Homeಕರ್ನಾಟಕಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

ಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

- Advertisement -
- Advertisement -

ದೇಶಕ್ಕೊಂದು ಧ್ವಜವಿರುವಾಗ ಕನ್ನಡ ಧ್ವಜ ಬೇಕಿಲ್ಲ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿರುವ ಸಚಿವ ಸಿಟಿ ರವಿಗೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಫುಲ್ ಕ್ಲಾಸ್ ಕೊಟ್ಟಿದ್ದಾರೆ. ಯಾರು ಯಾರು ಏನೇನು ಹೇಳಿದ್ದಾರೆ ನೋಡಿ.

“ಚೀಟಿ ರವಿಯವರೆ, ದೇಶಕ್ಕೊಂದೆ ಧ್ವಜ ಅಂದಿದ್ದೀರಿ, ಬಟ್ ತ್ರಿವರ್ಣ ಧ್ವಜವೋ ಭಗವಾ ದ್ದಜವೋ ಕರೆಕ್ಟಾಗಿ ಹೇಳಿ… ತ್ರಿವರ್ಣ ಧ್ವಜವಾದರೆ ಭಗವಾಧ್ವಜಗಳನ್ನು ಯಾರೂ ಬಳಸೋ ಹಾಗಿಲ್ಲ ಎನ್ನಿ, ಭಗವಾ ಧ್ವಜ ಆಗಿದ್ದರೆ ತ್ರಿವರ್ಣ ಧ್ವಜ ನಮಗೆ ಬೇಡ ಎನ್ನಿ… ಈ ಬಗ್ಗೆ ಸ್ಪಷ್ಟ ನಿಲುವು ಹೇಳಲು ತಾಕತ್ತಿಲ್ಲದಿದ್ದರೆ ತೆಪ್ಪಗಿರಿ. ನಮ್ಮ ಕನ್ನಡ ಧ್ವಜದ ಉಸಾಬರಿ ನಿಮಗೆ ಬೇಡ. ಕನ್ನಡಿಗರುಂಟು ಅವರ ಕನ್ನಡ ಧ್ವಜ ಉಂಟು. ಮೊದಲು “ಕನ್ನಡ ಸಂಸ್ಕೃತಿ” ಮಂತ್ರಿಗಿರಿಗೆ ರಾಜೀನಾಮೆ ಕೊಟ್ಟು ಕೆಳಗಿಳೀರಿ… ಕನ್ನಡ ಸಂಸ್ಕೃತಿ, ಕನ್ನಡತನವನ್ನ ಗೌರವಿಸಲಾಗದ ನಿಮ್ಮಂತ ನಾಲಾಯಕ್ ಗಳಿಂದ ಕನ್ನಡ ಮಾತೆ ಪಡೆದುಕೊಳ್ಳೋದಕ್ಕಿಂದ ಕಳೆದುಕೊಳ್ಳೋದೇ ಹೆಚ್ಚು..ನಡೀರಿ ಆಚೆ..” ಎಂದು ಹರ್ಷಕುಮಾರ್ ಕುಗ್ವೆ ಕಿಡಿಕಾರಿದ್ದಾರೆ.

ಕೆಂಚನೂರು ಎನ್ ಶಂಕರರವರು ಫೇಸ್ ಬುಕ್ ನಲ್ಲಿ “C T ರವಿ ಮತ್ತು ಅವರ ಪಕ್ಷ ಹುಟ್ಟುವ ಮೊದಲೇ ಈ ಬಾವುಟ ಕನ್ನಡ ಮತ್ತು ಕರ್ನಾಟಕದ ಗುರುತಾಗಿ ಇತ್ತು ಮುಂದೆಯೂ ಇರಲಿದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ”. ಎಂದು ಬರೆದಿದ್ದಾರೆ.

“ಕರ್ನಾಟಕಕ್ಕೆ ಪ್ರತ್ಯೇಕ ನಾಡದ್ವಜ ಅಗತ್ಯವಿಲ್ಲ ಎಂದ ಬಿಜೆಪಿ ಪುಡಾರಿ ಚೀಟಿ ರವಿ
ನಿನ್ನ ಮೋದಿ ನಾಗಾಲ್ಯಾಂಡಿಗೆ ಪ್ರತ್ಯೇಕ ದ್ವಜ, ಪ್ರತ್ಯೇಕ ಸ್ಥಾನಮಾನ ಕೊಟ್ಟಿದ್ದೇತಕೆ? ಎಂದು ವಿನಯ್ ಕಸ್ವೆ ಪ್ರಶ್ನಿಸಿದ್ದಾರೆ.

ಎಂ.ಆರ್ ಕೃಷ್ಣರವರು ಕನ್ನಡ ಬಾವುಟ ನಮ್ಮ ಆಸ್ಮಿತೆ. ಹಿಂದಿ ಗುಲಾಮಿಗಳು ಮತ್ತು ಕನ್ನಡದ್ರೋಹಿಗಳ ವಿರುದ್ಧ ಕಸ್ತೂರಿ ಕನ್ನಡಿಗರ ಹೋರಾಟ ನಿತ್ಯ ನಿರಂತರ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರು ಈ ಕುರಿತು ವಿವರವಾಗಿ ಬರೆದಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ತನ್ನದೇ ಆದ ಸ್ವತಂತ್ರ ಲಾಂಛನವಿದೆ. ಈಗ ಸ್ವತಂತ್ರ ಧ್ವಜವನ್ನು ಹೊಂದುವ ಸಮಯ.

ಭಾರತ ಗಣರಾಜ್ಯವು ಒಕ್ಕೂಟ ವ್ಯವಸ್ಥೆಯ ದೇಶ (Federal, albeit a quasi). ಒಕ್ಕೂಟ ವ್ಯವಸ್ಥೆಯಲ್ಲಿ ಹಲವು ವಿಚಾರಗಳಲ್ಲಿ ಸ್ವತಂತ್ರ ಅಸ್ತಿತ್ವ ಮತ್ತು ಆಡಳಿತವ್ಯಾಪ್ತಿ ಇರುವ ರಾಜ್ಯಗಳಿರುತ್ತವೆ. ಆ ರಾಜ್ಯಗಳಿಗೆ ತಮ್ಮದೇ ಆದ ಲಾಂಛನ ಮತ್ತು ಧ್ವಜಗಳಿರುತ್ತವೆ. ಹಾಗೆಯೇ ಆಯಾ ರಾಜ್ಯಗಳ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ಕೆಲವು ಸ್ವತಂತ್ರ ಕಾಯ್ದೆ, ಕಾನೂನುಗಳೂ.

ಯಾವುದೋ ಕಾರಣಕ್ಕೆ ಇಲ್ಲಿಯವರೆಗೂ ನಮ್ಮ ರಾಜ್ಯ ಸ್ವಂತ ಧ್ವಜವನ್ನು ರೂಪಿಸಿಕೊಂಡಿರಲಿಲ್ಲ ಎಂದಮಾತ್ರಕ್ಕೆ ಅದು ಮುಂದೆಂದೂ ಇರಬಾರದು ಎಂದಿಲ್ಲ.

ಈ ಹಿನ್ನೆಲೆಯಲ್ಲಿ ಕನ್ನಡಿಗರ ಮತ್ತು ಕರ್ನಾಟಕದ ಪ್ರಜೆಗಳ ಜನಾಭಿಪ್ರಾಯವನ್ನು ಗೌರವಿಸಿ ಈ ಕೂಡಲೇ ಕರ್ನಾಟಕ ರಾಜ್ಯ ಸರ್ಕಾರವು ಸ್ವತಂತ್ರ ಧ್ವಜವನ್ನು ಹೊಂದುವ ನಿಟ್ಟಿನಲ್ಲಿ ಕಾನೂನು ಪ್ರಕ್ರಿಯೆಗೆ ಮುಂದಾಗಬೇಕು ಎಂದು “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷವು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತದೆ. ರಾಜ್ಯದ “ಕನ್ನಡ ಮತ್ತು ಸಂಸ್ಕೃತಿ” ಇಲಾಖೆಯ ಸಚಿವರಾದ ಸಿ.ಟಿ.ರವಿಯವರು ಈ ಪ್ರಕ್ರಿಯೆಗೆ ಪೂರಕವಾಗಿ ತಮ್ಮ ಇಲಾಖೆಯ ವತಿಯಿಂದ ಯಾವುದೆಲ್ಲಾ ಕಾನೂನು ಮತ್ತು ಆಡಳಿತ ಪ್ರಕ್ರಿಯೆಗಳನ್ನು ಮಾಡಬೇಕಿದೆಯೋ ಅದನ್ನು ಶ್ರದ್ಧಾಭಕ್ತಿಯಿಂದ ಹಾಗೂ ಕರ್ತವ್ಯನಿಷ್ಠೆಯಿಂದ ನಿರ್ವಹಿಸಬೇಕೆಂದು ನಾವು ಅವರನ್ನು ಒತ್ತಾಯಿಸುತ್ತೇವೆ. ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡರೆ ಅದು ‘ಕರ್ನಾಟಕ ವಿರೋಧಿ ಕೃತ್ಯ’ ಎಂದು ಎಚ್ಚರಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Mr. ಸಿ.ಟಿ ರವಿ ಕನ್ನಡ ಬಾವುಟ ಹಾರಿಸಿದ್ದೇನೆ ಅದ್ ಯಾವಾ ಕೇಸ್ ಹಾಕೀಸ್ತೀಯೋ ಹಾಕ್ಸು. ನನ್ನ ಕನ್ನಡ ಭಾಷೆಗೆ ಪ್ರತ್ಯೇಕ ನಾಡಧ್ವಜ ಹೊಂದುವುದು ರಾಷ್ಟ್ರದ್ರೋಹವಾದರೆ ನಾನು ರಾಷ್ಟ ದ್ರೋಹಿಯಾಗಲು ಸಿದ್ದ….. ಎಂದು ಕನ್ನಡ ರಣಧೀರ ಪಡೆಯ ಹರೀಶ್ ಕುಮಾರ್ ಬಿ ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...