Homeಮುಖಪುಟಸೋನು ನಿಗಮ್‌ಗೆ ಅಸಹಕಾರ ತೋರಲು ಕನ್ನಡ ಚಿತ್ರರಂಗ ನಿರ್ಧಾರ: ಪೊಲೀಸರಿಂದ ನೋಟಿಸ್

ಸೋನು ನಿಗಮ್‌ಗೆ ಅಸಹಕಾರ ತೋರಲು ಕನ್ನಡ ಚಿತ್ರರಂಗ ನಿರ್ಧಾರ: ಪೊಲೀಸರಿಂದ ನೋಟಿಸ್

- Advertisement -
- Advertisement -

ಬೆಂಗಳೂರಿನ ನಡೆದ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡಿಗಾಗಿ ಒತ್ತಾಯ ಮಾಡಿದ್ದನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ತಳುಕು ಹಾಕಿದ ಗಾಯಕ ಸೋನು ನಿಗಮ್‌ಗೆ ಅಸಹಕಾರ ತೋರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ನಿರ್ಧರಿಸಿದೆ.

ಸೋನು ನಿಗಮ್‌ ಅವರನ್ನು ಕನ್ನಡ ಚಿತ್ರಗಳಲ್ಲಿ ಹಾಡಿಸುವುದಕ್ಕೆ ನಿರ್ಬಂಧ ವಿಧಿಸಬೇಕು. ಅವರು ಕರ್ನಾಟಕದಲ್ಲಿ ಯಾವುದೇ ಕಾರ್ಯಕ್ರಮ ನೀಡದಂತೆ ತಡೆಯಬೇಕು ಮತ್ತು ಅವರ ವಿರುದ್ದ ಪೊಲೀಸರು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸಿತ್ತು.

ಕನ್ನಡ ಜನತೆಯಿಂದಲೂ ಸೋನು ನಿಗಮ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ಇಂದು ಸಭೆ ನಡೆಸಿದ ಕೆಎಫ್‌ಸಿಸಿ ಪದಾಧಿಕಾರಿಗಳು, ಸೋನು ನಿಗಮ್‌ಗೆ ಕನ್ನಡ ಚಿತ್ರಗಳಲ್ಲಿ ಹಾಡುವುದಕ್ಕೆ ಮತ್ತು ಕರ್ನಾಟಕದಲ್ಲಿ ಕಾರ್ಯಕ್ರಮ ನೀಡುವುದಕ್ಕೆ ಒಂದು ರೀತಿಯ ನಿರ್ಬಂಧ ವಿಧಿಸಿದ್ದಾರೆ.

“ಯಾರೂ ಸೋನು ನಿಗಮ್‌ ಅವರನ್ನು ಹಾಡಿಸಲು ಕರೆಯಬಾರದು, ಮ್ಯೂಸಿಕಲ್‌ ನೈಟ್‌ ಸೇರಿದಂತೆ ಅವರ ಜೊತೆಗೆ ಯಾವುದೇ ಚಟುವಟಿಕೆ ಮಾಡಕೂಡದು” ಎಂದು ಕೆಎಫ್‌ಸಿಸಿ ಅಧ್ಯಕ್ಷ ನರಸಿಂಹಲು ಎಂ. ತಿಳಿಸಿದ್ದಾರೆ.

ಸಂಗೀತ ನಿರ್ದೇಶಕರು, ನಿರ್ಮಾಪಕರು, ನಿರ್ದೇಶಕರ ಸಂಘ ಹೀಗೆ ಕೆಎಫ್‌ಸಿಸಿಯ ಅಂಗ ಸಂಸ್ಥೆಗಳ ಅಧ್ಯಕ್ಷರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನವನ್ನು ನರಸಿಂಹಲು ಪ್ರಕಟಿಸಿದ್ದಾರೆ.

“ಸೋನು ನಿಗಮ್‌ ವಿಡಿಯೋದಲ್ಲಿ ಕ್ಷಮೆ ಕೇಳಬಹುದು ಎಂದುಕೊಂಡಿದ್ದೆವು. ಆದರೆ ಅವರು ಕ್ಷಮಾಪಣೆ ಕೇಳಲಿಲ್ಲ. ಹಾಗಾಗಿ, ಕನ್ನಡ ಪರ ಸಂಘಟನೆಗಳು, ಸಂಗೀತ ನಿರ್ದೇಶಕರು, ನಿರ್ಮಾಪಕರು, ನಿರ್ದೇಶಕರ ಸಂಘ, ಹೀಗೆ ಕೆಫ್‌ಸಿಸಿಯ ಅಂಗ ಸಂಸ್ಥೆಗಳ ಅಧ್ಯಕ್ಷರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ಕ್ಷಣದಿಂದಲೇ ಅಸಹಕಾರ ತೋರಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದು ನರಸಿಂಹಲು ತಿಳಿಸಿದ್ದಾರೆ.

“ಚಿತ್ರರಂಗದಲ್ಲಿ ಕಲಾವಿದರನ್ನು ನಿಷೇಧ ಮಾಡುವಂತಿಲ್ಲ. ಆದರೆ, ಸ್ವಯಂ ಪ್ರೇರಣೆಯಿಂದ ನಿರ್ಮಾಪಕರು, ಸಂಗೀತ ನಿರ್ದೇಶಕರು ಗಾಯಕರನ್ನು ದೂರ ಇಡಬಹುದು. ಕಲಾವಿದರಾಗಲಿ, ಗಾಯಕರನ್ನಾಗಲಿ ಅಧಿಕೃತವಾಗಿ ನಿಷೇಧ ಮಾಡುವ ಅಧಿಕಾರ ವಾಣಿಜ್ಯ ಮಂಡಳಿಗೆ ಇರುವುದಿಲ್ಲ. ಗಾಯಕನನ್ನು ಕೆಲವು ವರ್ಷ ದೂರವಿಟ್ಟು, ಯಾರೂ ಅವಕಾಶ ಕೊಡದೆ ಬುದ್ಧಿ ಕಳುಹಿಸಬಹುದು” ಎಂದು ನರಸಿಂಹಲು ಹೇಳಿದ್ದಾರೆ.

ಪೊಲೀಸರಿಂದ ನೋಟಿಸ್

ಸೋನು ನಿಗಮ್ ಹೇಳಿಕೆಗೆ ಸಂಬಂಧಿಸಿದಂತೆ ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆ ಪೊಲೀಸರು ಸೋನು ನಿಗಮ್‌ಗೆ ರಿಜಿಸ್ಟರ್ ಪೋಸ್ಟ್ ಮೂಲಕ ನೋಟಿಸ್ ಜಾರಿ ಮಾಡಿದ್ದಾರೆ. ಒಂದು ವಾರದೊಳಗೆ ವಿವರಣೆ ನೀಡಲು ಸೂಚಿಸಲಾಗಿದೆ. ಕಾರ್ಯಕ್ರಮದ ಆಯೋಜಕರಿಗೂ ನೋಟಿಸ್ ನೀಡಲು ಸಿದ್ಧತೆ ಮಾಡಲಾಗಿದೆ ಎಂದು ವರದಿಯಾಗಿದೆ.

ಮತ್ತೊಂದು ದೂರು

ಕರವೇ ರಾಜ್ಯ ಕಾರ್ಯದರ್ಶಿ ಮಂಜುನಾಥ್ ಗೌಡ ಅವರು ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಸೋನು ನಿಗಮ್ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಸೋನು ನಿಗಮ್ ಬಂಧನಕ್ಕೆ ಆಗ್ರಹ

ಸೋನು ನಿಗಮ್ ಕನ್ನಡ, ಕನ್ನಡಿಗರನ್ನು ಅವಮಾನಿಸಿದ್ದಾರೆ. ಅವರನ್ನು ಬಂಧಿಸಿ ಜೈಲಿಗಟ್ಟಬೇಕು. ಈ ಮೂಲಕ ಕನ್ನಡಿಗರ ಶಕ್ತಿ ಅವರಿಗೆ ಗೊತ್ತಾಗಬೇಕು. ಇನ್ನುಮುಂದೆ ಕನ್ನಡಗರನ್ನು ಅವಮಾನಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ಹೇಳಿದ್ದಾರೆ.

ಸೋನು ನಿಗಮ್ ಕರ್ನಾಟಕದಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...