Homeಕರ್ನಾಟಕಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

ಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

- Advertisement -
- Advertisement -

ದೇಶಕ್ಕೊಂದು ಧ್ವಜವಿರುವಾಗ ಕನ್ನಡ ಧ್ವಜ ಬೇಕಿಲ್ಲ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿರುವ ಸಚಿವ ಸಿಟಿ ರವಿಗೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಫುಲ್ ಕ್ಲಾಸ್ ಕೊಟ್ಟಿದ್ದಾರೆ. ಯಾರು ಯಾರು ಏನೇನು ಹೇಳಿದ್ದಾರೆ ನೋಡಿ.

“ಚೀಟಿ ರವಿಯವರೆ, ದೇಶಕ್ಕೊಂದೆ ಧ್ವಜ ಅಂದಿದ್ದೀರಿ, ಬಟ್ ತ್ರಿವರ್ಣ ಧ್ವಜವೋ ಭಗವಾ ದ್ದಜವೋ ಕರೆಕ್ಟಾಗಿ ಹೇಳಿ… ತ್ರಿವರ್ಣ ಧ್ವಜವಾದರೆ ಭಗವಾಧ್ವಜಗಳನ್ನು ಯಾರೂ ಬಳಸೋ ಹಾಗಿಲ್ಲ ಎನ್ನಿ, ಭಗವಾ ಧ್ವಜ ಆಗಿದ್ದರೆ ತ್ರಿವರ್ಣ ಧ್ವಜ ನಮಗೆ ಬೇಡ ಎನ್ನಿ… ಈ ಬಗ್ಗೆ ಸ್ಪಷ್ಟ ನಿಲುವು ಹೇಳಲು ತಾಕತ್ತಿಲ್ಲದಿದ್ದರೆ ತೆಪ್ಪಗಿರಿ. ನಮ್ಮ ಕನ್ನಡ ಧ್ವಜದ ಉಸಾಬರಿ ನಿಮಗೆ ಬೇಡ. ಕನ್ನಡಿಗರುಂಟು ಅವರ ಕನ್ನಡ ಧ್ವಜ ಉಂಟು. ಮೊದಲು “ಕನ್ನಡ ಸಂಸ್ಕೃತಿ” ಮಂತ್ರಿಗಿರಿಗೆ ರಾಜೀನಾಮೆ ಕೊಟ್ಟು ಕೆಳಗಿಳೀರಿ… ಕನ್ನಡ ಸಂಸ್ಕೃತಿ, ಕನ್ನಡತನವನ್ನ ಗೌರವಿಸಲಾಗದ ನಿಮ್ಮಂತ ನಾಲಾಯಕ್ ಗಳಿಂದ ಕನ್ನಡ ಮಾತೆ ಪಡೆದುಕೊಳ್ಳೋದಕ್ಕಿಂದ ಕಳೆದುಕೊಳ್ಳೋದೇ ಹೆಚ್ಚು..ನಡೀರಿ ಆಚೆ..” ಎಂದು ಹರ್ಷಕುಮಾರ್ ಕುಗ್ವೆ ಕಿಡಿಕಾರಿದ್ದಾರೆ.

ಕೆಂಚನೂರು ಎನ್ ಶಂಕರರವರು ಫೇಸ್ ಬುಕ್ ನಲ್ಲಿ “C T ರವಿ ಮತ್ತು ಅವರ ಪಕ್ಷ ಹುಟ್ಟುವ ಮೊದಲೇ ಈ ಬಾವುಟ ಕನ್ನಡ ಮತ್ತು ಕರ್ನಾಟಕದ ಗುರುತಾಗಿ ಇತ್ತು ಮುಂದೆಯೂ ಇರಲಿದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ”. ಎಂದು ಬರೆದಿದ್ದಾರೆ.

“ಕರ್ನಾಟಕಕ್ಕೆ ಪ್ರತ್ಯೇಕ ನಾಡದ್ವಜ ಅಗತ್ಯವಿಲ್ಲ ಎಂದ ಬಿಜೆಪಿ ಪುಡಾರಿ ಚೀಟಿ ರವಿ
ನಿನ್ನ ಮೋದಿ ನಾಗಾಲ್ಯಾಂಡಿಗೆ ಪ್ರತ್ಯೇಕ ದ್ವಜ, ಪ್ರತ್ಯೇಕ ಸ್ಥಾನಮಾನ ಕೊಟ್ಟಿದ್ದೇತಕೆ? ಎಂದು ವಿನಯ್ ಕಸ್ವೆ ಪ್ರಶ್ನಿಸಿದ್ದಾರೆ.

ಎಂ.ಆರ್ ಕೃಷ್ಣರವರು ಕನ್ನಡ ಬಾವುಟ ನಮ್ಮ ಆಸ್ಮಿತೆ. ಹಿಂದಿ ಗುಲಾಮಿಗಳು ಮತ್ತು ಕನ್ನಡದ್ರೋಹಿಗಳ ವಿರುದ್ಧ ಕಸ್ತೂರಿ ಕನ್ನಡಿಗರ ಹೋರಾಟ ನಿತ್ಯ ನಿರಂತರ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರು ಈ ಕುರಿತು ವಿವರವಾಗಿ ಬರೆದಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ತನ್ನದೇ ಆದ ಸ್ವತಂತ್ರ ಲಾಂಛನವಿದೆ. ಈಗ ಸ್ವತಂತ್ರ ಧ್ವಜವನ್ನು ಹೊಂದುವ ಸಮಯ.

ಭಾರತ ಗಣರಾಜ್ಯವು ಒಕ್ಕೂಟ ವ್ಯವಸ್ಥೆಯ ದೇಶ (Federal, albeit a quasi). ಒಕ್ಕೂಟ ವ್ಯವಸ್ಥೆಯಲ್ಲಿ ಹಲವು ವಿಚಾರಗಳಲ್ಲಿ ಸ್ವತಂತ್ರ ಅಸ್ತಿತ್ವ ಮತ್ತು ಆಡಳಿತವ್ಯಾಪ್ತಿ ಇರುವ ರಾಜ್ಯಗಳಿರುತ್ತವೆ. ಆ ರಾಜ್ಯಗಳಿಗೆ ತಮ್ಮದೇ ಆದ ಲಾಂಛನ ಮತ್ತು ಧ್ವಜಗಳಿರುತ್ತವೆ. ಹಾಗೆಯೇ ಆಯಾ ರಾಜ್ಯಗಳ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ಕೆಲವು ಸ್ವತಂತ್ರ ಕಾಯ್ದೆ, ಕಾನೂನುಗಳೂ.

ಯಾವುದೋ ಕಾರಣಕ್ಕೆ ಇಲ್ಲಿಯವರೆಗೂ ನಮ್ಮ ರಾಜ್ಯ ಸ್ವಂತ ಧ್ವಜವನ್ನು ರೂಪಿಸಿಕೊಂಡಿರಲಿಲ್ಲ ಎಂದಮಾತ್ರಕ್ಕೆ ಅದು ಮುಂದೆಂದೂ ಇರಬಾರದು ಎಂದಿಲ್ಲ.

ಈ ಹಿನ್ನೆಲೆಯಲ್ಲಿ ಕನ್ನಡಿಗರ ಮತ್ತು ಕರ್ನಾಟಕದ ಪ್ರಜೆಗಳ ಜನಾಭಿಪ್ರಾಯವನ್ನು ಗೌರವಿಸಿ ಈ ಕೂಡಲೇ ಕರ್ನಾಟಕ ರಾಜ್ಯ ಸರ್ಕಾರವು ಸ್ವತಂತ್ರ ಧ್ವಜವನ್ನು ಹೊಂದುವ ನಿಟ್ಟಿನಲ್ಲಿ ಕಾನೂನು ಪ್ರಕ್ರಿಯೆಗೆ ಮುಂದಾಗಬೇಕು ಎಂದು “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷವು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತದೆ. ರಾಜ್ಯದ “ಕನ್ನಡ ಮತ್ತು ಸಂಸ್ಕೃತಿ” ಇಲಾಖೆಯ ಸಚಿವರಾದ ಸಿ.ಟಿ.ರವಿಯವರು ಈ ಪ್ರಕ್ರಿಯೆಗೆ ಪೂರಕವಾಗಿ ತಮ್ಮ ಇಲಾಖೆಯ ವತಿಯಿಂದ ಯಾವುದೆಲ್ಲಾ ಕಾನೂನು ಮತ್ತು ಆಡಳಿತ ಪ್ರಕ್ರಿಯೆಗಳನ್ನು ಮಾಡಬೇಕಿದೆಯೋ ಅದನ್ನು ಶ್ರದ್ಧಾಭಕ್ತಿಯಿಂದ ಹಾಗೂ ಕರ್ತವ್ಯನಿಷ್ಠೆಯಿಂದ ನಿರ್ವಹಿಸಬೇಕೆಂದು ನಾವು ಅವರನ್ನು ಒತ್ತಾಯಿಸುತ್ತೇವೆ. ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡರೆ ಅದು ‘ಕರ್ನಾಟಕ ವಿರೋಧಿ ಕೃತ್ಯ’ ಎಂದು ಎಚ್ಚರಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Mr. ಸಿ.ಟಿ ರವಿ ಕನ್ನಡ ಬಾವುಟ ಹಾರಿಸಿದ್ದೇನೆ ಅದ್ ಯಾವಾ ಕೇಸ್ ಹಾಕೀಸ್ತೀಯೋ ಹಾಕ್ಸು. ನನ್ನ ಕನ್ನಡ ಭಾಷೆಗೆ ಪ್ರತ್ಯೇಕ ನಾಡಧ್ವಜ ಹೊಂದುವುದು ರಾಷ್ಟ್ರದ್ರೋಹವಾದರೆ ನಾನು ರಾಷ್ಟ ದ್ರೋಹಿಯಾಗಲು ಸಿದ್ದ….. ಎಂದು ಕನ್ನಡ ರಣಧೀರ ಪಡೆಯ ಹರೀಶ್ ಕುಮಾರ್ ಬಿ ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...