Homeಕರ್ನಾಟಕಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

ಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

- Advertisement -
- Advertisement -

ದೇಶಕ್ಕೊಂದು ಧ್ವಜವಿರುವಾಗ ಕನ್ನಡ ಧ್ವಜ ಬೇಕಿಲ್ಲ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿರುವ ಸಚಿವ ಸಿಟಿ ರವಿಗೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಫುಲ್ ಕ್ಲಾಸ್ ಕೊಟ್ಟಿದ್ದಾರೆ. ಯಾರು ಯಾರು ಏನೇನು ಹೇಳಿದ್ದಾರೆ ನೋಡಿ.

“ಚೀಟಿ ರವಿಯವರೆ, ದೇಶಕ್ಕೊಂದೆ ಧ್ವಜ ಅಂದಿದ್ದೀರಿ, ಬಟ್ ತ್ರಿವರ್ಣ ಧ್ವಜವೋ ಭಗವಾ ದ್ದಜವೋ ಕರೆಕ್ಟಾಗಿ ಹೇಳಿ… ತ್ರಿವರ್ಣ ಧ್ವಜವಾದರೆ ಭಗವಾಧ್ವಜಗಳನ್ನು ಯಾರೂ ಬಳಸೋ ಹಾಗಿಲ್ಲ ಎನ್ನಿ, ಭಗವಾ ಧ್ವಜ ಆಗಿದ್ದರೆ ತ್ರಿವರ್ಣ ಧ್ವಜ ನಮಗೆ ಬೇಡ ಎನ್ನಿ… ಈ ಬಗ್ಗೆ ಸ್ಪಷ್ಟ ನಿಲುವು ಹೇಳಲು ತಾಕತ್ತಿಲ್ಲದಿದ್ದರೆ ತೆಪ್ಪಗಿರಿ. ನಮ್ಮ ಕನ್ನಡ ಧ್ವಜದ ಉಸಾಬರಿ ನಿಮಗೆ ಬೇಡ. ಕನ್ನಡಿಗರುಂಟು ಅವರ ಕನ್ನಡ ಧ್ವಜ ಉಂಟು. ಮೊದಲು “ಕನ್ನಡ ಸಂಸ್ಕೃತಿ” ಮಂತ್ರಿಗಿರಿಗೆ ರಾಜೀನಾಮೆ ಕೊಟ್ಟು ಕೆಳಗಿಳೀರಿ… ಕನ್ನಡ ಸಂಸ್ಕೃತಿ, ಕನ್ನಡತನವನ್ನ ಗೌರವಿಸಲಾಗದ ನಿಮ್ಮಂತ ನಾಲಾಯಕ್ ಗಳಿಂದ ಕನ್ನಡ ಮಾತೆ ಪಡೆದುಕೊಳ್ಳೋದಕ್ಕಿಂದ ಕಳೆದುಕೊಳ್ಳೋದೇ ಹೆಚ್ಚು..ನಡೀರಿ ಆಚೆ..” ಎಂದು ಹರ್ಷಕುಮಾರ್ ಕುಗ್ವೆ ಕಿಡಿಕಾರಿದ್ದಾರೆ.

ಕೆಂಚನೂರು ಎನ್ ಶಂಕರರವರು ಫೇಸ್ ಬುಕ್ ನಲ್ಲಿ “C T ರವಿ ಮತ್ತು ಅವರ ಪಕ್ಷ ಹುಟ್ಟುವ ಮೊದಲೇ ಈ ಬಾವುಟ ಕನ್ನಡ ಮತ್ತು ಕರ್ನಾಟಕದ ಗುರುತಾಗಿ ಇತ್ತು ಮುಂದೆಯೂ ಇರಲಿದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ”. ಎಂದು ಬರೆದಿದ್ದಾರೆ.

“ಕರ್ನಾಟಕಕ್ಕೆ ಪ್ರತ್ಯೇಕ ನಾಡದ್ವಜ ಅಗತ್ಯವಿಲ್ಲ ಎಂದ ಬಿಜೆಪಿ ಪುಡಾರಿ ಚೀಟಿ ರವಿ
ನಿನ್ನ ಮೋದಿ ನಾಗಾಲ್ಯಾಂಡಿಗೆ ಪ್ರತ್ಯೇಕ ದ್ವಜ, ಪ್ರತ್ಯೇಕ ಸ್ಥಾನಮಾನ ಕೊಟ್ಟಿದ್ದೇತಕೆ? ಎಂದು ವಿನಯ್ ಕಸ್ವೆ ಪ್ರಶ್ನಿಸಿದ್ದಾರೆ.

ಎಂ.ಆರ್ ಕೃಷ್ಣರವರು ಕನ್ನಡ ಬಾವುಟ ನಮ್ಮ ಆಸ್ಮಿತೆ. ಹಿಂದಿ ಗುಲಾಮಿಗಳು ಮತ್ತು ಕನ್ನಡದ್ರೋಹಿಗಳ ವಿರುದ್ಧ ಕಸ್ತೂರಿ ಕನ್ನಡಿಗರ ಹೋರಾಟ ನಿತ್ಯ ನಿರಂತರ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರು ಈ ಕುರಿತು ವಿವರವಾಗಿ ಬರೆದಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ತನ್ನದೇ ಆದ ಸ್ವತಂತ್ರ ಲಾಂಛನವಿದೆ. ಈಗ ಸ್ವತಂತ್ರ ಧ್ವಜವನ್ನು ಹೊಂದುವ ಸಮಯ.

ಭಾರತ ಗಣರಾಜ್ಯವು ಒಕ್ಕೂಟ ವ್ಯವಸ್ಥೆಯ ದೇಶ (Federal, albeit a quasi). ಒಕ್ಕೂಟ ವ್ಯವಸ್ಥೆಯಲ್ಲಿ ಹಲವು ವಿಚಾರಗಳಲ್ಲಿ ಸ್ವತಂತ್ರ ಅಸ್ತಿತ್ವ ಮತ್ತು ಆಡಳಿತವ್ಯಾಪ್ತಿ ಇರುವ ರಾಜ್ಯಗಳಿರುತ್ತವೆ. ಆ ರಾಜ್ಯಗಳಿಗೆ ತಮ್ಮದೇ ಆದ ಲಾಂಛನ ಮತ್ತು ಧ್ವಜಗಳಿರುತ್ತವೆ. ಹಾಗೆಯೇ ಆಯಾ ರಾಜ್ಯಗಳ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ಕೆಲವು ಸ್ವತಂತ್ರ ಕಾಯ್ದೆ, ಕಾನೂನುಗಳೂ.

ಯಾವುದೋ ಕಾರಣಕ್ಕೆ ಇಲ್ಲಿಯವರೆಗೂ ನಮ್ಮ ರಾಜ್ಯ ಸ್ವಂತ ಧ್ವಜವನ್ನು ರೂಪಿಸಿಕೊಂಡಿರಲಿಲ್ಲ ಎಂದಮಾತ್ರಕ್ಕೆ ಅದು ಮುಂದೆಂದೂ ಇರಬಾರದು ಎಂದಿಲ್ಲ.

ಈ ಹಿನ್ನೆಲೆಯಲ್ಲಿ ಕನ್ನಡಿಗರ ಮತ್ತು ಕರ್ನಾಟಕದ ಪ್ರಜೆಗಳ ಜನಾಭಿಪ್ರಾಯವನ್ನು ಗೌರವಿಸಿ ಈ ಕೂಡಲೇ ಕರ್ನಾಟಕ ರಾಜ್ಯ ಸರ್ಕಾರವು ಸ್ವತಂತ್ರ ಧ್ವಜವನ್ನು ಹೊಂದುವ ನಿಟ್ಟಿನಲ್ಲಿ ಕಾನೂನು ಪ್ರಕ್ರಿಯೆಗೆ ಮುಂದಾಗಬೇಕು ಎಂದು “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷವು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತದೆ. ರಾಜ್ಯದ “ಕನ್ನಡ ಮತ್ತು ಸಂಸ್ಕೃತಿ” ಇಲಾಖೆಯ ಸಚಿವರಾದ ಸಿ.ಟಿ.ರವಿಯವರು ಈ ಪ್ರಕ್ರಿಯೆಗೆ ಪೂರಕವಾಗಿ ತಮ್ಮ ಇಲಾಖೆಯ ವತಿಯಿಂದ ಯಾವುದೆಲ್ಲಾ ಕಾನೂನು ಮತ್ತು ಆಡಳಿತ ಪ್ರಕ್ರಿಯೆಗಳನ್ನು ಮಾಡಬೇಕಿದೆಯೋ ಅದನ್ನು ಶ್ರದ್ಧಾಭಕ್ತಿಯಿಂದ ಹಾಗೂ ಕರ್ತವ್ಯನಿಷ್ಠೆಯಿಂದ ನಿರ್ವಹಿಸಬೇಕೆಂದು ನಾವು ಅವರನ್ನು ಒತ್ತಾಯಿಸುತ್ತೇವೆ. ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡರೆ ಅದು ‘ಕರ್ನಾಟಕ ವಿರೋಧಿ ಕೃತ್ಯ’ ಎಂದು ಎಚ್ಚರಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Mr. ಸಿ.ಟಿ ರವಿ ಕನ್ನಡ ಬಾವುಟ ಹಾರಿಸಿದ್ದೇನೆ ಅದ್ ಯಾವಾ ಕೇಸ್ ಹಾಕೀಸ್ತೀಯೋ ಹಾಕ್ಸು. ನನ್ನ ಕನ್ನಡ ಭಾಷೆಗೆ ಪ್ರತ್ಯೇಕ ನಾಡಧ್ವಜ ಹೊಂದುವುದು ರಾಷ್ಟ್ರದ್ರೋಹವಾದರೆ ನಾನು ರಾಷ್ಟ ದ್ರೋಹಿಯಾಗಲು ಸಿದ್ದ….. ಎಂದು ಕನ್ನಡ ರಣಧೀರ ಪಡೆಯ ಹರೀಶ್ ಕುಮಾರ್ ಬಿ ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...