Homeಮುಖಪುಟಸೋನು ನಿಗಮ್‌ಗೆ ಅಸಹಕಾರ ತೋರಲು ಕನ್ನಡ ಚಿತ್ರರಂಗ ನಿರ್ಧಾರ: ಪೊಲೀಸರಿಂದ ನೋಟಿಸ್

ಸೋನು ನಿಗಮ್‌ಗೆ ಅಸಹಕಾರ ತೋರಲು ಕನ್ನಡ ಚಿತ್ರರಂಗ ನಿರ್ಧಾರ: ಪೊಲೀಸರಿಂದ ನೋಟಿಸ್

- Advertisement -
- Advertisement -

ಬೆಂಗಳೂರಿನ ನಡೆದ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡಿಗಾಗಿ ಒತ್ತಾಯ ಮಾಡಿದ್ದನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ತಳುಕು ಹಾಕಿದ ಗಾಯಕ ಸೋನು ನಿಗಮ್‌ಗೆ ಅಸಹಕಾರ ತೋರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ನಿರ್ಧರಿಸಿದೆ.

ಸೋನು ನಿಗಮ್‌ ಅವರನ್ನು ಕನ್ನಡ ಚಿತ್ರಗಳಲ್ಲಿ ಹಾಡಿಸುವುದಕ್ಕೆ ನಿರ್ಬಂಧ ವಿಧಿಸಬೇಕು. ಅವರು ಕರ್ನಾಟಕದಲ್ಲಿ ಯಾವುದೇ ಕಾರ್ಯಕ್ರಮ ನೀಡದಂತೆ ತಡೆಯಬೇಕು ಮತ್ತು ಅವರ ವಿರುದ್ದ ಪೊಲೀಸರು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸಿತ್ತು.

ಕನ್ನಡ ಜನತೆಯಿಂದಲೂ ಸೋನು ನಿಗಮ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ಇಂದು ಸಭೆ ನಡೆಸಿದ ಕೆಎಫ್‌ಸಿಸಿ ಪದಾಧಿಕಾರಿಗಳು, ಸೋನು ನಿಗಮ್‌ಗೆ ಕನ್ನಡ ಚಿತ್ರಗಳಲ್ಲಿ ಹಾಡುವುದಕ್ಕೆ ಮತ್ತು ಕರ್ನಾಟಕದಲ್ಲಿ ಕಾರ್ಯಕ್ರಮ ನೀಡುವುದಕ್ಕೆ ಒಂದು ರೀತಿಯ ನಿರ್ಬಂಧ ವಿಧಿಸಿದ್ದಾರೆ.

“ಯಾರೂ ಸೋನು ನಿಗಮ್‌ ಅವರನ್ನು ಹಾಡಿಸಲು ಕರೆಯಬಾರದು, ಮ್ಯೂಸಿಕಲ್‌ ನೈಟ್‌ ಸೇರಿದಂತೆ ಅವರ ಜೊತೆಗೆ ಯಾವುದೇ ಚಟುವಟಿಕೆ ಮಾಡಕೂಡದು” ಎಂದು ಕೆಎಫ್‌ಸಿಸಿ ಅಧ್ಯಕ್ಷ ನರಸಿಂಹಲು ಎಂ. ತಿಳಿಸಿದ್ದಾರೆ.

ಸಂಗೀತ ನಿರ್ದೇಶಕರು, ನಿರ್ಮಾಪಕರು, ನಿರ್ದೇಶಕರ ಸಂಘ ಹೀಗೆ ಕೆಎಫ್‌ಸಿಸಿಯ ಅಂಗ ಸಂಸ್ಥೆಗಳ ಅಧ್ಯಕ್ಷರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನವನ್ನು ನರಸಿಂಹಲು ಪ್ರಕಟಿಸಿದ್ದಾರೆ.

“ಸೋನು ನಿಗಮ್‌ ವಿಡಿಯೋದಲ್ಲಿ ಕ್ಷಮೆ ಕೇಳಬಹುದು ಎಂದುಕೊಂಡಿದ್ದೆವು. ಆದರೆ ಅವರು ಕ್ಷಮಾಪಣೆ ಕೇಳಲಿಲ್ಲ. ಹಾಗಾಗಿ, ಕನ್ನಡ ಪರ ಸಂಘಟನೆಗಳು, ಸಂಗೀತ ನಿರ್ದೇಶಕರು, ನಿರ್ಮಾಪಕರು, ನಿರ್ದೇಶಕರ ಸಂಘ, ಹೀಗೆ ಕೆಫ್‌ಸಿಸಿಯ ಅಂಗ ಸಂಸ್ಥೆಗಳ ಅಧ್ಯಕ್ಷರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ಕ್ಷಣದಿಂದಲೇ ಅಸಹಕಾರ ತೋರಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದು ನರಸಿಂಹಲು ತಿಳಿಸಿದ್ದಾರೆ.

“ಚಿತ್ರರಂಗದಲ್ಲಿ ಕಲಾವಿದರನ್ನು ನಿಷೇಧ ಮಾಡುವಂತಿಲ್ಲ. ಆದರೆ, ಸ್ವಯಂ ಪ್ರೇರಣೆಯಿಂದ ನಿರ್ಮಾಪಕರು, ಸಂಗೀತ ನಿರ್ದೇಶಕರು ಗಾಯಕರನ್ನು ದೂರ ಇಡಬಹುದು. ಕಲಾವಿದರಾಗಲಿ, ಗಾಯಕರನ್ನಾಗಲಿ ಅಧಿಕೃತವಾಗಿ ನಿಷೇಧ ಮಾಡುವ ಅಧಿಕಾರ ವಾಣಿಜ್ಯ ಮಂಡಳಿಗೆ ಇರುವುದಿಲ್ಲ. ಗಾಯಕನನ್ನು ಕೆಲವು ವರ್ಷ ದೂರವಿಟ್ಟು, ಯಾರೂ ಅವಕಾಶ ಕೊಡದೆ ಬುದ್ಧಿ ಕಳುಹಿಸಬಹುದು” ಎಂದು ನರಸಿಂಹಲು ಹೇಳಿದ್ದಾರೆ.

ಪೊಲೀಸರಿಂದ ನೋಟಿಸ್

ಸೋನು ನಿಗಮ್ ಹೇಳಿಕೆಗೆ ಸಂಬಂಧಿಸಿದಂತೆ ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆ ಪೊಲೀಸರು ಸೋನು ನಿಗಮ್‌ಗೆ ರಿಜಿಸ್ಟರ್ ಪೋಸ್ಟ್ ಮೂಲಕ ನೋಟಿಸ್ ಜಾರಿ ಮಾಡಿದ್ದಾರೆ. ಒಂದು ವಾರದೊಳಗೆ ವಿವರಣೆ ನೀಡಲು ಸೂಚಿಸಲಾಗಿದೆ. ಕಾರ್ಯಕ್ರಮದ ಆಯೋಜಕರಿಗೂ ನೋಟಿಸ್ ನೀಡಲು ಸಿದ್ಧತೆ ಮಾಡಲಾಗಿದೆ ಎಂದು ವರದಿಯಾಗಿದೆ.

ಮತ್ತೊಂದು ದೂರು

ಕರವೇ ರಾಜ್ಯ ಕಾರ್ಯದರ್ಶಿ ಮಂಜುನಾಥ್ ಗೌಡ ಅವರು ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಸೋನು ನಿಗಮ್ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಸೋನು ನಿಗಮ್ ಬಂಧನಕ್ಕೆ ಆಗ್ರಹ

ಸೋನು ನಿಗಮ್ ಕನ್ನಡ, ಕನ್ನಡಿಗರನ್ನು ಅವಮಾನಿಸಿದ್ದಾರೆ. ಅವರನ್ನು ಬಂಧಿಸಿ ಜೈಲಿಗಟ್ಟಬೇಕು. ಈ ಮೂಲಕ ಕನ್ನಡಿಗರ ಶಕ್ತಿ ಅವರಿಗೆ ಗೊತ್ತಾಗಬೇಕು. ಇನ್ನುಮುಂದೆ ಕನ್ನಡಗರನ್ನು ಅವಮಾನಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ಹೇಳಿದ್ದಾರೆ.

ಸೋನು ನಿಗಮ್ ಕರ್ನಾಟಕದಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...