Homeಕರ್ನಾಟಕ350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಕನ್ನಡದ ಹಿರಿಯ ನಟಿ ಬಿ. ಜಯಾ ನಿಧನ

350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಕನ್ನಡದ ಹಿರಿಯ ನಟಿ ಬಿ. ಜಯಾ ನಿಧನ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟಿ ಬಿ.ಜಯಾ, ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಗುರುವಾರ (ಜೂ.3) ಮಧ್ಯಾಹ್ನ ತಮ್ಮ ಕೊನೆಯುಸಿರೆಳೆದಿದ್ದಾರೆ. ಅವರ ಅಗಲಿಕೆಗೆ ಕನ್ನಡ ಚಿತ್ರರಂಗ, ಅಭಿಮಾನಿಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆ ಪಾರ್ಶ್ವವಾಯುವಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಖ್ಯಾತ ನಟಿ ಜಯಾ ಅವರಿಗೆ 77 ವರ್ಷ ವಯಸ್ಸಾಗಿತ್ತು.

ಚಿತ್ರರಂಗಕ್ಕೆ ಬಾಲನಟಿಯಾಗಿ 1958ರಲ್ಲಿ ಭಕ್ತ ಪ್ರಹ್ಲಾದ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ಜಯಾ ಅವರು, ಸುಮಾರು 350ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸುಮಾರು 6 ದಶಕಗಳಿಗೂ ಅಧಿಕ ಕಾಲ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದ ಜಯಾ ಅವರು ಮುಖ್ಯವಾಗಿ ಕನ್ನಡ ಚಿತ್ರರಂಗದ ಮೊದಲ ತಲೆಮಾರಿನ ಹಾಸ್ಯನಟಿ ಎಂದು ಜನಪ್ರಿಯರಾಗಿದ್ದರು.

ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ರಂಗಭೂಮಿಯಿಂದ ಸಿನಿಮಾ ರಂಗಕ್ಕೆ ಬಂದ ಜಯಾ ಅವರು, ಹಾಸ್ಯ ಕಲಾವಿದೆಯಾಗಿ, ಪೋಷಕ ನಟಿಯಾಗಿ ಹಿರಿತೆರೆಯ ಜೊತೆಗೆ ಕಿರುತೆರೆಯಲ್ಲೂ ಗುರುತಿಸಿಕೊಂಡಿದ್ದರು. ಮೂರು ತಲೆಮಾರಿನ ನಟ, ನಟಿಯರೊಂದಿಗೆ ಅಭಿನಯಿಸಿರುವ ಹೆಗ್ಗಳಿಕೆ ಅವರದು.

ವರನಟ ರಾಜ್​ಕುಮಾರ್​, ಕಲ್ಯಾಣ್​ ಕುಮಾರ್​​, ಉದಯ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್, ನರಸಿಂಹರಾಜು, ದ್ವಾರಕೀಶ್ ಮುಂತಾದವರೊಂದಿಗೆ ಕೆಲಸ ಮಾಡಿರುವ ಇವರು, ಇಂದಿನ ನಟರ ಚಿತ್ರಗಳಲ್ಲೂ ಕೆಲಸ ಮಾಡಿದ್ದರು.

ನಟ ಅಂಬರೀಶ್ ನಟನೆಯ ‘ಗೌಡ್ರು’ ಚಿತ್ರದಲ್ಲಿ ಜಯಾ ಅವರ ಅಭಿನಯಕ್ಕಾಗಿ 2004-5ನೇ ಸಾಲಿನ ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿಗೆ ಪಾತ್ರವಾಗಿದ್ದರು. ಚಿತ್ರಪ್ರೇಮಿಗಳ ಸಂಘದಿಂದ 1964, 65, 71, 75 ರಲ್ಲಿ  ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದರು.

’ಗಂಧದ ಗುಡಿ’, ‘ಶುಭಮಂಗಳ’, ‘ದಾರಿ ತಪ್ಪಿದ ಮಗ’, ‘ಪ್ರೇಮದ ಕಾಣಿಕೆ’ ವೀರ ಕನ್ನಡಿಗ, ‘ದೈವಲೀಲೆ’, ‘ವಿಧಿ ವಿಲಾಸ’, ‘ಬೆಳ್ಳಿಮೋಡ’, ‘ಚಿನ್ನದ ಗೊಂಬೆ’, ‘ಪ್ರತಿಜ್ಞೆ’, ‘ನ್ಯಾಯವೇ ದೇವರು’, ‘ಕುಲಗೌರವ’, ‘ಪೂರ್ಣಿಮಾ’, ‘ಮಣ್ಣಿನ ಮಗ’, ‘ಶ್ರೀಕೃಷ್ಣ ದೇವರಾಯ’, ‘ದೇವರು ಕೊಟ್ಟ ತಂಗಿ’  ಮುಂತಾದ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಿ.ಜಯಾ ನಟಿಸಿದ್ದರು.


ಇದನ್ನೂ ಓದಿ: ಹೊಸ ಗೌಪ್ಯತಾ ನೀತಿಗೆ ಕುತಂತ್ರದಿಂದ ಒಪ್ಪಿಗೆ ಪಡೆಯುತ್ತಿದೆ: ಕೇಂದ್ರದಿಂದ ವಾಟ್ಸಪ್‌‌ ವಿರುದ್ದ ಹೊಸ ಅಫಿಡವಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...