Homeಮುಖಪುಟಸೋನು ನಿಗಮ್‌ಗೆ ಅಸಹಕಾರ ತೋರಲು ಕನ್ನಡ ಚಿತ್ರರಂಗ ನಿರ್ಧಾರ: ಪೊಲೀಸರಿಂದ ನೋಟಿಸ್

ಸೋನು ನಿಗಮ್‌ಗೆ ಅಸಹಕಾರ ತೋರಲು ಕನ್ನಡ ಚಿತ್ರರಂಗ ನಿರ್ಧಾರ: ಪೊಲೀಸರಿಂದ ನೋಟಿಸ್

- Advertisement -
- Advertisement -

ಬೆಂಗಳೂರಿನ ನಡೆದ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡಿಗಾಗಿ ಒತ್ತಾಯ ಮಾಡಿದ್ದನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ತಳುಕು ಹಾಕಿದ ಗಾಯಕ ಸೋನು ನಿಗಮ್‌ಗೆ ಅಸಹಕಾರ ತೋರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ನಿರ್ಧರಿಸಿದೆ.

ಸೋನು ನಿಗಮ್‌ ಅವರನ್ನು ಕನ್ನಡ ಚಿತ್ರಗಳಲ್ಲಿ ಹಾಡಿಸುವುದಕ್ಕೆ ನಿರ್ಬಂಧ ವಿಧಿಸಬೇಕು. ಅವರು ಕರ್ನಾಟಕದಲ್ಲಿ ಯಾವುದೇ ಕಾರ್ಯಕ್ರಮ ನೀಡದಂತೆ ತಡೆಯಬೇಕು ಮತ್ತು ಅವರ ವಿರುದ್ದ ಪೊಲೀಸರು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸಿತ್ತು.

ಕನ್ನಡ ಜನತೆಯಿಂದಲೂ ಸೋನು ನಿಗಮ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ಇಂದು ಸಭೆ ನಡೆಸಿದ ಕೆಎಫ್‌ಸಿಸಿ ಪದಾಧಿಕಾರಿಗಳು, ಸೋನು ನಿಗಮ್‌ಗೆ ಕನ್ನಡ ಚಿತ್ರಗಳಲ್ಲಿ ಹಾಡುವುದಕ್ಕೆ ಮತ್ತು ಕರ್ನಾಟಕದಲ್ಲಿ ಕಾರ್ಯಕ್ರಮ ನೀಡುವುದಕ್ಕೆ ಒಂದು ರೀತಿಯ ನಿರ್ಬಂಧ ವಿಧಿಸಿದ್ದಾರೆ.

“ಯಾರೂ ಸೋನು ನಿಗಮ್‌ ಅವರನ್ನು ಹಾಡಿಸಲು ಕರೆಯಬಾರದು, ಮ್ಯೂಸಿಕಲ್‌ ನೈಟ್‌ ಸೇರಿದಂತೆ ಅವರ ಜೊತೆಗೆ ಯಾವುದೇ ಚಟುವಟಿಕೆ ಮಾಡಕೂಡದು” ಎಂದು ಕೆಎಫ್‌ಸಿಸಿ ಅಧ್ಯಕ್ಷ ನರಸಿಂಹಲು ಎಂ. ತಿಳಿಸಿದ್ದಾರೆ.

ಸಂಗೀತ ನಿರ್ದೇಶಕರು, ನಿರ್ಮಾಪಕರು, ನಿರ್ದೇಶಕರ ಸಂಘ ಹೀಗೆ ಕೆಎಫ್‌ಸಿಸಿಯ ಅಂಗ ಸಂಸ್ಥೆಗಳ ಅಧ್ಯಕ್ಷರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನವನ್ನು ನರಸಿಂಹಲು ಪ್ರಕಟಿಸಿದ್ದಾರೆ.

“ಸೋನು ನಿಗಮ್‌ ವಿಡಿಯೋದಲ್ಲಿ ಕ್ಷಮೆ ಕೇಳಬಹುದು ಎಂದುಕೊಂಡಿದ್ದೆವು. ಆದರೆ ಅವರು ಕ್ಷಮಾಪಣೆ ಕೇಳಲಿಲ್ಲ. ಹಾಗಾಗಿ, ಕನ್ನಡ ಪರ ಸಂಘಟನೆಗಳು, ಸಂಗೀತ ನಿರ್ದೇಶಕರು, ನಿರ್ಮಾಪಕರು, ನಿರ್ದೇಶಕರ ಸಂಘ, ಹೀಗೆ ಕೆಫ್‌ಸಿಸಿಯ ಅಂಗ ಸಂಸ್ಥೆಗಳ ಅಧ್ಯಕ್ಷರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ಕ್ಷಣದಿಂದಲೇ ಅಸಹಕಾರ ತೋರಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದು ನರಸಿಂಹಲು ತಿಳಿಸಿದ್ದಾರೆ.

“ಚಿತ್ರರಂಗದಲ್ಲಿ ಕಲಾವಿದರನ್ನು ನಿಷೇಧ ಮಾಡುವಂತಿಲ್ಲ. ಆದರೆ, ಸ್ವಯಂ ಪ್ರೇರಣೆಯಿಂದ ನಿರ್ಮಾಪಕರು, ಸಂಗೀತ ನಿರ್ದೇಶಕರು ಗಾಯಕರನ್ನು ದೂರ ಇಡಬಹುದು. ಕಲಾವಿದರಾಗಲಿ, ಗಾಯಕರನ್ನಾಗಲಿ ಅಧಿಕೃತವಾಗಿ ನಿಷೇಧ ಮಾಡುವ ಅಧಿಕಾರ ವಾಣಿಜ್ಯ ಮಂಡಳಿಗೆ ಇರುವುದಿಲ್ಲ. ಗಾಯಕನನ್ನು ಕೆಲವು ವರ್ಷ ದೂರವಿಟ್ಟು, ಯಾರೂ ಅವಕಾಶ ಕೊಡದೆ ಬುದ್ಧಿ ಕಳುಹಿಸಬಹುದು” ಎಂದು ನರಸಿಂಹಲು ಹೇಳಿದ್ದಾರೆ.

ಪೊಲೀಸರಿಂದ ನೋಟಿಸ್

ಸೋನು ನಿಗಮ್ ಹೇಳಿಕೆಗೆ ಸಂಬಂಧಿಸಿದಂತೆ ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆ ಪೊಲೀಸರು ಸೋನು ನಿಗಮ್‌ಗೆ ರಿಜಿಸ್ಟರ್ ಪೋಸ್ಟ್ ಮೂಲಕ ನೋಟಿಸ್ ಜಾರಿ ಮಾಡಿದ್ದಾರೆ. ಒಂದು ವಾರದೊಳಗೆ ವಿವರಣೆ ನೀಡಲು ಸೂಚಿಸಲಾಗಿದೆ. ಕಾರ್ಯಕ್ರಮದ ಆಯೋಜಕರಿಗೂ ನೋಟಿಸ್ ನೀಡಲು ಸಿದ್ಧತೆ ಮಾಡಲಾಗಿದೆ ಎಂದು ವರದಿಯಾಗಿದೆ.

ಮತ್ತೊಂದು ದೂರು

ಕರವೇ ರಾಜ್ಯ ಕಾರ್ಯದರ್ಶಿ ಮಂಜುನಾಥ್ ಗೌಡ ಅವರು ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಸೋನು ನಿಗಮ್ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಸೋನು ನಿಗಮ್ ಬಂಧನಕ್ಕೆ ಆಗ್ರಹ

ಸೋನು ನಿಗಮ್ ಕನ್ನಡ, ಕನ್ನಡಿಗರನ್ನು ಅವಮಾನಿಸಿದ್ದಾರೆ. ಅವರನ್ನು ಬಂಧಿಸಿ ಜೈಲಿಗಟ್ಟಬೇಕು. ಈ ಮೂಲಕ ಕನ್ನಡಿಗರ ಶಕ್ತಿ ಅವರಿಗೆ ಗೊತ್ತಾಗಬೇಕು. ಇನ್ನುಮುಂದೆ ಕನ್ನಡಗರನ್ನು ಅವಮಾನಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ಹೇಳಿದ್ದಾರೆ.

ಸೋನು ನಿಗಮ್ ಕರ್ನಾಟಕದಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...