Homeಕರ್ನಾಟಕಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

ಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

- Advertisement -
- Advertisement -

ದೇಶಕ್ಕೊಂದು ಧ್ವಜವಿರುವಾಗ ಕನ್ನಡ ಧ್ವಜ ಬೇಕಿಲ್ಲ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿರುವ ಸಚಿವ ಸಿಟಿ ರವಿಗೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಫುಲ್ ಕ್ಲಾಸ್ ಕೊಟ್ಟಿದ್ದಾರೆ. ಯಾರು ಯಾರು ಏನೇನು ಹೇಳಿದ್ದಾರೆ ನೋಡಿ.

“ಚೀಟಿ ರವಿಯವರೆ, ದೇಶಕ್ಕೊಂದೆ ಧ್ವಜ ಅಂದಿದ್ದೀರಿ, ಬಟ್ ತ್ರಿವರ್ಣ ಧ್ವಜವೋ ಭಗವಾ ದ್ದಜವೋ ಕರೆಕ್ಟಾಗಿ ಹೇಳಿ… ತ್ರಿವರ್ಣ ಧ್ವಜವಾದರೆ ಭಗವಾಧ್ವಜಗಳನ್ನು ಯಾರೂ ಬಳಸೋ ಹಾಗಿಲ್ಲ ಎನ್ನಿ, ಭಗವಾ ಧ್ವಜ ಆಗಿದ್ದರೆ ತ್ರಿವರ್ಣ ಧ್ವಜ ನಮಗೆ ಬೇಡ ಎನ್ನಿ… ಈ ಬಗ್ಗೆ ಸ್ಪಷ್ಟ ನಿಲುವು ಹೇಳಲು ತಾಕತ್ತಿಲ್ಲದಿದ್ದರೆ ತೆಪ್ಪಗಿರಿ. ನಮ್ಮ ಕನ್ನಡ ಧ್ವಜದ ಉಸಾಬರಿ ನಿಮಗೆ ಬೇಡ. ಕನ್ನಡಿಗರುಂಟು ಅವರ ಕನ್ನಡ ಧ್ವಜ ಉಂಟು. ಮೊದಲು “ಕನ್ನಡ ಸಂಸ್ಕೃತಿ” ಮಂತ್ರಿಗಿರಿಗೆ ರಾಜೀನಾಮೆ ಕೊಟ್ಟು ಕೆಳಗಿಳೀರಿ… ಕನ್ನಡ ಸಂಸ್ಕೃತಿ, ಕನ್ನಡತನವನ್ನ ಗೌರವಿಸಲಾಗದ ನಿಮ್ಮಂತ ನಾಲಾಯಕ್ ಗಳಿಂದ ಕನ್ನಡ ಮಾತೆ ಪಡೆದುಕೊಳ್ಳೋದಕ್ಕಿಂದ ಕಳೆದುಕೊಳ್ಳೋದೇ ಹೆಚ್ಚು..ನಡೀರಿ ಆಚೆ..” ಎಂದು ಹರ್ಷಕುಮಾರ್ ಕುಗ್ವೆ ಕಿಡಿಕಾರಿದ್ದಾರೆ.

ಕೆಂಚನೂರು ಎನ್ ಶಂಕರರವರು ಫೇಸ್ ಬುಕ್ ನಲ್ಲಿ “C T ರವಿ ಮತ್ತು ಅವರ ಪಕ್ಷ ಹುಟ್ಟುವ ಮೊದಲೇ ಈ ಬಾವುಟ ಕನ್ನಡ ಮತ್ತು ಕರ್ನಾಟಕದ ಗುರುತಾಗಿ ಇತ್ತು ಮುಂದೆಯೂ ಇರಲಿದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ”. ಎಂದು ಬರೆದಿದ್ದಾರೆ.

“ಕರ್ನಾಟಕಕ್ಕೆ ಪ್ರತ್ಯೇಕ ನಾಡದ್ವಜ ಅಗತ್ಯವಿಲ್ಲ ಎಂದ ಬಿಜೆಪಿ ಪುಡಾರಿ ಚೀಟಿ ರವಿ
ನಿನ್ನ ಮೋದಿ ನಾಗಾಲ್ಯಾಂಡಿಗೆ ಪ್ರತ್ಯೇಕ ದ್ವಜ, ಪ್ರತ್ಯೇಕ ಸ್ಥಾನಮಾನ ಕೊಟ್ಟಿದ್ದೇತಕೆ? ಎಂದು ವಿನಯ್ ಕಸ್ವೆ ಪ್ರಶ್ನಿಸಿದ್ದಾರೆ.

ಎಂ.ಆರ್ ಕೃಷ್ಣರವರು ಕನ್ನಡ ಬಾವುಟ ನಮ್ಮ ಆಸ್ಮಿತೆ. ಹಿಂದಿ ಗುಲಾಮಿಗಳು ಮತ್ತು ಕನ್ನಡದ್ರೋಹಿಗಳ ವಿರುದ್ಧ ಕಸ್ತೂರಿ ಕನ್ನಡಿಗರ ಹೋರಾಟ ನಿತ್ಯ ನಿರಂತರ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರು ಈ ಕುರಿತು ವಿವರವಾಗಿ ಬರೆದಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ತನ್ನದೇ ಆದ ಸ್ವತಂತ್ರ ಲಾಂಛನವಿದೆ. ಈಗ ಸ್ವತಂತ್ರ ಧ್ವಜವನ್ನು ಹೊಂದುವ ಸಮಯ.

ಭಾರತ ಗಣರಾಜ್ಯವು ಒಕ್ಕೂಟ ವ್ಯವಸ್ಥೆಯ ದೇಶ (Federal, albeit a quasi). ಒಕ್ಕೂಟ ವ್ಯವಸ್ಥೆಯಲ್ಲಿ ಹಲವು ವಿಚಾರಗಳಲ್ಲಿ ಸ್ವತಂತ್ರ ಅಸ್ತಿತ್ವ ಮತ್ತು ಆಡಳಿತವ್ಯಾಪ್ತಿ ಇರುವ ರಾಜ್ಯಗಳಿರುತ್ತವೆ. ಆ ರಾಜ್ಯಗಳಿಗೆ ತಮ್ಮದೇ ಆದ ಲಾಂಛನ ಮತ್ತು ಧ್ವಜಗಳಿರುತ್ತವೆ. ಹಾಗೆಯೇ ಆಯಾ ರಾಜ್ಯಗಳ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ಕೆಲವು ಸ್ವತಂತ್ರ ಕಾಯ್ದೆ, ಕಾನೂನುಗಳೂ.

ಯಾವುದೋ ಕಾರಣಕ್ಕೆ ಇಲ್ಲಿಯವರೆಗೂ ನಮ್ಮ ರಾಜ್ಯ ಸ್ವಂತ ಧ್ವಜವನ್ನು ರೂಪಿಸಿಕೊಂಡಿರಲಿಲ್ಲ ಎಂದಮಾತ್ರಕ್ಕೆ ಅದು ಮುಂದೆಂದೂ ಇರಬಾರದು ಎಂದಿಲ್ಲ.

ಈ ಹಿನ್ನೆಲೆಯಲ್ಲಿ ಕನ್ನಡಿಗರ ಮತ್ತು ಕರ್ನಾಟಕದ ಪ್ರಜೆಗಳ ಜನಾಭಿಪ್ರಾಯವನ್ನು ಗೌರವಿಸಿ ಈ ಕೂಡಲೇ ಕರ್ನಾಟಕ ರಾಜ್ಯ ಸರ್ಕಾರವು ಸ್ವತಂತ್ರ ಧ್ವಜವನ್ನು ಹೊಂದುವ ನಿಟ್ಟಿನಲ್ಲಿ ಕಾನೂನು ಪ್ರಕ್ರಿಯೆಗೆ ಮುಂದಾಗಬೇಕು ಎಂದು “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷವು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತದೆ. ರಾಜ್ಯದ “ಕನ್ನಡ ಮತ್ತು ಸಂಸ್ಕೃತಿ” ಇಲಾಖೆಯ ಸಚಿವರಾದ ಸಿ.ಟಿ.ರವಿಯವರು ಈ ಪ್ರಕ್ರಿಯೆಗೆ ಪೂರಕವಾಗಿ ತಮ್ಮ ಇಲಾಖೆಯ ವತಿಯಿಂದ ಯಾವುದೆಲ್ಲಾ ಕಾನೂನು ಮತ್ತು ಆಡಳಿತ ಪ್ರಕ್ರಿಯೆಗಳನ್ನು ಮಾಡಬೇಕಿದೆಯೋ ಅದನ್ನು ಶ್ರದ್ಧಾಭಕ್ತಿಯಿಂದ ಹಾಗೂ ಕರ್ತವ್ಯನಿಷ್ಠೆಯಿಂದ ನಿರ್ವಹಿಸಬೇಕೆಂದು ನಾವು ಅವರನ್ನು ಒತ್ತಾಯಿಸುತ್ತೇವೆ. ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡರೆ ಅದು ‘ಕರ್ನಾಟಕ ವಿರೋಧಿ ಕೃತ್ಯ’ ಎಂದು ಎಚ್ಚರಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Mr. ಸಿ.ಟಿ ರವಿ ಕನ್ನಡ ಬಾವುಟ ಹಾರಿಸಿದ್ದೇನೆ ಅದ್ ಯಾವಾ ಕೇಸ್ ಹಾಕೀಸ್ತೀಯೋ ಹಾಕ್ಸು. ನನ್ನ ಕನ್ನಡ ಭಾಷೆಗೆ ಪ್ರತ್ಯೇಕ ನಾಡಧ್ವಜ ಹೊಂದುವುದು ರಾಷ್ಟ್ರದ್ರೋಹವಾದರೆ ನಾನು ರಾಷ್ಟ ದ್ರೋಹಿಯಾಗಲು ಸಿದ್ದ….. ಎಂದು ಕನ್ನಡ ರಣಧೀರ ಪಡೆಯ ಹರೀಶ್ ಕುಮಾರ್ ಬಿ ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...