Homeಕರ್ನಾಟಕಸಿನಿಮಾ ಸೆಟ್‌ನಲ್ಲಿ 'ಆಂತರಿಕ ಸಮಿತಿ' ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

ಸಿನಿಮಾ ಸೆಟ್‌ನಲ್ಲಿ ‘ಆಂತರಿಕ ಸಮಿತಿ’ ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

- Advertisement -
- Advertisement -

ಕೆಲಸದ ಸ್ಥಳದಲ್ಲಿ ಮಹಿಳಾ ಸುರಕ್ಷತೆಯನ್ನು ಖಾತರಿಪಡಿಸುವ ‘ಆಂತರಿಕ ಸಮಿತಿ’ ರಚನೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಕೆಎಫ್‌ಸಿಸಿ)ಯ ನಿರ್ಮಾಪಕರು ಮತ್ತು ನಟರು ಸೋಮವಾರ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಸಮಿತಿಯನ್ನು ಅನಗತ್ಯ ಎಂದು ಹೇಳಿರುವ ಕೆಎಫ್‌ಸಿಸಿ ಮುಖಂಡರು, ಅದರಿಂದಾಗಿ ಚಿತ್ರರಂಗಕ್ಕೆ “ಆರ್ಥಿಕ ನಷ್ಟ ಉಂಟಾಗಲಿದೆ” ಎಂದು ಎಂದು ಪ್ರತಿಪಾದಿಸಿದ್ದಾರೆ.ಕನ್ನಡ ಚಿತ್ರ ನಿರ್ಮಾಪಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಹೇಮಾ ಸಮಿತಿ ವರದಿಯ ನಂತರ ಅಲ್ಲಿ ಮಹಿಳಾ ನಟರ ವಿರುದ್ಧ ನಡೆದ ಲೈಂಗಿಕ ದೌರ್ಜನದ ಬೆಚ್ಚಬೀಳಿಸುವ ವರದಿಗಳು ಬಹಿರಂಗಗೊಂಡಿದ್ದವು. ಹಲವಾರು ಖ್ಯಾತ ನಟರ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣಗಳು ದಾಖಲಾಗಿ, ಮಲಯಾಳಂ ಚಿತ್ರನಟರ ಸಂಘಟನೆಯಾದ ‘ಅಮ್ಮಾ’ ಸಮಿತಿಯ ಎಲ್ಲರೂ ರಾಜೀನಾಮೆ ನೀಡಿದ್ದರು.

ಅದರ ನಂತರ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಇತ್ತೀಚೆಗೆ ಚಲನಚಿತ್ರೋದ್ಯಮದಲ್ಲಿ ಆಂತರಿಕ ಸಮಿತಿ ಸ್ಥಾಪನೆ ಮಾಡುವಂತೆ ಪ್ರಸ್ತಾಪಿಸಿತ್ತು. ಅಲ್ಲದೆ ಕನ್ನಡ ಚಿತ್ರರಂಗದ ನಟರ ಸಂಘಟನೆಯಾದ ಫೈರ್‌ ಕೂಡಾ ಹೇಮಾ ಸಮಿತಿ ಮಾದರಿಯ ಸಮಿತಿ ಕನ್ನಡ ಚಿತ್ರರಂಗದಲ್ಲೂ ರಚಿಸಬೇಕು ಎಂದು ಆಗ್ರಹಿಸಿತ್ತು. ಕೆಲಸದ ಸ್ಥಳಗಳಲ್ಲಿ ಆಂತರಿಕ ಸಮಿತಿಗಳ ರಚನೆ ಮಾಡುವುದು ಲೈಂಗಿಕ ಕಿರುಕುಳ ತಡೆಗಟ್ಟುವಿಕೆ (PoSH) ಕಾಯಿದೆಯ ಪ್ರಕಾರ ಕಡ್ಡಾಯವಾಗಿದೆ.

ಇದನ್ನೂ ಓದಿ: ಬೆಂಗಳೂರು | ನಡುರಸ್ತೆಯಲ್ಲಿ ಯುವಕನ್ನು ಬೆತ್ತಲೆಗೊಳಿಸಿದ ರೌಡಿ ಶೀಟರ್!

ಸೋಮವಾರ ನಡೆದ ಮಹಿಳಾ ಆಯೋಗ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ನಡುವೆ ನಡೆದ ಸಭೆಯಲ್ಲಿ, ಕೇರಳದ ಹೇಮಾ ಸಮಿತಿ ಮಾದರಿಯ ಸಮಿತಿ ರಚನೆಯಾದರೆ ಉದ್ಯಮದ ಹಣಕಾಸಿನ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂದು ನಿರ್ಮಾಪಕರು ವಾದಿಸಿದ್ದಾರೆ.

ಸಭೆಯಲ್ಲಿ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, “ಕೇರಳದ ಹೇಮಾ ಸಮಿತಿಯಂತಹ ಸಮಿತಿಯನ್ನು ಕರ್ನಾಟಕದಲ್ಲಿ ರಚಿಸಿದರೆ ಆರ್ಥಿಕ ನಷ್ಟವಾಗುತ್ತದೆ” ಎಂದು ಹೇಳಿದ್ದಾರೆ. ಮತ್ತೋರ್ವ ನಿರ್ಮಾಪಕ ವೆಂಕಟೇಶ್ ಅವರು ಬಂದ್‌ಗೆ ಕರೆ ನೀಡುತ್ತಾ, “ಪೋಷ್ ಬಂದ್ರೆ ಮುಗಿಯಿತು ನಮ್ ಕಥೆ” ಎಂದು ಹೇಳಿದ್ದಾರೆ.

ಆದಾಗ್ಯೂ ಮಹಿಳಾ ಆಯೋಗವು ಕನ್ನಡ ಚಿತ್ರರಂಗದಲ್ಲಿ POSH ಸಮಿತಿ ರಚಿಸಬೇಕು ಎಂಬ ಆಗ್ರಹವನ್ನು ಗಟ್ಟಿಯಾಗಿ ಮಾಡಿದ್ದು, ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಕಿರುಕುಳದ ಪ್ರಮಾಣವನ್ನು ನಿರ್ಣಯಿಸಲು ಸಮಗ್ರ ಸಮೀಕ್ಷೆ ಕೂಡಾ ನಡೆಸಬೇಕು ಎಂದು ಕೋರಿದೆ. ಜೊತೆಗೆ ಈ ಮನವಿಗೆ ಪ್ರತಿಕ್ರಿಯಿಸಲು ಕೆಎಫ್‌ಸಿಸಿಗೆ 15 ದಿನಗಳ ಕಾಲಾವಕಾಶ ನೀಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು | ಪ್ಯಾಲೆಸ್ತೀನ್ ಧ್ವಜ ಹಾರಿಸಿದ 4 ಅಪ್ರಾಪ್ತ ಬಾಲಕರ ಬಂಧನ

ಸಭೆಯಲ್ಲಿದ್ದ ಅನೇಕ ಮಹಿಳಾ ನಟರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಾಧ್ಯವಾಗಲಿಲ್ಲ ಎಂದು ಆರೋಪಿಸಿದ್ದು, ಕೆಲವು ನಟರು ಈ ಬಗ್ಗೆ ಮೌನವಹಿಸಿದ್ದಾರೆ ಎನ್ನಲಾಗಿದೆ. ನಟಿ ನೀತು ಶೆಟ್ಟಿ ಅವರು ಹಕ್ಕುಗಳು ಮತ್ತು ಸಮಾನತೆಗಾಗಿ ಫಿಲ್ಮ್ ಇಂಡಸ್ಟ್ರಿ (FIRE) ಸಂಘಟನೆಯ ಸದಸ್ಯರಾಗಿದ್ದರಿಂದ ಅವರಿಗೆ ಮಾತನಾಡಲು ಅವಕಾಶ ನೀಡದೆ ”ಸುಮ್ಮನೆ ಕುಳಿತುಕೊಳ್ಳಿ” ಎಂದು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ನಾನು ಒಬ್ಬ ನಟಿಯಾಗಿ ಸಭೆಗೆ ಬಂದಿದ್ದೇನೆ. ಉದ್ಯಮದಲ್ಲಿ ಕಿರುಕುಳ ಚಾಲ್ತಿಯಲ್ಲಿದೆ ಎಂದು ನಾನು ಸೂಚಿಸಿದೆ. ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಗಮನ ಸೆಳೆದಿದ್ದರು. ಅಲ್ಲದೆ ಚಿತ್ರರಂಗದಲ್ಲಿ ನನಗೆ ಕೂಡಾ ಕಿರುಕುಳ ನಡೆದಿದೆ” ಎಂದು ಅವರು ಹೇಳಿದ್ದಾರೆ.

ನಿರ್ದೇಶಕಿ ಕವಿತಾ ಲಂಕೇಶ್, ನಟರಾದ ತಾರಾ, ಭಾವನಾ, ನೀತು ಶೆಟ್ಟಿ, ಸಿಂಧು ಲೋಕನಾಥ್, ಸಂಜನಾ ಗಲ್ರಾನಿ ಮತ್ತು ವಾಣಿಶ್ರೀ ಸೇರಿದಂತೆ ಚಿತ್ರರಂಗದ ಸುಮಾರು 14 ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಭೆಗೆ ಹೆಚ್ಚಿನ ಮಹಿಳೆಯರು ಹಾಜರಾಗಿರಲಿಲ್ಲ ಎಂದು ಹೇಳಿದ್ದಾಗಿ ವರದಿಯಾಗಿದೆ. ಅಲ್ಲದೆ, ಮಹಿಳೆಯರ ಬಗ್ಗೆಗಿನ ಸಮಸ್ಯೆಗಳಿಂದ ವಿಷಯವನ್ನು ಬೇರೆಡೆಗೆ ತಿರುಗಿಸಲು ಸಾಕಷ್ಟು ಪ್ರಯತ್ನಗಳು ನಡೆದಿವೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ ಆಗ್ರಹ

ಏತನ್ಮಧ್ಯೆ, ಹಿರಿಯ ನಟಿ ಪುಷ್ಪಾ ಸ್ವಾಮಿ ಅವರು ಸಭೆಯನ್ನು “ಸಮಯ ವ್ಯರ್ಥ” ಎಂದು ಕರೆದಿದ್ದು, ಇಂತಹ ಸಮಿತಿಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. “ನಾನು 40 ವರ್ಷಗಳಿಂದ ಇಂಡಸ್ಟ್ರಿಯಲ್ಲಿದ್ದೇನೆ. ಮಹಿಳೆಯರು ಖ್ಯಾತಿ ಮತ್ತು ಐಷಾರಾಮಿ ಕಾರುಗಳಿಗಾಗಿ ಕೆಲಸಗಳನ್ನು ಮಾಡಲು ಒಪ್ಪಿಕೊಳ್ಳುವುದನ್ನು ನಾನು ನೋಡಿದ್ದೇನೆ. ಅವರು ಸಮಸ್ಯೆಯಾಗಿದ್ದರೆ ಈ ಬಗ್ಗೆ ಕಳವಳ ವ್ಯಕ್ತಪಡಿಸಬೇಕಿತ್ತು. ಮುಖ್ಯಮಂತ್ರಿ ಬಳಿಗೆ ಏಕೆ ಹೋಗಬೇಕು?” ಎಂದು ಅವರು ಕೇಳಿದ್ದಾರೆ.

ಸಭೆಯ ನಂತರ ಕೆಎಫ್‌ಸಿಸಿ ಪತ್ರಿಕಾಗೋಷ್ಠಿಯನ್ನೂ ನಡೆಸಿದ್ದು, ನಂತರ ಕೆಎಫ್‌ಸಿಸಿಯ ಕೆಲವು ಸದಸ್ಯರು ಮತ್ತು ನಟಿ ಸಂಜನಾ ನಡುವೆ ನಾಟಕೀಯ ವಾಗ್ವಾದವೂ ನಡೆಯಿತು. ಕೆಎಫ್‌ಸಿಸಿಯ ಪತ್ರಿಕಾಗೋಷ್ಠಿ ಮುಗಿದ ನಂತರ ಸಂಜನಾ ಅವರು ಕೆಎಫ್‌ಸಿಸಿ ಅಧ್ಯಕ್ಷ ಎನ್‌ಎಂ ಸುರೇಶ್ ಅವರ ಆಸನವನ್ನು ಬಳಸಿ ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಈ ವೇಳೆ ಕೆಲವು ಕೆಎಫ್‌ಸಿಸಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಜನಾ ಅವರನ್ನು “ಪ್ರೋಟೋಕಾಲ್” ಅನುಸರಿಸಲು ಕೇಳಿದ್ದು, “ಯಾರೇ ಇರ್ಲಿ, ಅವ್ರ ಅವ್ರ ಜಾಗದಲ್ಲಿ, ಅವ್ರು ಅವ್ರು ಇರ್ಬೇಕು” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನಟಿ ಸಂಜನಾ ಗಲ್ರಾನಿ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಚೌದರಿ ಅವರನ್ನು ಭೇಟಿಯಾಗಲು ಇವತ್ತು ನಾನು ಹೋಗ್ತಾ ಇದ್ದೇನೆ. ಕನ್ನಡ ಚಿತ್ರರಂಗದಲ್ಲಿ ಮಹಿಳಾ ಸುರಕ್ಷಾ ಬೋರ್ಡ್‌ ಸ್ಥಾಪನೆ ಆಗುವವರೆಗೂ ನಾನು ವಿರಮಿಸುವುದಿಲ್ಲ. ಇದು ನನ್ನ ಕನಸಾಗಿದ್ದು ನನಸು ಮಾಡುವವರೆಗೂ ಹೋರಾಡುತ್ತೇನೆ” ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...