Homeಕರ್ನಾಟಕಸಿನಿಮಾ ಸೆಟ್‌ನಲ್ಲಿ 'ಆಂತರಿಕ ಸಮಿತಿ' ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

ಸಿನಿಮಾ ಸೆಟ್‌ನಲ್ಲಿ ‘ಆಂತರಿಕ ಸಮಿತಿ’ ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

- Advertisement -
- Advertisement -

ಕೆಲಸದ ಸ್ಥಳದಲ್ಲಿ ಮಹಿಳಾ ಸುರಕ್ಷತೆಯನ್ನು ಖಾತರಿಪಡಿಸುವ ‘ಆಂತರಿಕ ಸಮಿತಿ’ ರಚನೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಕೆಎಫ್‌ಸಿಸಿ)ಯ ನಿರ್ಮಾಪಕರು ಮತ್ತು ನಟರು ಸೋಮವಾರ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಸಮಿತಿಯನ್ನು ಅನಗತ್ಯ ಎಂದು ಹೇಳಿರುವ ಕೆಎಫ್‌ಸಿಸಿ ಮುಖಂಡರು, ಅದರಿಂದಾಗಿ ಚಿತ್ರರಂಗಕ್ಕೆ “ಆರ್ಥಿಕ ನಷ್ಟ ಉಂಟಾಗಲಿದೆ” ಎಂದು ಎಂದು ಪ್ರತಿಪಾದಿಸಿದ್ದಾರೆ.ಕನ್ನಡ ಚಿತ್ರ ನಿರ್ಮಾಪಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಹೇಮಾ ಸಮಿತಿ ವರದಿಯ ನಂತರ ಅಲ್ಲಿ ಮಹಿಳಾ ನಟರ ವಿರುದ್ಧ ನಡೆದ ಲೈಂಗಿಕ ದೌರ್ಜನದ ಬೆಚ್ಚಬೀಳಿಸುವ ವರದಿಗಳು ಬಹಿರಂಗಗೊಂಡಿದ್ದವು. ಹಲವಾರು ಖ್ಯಾತ ನಟರ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣಗಳು ದಾಖಲಾಗಿ, ಮಲಯಾಳಂ ಚಿತ್ರನಟರ ಸಂಘಟನೆಯಾದ ‘ಅಮ್ಮಾ’ ಸಮಿತಿಯ ಎಲ್ಲರೂ ರಾಜೀನಾಮೆ ನೀಡಿದ್ದರು.

ಅದರ ನಂತರ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಇತ್ತೀಚೆಗೆ ಚಲನಚಿತ್ರೋದ್ಯಮದಲ್ಲಿ ಆಂತರಿಕ ಸಮಿತಿ ಸ್ಥಾಪನೆ ಮಾಡುವಂತೆ ಪ್ರಸ್ತಾಪಿಸಿತ್ತು. ಅಲ್ಲದೆ ಕನ್ನಡ ಚಿತ್ರರಂಗದ ನಟರ ಸಂಘಟನೆಯಾದ ಫೈರ್‌ ಕೂಡಾ ಹೇಮಾ ಸಮಿತಿ ಮಾದರಿಯ ಸಮಿತಿ ಕನ್ನಡ ಚಿತ್ರರಂಗದಲ್ಲೂ ರಚಿಸಬೇಕು ಎಂದು ಆಗ್ರಹಿಸಿತ್ತು. ಕೆಲಸದ ಸ್ಥಳಗಳಲ್ಲಿ ಆಂತರಿಕ ಸಮಿತಿಗಳ ರಚನೆ ಮಾಡುವುದು ಲೈಂಗಿಕ ಕಿರುಕುಳ ತಡೆಗಟ್ಟುವಿಕೆ (PoSH) ಕಾಯಿದೆಯ ಪ್ರಕಾರ ಕಡ್ಡಾಯವಾಗಿದೆ.

ಇದನ್ನೂ ಓದಿ: ಬೆಂಗಳೂರು | ನಡುರಸ್ತೆಯಲ್ಲಿ ಯುವಕನ್ನು ಬೆತ್ತಲೆಗೊಳಿಸಿದ ರೌಡಿ ಶೀಟರ್!

ಸೋಮವಾರ ನಡೆದ ಮಹಿಳಾ ಆಯೋಗ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ನಡುವೆ ನಡೆದ ಸಭೆಯಲ್ಲಿ, ಕೇರಳದ ಹೇಮಾ ಸಮಿತಿ ಮಾದರಿಯ ಸಮಿತಿ ರಚನೆಯಾದರೆ ಉದ್ಯಮದ ಹಣಕಾಸಿನ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂದು ನಿರ್ಮಾಪಕರು ವಾದಿಸಿದ್ದಾರೆ.

ಸಭೆಯಲ್ಲಿ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, “ಕೇರಳದ ಹೇಮಾ ಸಮಿತಿಯಂತಹ ಸಮಿತಿಯನ್ನು ಕರ್ನಾಟಕದಲ್ಲಿ ರಚಿಸಿದರೆ ಆರ್ಥಿಕ ನಷ್ಟವಾಗುತ್ತದೆ” ಎಂದು ಹೇಳಿದ್ದಾರೆ. ಮತ್ತೋರ್ವ ನಿರ್ಮಾಪಕ ವೆಂಕಟೇಶ್ ಅವರು ಬಂದ್‌ಗೆ ಕರೆ ನೀಡುತ್ತಾ, “ಪೋಷ್ ಬಂದ್ರೆ ಮುಗಿಯಿತು ನಮ್ ಕಥೆ” ಎಂದು ಹೇಳಿದ್ದಾರೆ.

ಆದಾಗ್ಯೂ ಮಹಿಳಾ ಆಯೋಗವು ಕನ್ನಡ ಚಿತ್ರರಂಗದಲ್ಲಿ POSH ಸಮಿತಿ ರಚಿಸಬೇಕು ಎಂಬ ಆಗ್ರಹವನ್ನು ಗಟ್ಟಿಯಾಗಿ ಮಾಡಿದ್ದು, ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಕಿರುಕುಳದ ಪ್ರಮಾಣವನ್ನು ನಿರ್ಣಯಿಸಲು ಸಮಗ್ರ ಸಮೀಕ್ಷೆ ಕೂಡಾ ನಡೆಸಬೇಕು ಎಂದು ಕೋರಿದೆ. ಜೊತೆಗೆ ಈ ಮನವಿಗೆ ಪ್ರತಿಕ್ರಿಯಿಸಲು ಕೆಎಫ್‌ಸಿಸಿಗೆ 15 ದಿನಗಳ ಕಾಲಾವಕಾಶ ನೀಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು | ಪ್ಯಾಲೆಸ್ತೀನ್ ಧ್ವಜ ಹಾರಿಸಿದ 4 ಅಪ್ರಾಪ್ತ ಬಾಲಕರ ಬಂಧನ

ಸಭೆಯಲ್ಲಿದ್ದ ಅನೇಕ ಮಹಿಳಾ ನಟರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಾಧ್ಯವಾಗಲಿಲ್ಲ ಎಂದು ಆರೋಪಿಸಿದ್ದು, ಕೆಲವು ನಟರು ಈ ಬಗ್ಗೆ ಮೌನವಹಿಸಿದ್ದಾರೆ ಎನ್ನಲಾಗಿದೆ. ನಟಿ ನೀತು ಶೆಟ್ಟಿ ಅವರು ಹಕ್ಕುಗಳು ಮತ್ತು ಸಮಾನತೆಗಾಗಿ ಫಿಲ್ಮ್ ಇಂಡಸ್ಟ್ರಿ (FIRE) ಸಂಘಟನೆಯ ಸದಸ್ಯರಾಗಿದ್ದರಿಂದ ಅವರಿಗೆ ಮಾತನಾಡಲು ಅವಕಾಶ ನೀಡದೆ ”ಸುಮ್ಮನೆ ಕುಳಿತುಕೊಳ್ಳಿ” ಎಂದು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ನಾನು ಒಬ್ಬ ನಟಿಯಾಗಿ ಸಭೆಗೆ ಬಂದಿದ್ದೇನೆ. ಉದ್ಯಮದಲ್ಲಿ ಕಿರುಕುಳ ಚಾಲ್ತಿಯಲ್ಲಿದೆ ಎಂದು ನಾನು ಸೂಚಿಸಿದೆ. ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಗಮನ ಸೆಳೆದಿದ್ದರು. ಅಲ್ಲದೆ ಚಿತ್ರರಂಗದಲ್ಲಿ ನನಗೆ ಕೂಡಾ ಕಿರುಕುಳ ನಡೆದಿದೆ” ಎಂದು ಅವರು ಹೇಳಿದ್ದಾರೆ.

ನಿರ್ದೇಶಕಿ ಕವಿತಾ ಲಂಕೇಶ್, ನಟರಾದ ತಾರಾ, ಭಾವನಾ, ನೀತು ಶೆಟ್ಟಿ, ಸಿಂಧು ಲೋಕನಾಥ್, ಸಂಜನಾ ಗಲ್ರಾನಿ ಮತ್ತು ವಾಣಿಶ್ರೀ ಸೇರಿದಂತೆ ಚಿತ್ರರಂಗದ ಸುಮಾರು 14 ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಭೆಗೆ ಹೆಚ್ಚಿನ ಮಹಿಳೆಯರು ಹಾಜರಾಗಿರಲಿಲ್ಲ ಎಂದು ಹೇಳಿದ್ದಾಗಿ ವರದಿಯಾಗಿದೆ. ಅಲ್ಲದೆ, ಮಹಿಳೆಯರ ಬಗ್ಗೆಗಿನ ಸಮಸ್ಯೆಗಳಿಂದ ವಿಷಯವನ್ನು ಬೇರೆಡೆಗೆ ತಿರುಗಿಸಲು ಸಾಕಷ್ಟು ಪ್ರಯತ್ನಗಳು ನಡೆದಿವೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ ಆಗ್ರಹ

ಏತನ್ಮಧ್ಯೆ, ಹಿರಿಯ ನಟಿ ಪುಷ್ಪಾ ಸ್ವಾಮಿ ಅವರು ಸಭೆಯನ್ನು “ಸಮಯ ವ್ಯರ್ಥ” ಎಂದು ಕರೆದಿದ್ದು, ಇಂತಹ ಸಮಿತಿಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. “ನಾನು 40 ವರ್ಷಗಳಿಂದ ಇಂಡಸ್ಟ್ರಿಯಲ್ಲಿದ್ದೇನೆ. ಮಹಿಳೆಯರು ಖ್ಯಾತಿ ಮತ್ತು ಐಷಾರಾಮಿ ಕಾರುಗಳಿಗಾಗಿ ಕೆಲಸಗಳನ್ನು ಮಾಡಲು ಒಪ್ಪಿಕೊಳ್ಳುವುದನ್ನು ನಾನು ನೋಡಿದ್ದೇನೆ. ಅವರು ಸಮಸ್ಯೆಯಾಗಿದ್ದರೆ ಈ ಬಗ್ಗೆ ಕಳವಳ ವ್ಯಕ್ತಪಡಿಸಬೇಕಿತ್ತು. ಮುಖ್ಯಮಂತ್ರಿ ಬಳಿಗೆ ಏಕೆ ಹೋಗಬೇಕು?” ಎಂದು ಅವರು ಕೇಳಿದ್ದಾರೆ.

ಸಭೆಯ ನಂತರ ಕೆಎಫ್‌ಸಿಸಿ ಪತ್ರಿಕಾಗೋಷ್ಠಿಯನ್ನೂ ನಡೆಸಿದ್ದು, ನಂತರ ಕೆಎಫ್‌ಸಿಸಿಯ ಕೆಲವು ಸದಸ್ಯರು ಮತ್ತು ನಟಿ ಸಂಜನಾ ನಡುವೆ ನಾಟಕೀಯ ವಾಗ್ವಾದವೂ ನಡೆಯಿತು. ಕೆಎಫ್‌ಸಿಸಿಯ ಪತ್ರಿಕಾಗೋಷ್ಠಿ ಮುಗಿದ ನಂತರ ಸಂಜನಾ ಅವರು ಕೆಎಫ್‌ಸಿಸಿ ಅಧ್ಯಕ್ಷ ಎನ್‌ಎಂ ಸುರೇಶ್ ಅವರ ಆಸನವನ್ನು ಬಳಸಿ ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಈ ವೇಳೆ ಕೆಲವು ಕೆಎಫ್‌ಸಿಸಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಜನಾ ಅವರನ್ನು “ಪ್ರೋಟೋಕಾಲ್” ಅನುಸರಿಸಲು ಕೇಳಿದ್ದು, “ಯಾರೇ ಇರ್ಲಿ, ಅವ್ರ ಅವ್ರ ಜಾಗದಲ್ಲಿ, ಅವ್ರು ಅವ್ರು ಇರ್ಬೇಕು” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನಟಿ ಸಂಜನಾ ಗಲ್ರಾನಿ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಚೌದರಿ ಅವರನ್ನು ಭೇಟಿಯಾಗಲು ಇವತ್ತು ನಾನು ಹೋಗ್ತಾ ಇದ್ದೇನೆ. ಕನ್ನಡ ಚಿತ್ರರಂಗದಲ್ಲಿ ಮಹಿಳಾ ಸುರಕ್ಷಾ ಬೋರ್ಡ್‌ ಸ್ಥಾಪನೆ ಆಗುವವರೆಗೂ ನಾನು ವಿರಮಿಸುವುದಿಲ್ಲ. ಇದು ನನ್ನ ಕನಸಾಗಿದ್ದು ನನಸು ಮಾಡುವವರೆಗೂ ಹೋರಾಡುತ್ತೇನೆ” ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...