Homeಕರ್ನಾಟಕಮದ್ರಸಾಗಳಲ್ಲಿ ಧಾರ್ಮಿಕ ಶಿಕ್ಷಣದ ಜೊತೆ ಕನ್ನಡ ಸೇರಿ ಇತರ ವಿಷಯಗಳ ಬೋಧನೆ ಕಡ್ಡಾಯ: ಕೃಷ್ಣ ಭೈರೇಗೌಡ

ಮದ್ರಸಾಗಳಲ್ಲಿ ಧಾರ್ಮಿಕ ಶಿಕ್ಷಣದ ಜೊತೆ ಕನ್ನಡ ಸೇರಿ ಇತರ ವಿಷಯಗಳ ಬೋಧನೆ ಕಡ್ಡಾಯ: ಕೃಷ್ಣ ಭೈರೇಗೌಡ

- Advertisement -
- Advertisement -

ಮದ್ರಸಾ ಶಿಕ್ಷಣಕ್ಕೆ ಸಂಬಂಧಿಸಿ ರಾಜ್ಯಸರಕಾರ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು, ವಕ್ಫ್ ಅಧೀನದಲ್ಲಿನ ಮದ್ರಸಾ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ, ಗಣಿತ, ವಿಜ್ಞಾನ ಹಾಗೂ ಸಮಾಜ ಶಾಸ್ತ್ರ ಬೋಧನೆ ಕಡ್ಡಾಯಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಧಾರ್ಮಿಕ ಶಿಕ್ಷಣದ ಜೊತೆಗೆ ಇತರ ವಿಷಗಳನ್ನು ಕೂಡ ಕಲಿಸಲು ಸೂಕ್ತ ವ್ಯವಸ್ಥೆಗೆ ಮುಂದಾಗಿದೆ.

ಬುಧವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಬಿ.ಎಂ.ಫಾರೂಖ್ ಪರವಾಗಿ ಅಬ್ದುಲ್‌ ಝಬ್ಬಾರ್ ಕೇಳಿದ ಪ್ರಶ್ನೆಗೆ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಪರವಾಗಿ ಕೃಷ್ಣ ಭೈರೇಗೌಡ ಅವರು ಉತ್ತರಿಸಿದ್ದು, ರಾಜ್ಯದಲ್ಲಿ ವಕ್ಫ್ ಸಂಸ್ಥೆಗಳಿಂದ ನಡೆಸಲಾಗುತ್ತಿರುವ ಮದ್ರಸಾಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಪ್ರಯೋಗಿಕವಾಗಿ 2 ವರ್ಷ ಕನ್ನಡ, ಇಂಗ್ಲಿಷ್, ವಿಜ್ಞಾನ, ಗಣಿತ ಹಾಗೂ ಇತರೆ ವಿಷಯಗಳ ಬಗ್ಗೆ ಬೋಧಿಸಲಾಗುವುದು. ಇದಲ್ಲದೆ ಹತ್ತನೇ ತರಗತಿ, ಪಿಯುಸಿ ಮತ್ತು ಪದವಿಯನ್ನು ರಾಜ್ಯ, ರಾಷ್ಟ್ರೀಯ ಮುಕ್ತ ಶಾಲೆಗಳ ಮೂಲಕ ನೀಡಲಾಗುವುದು ಎಂದು ಹೇಳಿದ್ದಾರೆ.

ಮದ್ರಸಾ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಧಾರ್ಮಿಕ ಬೋಧನೆ ಮಾತ್ರವಲ್ಲದೆ ಸಾಮಾಜಿಕ ಬದುಕು ಕಟ್ಟಿಕೊಳ್ಳುವ ಇತರೆ ವಿಷಯಗಳ ಕುರಿತು ಬೋಧನೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಸರಕಾರವೂ ಹಲವು ಕಾರ್ಯಕ್ರಮಗಳನ್ನು ರೂಪಿಸಿಕೊಂಡಿದೆ. ಮದ್ರಸಾಗಳಲ್ಲಿ ಧಾರ್ಮಿಕ ಬೋಧನೆಯ ಜೊತೆಗೆ ಬೇರೆ ಶಿಕ್ಷಣ ಕೊಡದಿದ್ದಲ್ಲಿ ಸಮಾಜದಲ್ಲಿನ ಅವಕಾಶಗಳಿಂದ ವಿದ್ಯಾರ್ಥಿಗಳು ವಂಚಿತರಾಗಲಿದ್ದಾರೆ. ಹಾಗಾಗಿ ಬೇರೆ ವಿಷಯಗಳ ಪಾಠ ಮದ್ರಸಾಗಳಲ್ಲಿ ದೊರೆಯಬೇಕು ಎನ್ನುವ ಚರ್ಚೆ ಬಹಳ ವರ್ಷಗಳಿಂದ ಇತ್ತು. ನಮ್ಮ ಸರಕಾರ ಬಂದ ನಂತರ ಈ ಬಗ್ಗೆ ಚರ್ಚಿಸಿದ್ದು, ತಕ್ಷಣವೇ ಈ ವರ್ಷದಿಂದಲೇ ಮದ್ರಸಾಗಳಲ್ಲಿ ಬೇರೆ ವಿಷಯಗಳ ಪಠ್ಯ ಬೋಧನೆ ಮಾಡುವ ಯೋಜನೆ ಅನುಷ್ಠಾನ ಮಾಡಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದೇವೆ. ಅದರಂತೆ 100 ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭ ಮಾಡುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ಮದರಸಾ ಶಿಕ್ಷಣವನ್ನು ಆಧುನೀಕರಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ರಾಜ್ಯಾದ್ಯಂತ ಮದರಸಾ ಸಂಸ್ಥೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್‌ನ್ನು ವಿದ್ಯಾರ್ಥಿಗಳಿಗೆ ಕಲಿಸಲಿದೆ ಎಂದು ಈ ಮೊದಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ವಕ್ಫ್‌ ಸಚಿವ ಝಮೀರ್‌ ಅಹ್ಮದ್‌ ಖಾನ್‌ ಅವರು ಹೇಳಿದ್ದರು. ಪ್ರಾಥಮಿಕವಾಗಿ ಅರೇಬಿಕ್ ಮತ್ತು ಉರ್ದು ಬೋಧನಾ ಮಾಧ್ಯಮವಾಗಿರುವ ಮದರಸಾಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಕಲಿಸಲು ಸೂಕ್ತ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಇಲಾಖೆಗೆ ಸೂಚಿಸಲಾಗಿದೆ. ಮತ್ತು ವಕ್ಫ್ ಮಂಡಳಿಯಲ್ಲಿ 1,265 ಮದರಸಾಗಳು ನೋಂದಣಿಯಾಗಿವೆ ಎಂದು ಹೇಳಿದ್ದರು.

ಹಲವು ಮುಸ್ಲಿಂ ವಿದ್ವಾಂಸರು ಮದ್ರಸಾ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಭೋದನೆ ಜೊತೆಗೆ ಸಾಮಾಜಿಕ ವಿಷಗಳ ಬೋಧನೆಗೆ ಈ ಮೊದಲು ಆಗ್ರಹಿಸಿದ್ದರು. ಇದು ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವ ಜೊತೆಗೆ ಉದ್ಯೋಗಾವಕಾಶಗಳನ್ನು ಕೂಡ ಹೆಚ್ಚಿಸಲಿದೆ ಎಂದು ಹೇಳಲಾಗಿದೆ.

 

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...