Homeಕರ್ನಾಟಕ350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಕನ್ನಡದ ಹಿರಿಯ ನಟಿ ಬಿ. ಜಯಾ ನಿಧನ

350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಕನ್ನಡದ ಹಿರಿಯ ನಟಿ ಬಿ. ಜಯಾ ನಿಧನ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟಿ ಬಿ.ಜಯಾ, ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಗುರುವಾರ (ಜೂ.3) ಮಧ್ಯಾಹ್ನ ತಮ್ಮ ಕೊನೆಯುಸಿರೆಳೆದಿದ್ದಾರೆ. ಅವರ ಅಗಲಿಕೆಗೆ ಕನ್ನಡ ಚಿತ್ರರಂಗ, ಅಭಿಮಾನಿಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆ ಪಾರ್ಶ್ವವಾಯುವಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಖ್ಯಾತ ನಟಿ ಜಯಾ ಅವರಿಗೆ 77 ವರ್ಷ ವಯಸ್ಸಾಗಿತ್ತು.

ಚಿತ್ರರಂಗಕ್ಕೆ ಬಾಲನಟಿಯಾಗಿ 1958ರಲ್ಲಿ ಭಕ್ತ ಪ್ರಹ್ಲಾದ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ಜಯಾ ಅವರು, ಸುಮಾರು 350ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸುಮಾರು 6 ದಶಕಗಳಿಗೂ ಅಧಿಕ ಕಾಲ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದ ಜಯಾ ಅವರು ಮುಖ್ಯವಾಗಿ ಕನ್ನಡ ಚಿತ್ರರಂಗದ ಮೊದಲ ತಲೆಮಾರಿನ ಹಾಸ್ಯನಟಿ ಎಂದು ಜನಪ್ರಿಯರಾಗಿದ್ದರು.

ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ರಂಗಭೂಮಿಯಿಂದ ಸಿನಿಮಾ ರಂಗಕ್ಕೆ ಬಂದ ಜಯಾ ಅವರು, ಹಾಸ್ಯ ಕಲಾವಿದೆಯಾಗಿ, ಪೋಷಕ ನಟಿಯಾಗಿ ಹಿರಿತೆರೆಯ ಜೊತೆಗೆ ಕಿರುತೆರೆಯಲ್ಲೂ ಗುರುತಿಸಿಕೊಂಡಿದ್ದರು. ಮೂರು ತಲೆಮಾರಿನ ನಟ, ನಟಿಯರೊಂದಿಗೆ ಅಭಿನಯಿಸಿರುವ ಹೆಗ್ಗಳಿಕೆ ಅವರದು.

ವರನಟ ರಾಜ್​ಕುಮಾರ್​, ಕಲ್ಯಾಣ್​ ಕುಮಾರ್​​, ಉದಯ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್, ನರಸಿಂಹರಾಜು, ದ್ವಾರಕೀಶ್ ಮುಂತಾದವರೊಂದಿಗೆ ಕೆಲಸ ಮಾಡಿರುವ ಇವರು, ಇಂದಿನ ನಟರ ಚಿತ್ರಗಳಲ್ಲೂ ಕೆಲಸ ಮಾಡಿದ್ದರು.

ನಟ ಅಂಬರೀಶ್ ನಟನೆಯ ‘ಗೌಡ್ರು’ ಚಿತ್ರದಲ್ಲಿ ಜಯಾ ಅವರ ಅಭಿನಯಕ್ಕಾಗಿ 2004-5ನೇ ಸಾಲಿನ ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿಗೆ ಪಾತ್ರವಾಗಿದ್ದರು. ಚಿತ್ರಪ್ರೇಮಿಗಳ ಸಂಘದಿಂದ 1964, 65, 71, 75 ರಲ್ಲಿ  ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದರು.

’ಗಂಧದ ಗುಡಿ’, ‘ಶುಭಮಂಗಳ’, ‘ದಾರಿ ತಪ್ಪಿದ ಮಗ’, ‘ಪ್ರೇಮದ ಕಾಣಿಕೆ’ ವೀರ ಕನ್ನಡಿಗ, ‘ದೈವಲೀಲೆ’, ‘ವಿಧಿ ವಿಲಾಸ’, ‘ಬೆಳ್ಳಿಮೋಡ’, ‘ಚಿನ್ನದ ಗೊಂಬೆ’, ‘ಪ್ರತಿಜ್ಞೆ’, ‘ನ್ಯಾಯವೇ ದೇವರು’, ‘ಕುಲಗೌರವ’, ‘ಪೂರ್ಣಿಮಾ’, ‘ಮಣ್ಣಿನ ಮಗ’, ‘ಶ್ರೀಕೃಷ್ಣ ದೇವರಾಯ’, ‘ದೇವರು ಕೊಟ್ಟ ತಂಗಿ’  ಮುಂತಾದ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಿ.ಜಯಾ ನಟಿಸಿದ್ದರು.


ಇದನ್ನೂ ಓದಿ: ಹೊಸ ಗೌಪ್ಯತಾ ನೀತಿಗೆ ಕುತಂತ್ರದಿಂದ ಒಪ್ಪಿಗೆ ಪಡೆಯುತ್ತಿದೆ: ಕೇಂದ್ರದಿಂದ ವಾಟ್ಸಪ್‌‌ ವಿರುದ್ದ ಹೊಸ ಅಫಿಡವಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...