Homeಕರ್ನಾಟಕಸಿನಿಮಾ ಸೆಟ್‌ನಲ್ಲಿ 'ಆಂತರಿಕ ಸಮಿತಿ' ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

ಸಿನಿಮಾ ಸೆಟ್‌ನಲ್ಲಿ ‘ಆಂತರಿಕ ಸಮಿತಿ’ ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

- Advertisement -
- Advertisement -

ಕೆಲಸದ ಸ್ಥಳದಲ್ಲಿ ಮಹಿಳಾ ಸುರಕ್ಷತೆಯನ್ನು ಖಾತರಿಪಡಿಸುವ ‘ಆಂತರಿಕ ಸಮಿತಿ’ ರಚನೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಕೆಎಫ್‌ಸಿಸಿ)ಯ ನಿರ್ಮಾಪಕರು ಮತ್ತು ನಟರು ಸೋಮವಾರ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಸಮಿತಿಯನ್ನು ಅನಗತ್ಯ ಎಂದು ಹೇಳಿರುವ ಕೆಎಫ್‌ಸಿಸಿ ಮುಖಂಡರು, ಅದರಿಂದಾಗಿ ಚಿತ್ರರಂಗಕ್ಕೆ “ಆರ್ಥಿಕ ನಷ್ಟ ಉಂಟಾಗಲಿದೆ” ಎಂದು ಎಂದು ಪ್ರತಿಪಾದಿಸಿದ್ದಾರೆ.ಕನ್ನಡ ಚಿತ್ರ ನಿರ್ಮಾಪಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಹೇಮಾ ಸಮಿತಿ ವರದಿಯ ನಂತರ ಅಲ್ಲಿ ಮಹಿಳಾ ನಟರ ವಿರುದ್ಧ ನಡೆದ ಲೈಂಗಿಕ ದೌರ್ಜನದ ಬೆಚ್ಚಬೀಳಿಸುವ ವರದಿಗಳು ಬಹಿರಂಗಗೊಂಡಿದ್ದವು. ಹಲವಾರು ಖ್ಯಾತ ನಟರ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣಗಳು ದಾಖಲಾಗಿ, ಮಲಯಾಳಂ ಚಿತ್ರನಟರ ಸಂಘಟನೆಯಾದ ‘ಅಮ್ಮಾ’ ಸಮಿತಿಯ ಎಲ್ಲರೂ ರಾಜೀನಾಮೆ ನೀಡಿದ್ದರು.

ಅದರ ನಂತರ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಇತ್ತೀಚೆಗೆ ಚಲನಚಿತ್ರೋದ್ಯಮದಲ್ಲಿ ಆಂತರಿಕ ಸಮಿತಿ ಸ್ಥಾಪನೆ ಮಾಡುವಂತೆ ಪ್ರಸ್ತಾಪಿಸಿತ್ತು. ಅಲ್ಲದೆ ಕನ್ನಡ ಚಿತ್ರರಂಗದ ನಟರ ಸಂಘಟನೆಯಾದ ಫೈರ್‌ ಕೂಡಾ ಹೇಮಾ ಸಮಿತಿ ಮಾದರಿಯ ಸಮಿತಿ ಕನ್ನಡ ಚಿತ್ರರಂಗದಲ್ಲೂ ರಚಿಸಬೇಕು ಎಂದು ಆಗ್ರಹಿಸಿತ್ತು. ಕೆಲಸದ ಸ್ಥಳಗಳಲ್ಲಿ ಆಂತರಿಕ ಸಮಿತಿಗಳ ರಚನೆ ಮಾಡುವುದು ಲೈಂಗಿಕ ಕಿರುಕುಳ ತಡೆಗಟ್ಟುವಿಕೆ (PoSH) ಕಾಯಿದೆಯ ಪ್ರಕಾರ ಕಡ್ಡಾಯವಾಗಿದೆ.

ಇದನ್ನೂ ಓದಿ: ಬೆಂಗಳೂರು | ನಡುರಸ್ತೆಯಲ್ಲಿ ಯುವಕನ್ನು ಬೆತ್ತಲೆಗೊಳಿಸಿದ ರೌಡಿ ಶೀಟರ್!

ಸೋಮವಾರ ನಡೆದ ಮಹಿಳಾ ಆಯೋಗ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ನಡುವೆ ನಡೆದ ಸಭೆಯಲ್ಲಿ, ಕೇರಳದ ಹೇಮಾ ಸಮಿತಿ ಮಾದರಿಯ ಸಮಿತಿ ರಚನೆಯಾದರೆ ಉದ್ಯಮದ ಹಣಕಾಸಿನ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂದು ನಿರ್ಮಾಪಕರು ವಾದಿಸಿದ್ದಾರೆ.

ಸಭೆಯಲ್ಲಿ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, “ಕೇರಳದ ಹೇಮಾ ಸಮಿತಿಯಂತಹ ಸಮಿತಿಯನ್ನು ಕರ್ನಾಟಕದಲ್ಲಿ ರಚಿಸಿದರೆ ಆರ್ಥಿಕ ನಷ್ಟವಾಗುತ್ತದೆ” ಎಂದು ಹೇಳಿದ್ದಾರೆ. ಮತ್ತೋರ್ವ ನಿರ್ಮಾಪಕ ವೆಂಕಟೇಶ್ ಅವರು ಬಂದ್‌ಗೆ ಕರೆ ನೀಡುತ್ತಾ, “ಪೋಷ್ ಬಂದ್ರೆ ಮುಗಿಯಿತು ನಮ್ ಕಥೆ” ಎಂದು ಹೇಳಿದ್ದಾರೆ.

ಆದಾಗ್ಯೂ ಮಹಿಳಾ ಆಯೋಗವು ಕನ್ನಡ ಚಿತ್ರರಂಗದಲ್ಲಿ POSH ಸಮಿತಿ ರಚಿಸಬೇಕು ಎಂಬ ಆಗ್ರಹವನ್ನು ಗಟ್ಟಿಯಾಗಿ ಮಾಡಿದ್ದು, ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಕಿರುಕುಳದ ಪ್ರಮಾಣವನ್ನು ನಿರ್ಣಯಿಸಲು ಸಮಗ್ರ ಸಮೀಕ್ಷೆ ಕೂಡಾ ನಡೆಸಬೇಕು ಎಂದು ಕೋರಿದೆ. ಜೊತೆಗೆ ಈ ಮನವಿಗೆ ಪ್ರತಿಕ್ರಿಯಿಸಲು ಕೆಎಫ್‌ಸಿಸಿಗೆ 15 ದಿನಗಳ ಕಾಲಾವಕಾಶ ನೀಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು | ಪ್ಯಾಲೆಸ್ತೀನ್ ಧ್ವಜ ಹಾರಿಸಿದ 4 ಅಪ್ರಾಪ್ತ ಬಾಲಕರ ಬಂಧನ

ಸಭೆಯಲ್ಲಿದ್ದ ಅನೇಕ ಮಹಿಳಾ ನಟರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಾಧ್ಯವಾಗಲಿಲ್ಲ ಎಂದು ಆರೋಪಿಸಿದ್ದು, ಕೆಲವು ನಟರು ಈ ಬಗ್ಗೆ ಮೌನವಹಿಸಿದ್ದಾರೆ ಎನ್ನಲಾಗಿದೆ. ನಟಿ ನೀತು ಶೆಟ್ಟಿ ಅವರು ಹಕ್ಕುಗಳು ಮತ್ತು ಸಮಾನತೆಗಾಗಿ ಫಿಲ್ಮ್ ಇಂಡಸ್ಟ್ರಿ (FIRE) ಸಂಘಟನೆಯ ಸದಸ್ಯರಾಗಿದ್ದರಿಂದ ಅವರಿಗೆ ಮಾತನಾಡಲು ಅವಕಾಶ ನೀಡದೆ ”ಸುಮ್ಮನೆ ಕುಳಿತುಕೊಳ್ಳಿ” ಎಂದು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ನಾನು ಒಬ್ಬ ನಟಿಯಾಗಿ ಸಭೆಗೆ ಬಂದಿದ್ದೇನೆ. ಉದ್ಯಮದಲ್ಲಿ ಕಿರುಕುಳ ಚಾಲ್ತಿಯಲ್ಲಿದೆ ಎಂದು ನಾನು ಸೂಚಿಸಿದೆ. ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಗಮನ ಸೆಳೆದಿದ್ದರು. ಅಲ್ಲದೆ ಚಿತ್ರರಂಗದಲ್ಲಿ ನನಗೆ ಕೂಡಾ ಕಿರುಕುಳ ನಡೆದಿದೆ” ಎಂದು ಅವರು ಹೇಳಿದ್ದಾರೆ.

ನಿರ್ದೇಶಕಿ ಕವಿತಾ ಲಂಕೇಶ್, ನಟರಾದ ತಾರಾ, ಭಾವನಾ, ನೀತು ಶೆಟ್ಟಿ, ಸಿಂಧು ಲೋಕನಾಥ್, ಸಂಜನಾ ಗಲ್ರಾನಿ ಮತ್ತು ವಾಣಿಶ್ರೀ ಸೇರಿದಂತೆ ಚಿತ್ರರಂಗದ ಸುಮಾರು 14 ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಭೆಗೆ ಹೆಚ್ಚಿನ ಮಹಿಳೆಯರು ಹಾಜರಾಗಿರಲಿಲ್ಲ ಎಂದು ಹೇಳಿದ್ದಾಗಿ ವರದಿಯಾಗಿದೆ. ಅಲ್ಲದೆ, ಮಹಿಳೆಯರ ಬಗ್ಗೆಗಿನ ಸಮಸ್ಯೆಗಳಿಂದ ವಿಷಯವನ್ನು ಬೇರೆಡೆಗೆ ತಿರುಗಿಸಲು ಸಾಕಷ್ಟು ಪ್ರಯತ್ನಗಳು ನಡೆದಿವೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ ಆಗ್ರಹ

ಏತನ್ಮಧ್ಯೆ, ಹಿರಿಯ ನಟಿ ಪುಷ್ಪಾ ಸ್ವಾಮಿ ಅವರು ಸಭೆಯನ್ನು “ಸಮಯ ವ್ಯರ್ಥ” ಎಂದು ಕರೆದಿದ್ದು, ಇಂತಹ ಸಮಿತಿಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. “ನಾನು 40 ವರ್ಷಗಳಿಂದ ಇಂಡಸ್ಟ್ರಿಯಲ್ಲಿದ್ದೇನೆ. ಮಹಿಳೆಯರು ಖ್ಯಾತಿ ಮತ್ತು ಐಷಾರಾಮಿ ಕಾರುಗಳಿಗಾಗಿ ಕೆಲಸಗಳನ್ನು ಮಾಡಲು ಒಪ್ಪಿಕೊಳ್ಳುವುದನ್ನು ನಾನು ನೋಡಿದ್ದೇನೆ. ಅವರು ಸಮಸ್ಯೆಯಾಗಿದ್ದರೆ ಈ ಬಗ್ಗೆ ಕಳವಳ ವ್ಯಕ್ತಪಡಿಸಬೇಕಿತ್ತು. ಮುಖ್ಯಮಂತ್ರಿ ಬಳಿಗೆ ಏಕೆ ಹೋಗಬೇಕು?” ಎಂದು ಅವರು ಕೇಳಿದ್ದಾರೆ.

ಸಭೆಯ ನಂತರ ಕೆಎಫ್‌ಸಿಸಿ ಪತ್ರಿಕಾಗೋಷ್ಠಿಯನ್ನೂ ನಡೆಸಿದ್ದು, ನಂತರ ಕೆಎಫ್‌ಸಿಸಿಯ ಕೆಲವು ಸದಸ್ಯರು ಮತ್ತು ನಟಿ ಸಂಜನಾ ನಡುವೆ ನಾಟಕೀಯ ವಾಗ್ವಾದವೂ ನಡೆಯಿತು. ಕೆಎಫ್‌ಸಿಸಿಯ ಪತ್ರಿಕಾಗೋಷ್ಠಿ ಮುಗಿದ ನಂತರ ಸಂಜನಾ ಅವರು ಕೆಎಫ್‌ಸಿಸಿ ಅಧ್ಯಕ್ಷ ಎನ್‌ಎಂ ಸುರೇಶ್ ಅವರ ಆಸನವನ್ನು ಬಳಸಿ ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಈ ವೇಳೆ ಕೆಲವು ಕೆಎಫ್‌ಸಿಸಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಜನಾ ಅವರನ್ನು “ಪ್ರೋಟೋಕಾಲ್” ಅನುಸರಿಸಲು ಕೇಳಿದ್ದು, “ಯಾರೇ ಇರ್ಲಿ, ಅವ್ರ ಅವ್ರ ಜಾಗದಲ್ಲಿ, ಅವ್ರು ಅವ್ರು ಇರ್ಬೇಕು” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನಟಿ ಸಂಜನಾ ಗಲ್ರಾನಿ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಚೌದರಿ ಅವರನ್ನು ಭೇಟಿಯಾಗಲು ಇವತ್ತು ನಾನು ಹೋಗ್ತಾ ಇದ್ದೇನೆ. ಕನ್ನಡ ಚಿತ್ರರಂಗದಲ್ಲಿ ಮಹಿಳಾ ಸುರಕ್ಷಾ ಬೋರ್ಡ್‌ ಸ್ಥಾಪನೆ ಆಗುವವರೆಗೂ ನಾನು ವಿರಮಿಸುವುದಿಲ್ಲ. ಇದು ನನ್ನ ಕನಸಾಗಿದ್ದು ನನಸು ಮಾಡುವವರೆಗೂ ಹೋರಾಡುತ್ತೇನೆ” ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...