Homeಕರ್ನಾಟಕಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿರುವ ’ಡೊಳ್ಳು’ ಸಿನಿಮಾ ಟೀಸರ್‌ ಬಿಡುಗಡೆ, ಜುಲೈನಲ್ಲಿ ತೆರೆಗೆ

ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿರುವ ’ಡೊಳ್ಳು’ ಸಿನಿಮಾ ಟೀಸರ್‌ ಬಿಡುಗಡೆ, ಜುಲೈನಲ್ಲಿ ತೆರೆಗೆ

- Advertisement -
- Advertisement -

ಇನೋವೇಟಿವ್‌ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಕನ್ನಡ ಚಿತ್ರವೆಂದು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, ರಾಜಸ್ಥಾನ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಸ್ಪೆಷಲ್ ಜ್ಯೂರಿ ಪ್ರಶಸ್ತಿ ಮತ್ತು ಅತ್ಯುತ್ತಮ ಪ್ರಾದೇಶಿಕ ಚಿತ್ರವೆಂಬ ಎರಡು ಪ್ರಮುಖ ಪ್ರಶಸ್ತಿ ಗೆದ್ದಿದ್ದ ಕನ್ನಡದ ’ಡೊಳ್ಳು’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ಚಿತ್ರ ಜುಲೈನಲ್ಲಿ ತೆರೆಗೆ ಬರಲಿದೆ.

ಗೋವಾದಲ್ಲಿ ನಡೆದ 52ನೇ ಭಾರತ ಅಂತಾರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ ಕನ್ನಡದ ‘ಡೊಳ್ಳು’ ಸಿನಿಮಾಕ್ಕೆ ಪನೊರಮಾ ವಿಭಾಗದಲ್ಲಿ ಅತ್ಯುತ್ತಮ ಸಿನಿಮಾ ಪ್ರಶಸ್ತಿ ದೊರೆತಿದೆ. ಭಾರತೀಯ ಅಂತಾರಾಷ್ಟ್ರೀಯ ಸಿನಿಮೋತ್ಸವ, ಢಾಕಾ ಅಂತರಾಷ್ಟ್ರೀಯ ಸಿನಿಮೋತ್ಸವ, ನೇಪಾಳ ಅಂತಾರಾಷ್ಟ್ರೀಯ ಸಿನಿಮೋತ್ಸವ, ಚೆನ್ನೈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಹಲವು ಕಡೆ ಪ್ರದರ್ಶನಗೊಂಡಿದೆ.

ಗ್ರಾಮೀಣ ಭಾಗದಲ್ಲಿ ಹಾಸುಹೊಕ್ಕಾಗಿರುವ ಜನಪದ ಕಲೆ ಡೊಳ್ಳಿನ ಮಹತ್ವ ಸಾರುವ ಕಥಾಹೂರಣ ಹೊಂದಿರುವ ಡೊಳ್ಳು ಚಿತ್ರವನ್ನು ನಿರ್ದೇಶಕ ಪವನ್ ಒಡೆಯರ್ ಅವರ ನಿರ್ಮಾಣ ಸಂಸ್ಥೆ ’ಒಡೆಯರ್ ಮೂವಿಸ್’ ನಿರ್ಮಾಣ ಮಾಡಿದೆ. ಡೊಳ್ಳು ಚಿತ್ರಕ್ಕೆ ’ಮಹಾನ್ ಹುತಾತ್ಮ’ ಕಿರುಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಸಾಗರ್ ಪುರಾಣಿಕ್ ನಿರ್ದೇಶನವಿದೆ.

ಕೈಲಾಸದಲ್ಲಿ ಕುಳಿತಿರುವ ಶಿವಪ್ಪನನ್ನು ಒಲಿಸಿಕೊಳ್ಳುವ ಭಕ್ತಿ ಮಾರ್ಗ ಕೂಡ ಡೊಳ್ಳು ಅಂತಾ ನಂಬಿರುವ ಹಳ್ಳಿ ಜನರು, ಡೊಳ್ಳು ಕಲೆಯನ್ನು ಜೀವಿಸುವ ಯುವಕನ ಪ್ರೀತಿ, ಡೊಳ್ಳು ಕುಣಿತ, ಡೊಳ್ಳಿನ ಮಹತ್ವ ಪ್ರಾಮುಖ್ಯತೆಯನ್ನು ಈ ಸಿನಿಮಾದಲ್ಲಿ ಕಾಣಬಹುದು ಎನ್ನುತ್ತದೆ ಚಿತ್ರತಂಡ.

ಇದನ್ನೂ ಓದಿ: ‘ಚಾರ್ಲಿ 777’ ಭಾವುಕತೆಯಾಚೆಗೆ ತೆರೆದುಕೊಳ್ಳದ ಸರಳರೇಖೆಯ ಸಿನಿಮಾ

ಈ ಸಿನಿಮಾ ಈಗಾಗಲೇ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಅಲ್ಲದೇ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿಯೂ ಪ್ರದರ್ಶನಗೊಂಡಿದೆ. ಗೋವಿಂದಾಯ ನಮಃ, ಗೂಗ್ಲಿ, ರಣವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್, ತಮ್ಮ ’ಒಡೆಯರ್ ಮೂವಿಸ್’ ನಿರ್ಮಾಣ ಸಂಸ್ಥೆಯಡಿ ಚಿತ್ರ ನಿರ್ಮಾಣ ಮಾಡಿದ್ದಾರೆ.

ಚಿತ್ರದಲ್ಲಿ ಕಿರುತೆರೆ ನಟ ಕಾರ್ತಿಕ್ ಮಹೇಶ್ ನಾಯಕನಾಗಿ, ನಿಧಿ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಬಾಬು ಹಿರಣ್ಣಯ್ಯ, ಚಂದ್ರ ಮಯೂರ್ ಮತ್ತು ಶರಣ್ ಸುರೇಶ್ ಪ್ರಮುಖ ತಾರಂಗಣ ಚಿತ್ರಕ್ಕಿದೆ. ಶ್ರೀನಿಧಿ ಡಿಎಸ್ ಚಿತ್ರಕಥೆ ಬರೆದಿದ್ದು, ಅನಂತ್ ಕಾಮತ್ ಸಂಗೀತ ಸಂಯೋಜಿಸಿದ್ದಾರೆ.

 


ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸವಿಲ್ಲ: ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...