Homeಕರ್ನಾಟಕಸ್ವಾತಂತ್ರೋತ್ಸವದ ದಿನ ಹಾರಾಡಿತು ಕನ್ನಡದ ಭಾವುಟ: ಇಲ್ಲಿದೆ ನೋಡಿ ಕನ್ನಡಿಗರ ಸಂಕಟ..

ಸ್ವಾತಂತ್ರೋತ್ಸವದ ದಿನ ಹಾರಾಡಿತು ಕನ್ನಡದ ಭಾವುಟ: ಇಲ್ಲಿದೆ ನೋಡಿ ಕನ್ನಡಿಗರ ಸಂಕಟ..

- Advertisement -
- Advertisement -

ಪ್ರತಿ ವರ್ಷ ಸ್ವಾತಂತ್ರೋತ್ಸವದ ದಿನ ತ್ರಿವರ್ಣವುಳ್ಳ ಭಾರತದ ರಾಷ್ಟ್ರ ಧ್ವಜ ಎಲ್ಲೆಡೆ ಹಾರಾಡುವುದನ್ನು ನೀವು ನೋಡಿರುತ್ತೀರಿ. ಹಾಗೆಯೇ ಇಂದು ಕೂಡ ತ್ರಿವರ್ಣ ಧ್ವಜಗಳು ರಾರಾಜಿಸಿದವು. ಆದರೆ ಅದರ ಮಧ್ಯೆಯೇ ತ್ರಿವರ್ಣ ಧ್ವಜಕ್ಕೆ ಬದಲಾಗಿ ಕನ್ನಡ ಧ್ವಜವನ್ನು ಹಾರಿಸಿ KarnatakaJobsForKannadigas ತಂಡ ಅಚ್ಚರಿ ಮೂಡಿಸಿದೆ. ಅಷ್ಟಕ್ಕೂ ಅವರು ತ್ರಿವರ್ಣ ಧ್ವಜಕ್ಕೆ ಬದಲಾಗಿ ಕನ್ನಡ ಧ್ವಜ ಹಾರಿಸಿದ್ದೇಕೆ ಗೊತ್ತೆ?

ಕನ್ನಡ ಬಾವುಟವನ್ನೂ ಹಾರಿಸಿದ್ವಿ. ಹೌದು, ಕೇಂದ್ರ ಸರಕಾರ ಕನ್ನಡಿಗರ ಬಗ್ಗೆ ತಳೆದಿರುವ ಧೋರಣೆಯನ್ನು ನಾವು ಖಂಡಿಸುತ್ತೇವೆ. ಕನ್ನಡ ನೆಲದ ಉದ್ಯೋಗ ಕನ್ನಡಿಗರಿಗೇ ಮೀಸಲಾಗಬೇಕು, ಪ್ರವಾಹ ದುರಂತದ ಸಂದರ್ಭಗಳಲ್ಲಿ ತಾರತಮ್ಯ ಸಲ್ಲ ಎಂದು ಎಷ್ಟೇ ಆಗ್ರಹಿಸಿದರೂ ಕೇಂದ್ರ ತನ್ನ ಧೋರಣೆ ಬದಲಿಸುತ್ತಿಲ್ಲ. ಇನ್ನಾದರೂ ಕರ್ನಾಟಕದ ಬಗೆಗಿನ ತನ್ನ ನಿಲುವನ್ನು ಕೇಂದ್ರ ಬದಲಿಸಬೇಕು. ಇಲ್ಲದೇ ಇದ್ದರೆ ನಮ್ಮ ಹೋರಾಟದ ದಾರಿ ನಮಗಿದೆ ಎಂದು KarnatakaJobsForKannadigas ತಂಡದ ಹರೀಶ್ ಕುಮಾರ್ ಬಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ

ಕರ್ನಾಟಕ ಉದ್ಯೋಗಗಳು ಕನ್ನಡಿಗರಿಗೇ ಸಿಗಬೇಕು ಎಂದು ಆಗ್ರಹಿಸಿ ಬಹಳ ದಿನಗಳಿಂದಲೂ ಕರ್ನಾಟಕದಲ್ಲಿ ದಿಟ್ಟ ದನಿ ಕೇಳಿಬರುತ್ತಿದೆ. ಈ ಹೋರಾಟ ಟ್ವಿಟ್ಟರ್ ನಲ್ಲಿಯೂ ಸಾಕಷ್ಟು ಸದ್ದು ಮಾಡಿದೆ. ಸಿದ್ದರಾಮಯ್ಯ, ಎಚ್.ಡಿ ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ಈ ಮೂವರು ಸಹ ಟ್ವಿಟ್ಟರ್ ನಲ್ಲಿ ಈ ತಂಡದ ಪ್ರಯತ್ನಕ್ಕೆ ಪ್ರತಿಕ್ರಿಯೆ ನೀಡುವ ಹಾಗೆ ಮಾಡಲಾಗಿದೆ. ಈ ತಂಡವು ಕರ್ನಾಟಕದ ಹಲವು ಕನ್ನಡಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದೊಂದಿಗೆ ನಿನ್ನೆಯಿಂದ ಇಂದಿನವರೆಗೆ ಕರ್ನಾಟಕ ಉದ್ಯೋಗಗಳು ಕನ್ನಡಿಗರಿಗೇ ಸಿಗಬೇಕು ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಕುರಿತು ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ದೂರಿ ಇಂದು ಕನ್ನಡ ಧ್ವಜ ಹಾರಿಸುವ ಮೂಲಕ ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ.

ಇದೇ ಸಂದರ್ಭದಲ್ಲಿ “ಸಣ್ಣ ಸಣ್ಣ ವಿಷಯಕ್ಕೂ ವರ್ಷಾನುಗಟ್ಟಲೆ ಹೋರಾಟ ಮಾಡಬೇಕಾದ ಪರಿಸ್ಥಿತಿ ಇರುವ ಕನ್ನಡಿಗರಿಗೆ ಯಾವ ಸೀಮೆ ಸ್ವಾತಂತ್ರ್ಯ?” ಎಂದು ಕನ್ನಡಿಗ ಅರುಣ್ ಜಾವಗಲ್ ಪ್ರಶ್ನಿಸಿದ್ದಾರೆ. ಒಟ್ಟಿನಲ್ಲಿ ಕನ್ನಡದ ಅಸ್ಮಿತೆಯನ್ನು ಮುಂದಿಟ್ಟುಕೊಂಡು ನಡೆಯುತ್ತಿರುವ ಈ ಹೋರಾಟಕ್ಕೆ ಈಗಾಗಲೇ ಸಾಕಷ್ಟು ಪರ ವಿರೋಧದ ಪ್ರತಿಕ್ರಿಯೆಗಳು ದಾಖಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...