Homeಕರ್ನಾಟಕಸಿನಿಮಾ ಸೆಟ್‌ನಲ್ಲಿ 'ಆಂತರಿಕ ಸಮಿತಿ' ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

ಸಿನಿಮಾ ಸೆಟ್‌ನಲ್ಲಿ ‘ಆಂತರಿಕ ಸಮಿತಿ’ ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

- Advertisement -
- Advertisement -

ಕೆಲಸದ ಸ್ಥಳದಲ್ಲಿ ಮಹಿಳಾ ಸುರಕ್ಷತೆಯನ್ನು ಖಾತರಿಪಡಿಸುವ ‘ಆಂತರಿಕ ಸಮಿತಿ’ ರಚನೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಕೆಎಫ್‌ಸಿಸಿ)ಯ ನಿರ್ಮಾಪಕರು ಮತ್ತು ನಟರು ಸೋಮವಾರ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಸಮಿತಿಯನ್ನು ಅನಗತ್ಯ ಎಂದು ಹೇಳಿರುವ ಕೆಎಫ್‌ಸಿಸಿ ಮುಖಂಡರು, ಅದರಿಂದಾಗಿ ಚಿತ್ರರಂಗಕ್ಕೆ “ಆರ್ಥಿಕ ನಷ್ಟ ಉಂಟಾಗಲಿದೆ” ಎಂದು ಎಂದು ಪ್ರತಿಪಾದಿಸಿದ್ದಾರೆ.ಕನ್ನಡ ಚಿತ್ರ ನಿರ್ಮಾಪಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಹೇಮಾ ಸಮಿತಿ ವರದಿಯ ನಂತರ ಅಲ್ಲಿ ಮಹಿಳಾ ನಟರ ವಿರುದ್ಧ ನಡೆದ ಲೈಂಗಿಕ ದೌರ್ಜನದ ಬೆಚ್ಚಬೀಳಿಸುವ ವರದಿಗಳು ಬಹಿರಂಗಗೊಂಡಿದ್ದವು. ಹಲವಾರು ಖ್ಯಾತ ನಟರ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣಗಳು ದಾಖಲಾಗಿ, ಮಲಯಾಳಂ ಚಿತ್ರನಟರ ಸಂಘಟನೆಯಾದ ‘ಅಮ್ಮಾ’ ಸಮಿತಿಯ ಎಲ್ಲರೂ ರಾಜೀನಾಮೆ ನೀಡಿದ್ದರು.

ಅದರ ನಂತರ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಇತ್ತೀಚೆಗೆ ಚಲನಚಿತ್ರೋದ್ಯಮದಲ್ಲಿ ಆಂತರಿಕ ಸಮಿತಿ ಸ್ಥಾಪನೆ ಮಾಡುವಂತೆ ಪ್ರಸ್ತಾಪಿಸಿತ್ತು. ಅಲ್ಲದೆ ಕನ್ನಡ ಚಿತ್ರರಂಗದ ನಟರ ಸಂಘಟನೆಯಾದ ಫೈರ್‌ ಕೂಡಾ ಹೇಮಾ ಸಮಿತಿ ಮಾದರಿಯ ಸಮಿತಿ ಕನ್ನಡ ಚಿತ್ರರಂಗದಲ್ಲೂ ರಚಿಸಬೇಕು ಎಂದು ಆಗ್ರಹಿಸಿತ್ತು. ಕೆಲಸದ ಸ್ಥಳಗಳಲ್ಲಿ ಆಂತರಿಕ ಸಮಿತಿಗಳ ರಚನೆ ಮಾಡುವುದು ಲೈಂಗಿಕ ಕಿರುಕುಳ ತಡೆಗಟ್ಟುವಿಕೆ (PoSH) ಕಾಯಿದೆಯ ಪ್ರಕಾರ ಕಡ್ಡಾಯವಾಗಿದೆ.

ಇದನ್ನೂ ಓದಿ: ಬೆಂಗಳೂರು | ನಡುರಸ್ತೆಯಲ್ಲಿ ಯುವಕನ್ನು ಬೆತ್ತಲೆಗೊಳಿಸಿದ ರೌಡಿ ಶೀಟರ್!

ಸೋಮವಾರ ನಡೆದ ಮಹಿಳಾ ಆಯೋಗ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ನಡುವೆ ನಡೆದ ಸಭೆಯಲ್ಲಿ, ಕೇರಳದ ಹೇಮಾ ಸಮಿತಿ ಮಾದರಿಯ ಸಮಿತಿ ರಚನೆಯಾದರೆ ಉದ್ಯಮದ ಹಣಕಾಸಿನ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂದು ನಿರ್ಮಾಪಕರು ವಾದಿಸಿದ್ದಾರೆ.

ಸಭೆಯಲ್ಲಿ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, “ಕೇರಳದ ಹೇಮಾ ಸಮಿತಿಯಂತಹ ಸಮಿತಿಯನ್ನು ಕರ್ನಾಟಕದಲ್ಲಿ ರಚಿಸಿದರೆ ಆರ್ಥಿಕ ನಷ್ಟವಾಗುತ್ತದೆ” ಎಂದು ಹೇಳಿದ್ದಾರೆ. ಮತ್ತೋರ್ವ ನಿರ್ಮಾಪಕ ವೆಂಕಟೇಶ್ ಅವರು ಬಂದ್‌ಗೆ ಕರೆ ನೀಡುತ್ತಾ, “ಪೋಷ್ ಬಂದ್ರೆ ಮುಗಿಯಿತು ನಮ್ ಕಥೆ” ಎಂದು ಹೇಳಿದ್ದಾರೆ.

ಆದಾಗ್ಯೂ ಮಹಿಳಾ ಆಯೋಗವು ಕನ್ನಡ ಚಿತ್ರರಂಗದಲ್ಲಿ POSH ಸಮಿತಿ ರಚಿಸಬೇಕು ಎಂಬ ಆಗ್ರಹವನ್ನು ಗಟ್ಟಿಯಾಗಿ ಮಾಡಿದ್ದು, ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಕಿರುಕುಳದ ಪ್ರಮಾಣವನ್ನು ನಿರ್ಣಯಿಸಲು ಸಮಗ್ರ ಸಮೀಕ್ಷೆ ಕೂಡಾ ನಡೆಸಬೇಕು ಎಂದು ಕೋರಿದೆ. ಜೊತೆಗೆ ಈ ಮನವಿಗೆ ಪ್ರತಿಕ್ರಿಯಿಸಲು ಕೆಎಫ್‌ಸಿಸಿಗೆ 15 ದಿನಗಳ ಕಾಲಾವಕಾಶ ನೀಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು | ಪ್ಯಾಲೆಸ್ತೀನ್ ಧ್ವಜ ಹಾರಿಸಿದ 4 ಅಪ್ರಾಪ್ತ ಬಾಲಕರ ಬಂಧನ

ಸಭೆಯಲ್ಲಿದ್ದ ಅನೇಕ ಮಹಿಳಾ ನಟರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಾಧ್ಯವಾಗಲಿಲ್ಲ ಎಂದು ಆರೋಪಿಸಿದ್ದು, ಕೆಲವು ನಟರು ಈ ಬಗ್ಗೆ ಮೌನವಹಿಸಿದ್ದಾರೆ ಎನ್ನಲಾಗಿದೆ. ನಟಿ ನೀತು ಶೆಟ್ಟಿ ಅವರು ಹಕ್ಕುಗಳು ಮತ್ತು ಸಮಾನತೆಗಾಗಿ ಫಿಲ್ಮ್ ಇಂಡಸ್ಟ್ರಿ (FIRE) ಸಂಘಟನೆಯ ಸದಸ್ಯರಾಗಿದ್ದರಿಂದ ಅವರಿಗೆ ಮಾತನಾಡಲು ಅವಕಾಶ ನೀಡದೆ ”ಸುಮ್ಮನೆ ಕುಳಿತುಕೊಳ್ಳಿ” ಎಂದು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ನಾನು ಒಬ್ಬ ನಟಿಯಾಗಿ ಸಭೆಗೆ ಬಂದಿದ್ದೇನೆ. ಉದ್ಯಮದಲ್ಲಿ ಕಿರುಕುಳ ಚಾಲ್ತಿಯಲ್ಲಿದೆ ಎಂದು ನಾನು ಸೂಚಿಸಿದೆ. ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಗಮನ ಸೆಳೆದಿದ್ದರು. ಅಲ್ಲದೆ ಚಿತ್ರರಂಗದಲ್ಲಿ ನನಗೆ ಕೂಡಾ ಕಿರುಕುಳ ನಡೆದಿದೆ” ಎಂದು ಅವರು ಹೇಳಿದ್ದಾರೆ.

ನಿರ್ದೇಶಕಿ ಕವಿತಾ ಲಂಕೇಶ್, ನಟರಾದ ತಾರಾ, ಭಾವನಾ, ನೀತು ಶೆಟ್ಟಿ, ಸಿಂಧು ಲೋಕನಾಥ್, ಸಂಜನಾ ಗಲ್ರಾನಿ ಮತ್ತು ವಾಣಿಶ್ರೀ ಸೇರಿದಂತೆ ಚಿತ್ರರಂಗದ ಸುಮಾರು 14 ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಭೆಗೆ ಹೆಚ್ಚಿನ ಮಹಿಳೆಯರು ಹಾಜರಾಗಿರಲಿಲ್ಲ ಎಂದು ಹೇಳಿದ್ದಾಗಿ ವರದಿಯಾಗಿದೆ. ಅಲ್ಲದೆ, ಮಹಿಳೆಯರ ಬಗ್ಗೆಗಿನ ಸಮಸ್ಯೆಗಳಿಂದ ವಿಷಯವನ್ನು ಬೇರೆಡೆಗೆ ತಿರುಗಿಸಲು ಸಾಕಷ್ಟು ಪ್ರಯತ್ನಗಳು ನಡೆದಿವೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ ಆಗ್ರಹ

ಏತನ್ಮಧ್ಯೆ, ಹಿರಿಯ ನಟಿ ಪುಷ್ಪಾ ಸ್ವಾಮಿ ಅವರು ಸಭೆಯನ್ನು “ಸಮಯ ವ್ಯರ್ಥ” ಎಂದು ಕರೆದಿದ್ದು, ಇಂತಹ ಸಮಿತಿಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. “ನಾನು 40 ವರ್ಷಗಳಿಂದ ಇಂಡಸ್ಟ್ರಿಯಲ್ಲಿದ್ದೇನೆ. ಮಹಿಳೆಯರು ಖ್ಯಾತಿ ಮತ್ತು ಐಷಾರಾಮಿ ಕಾರುಗಳಿಗಾಗಿ ಕೆಲಸಗಳನ್ನು ಮಾಡಲು ಒಪ್ಪಿಕೊಳ್ಳುವುದನ್ನು ನಾನು ನೋಡಿದ್ದೇನೆ. ಅವರು ಸಮಸ್ಯೆಯಾಗಿದ್ದರೆ ಈ ಬಗ್ಗೆ ಕಳವಳ ವ್ಯಕ್ತಪಡಿಸಬೇಕಿತ್ತು. ಮುಖ್ಯಮಂತ್ರಿ ಬಳಿಗೆ ಏಕೆ ಹೋಗಬೇಕು?” ಎಂದು ಅವರು ಕೇಳಿದ್ದಾರೆ.

ಸಭೆಯ ನಂತರ ಕೆಎಫ್‌ಸಿಸಿ ಪತ್ರಿಕಾಗೋಷ್ಠಿಯನ್ನೂ ನಡೆಸಿದ್ದು, ನಂತರ ಕೆಎಫ್‌ಸಿಸಿಯ ಕೆಲವು ಸದಸ್ಯರು ಮತ್ತು ನಟಿ ಸಂಜನಾ ನಡುವೆ ನಾಟಕೀಯ ವಾಗ್ವಾದವೂ ನಡೆಯಿತು. ಕೆಎಫ್‌ಸಿಸಿಯ ಪತ್ರಿಕಾಗೋಷ್ಠಿ ಮುಗಿದ ನಂತರ ಸಂಜನಾ ಅವರು ಕೆಎಫ್‌ಸಿಸಿ ಅಧ್ಯಕ್ಷ ಎನ್‌ಎಂ ಸುರೇಶ್ ಅವರ ಆಸನವನ್ನು ಬಳಸಿ ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಈ ವೇಳೆ ಕೆಲವು ಕೆಎಫ್‌ಸಿಸಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಜನಾ ಅವರನ್ನು “ಪ್ರೋಟೋಕಾಲ್” ಅನುಸರಿಸಲು ಕೇಳಿದ್ದು, “ಯಾರೇ ಇರ್ಲಿ, ಅವ್ರ ಅವ್ರ ಜಾಗದಲ್ಲಿ, ಅವ್ರು ಅವ್ರು ಇರ್ಬೇಕು” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನಟಿ ಸಂಜನಾ ಗಲ್ರಾನಿ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಚೌದರಿ ಅವರನ್ನು ಭೇಟಿಯಾಗಲು ಇವತ್ತು ನಾನು ಹೋಗ್ತಾ ಇದ್ದೇನೆ. ಕನ್ನಡ ಚಿತ್ರರಂಗದಲ್ಲಿ ಮಹಿಳಾ ಸುರಕ್ಷಾ ಬೋರ್ಡ್‌ ಸ್ಥಾಪನೆ ಆಗುವವರೆಗೂ ನಾನು ವಿರಮಿಸುವುದಿಲ್ಲ. ಇದು ನನ್ನ ಕನಸಾಗಿದ್ದು ನನಸು ಮಾಡುವವರೆಗೂ ಹೋರಾಡುತ್ತೇನೆ” ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...