Homeಕರ್ನಾಟಕನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

- Advertisement -
- Advertisement -

ದುನಿಯಾ ವಿಜಯ್ ನಟಿಸಿ, ನಿರ್ದೇಶಿಸಿರುವ ಸಲಗ ಸಿನಿಮಾಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ ವೇಳೆ ಚಿತ್ರದ ಪ್ರಮೋಷನಲ್ ಸಾಂಗ್ ಎಂದು ಬಿಡುಗಡೆ ಮಾಡಿದ್ದ ‘ಟಿಣಿಂಗ ಮಿಣಿಂಗ ಟಿಶ್ಯಾ’ ಹಾಡು ಸಿನಿಮಾದಲಿಲ್ಲ ಎಂಬ ಬೇಸರದ ಮಾತುಗಳು ಕೇಳಿ ಬಂದಿದ್ದವು.

ಹಲವು ಮಂದಿ ಸಿನಿಮಾದಲ್ಲಿ ಮತ್ತೆ ಹಾಡನ್ನು ಸೇರಿಸಬೇಖು ಎಂದು ಹೇಳಿದ್ದರು. ಜನರ ಒತ್ತಾಯಕ್ಕೆ ಮಣಿದಿರುವ ಚಿತ್ರತಂಡ ಸಲಗಕ್ಕೆ ಹಾಡನ್ನು ಸೇರಿಸಲು ನಿರ್ಧರಿಸಿದೆ. ನ.19 ರಿಂದ ಸಲಗ ಚಿತ್ರದಲ್ಲಿ ಈ ಹಾಡನ್ನು ಬೆಳ್ಳಿ ಪರದೆಯ ಮೇಲೆ ಕಣ್ತುಂಬಿಕೊಳ್ಳಬಹುದು.

ಸಲಗದಲ್ಲಿ ಉತ್ತರ ಕನ್ನಡದ ಸಿದ್ದಿ ಬುಡಕಟ್ಟು ಜನಾಂಗದ ಜಾನಪದ ಹಾಡೊಂದನ್ನು ಸೇರಿಸಲಾಗಿತ್ತು. ಆ ಹಾಡನ್ನು ಯಲ್ಲಾಪುರದ ಸಿದ್ದಿ ಮಹಿಳೆಯರೆ ಹಾಡಿ ಕುಣಿದಿದ್ದಾರೆಂದು ಭರ್ಜರಿ ಪ್ರಚಾರ ಮಾಡಲಾಗಿತ್ತು. ಸ್ವತಃ ನಿರ್ದೇಶಕ-ನಟ ವಿಜಯ್ ಈ ಟಿಣಿಂಗ ಮಿಣಿಂಗ ಟಿಶ್ಯಾ ಎಂಬ ಹಾಡಿನ ಕುರಿತು, ಸಿದ್ದಿ ಹಾಡುಗಾರ್ತಿಯರ ಬಗ್ಗೆ ಹೆಮ್ಮೆ-ಖುಷಿಯಿಂದ ಮಾತಾಡಿದ್ದು ದೊಡ್ಡ ಸುದ್ದಿಯಾಗಿತ್ತು. ಹಾಡಂತೂ ಯೂಟ್ಯೂಬ್ ಮತ್ತಿತರೆಡೆ ವೈರಲ್ ಆಗಿ ಹವಾ ಸೃಷ್ಟಿಸಿತ್ತು. ಆದರೆ ಸಿನಿಮಾದಲ್ಲಿ ಈ ಹಾಡು ಇರಲಿಲ್ಲ. ಇದಕ್ಕೆ ಸಿದ್ದಿ ಜನಾಂಗದವರು ಸಾಕಷ್ಟು ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ‘ಸಲಗ’ ಸಿನಿಮಾಕ್ಕೆ ಸಿದ್ದಿ ಜಾನಪದ ಹಾಡು!

ಯಲ್ಲಾಪುರದ ಮಂಚಿಕೇರಿ ಬಳಿಯ ಸಿದ್ದಿಗಳ ಕೇರಿಯ ಪ್ರತಿಭಾನ್ವಿತ ಗಾಯಕಿ ಗಿರಿಜಾ ಸಿದ್ದಿ ತಂಡ ಹಾಡು ಹಾಡಿ ನೃತ್ಯ ಮಾಡಿದೆ ಎಂಬುದು ಹೆಚ್ಚು ಪ್ರಚಾರಕ್ಕೆ ಕಾರಣವಾಗಿತ್ತು. ತಮ್ಮವರು ಹಾಡಿದ-ನಟಿಸಿದ ಚಿತ್ರವೆಂಬ ಆಕರ್ಷಣೆಯಿಂದ ಯಲ್ಲಾಪುರ ಸೀಮೆಯ ಸಿದ್ದಿಗಳು ಮತ್ತು ಉತ್ತರ ಕನ್ನಡದ ಸಿನಿಮಾಸಕ್ತರು ಶಿರಸಿಯ ನಟರಾಜ ಥೇಟರಿಗೆ ಹೋಗಿದ್ದರು. ಆದರೆ ಸಿನಿಮಾದಲ್ಲಿ ತಾವು ನಿರೀಕ್ಷಿಸಿದ ಹಾಡಿಲ್ಲದೆ ನಿರಾಸೆ ಮತ್ತು ಬೇಸರದಿಂದ ಹೊರಬಂದಿದ್ದರು. ಅಲ್ಲಲ್ಲಿ ಸಣ್ಣ ಸಣ್ಣ ಹಾಡಿನ ತುಣುಕು ಇದೆ ಹೊರತು ಪೂರ್ತಿ ಹಾಡು ಇಲ್ಲ ಎಂಬುದು ಅವರ ಬೇಸರಕ್ಕೆ ಕಾರಣವಾಗಿತ್ತು. ಈ ಬಗ್ಗೆ ನಾನುಗೌರಿ.ಕಾಂ ವರದಿ ಮಾಡಿತ್ತು.

ಈಗ ನಿರ್ದೇಶಕ, ನಟ ದುನಿಯಾ ವಿಜಯ್‌ ಸಿದ್ದಿ ಬುಡಕಟ್ಟು ಜನಾಂಗದ ಜೊತೆಗೆ ಹಾಡನ್ನು ಇಷ್ಟಪಟ್ಟಿದ್ದ ಜನರಿಗೂ ಗುಡ್‌ ನ್ಯೂಸ್ ನೀಡಿದ್ದಾರೆ. ಟಿಣಿಂಗ ಮಿಣಿಂಗ ಪ್ರಮೋಷನಲ್​ ಸಾಂಗ್​ ಬೆಳ್ಳಿ ಪರದೆ ಮೇಲೆ ಬರಲು ರೆಡಿಯಾಗಿದೆ. ಈ ಹಾಡನ್ನು ಸೇರ್ಪಡೆ ಮಾಡಿ ನವೆಂಬರ್​​ 19 ರಂದು ಮತ್ತೆ 100ಕ್ಕೂ ಹೆಚ್ಚು ಚಿತ್ರಮಂದಿರಗಳಿಗೆ ಸಲಗ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...