತು ನಿರ್ದೇಶಕ ಪವನ್‌ ಒಡೆಯರ್‌ ಸೇರಿದಂತೆ ಹಲವಾರು ಜನರು ಕನ್ನಡ ಧ್ವಜವನ್ನು ಸುಟ್ಟವರಿಗೆ ತಕ್ಕ ಶಿಕ್ಷೆ ನೀಡುವಂತೆ ಮತ್ತು ಕನ್ನಡ ಪರ ಹೋರಾಟಗಾರರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ವಿಧಾನ ಮಂಡಲ ಅಧಿವೇಶನ ನಡೆಸುವುದನ್ನು ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ರ್‍ಯಾಲಿಯನ್ನು ನಡೆಸಲು ಉದ್ದೇಶಿಸಿತ್ತು. ಆದರೆ ಇದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಎಂಇಎಸ್‌ ಮುಖಂಡರ ಮುಖಕ್ಕೆ ಮಸಿ ಬಳಿದಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಕನ್ನಡ ಪರ ಸಂಘಟನೆಗಳ ಮೂವರನ್ನು ಬಂಧಿಸಿದ್ದರು. ಈ ಮಧ್ಯೆ ಎಂಇಎಸ್‌ ಕಾರ್ಯಕರ್ತರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ತಮ್ಮ ನಾಯಕರ ಮೇಲೆ ಮಸಿ ಬಳಿದಿದ್ದಕ್ಕೆ ಪ್ರತಿಭಟಿಸಿದ್ದರು.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರ ಶುದ್ಧ ಕನ್ನಡ ವ್ಯಾಮೋಹ ಮತ್ತು ಭಾಷೆಯ ಜಾಯಮಾನ

ಈ ಘಟನೆಗಳ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ನಟ ಶಿವ ರಾಜ್‌ಕುಮಾರ್‌, “ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ” ಎಂದು ಮುಖ್ಯಮಂತ್ರಿ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಮತ್ತು ಬೆಳಗಾವಿ ಪೊಲೀಸರಿಗೆ ಆಗ್ರಹಿಸಿದ್ದಾರೆ.

ಇಷ್ಟೇ ಅಲ್ಲದೆ, ಶಿವ ರಾಜ್‌ಕುಮಾರ್‌ ಅವರು ತಮ್ಮ ಟ್ವೀಟ್‌ನಲ್ಲಿ, “ಜೈ ಕನ್ನಡ, ಜೈ ಕರ್ನಾಟಕ” ಎಂದು ಉಲ್ಲೇಖಿಸಿದ್ದು,#ಕನ್ನಡಹೋರಾಟಗಾರರನ್ನಬಿಡುಗಡೆಗೊಳಿಸಿ ಎಂಬ ಹ್ಯಾಶ್‌ಟ್ಯಾಗ್‌ ಅನ್ನು ಬಳಿಸಿದ್ದಾರೆ.

ಇದನ್ನೂ ಓದಿ:ನಟ ಚೇತನ್‌‌ ಎತ್ತಿರುವ ಮೌಲಿಕ ಪ್ರಶ್ನೆಗಳು ಮತ್ತು ಕನ್ನಡ ಚಿತ್ರರಂಗದ ಮೌನ

ನಟ ದರ್ಶನ್ ತೂಗುದೀಪ ಅವರು, “ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು” ಎಂದು ಮುಖ್ಯಮಂತ್ರಿ ಬಸವರಾಜ್‌‌ ಬೊಮ್ಮಾಯಿ ಅವರಿಗೆ ವಿನಂತಿಸಿದ್ದಾರೆ.

ನಟ ದುನಿಯಾ ವಿಜಯ್ ಅವರು, “ನಾಡು,ನುಡಿ,ಭಾಷೆ ನಮ್ಮ ಉಸಿರಾಟದ ಒಂದು ಭಾಗ.ಕನ್ನಡಕ್ಕೆ ಮಾಡಿದ ಅವಮಾನವನ್ನು ಕನ್ನಡಾಂಬೆಯ ಮಕ್ಕಳಾಗಿ ನಾವ್ಯಾರು ಸಹಿಸೆವು. ನಾಡಧ್ವಜ ಸುಟ್ಟ ದ್ರೋಹಿಗಳನ್ನು ಬಂಧಿಸಿ ನಮ್ಮ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕೆಂದು ಸರ್ಕಾರಕ್ಕೆ ನನ್ನ ಕಳಕಳಿಯ ಮನವಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಹಳತು ವಿವೇಕ : ಕನ್ನಡ ಭಾಷೆಗೆ ಅಸಹಜವಾಗಿ ನುಸುಳಿರುವ ಮಹಾಪ್ರಾಣಗಳು

ನಿರ್ದೇಶಕ ಪವನ್‌ ಒಡೆಯರ್‌ ಅವರು, “ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜಯ ಕರ್ನಾಟಕ” ಎಂದು ಟ್ವೀಟ್ ಮಾಡಿದ್ದು #ಕನ್ನಡಹೋರಾಟಗಾರರನ್ನಬಿಡುಗಡೆಗೊಳಿಸಿ ಎಂದು ಹ್ಯಾಶ್‌ ಟ್ಯಾಗ್ ಬಳಸಿಕೊಂಡಿದ್ದಾರೆ.

ಇಷ್ಟೇ ಅಲ್ಲದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ರಾಜಕೀಯ ನಾಯಕರು ಕನ್ನಡ ಪರ ಹೋರಾಟಗಾರರ ಬೆಂಬಲಕ್ಕೆ ನಿಂತಿದ್ದಾರೆ.

ಸಿದ್ದರಾಮಯ್ಯ ಅವರು, “ಕನ್ನಡಿಗರೆಲ್ಲರ ಅಧಿಕೃತ ಬೆಂಬಲದ ಠಸ್ಸೆ ಬಿದ್ದಿರುವ ಕನ್ನಡ ಬಾವುಟ ನಮ್ಮ ಘನತೆ, ಗೌರವ ಮತ್ತು ಅಸ್ಮಿತೆಯ ಸಂಕೇತ. ಕನ್ನಡ ಧ್ವಜಕ್ಕೆ ಮಾಡುವ ಅವಮಾನ ಕನ್ನಡಿಗರಿಗೆ ಮಾತ್ರವಲ್ಲ, ಕರ್ನಾಟಕಕ್ಕೆ ಮಾಡುವ ಅವಮಾನ. ಕನ್ನಡ ಧ್ವಜವನ್ನು ಸುಟ್ಟು ಅವಮಾನಿಸಿದ ಕನ್ನಡ ದ್ರೋಹಿ ದುರುಳರನ್ನು ತಕ್ಷಣ ಬಂಧಿಸಿ, ಸೂಕ್ತ ಕ್ರಮಕೈಗೊಳ್ಳಿ” ಎಂದು ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಕಸಾಪ ನೂತನ ಅಧ್ಯಕ್ಷರ ಶುದ್ಧ ಕನ್ನಡ ವ್ಯಾಮೋಹ ಮತ್ತು ಭಾಷೆಯ ಜಾಯಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...