Homeಕರ್ನಾಟಕಸಿನಿಮಾ ಸೆಟ್‌ನಲ್ಲಿ 'ಆಂತರಿಕ ಸಮಿತಿ' ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

ಸಿನಿಮಾ ಸೆಟ್‌ನಲ್ಲಿ ‘ಆಂತರಿಕ ಸಮಿತಿ’ ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

- Advertisement -
- Advertisement -

ಕೆಲಸದ ಸ್ಥಳದಲ್ಲಿ ಮಹಿಳಾ ಸುರಕ್ಷತೆಯನ್ನು ಖಾತರಿಪಡಿಸುವ ‘ಆಂತರಿಕ ಸಮಿತಿ’ ರಚನೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಕೆಎಫ್‌ಸಿಸಿ)ಯ ನಿರ್ಮಾಪಕರು ಮತ್ತು ನಟರು ಸೋಮವಾರ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಸಮಿತಿಯನ್ನು ಅನಗತ್ಯ ಎಂದು ಹೇಳಿರುವ ಕೆಎಫ್‌ಸಿಸಿ ಮುಖಂಡರು, ಅದರಿಂದಾಗಿ ಚಿತ್ರರಂಗಕ್ಕೆ “ಆರ್ಥಿಕ ನಷ್ಟ ಉಂಟಾಗಲಿದೆ” ಎಂದು ಎಂದು ಪ್ರತಿಪಾದಿಸಿದ್ದಾರೆ.ಕನ್ನಡ ಚಿತ್ರ ನಿರ್ಮಾಪಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಹೇಮಾ ಸಮಿತಿ ವರದಿಯ ನಂತರ ಅಲ್ಲಿ ಮಹಿಳಾ ನಟರ ವಿರುದ್ಧ ನಡೆದ ಲೈಂಗಿಕ ದೌರ್ಜನದ ಬೆಚ್ಚಬೀಳಿಸುವ ವರದಿಗಳು ಬಹಿರಂಗಗೊಂಡಿದ್ದವು. ಹಲವಾರು ಖ್ಯಾತ ನಟರ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣಗಳು ದಾಖಲಾಗಿ, ಮಲಯಾಳಂ ಚಿತ್ರನಟರ ಸಂಘಟನೆಯಾದ ‘ಅಮ್ಮಾ’ ಸಮಿತಿಯ ಎಲ್ಲರೂ ರಾಜೀನಾಮೆ ನೀಡಿದ್ದರು.

ಅದರ ನಂತರ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಇತ್ತೀಚೆಗೆ ಚಲನಚಿತ್ರೋದ್ಯಮದಲ್ಲಿ ಆಂತರಿಕ ಸಮಿತಿ ಸ್ಥಾಪನೆ ಮಾಡುವಂತೆ ಪ್ರಸ್ತಾಪಿಸಿತ್ತು. ಅಲ್ಲದೆ ಕನ್ನಡ ಚಿತ್ರರಂಗದ ನಟರ ಸಂಘಟನೆಯಾದ ಫೈರ್‌ ಕೂಡಾ ಹೇಮಾ ಸಮಿತಿ ಮಾದರಿಯ ಸಮಿತಿ ಕನ್ನಡ ಚಿತ್ರರಂಗದಲ್ಲೂ ರಚಿಸಬೇಕು ಎಂದು ಆಗ್ರಹಿಸಿತ್ತು. ಕೆಲಸದ ಸ್ಥಳಗಳಲ್ಲಿ ಆಂತರಿಕ ಸಮಿತಿಗಳ ರಚನೆ ಮಾಡುವುದು ಲೈಂಗಿಕ ಕಿರುಕುಳ ತಡೆಗಟ್ಟುವಿಕೆ (PoSH) ಕಾಯಿದೆಯ ಪ್ರಕಾರ ಕಡ್ಡಾಯವಾಗಿದೆ.

ಇದನ್ನೂ ಓದಿ: ಬೆಂಗಳೂರು | ನಡುರಸ್ತೆಯಲ್ಲಿ ಯುವಕನ್ನು ಬೆತ್ತಲೆಗೊಳಿಸಿದ ರೌಡಿ ಶೀಟರ್!

ಸೋಮವಾರ ನಡೆದ ಮಹಿಳಾ ಆಯೋಗ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ನಡುವೆ ನಡೆದ ಸಭೆಯಲ್ಲಿ, ಕೇರಳದ ಹೇಮಾ ಸಮಿತಿ ಮಾದರಿಯ ಸಮಿತಿ ರಚನೆಯಾದರೆ ಉದ್ಯಮದ ಹಣಕಾಸಿನ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂದು ನಿರ್ಮಾಪಕರು ವಾದಿಸಿದ್ದಾರೆ.

ಸಭೆಯಲ್ಲಿ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, “ಕೇರಳದ ಹೇಮಾ ಸಮಿತಿಯಂತಹ ಸಮಿತಿಯನ್ನು ಕರ್ನಾಟಕದಲ್ಲಿ ರಚಿಸಿದರೆ ಆರ್ಥಿಕ ನಷ್ಟವಾಗುತ್ತದೆ” ಎಂದು ಹೇಳಿದ್ದಾರೆ. ಮತ್ತೋರ್ವ ನಿರ್ಮಾಪಕ ವೆಂಕಟೇಶ್ ಅವರು ಬಂದ್‌ಗೆ ಕರೆ ನೀಡುತ್ತಾ, “ಪೋಷ್ ಬಂದ್ರೆ ಮುಗಿಯಿತು ನಮ್ ಕಥೆ” ಎಂದು ಹೇಳಿದ್ದಾರೆ.

ಆದಾಗ್ಯೂ ಮಹಿಳಾ ಆಯೋಗವು ಕನ್ನಡ ಚಿತ್ರರಂಗದಲ್ಲಿ POSH ಸಮಿತಿ ರಚಿಸಬೇಕು ಎಂಬ ಆಗ್ರಹವನ್ನು ಗಟ್ಟಿಯಾಗಿ ಮಾಡಿದ್ದು, ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಕಿರುಕುಳದ ಪ್ರಮಾಣವನ್ನು ನಿರ್ಣಯಿಸಲು ಸಮಗ್ರ ಸಮೀಕ್ಷೆ ಕೂಡಾ ನಡೆಸಬೇಕು ಎಂದು ಕೋರಿದೆ. ಜೊತೆಗೆ ಈ ಮನವಿಗೆ ಪ್ರತಿಕ್ರಿಯಿಸಲು ಕೆಎಫ್‌ಸಿಸಿಗೆ 15 ದಿನಗಳ ಕಾಲಾವಕಾಶ ನೀಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು | ಪ್ಯಾಲೆಸ್ತೀನ್ ಧ್ವಜ ಹಾರಿಸಿದ 4 ಅಪ್ರಾಪ್ತ ಬಾಲಕರ ಬಂಧನ

ಸಭೆಯಲ್ಲಿದ್ದ ಅನೇಕ ಮಹಿಳಾ ನಟರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಾಧ್ಯವಾಗಲಿಲ್ಲ ಎಂದು ಆರೋಪಿಸಿದ್ದು, ಕೆಲವು ನಟರು ಈ ಬಗ್ಗೆ ಮೌನವಹಿಸಿದ್ದಾರೆ ಎನ್ನಲಾಗಿದೆ. ನಟಿ ನೀತು ಶೆಟ್ಟಿ ಅವರು ಹಕ್ಕುಗಳು ಮತ್ತು ಸಮಾನತೆಗಾಗಿ ಫಿಲ್ಮ್ ಇಂಡಸ್ಟ್ರಿ (FIRE) ಸಂಘಟನೆಯ ಸದಸ್ಯರಾಗಿದ್ದರಿಂದ ಅವರಿಗೆ ಮಾತನಾಡಲು ಅವಕಾಶ ನೀಡದೆ ”ಸುಮ್ಮನೆ ಕುಳಿತುಕೊಳ್ಳಿ” ಎಂದು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ನಾನು ಒಬ್ಬ ನಟಿಯಾಗಿ ಸಭೆಗೆ ಬಂದಿದ್ದೇನೆ. ಉದ್ಯಮದಲ್ಲಿ ಕಿರುಕುಳ ಚಾಲ್ತಿಯಲ್ಲಿದೆ ಎಂದು ನಾನು ಸೂಚಿಸಿದೆ. ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಗಮನ ಸೆಳೆದಿದ್ದರು. ಅಲ್ಲದೆ ಚಿತ್ರರಂಗದಲ್ಲಿ ನನಗೆ ಕೂಡಾ ಕಿರುಕುಳ ನಡೆದಿದೆ” ಎಂದು ಅವರು ಹೇಳಿದ್ದಾರೆ.

ನಿರ್ದೇಶಕಿ ಕವಿತಾ ಲಂಕೇಶ್, ನಟರಾದ ತಾರಾ, ಭಾವನಾ, ನೀತು ಶೆಟ್ಟಿ, ಸಿಂಧು ಲೋಕನಾಥ್, ಸಂಜನಾ ಗಲ್ರಾನಿ ಮತ್ತು ವಾಣಿಶ್ರೀ ಸೇರಿದಂತೆ ಚಿತ್ರರಂಗದ ಸುಮಾರು 14 ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಭೆಗೆ ಹೆಚ್ಚಿನ ಮಹಿಳೆಯರು ಹಾಜರಾಗಿರಲಿಲ್ಲ ಎಂದು ಹೇಳಿದ್ದಾಗಿ ವರದಿಯಾಗಿದೆ. ಅಲ್ಲದೆ, ಮಹಿಳೆಯರ ಬಗ್ಗೆಗಿನ ಸಮಸ್ಯೆಗಳಿಂದ ವಿಷಯವನ್ನು ಬೇರೆಡೆಗೆ ತಿರುಗಿಸಲು ಸಾಕಷ್ಟು ಪ್ರಯತ್ನಗಳು ನಡೆದಿವೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ ಆಗ್ರಹ

ಏತನ್ಮಧ್ಯೆ, ಹಿರಿಯ ನಟಿ ಪುಷ್ಪಾ ಸ್ವಾಮಿ ಅವರು ಸಭೆಯನ್ನು “ಸಮಯ ವ್ಯರ್ಥ” ಎಂದು ಕರೆದಿದ್ದು, ಇಂತಹ ಸಮಿತಿಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. “ನಾನು 40 ವರ್ಷಗಳಿಂದ ಇಂಡಸ್ಟ್ರಿಯಲ್ಲಿದ್ದೇನೆ. ಮಹಿಳೆಯರು ಖ್ಯಾತಿ ಮತ್ತು ಐಷಾರಾಮಿ ಕಾರುಗಳಿಗಾಗಿ ಕೆಲಸಗಳನ್ನು ಮಾಡಲು ಒಪ್ಪಿಕೊಳ್ಳುವುದನ್ನು ನಾನು ನೋಡಿದ್ದೇನೆ. ಅವರು ಸಮಸ್ಯೆಯಾಗಿದ್ದರೆ ಈ ಬಗ್ಗೆ ಕಳವಳ ವ್ಯಕ್ತಪಡಿಸಬೇಕಿತ್ತು. ಮುಖ್ಯಮಂತ್ರಿ ಬಳಿಗೆ ಏಕೆ ಹೋಗಬೇಕು?” ಎಂದು ಅವರು ಕೇಳಿದ್ದಾರೆ.

ಸಭೆಯ ನಂತರ ಕೆಎಫ್‌ಸಿಸಿ ಪತ್ರಿಕಾಗೋಷ್ಠಿಯನ್ನೂ ನಡೆಸಿದ್ದು, ನಂತರ ಕೆಎಫ್‌ಸಿಸಿಯ ಕೆಲವು ಸದಸ್ಯರು ಮತ್ತು ನಟಿ ಸಂಜನಾ ನಡುವೆ ನಾಟಕೀಯ ವಾಗ್ವಾದವೂ ನಡೆಯಿತು. ಕೆಎಫ್‌ಸಿಸಿಯ ಪತ್ರಿಕಾಗೋಷ್ಠಿ ಮುಗಿದ ನಂತರ ಸಂಜನಾ ಅವರು ಕೆಎಫ್‌ಸಿಸಿ ಅಧ್ಯಕ್ಷ ಎನ್‌ಎಂ ಸುರೇಶ್ ಅವರ ಆಸನವನ್ನು ಬಳಸಿ ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಈ ವೇಳೆ ಕೆಲವು ಕೆಎಫ್‌ಸಿಸಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಜನಾ ಅವರನ್ನು “ಪ್ರೋಟೋಕಾಲ್” ಅನುಸರಿಸಲು ಕೇಳಿದ್ದು, “ಯಾರೇ ಇರ್ಲಿ, ಅವ್ರ ಅವ್ರ ಜಾಗದಲ್ಲಿ, ಅವ್ರು ಅವ್ರು ಇರ್ಬೇಕು” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನಟಿ ಸಂಜನಾ ಗಲ್ರಾನಿ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಚೌದರಿ ಅವರನ್ನು ಭೇಟಿಯಾಗಲು ಇವತ್ತು ನಾನು ಹೋಗ್ತಾ ಇದ್ದೇನೆ. ಕನ್ನಡ ಚಿತ್ರರಂಗದಲ್ಲಿ ಮಹಿಳಾ ಸುರಕ್ಷಾ ಬೋರ್ಡ್‌ ಸ್ಥಾಪನೆ ಆಗುವವರೆಗೂ ನಾನು ವಿರಮಿಸುವುದಿಲ್ಲ. ಇದು ನನ್ನ ಕನಸಾಗಿದ್ದು ನನಸು ಮಾಡುವವರೆಗೂ ಹೋರಾಡುತ್ತೇನೆ” ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...