Homeಕರ್ನಾಟಕಸ್ವಾತಂತ್ರೋತ್ಸವದ ದಿನ ಹಾರಾಡಿತು ಕನ್ನಡದ ಭಾವುಟ: ಇಲ್ಲಿದೆ ನೋಡಿ ಕನ್ನಡಿಗರ ಸಂಕಟ..

ಸ್ವಾತಂತ್ರೋತ್ಸವದ ದಿನ ಹಾರಾಡಿತು ಕನ್ನಡದ ಭಾವುಟ: ಇಲ್ಲಿದೆ ನೋಡಿ ಕನ್ನಡಿಗರ ಸಂಕಟ..

- Advertisement -
- Advertisement -

ಪ್ರತಿ ವರ್ಷ ಸ್ವಾತಂತ್ರೋತ್ಸವದ ದಿನ ತ್ರಿವರ್ಣವುಳ್ಳ ಭಾರತದ ರಾಷ್ಟ್ರ ಧ್ವಜ ಎಲ್ಲೆಡೆ ಹಾರಾಡುವುದನ್ನು ನೀವು ನೋಡಿರುತ್ತೀರಿ. ಹಾಗೆಯೇ ಇಂದು ಕೂಡ ತ್ರಿವರ್ಣ ಧ್ವಜಗಳು ರಾರಾಜಿಸಿದವು. ಆದರೆ ಅದರ ಮಧ್ಯೆಯೇ ತ್ರಿವರ್ಣ ಧ್ವಜಕ್ಕೆ ಬದಲಾಗಿ ಕನ್ನಡ ಧ್ವಜವನ್ನು ಹಾರಿಸಿ KarnatakaJobsForKannadigas ತಂಡ ಅಚ್ಚರಿ ಮೂಡಿಸಿದೆ. ಅಷ್ಟಕ್ಕೂ ಅವರು ತ್ರಿವರ್ಣ ಧ್ವಜಕ್ಕೆ ಬದಲಾಗಿ ಕನ್ನಡ ಧ್ವಜ ಹಾರಿಸಿದ್ದೇಕೆ ಗೊತ್ತೆ?

ಕನ್ನಡ ಬಾವುಟವನ್ನೂ ಹಾರಿಸಿದ್ವಿ. ಹೌದು, ಕೇಂದ್ರ ಸರಕಾರ ಕನ್ನಡಿಗರ ಬಗ್ಗೆ ತಳೆದಿರುವ ಧೋರಣೆಯನ್ನು ನಾವು ಖಂಡಿಸುತ್ತೇವೆ. ಕನ್ನಡ ನೆಲದ ಉದ್ಯೋಗ ಕನ್ನಡಿಗರಿಗೇ ಮೀಸಲಾಗಬೇಕು, ಪ್ರವಾಹ ದುರಂತದ ಸಂದರ್ಭಗಳಲ್ಲಿ ತಾರತಮ್ಯ ಸಲ್ಲ ಎಂದು ಎಷ್ಟೇ ಆಗ್ರಹಿಸಿದರೂ ಕೇಂದ್ರ ತನ್ನ ಧೋರಣೆ ಬದಲಿಸುತ್ತಿಲ್ಲ. ಇನ್ನಾದರೂ ಕರ್ನಾಟಕದ ಬಗೆಗಿನ ತನ್ನ ನಿಲುವನ್ನು ಕೇಂದ್ರ ಬದಲಿಸಬೇಕು. ಇಲ್ಲದೇ ಇದ್ದರೆ ನಮ್ಮ ಹೋರಾಟದ ದಾರಿ ನಮಗಿದೆ ಎಂದು KarnatakaJobsForKannadigas ತಂಡದ ಹರೀಶ್ ಕುಮಾರ್ ಬಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ

ಕರ್ನಾಟಕ ಉದ್ಯೋಗಗಳು ಕನ್ನಡಿಗರಿಗೇ ಸಿಗಬೇಕು ಎಂದು ಆಗ್ರಹಿಸಿ ಬಹಳ ದಿನಗಳಿಂದಲೂ ಕರ್ನಾಟಕದಲ್ಲಿ ದಿಟ್ಟ ದನಿ ಕೇಳಿಬರುತ್ತಿದೆ. ಈ ಹೋರಾಟ ಟ್ವಿಟ್ಟರ್ ನಲ್ಲಿಯೂ ಸಾಕಷ್ಟು ಸದ್ದು ಮಾಡಿದೆ. ಸಿದ್ದರಾಮಯ್ಯ, ಎಚ್.ಡಿ ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ಈ ಮೂವರು ಸಹ ಟ್ವಿಟ್ಟರ್ ನಲ್ಲಿ ಈ ತಂಡದ ಪ್ರಯತ್ನಕ್ಕೆ ಪ್ರತಿಕ್ರಿಯೆ ನೀಡುವ ಹಾಗೆ ಮಾಡಲಾಗಿದೆ. ಈ ತಂಡವು ಕರ್ನಾಟಕದ ಹಲವು ಕನ್ನಡಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದೊಂದಿಗೆ ನಿನ್ನೆಯಿಂದ ಇಂದಿನವರೆಗೆ ಕರ್ನಾಟಕ ಉದ್ಯೋಗಗಳು ಕನ್ನಡಿಗರಿಗೇ ಸಿಗಬೇಕು ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಕುರಿತು ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ದೂರಿ ಇಂದು ಕನ್ನಡ ಧ್ವಜ ಹಾರಿಸುವ ಮೂಲಕ ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ.

ಇದೇ ಸಂದರ್ಭದಲ್ಲಿ “ಸಣ್ಣ ಸಣ್ಣ ವಿಷಯಕ್ಕೂ ವರ್ಷಾನುಗಟ್ಟಲೆ ಹೋರಾಟ ಮಾಡಬೇಕಾದ ಪರಿಸ್ಥಿತಿ ಇರುವ ಕನ್ನಡಿಗರಿಗೆ ಯಾವ ಸೀಮೆ ಸ್ವಾತಂತ್ರ್ಯ?” ಎಂದು ಕನ್ನಡಿಗ ಅರುಣ್ ಜಾವಗಲ್ ಪ್ರಶ್ನಿಸಿದ್ದಾರೆ. ಒಟ್ಟಿನಲ್ಲಿ ಕನ್ನಡದ ಅಸ್ಮಿತೆಯನ್ನು ಮುಂದಿಟ್ಟುಕೊಂಡು ನಡೆಯುತ್ತಿರುವ ಈ ಹೋರಾಟಕ್ಕೆ ಈಗಾಗಲೇ ಸಾಕಷ್ಟು ಪರ ವಿರೋಧದ ಪ್ರತಿಕ್ರಿಯೆಗಳು ದಾಖಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...