Homeಕರ್ನಾಟಕಸಿನಿಮಾ ಸೆಟ್‌ನಲ್ಲಿ 'ಆಂತರಿಕ ಸಮಿತಿ' ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

ಸಿನಿಮಾ ಸೆಟ್‌ನಲ್ಲಿ ‘ಆಂತರಿಕ ಸಮಿತಿ’ ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

- Advertisement -
- Advertisement -

ಕೆಲಸದ ಸ್ಥಳದಲ್ಲಿ ಮಹಿಳಾ ಸುರಕ್ಷತೆಯನ್ನು ಖಾತರಿಪಡಿಸುವ ‘ಆಂತರಿಕ ಸಮಿತಿ’ ರಚನೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಕೆಎಫ್‌ಸಿಸಿ)ಯ ನಿರ್ಮಾಪಕರು ಮತ್ತು ನಟರು ಸೋಮವಾರ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಸಮಿತಿಯನ್ನು ಅನಗತ್ಯ ಎಂದು ಹೇಳಿರುವ ಕೆಎಫ್‌ಸಿಸಿ ಮುಖಂಡರು, ಅದರಿಂದಾಗಿ ಚಿತ್ರರಂಗಕ್ಕೆ “ಆರ್ಥಿಕ ನಷ್ಟ ಉಂಟಾಗಲಿದೆ” ಎಂದು ಎಂದು ಪ್ರತಿಪಾದಿಸಿದ್ದಾರೆ.ಕನ್ನಡ ಚಿತ್ರ ನಿರ್ಮಾಪಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಹೇಮಾ ಸಮಿತಿ ವರದಿಯ ನಂತರ ಅಲ್ಲಿ ಮಹಿಳಾ ನಟರ ವಿರುದ್ಧ ನಡೆದ ಲೈಂಗಿಕ ದೌರ್ಜನದ ಬೆಚ್ಚಬೀಳಿಸುವ ವರದಿಗಳು ಬಹಿರಂಗಗೊಂಡಿದ್ದವು. ಹಲವಾರು ಖ್ಯಾತ ನಟರ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣಗಳು ದಾಖಲಾಗಿ, ಮಲಯಾಳಂ ಚಿತ್ರನಟರ ಸಂಘಟನೆಯಾದ ‘ಅಮ್ಮಾ’ ಸಮಿತಿಯ ಎಲ್ಲರೂ ರಾಜೀನಾಮೆ ನೀಡಿದ್ದರು.

ಅದರ ನಂತರ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಇತ್ತೀಚೆಗೆ ಚಲನಚಿತ್ರೋದ್ಯಮದಲ್ಲಿ ಆಂತರಿಕ ಸಮಿತಿ ಸ್ಥಾಪನೆ ಮಾಡುವಂತೆ ಪ್ರಸ್ತಾಪಿಸಿತ್ತು. ಅಲ್ಲದೆ ಕನ್ನಡ ಚಿತ್ರರಂಗದ ನಟರ ಸಂಘಟನೆಯಾದ ಫೈರ್‌ ಕೂಡಾ ಹೇಮಾ ಸಮಿತಿ ಮಾದರಿಯ ಸಮಿತಿ ಕನ್ನಡ ಚಿತ್ರರಂಗದಲ್ಲೂ ರಚಿಸಬೇಕು ಎಂದು ಆಗ್ರಹಿಸಿತ್ತು. ಕೆಲಸದ ಸ್ಥಳಗಳಲ್ಲಿ ಆಂತರಿಕ ಸಮಿತಿಗಳ ರಚನೆ ಮಾಡುವುದು ಲೈಂಗಿಕ ಕಿರುಕುಳ ತಡೆಗಟ್ಟುವಿಕೆ (PoSH) ಕಾಯಿದೆಯ ಪ್ರಕಾರ ಕಡ್ಡಾಯವಾಗಿದೆ.

ಇದನ್ನೂ ಓದಿ: ಬೆಂಗಳೂರು | ನಡುರಸ್ತೆಯಲ್ಲಿ ಯುವಕನ್ನು ಬೆತ್ತಲೆಗೊಳಿಸಿದ ರೌಡಿ ಶೀಟರ್!

ಸೋಮವಾರ ನಡೆದ ಮಹಿಳಾ ಆಯೋಗ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ನಡುವೆ ನಡೆದ ಸಭೆಯಲ್ಲಿ, ಕೇರಳದ ಹೇಮಾ ಸಮಿತಿ ಮಾದರಿಯ ಸಮಿತಿ ರಚನೆಯಾದರೆ ಉದ್ಯಮದ ಹಣಕಾಸಿನ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂದು ನಿರ್ಮಾಪಕರು ವಾದಿಸಿದ್ದಾರೆ.

ಸಭೆಯಲ್ಲಿ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, “ಕೇರಳದ ಹೇಮಾ ಸಮಿತಿಯಂತಹ ಸಮಿತಿಯನ್ನು ಕರ್ನಾಟಕದಲ್ಲಿ ರಚಿಸಿದರೆ ಆರ್ಥಿಕ ನಷ್ಟವಾಗುತ್ತದೆ” ಎಂದು ಹೇಳಿದ್ದಾರೆ. ಮತ್ತೋರ್ವ ನಿರ್ಮಾಪಕ ವೆಂಕಟೇಶ್ ಅವರು ಬಂದ್‌ಗೆ ಕರೆ ನೀಡುತ್ತಾ, “ಪೋಷ್ ಬಂದ್ರೆ ಮುಗಿಯಿತು ನಮ್ ಕಥೆ” ಎಂದು ಹೇಳಿದ್ದಾರೆ.

ಆದಾಗ್ಯೂ ಮಹಿಳಾ ಆಯೋಗವು ಕನ್ನಡ ಚಿತ್ರರಂಗದಲ್ಲಿ POSH ಸಮಿತಿ ರಚಿಸಬೇಕು ಎಂಬ ಆಗ್ರಹವನ್ನು ಗಟ್ಟಿಯಾಗಿ ಮಾಡಿದ್ದು, ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಕಿರುಕುಳದ ಪ್ರಮಾಣವನ್ನು ನಿರ್ಣಯಿಸಲು ಸಮಗ್ರ ಸಮೀಕ್ಷೆ ಕೂಡಾ ನಡೆಸಬೇಕು ಎಂದು ಕೋರಿದೆ. ಜೊತೆಗೆ ಈ ಮನವಿಗೆ ಪ್ರತಿಕ್ರಿಯಿಸಲು ಕೆಎಫ್‌ಸಿಸಿಗೆ 15 ದಿನಗಳ ಕಾಲಾವಕಾಶ ನೀಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು | ಪ್ಯಾಲೆಸ್ತೀನ್ ಧ್ವಜ ಹಾರಿಸಿದ 4 ಅಪ್ರಾಪ್ತ ಬಾಲಕರ ಬಂಧನ

ಸಭೆಯಲ್ಲಿದ್ದ ಅನೇಕ ಮಹಿಳಾ ನಟರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಾಧ್ಯವಾಗಲಿಲ್ಲ ಎಂದು ಆರೋಪಿಸಿದ್ದು, ಕೆಲವು ನಟರು ಈ ಬಗ್ಗೆ ಮೌನವಹಿಸಿದ್ದಾರೆ ಎನ್ನಲಾಗಿದೆ. ನಟಿ ನೀತು ಶೆಟ್ಟಿ ಅವರು ಹಕ್ಕುಗಳು ಮತ್ತು ಸಮಾನತೆಗಾಗಿ ಫಿಲ್ಮ್ ಇಂಡಸ್ಟ್ರಿ (FIRE) ಸಂಘಟನೆಯ ಸದಸ್ಯರಾಗಿದ್ದರಿಂದ ಅವರಿಗೆ ಮಾತನಾಡಲು ಅವಕಾಶ ನೀಡದೆ ”ಸುಮ್ಮನೆ ಕುಳಿತುಕೊಳ್ಳಿ” ಎಂದು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ನಾನು ಒಬ್ಬ ನಟಿಯಾಗಿ ಸಭೆಗೆ ಬಂದಿದ್ದೇನೆ. ಉದ್ಯಮದಲ್ಲಿ ಕಿರುಕುಳ ಚಾಲ್ತಿಯಲ್ಲಿದೆ ಎಂದು ನಾನು ಸೂಚಿಸಿದೆ. ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಗಮನ ಸೆಳೆದಿದ್ದರು. ಅಲ್ಲದೆ ಚಿತ್ರರಂಗದಲ್ಲಿ ನನಗೆ ಕೂಡಾ ಕಿರುಕುಳ ನಡೆದಿದೆ” ಎಂದು ಅವರು ಹೇಳಿದ್ದಾರೆ.

ನಿರ್ದೇಶಕಿ ಕವಿತಾ ಲಂಕೇಶ್, ನಟರಾದ ತಾರಾ, ಭಾವನಾ, ನೀತು ಶೆಟ್ಟಿ, ಸಿಂಧು ಲೋಕನಾಥ್, ಸಂಜನಾ ಗಲ್ರಾನಿ ಮತ್ತು ವಾಣಿಶ್ರೀ ಸೇರಿದಂತೆ ಚಿತ್ರರಂಗದ ಸುಮಾರು 14 ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಭೆಗೆ ಹೆಚ್ಚಿನ ಮಹಿಳೆಯರು ಹಾಜರಾಗಿರಲಿಲ್ಲ ಎಂದು ಹೇಳಿದ್ದಾಗಿ ವರದಿಯಾಗಿದೆ. ಅಲ್ಲದೆ, ಮಹಿಳೆಯರ ಬಗ್ಗೆಗಿನ ಸಮಸ್ಯೆಗಳಿಂದ ವಿಷಯವನ್ನು ಬೇರೆಡೆಗೆ ತಿರುಗಿಸಲು ಸಾಕಷ್ಟು ಪ್ರಯತ್ನಗಳು ನಡೆದಿವೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ ಆಗ್ರಹ

ಏತನ್ಮಧ್ಯೆ, ಹಿರಿಯ ನಟಿ ಪುಷ್ಪಾ ಸ್ವಾಮಿ ಅವರು ಸಭೆಯನ್ನು “ಸಮಯ ವ್ಯರ್ಥ” ಎಂದು ಕರೆದಿದ್ದು, ಇಂತಹ ಸಮಿತಿಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. “ನಾನು 40 ವರ್ಷಗಳಿಂದ ಇಂಡಸ್ಟ್ರಿಯಲ್ಲಿದ್ದೇನೆ. ಮಹಿಳೆಯರು ಖ್ಯಾತಿ ಮತ್ತು ಐಷಾರಾಮಿ ಕಾರುಗಳಿಗಾಗಿ ಕೆಲಸಗಳನ್ನು ಮಾಡಲು ಒಪ್ಪಿಕೊಳ್ಳುವುದನ್ನು ನಾನು ನೋಡಿದ್ದೇನೆ. ಅವರು ಸಮಸ್ಯೆಯಾಗಿದ್ದರೆ ಈ ಬಗ್ಗೆ ಕಳವಳ ವ್ಯಕ್ತಪಡಿಸಬೇಕಿತ್ತು. ಮುಖ್ಯಮಂತ್ರಿ ಬಳಿಗೆ ಏಕೆ ಹೋಗಬೇಕು?” ಎಂದು ಅವರು ಕೇಳಿದ್ದಾರೆ.

ಸಭೆಯ ನಂತರ ಕೆಎಫ್‌ಸಿಸಿ ಪತ್ರಿಕಾಗೋಷ್ಠಿಯನ್ನೂ ನಡೆಸಿದ್ದು, ನಂತರ ಕೆಎಫ್‌ಸಿಸಿಯ ಕೆಲವು ಸದಸ್ಯರು ಮತ್ತು ನಟಿ ಸಂಜನಾ ನಡುವೆ ನಾಟಕೀಯ ವಾಗ್ವಾದವೂ ನಡೆಯಿತು. ಕೆಎಫ್‌ಸಿಸಿಯ ಪತ್ರಿಕಾಗೋಷ್ಠಿ ಮುಗಿದ ನಂತರ ಸಂಜನಾ ಅವರು ಕೆಎಫ್‌ಸಿಸಿ ಅಧ್ಯಕ್ಷ ಎನ್‌ಎಂ ಸುರೇಶ್ ಅವರ ಆಸನವನ್ನು ಬಳಸಿ ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಈ ವೇಳೆ ಕೆಲವು ಕೆಎಫ್‌ಸಿಸಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಜನಾ ಅವರನ್ನು “ಪ್ರೋಟೋಕಾಲ್” ಅನುಸರಿಸಲು ಕೇಳಿದ್ದು, “ಯಾರೇ ಇರ್ಲಿ, ಅವ್ರ ಅವ್ರ ಜಾಗದಲ್ಲಿ, ಅವ್ರು ಅವ್ರು ಇರ್ಬೇಕು” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನಟಿ ಸಂಜನಾ ಗಲ್ರಾನಿ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಚೌದರಿ ಅವರನ್ನು ಭೇಟಿಯಾಗಲು ಇವತ್ತು ನಾನು ಹೋಗ್ತಾ ಇದ್ದೇನೆ. ಕನ್ನಡ ಚಿತ್ರರಂಗದಲ್ಲಿ ಮಹಿಳಾ ಸುರಕ್ಷಾ ಬೋರ್ಡ್‌ ಸ್ಥಾಪನೆ ಆಗುವವರೆಗೂ ನಾನು ವಿರಮಿಸುವುದಿಲ್ಲ. ಇದು ನನ್ನ ಕನಸಾಗಿದ್ದು ನನಸು ಮಾಡುವವರೆಗೂ ಹೋರಾಡುತ್ತೇನೆ” ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...