Homeಕರ್ನಾಟಕಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

ಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

- Advertisement -
- Advertisement -

ದೇಶಕ್ಕೊಂದು ಧ್ವಜವಿರುವಾಗ ಕನ್ನಡ ಧ್ವಜ ಬೇಕಿಲ್ಲ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿರುವ ಸಚಿವ ಸಿಟಿ ರವಿಗೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಫುಲ್ ಕ್ಲಾಸ್ ಕೊಟ್ಟಿದ್ದಾರೆ. ಯಾರು ಯಾರು ಏನೇನು ಹೇಳಿದ್ದಾರೆ ನೋಡಿ.

“ಚೀಟಿ ರವಿಯವರೆ, ದೇಶಕ್ಕೊಂದೆ ಧ್ವಜ ಅಂದಿದ್ದೀರಿ, ಬಟ್ ತ್ರಿವರ್ಣ ಧ್ವಜವೋ ಭಗವಾ ದ್ದಜವೋ ಕರೆಕ್ಟಾಗಿ ಹೇಳಿ… ತ್ರಿವರ್ಣ ಧ್ವಜವಾದರೆ ಭಗವಾಧ್ವಜಗಳನ್ನು ಯಾರೂ ಬಳಸೋ ಹಾಗಿಲ್ಲ ಎನ್ನಿ, ಭಗವಾ ಧ್ವಜ ಆಗಿದ್ದರೆ ತ್ರಿವರ್ಣ ಧ್ವಜ ನಮಗೆ ಬೇಡ ಎನ್ನಿ… ಈ ಬಗ್ಗೆ ಸ್ಪಷ್ಟ ನಿಲುವು ಹೇಳಲು ತಾಕತ್ತಿಲ್ಲದಿದ್ದರೆ ತೆಪ್ಪಗಿರಿ. ನಮ್ಮ ಕನ್ನಡ ಧ್ವಜದ ಉಸಾಬರಿ ನಿಮಗೆ ಬೇಡ. ಕನ್ನಡಿಗರುಂಟು ಅವರ ಕನ್ನಡ ಧ್ವಜ ಉಂಟು. ಮೊದಲು “ಕನ್ನಡ ಸಂಸ್ಕೃತಿ” ಮಂತ್ರಿಗಿರಿಗೆ ರಾಜೀನಾಮೆ ಕೊಟ್ಟು ಕೆಳಗಿಳೀರಿ… ಕನ್ನಡ ಸಂಸ್ಕೃತಿ, ಕನ್ನಡತನವನ್ನ ಗೌರವಿಸಲಾಗದ ನಿಮ್ಮಂತ ನಾಲಾಯಕ್ ಗಳಿಂದ ಕನ್ನಡ ಮಾತೆ ಪಡೆದುಕೊಳ್ಳೋದಕ್ಕಿಂದ ಕಳೆದುಕೊಳ್ಳೋದೇ ಹೆಚ್ಚು..ನಡೀರಿ ಆಚೆ..” ಎಂದು ಹರ್ಷಕುಮಾರ್ ಕುಗ್ವೆ ಕಿಡಿಕಾರಿದ್ದಾರೆ.

ಕೆಂಚನೂರು ಎನ್ ಶಂಕರರವರು ಫೇಸ್ ಬುಕ್ ನಲ್ಲಿ “C T ರವಿ ಮತ್ತು ಅವರ ಪಕ್ಷ ಹುಟ್ಟುವ ಮೊದಲೇ ಈ ಬಾವುಟ ಕನ್ನಡ ಮತ್ತು ಕರ್ನಾಟಕದ ಗುರುತಾಗಿ ಇತ್ತು ಮುಂದೆಯೂ ಇರಲಿದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ”. ಎಂದು ಬರೆದಿದ್ದಾರೆ.

“ಕರ್ನಾಟಕಕ್ಕೆ ಪ್ರತ್ಯೇಕ ನಾಡದ್ವಜ ಅಗತ್ಯವಿಲ್ಲ ಎಂದ ಬಿಜೆಪಿ ಪುಡಾರಿ ಚೀಟಿ ರವಿ
ನಿನ್ನ ಮೋದಿ ನಾಗಾಲ್ಯಾಂಡಿಗೆ ಪ್ರತ್ಯೇಕ ದ್ವಜ, ಪ್ರತ್ಯೇಕ ಸ್ಥಾನಮಾನ ಕೊಟ್ಟಿದ್ದೇತಕೆ? ಎಂದು ವಿನಯ್ ಕಸ್ವೆ ಪ್ರಶ್ನಿಸಿದ್ದಾರೆ.

ಎಂ.ಆರ್ ಕೃಷ್ಣರವರು ಕನ್ನಡ ಬಾವುಟ ನಮ್ಮ ಆಸ್ಮಿತೆ. ಹಿಂದಿ ಗುಲಾಮಿಗಳು ಮತ್ತು ಕನ್ನಡದ್ರೋಹಿಗಳ ವಿರುದ್ಧ ಕಸ್ತೂರಿ ಕನ್ನಡಿಗರ ಹೋರಾಟ ನಿತ್ಯ ನಿರಂತರ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರು ಈ ಕುರಿತು ವಿವರವಾಗಿ ಬರೆದಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ತನ್ನದೇ ಆದ ಸ್ವತಂತ್ರ ಲಾಂಛನವಿದೆ. ಈಗ ಸ್ವತಂತ್ರ ಧ್ವಜವನ್ನು ಹೊಂದುವ ಸಮಯ.

ಭಾರತ ಗಣರಾಜ್ಯವು ಒಕ್ಕೂಟ ವ್ಯವಸ್ಥೆಯ ದೇಶ (Federal, albeit a quasi). ಒಕ್ಕೂಟ ವ್ಯವಸ್ಥೆಯಲ್ಲಿ ಹಲವು ವಿಚಾರಗಳಲ್ಲಿ ಸ್ವತಂತ್ರ ಅಸ್ತಿತ್ವ ಮತ್ತು ಆಡಳಿತವ್ಯಾಪ್ತಿ ಇರುವ ರಾಜ್ಯಗಳಿರುತ್ತವೆ. ಆ ರಾಜ್ಯಗಳಿಗೆ ತಮ್ಮದೇ ಆದ ಲಾಂಛನ ಮತ್ತು ಧ್ವಜಗಳಿರುತ್ತವೆ. ಹಾಗೆಯೇ ಆಯಾ ರಾಜ್ಯಗಳ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ಕೆಲವು ಸ್ವತಂತ್ರ ಕಾಯ್ದೆ, ಕಾನೂನುಗಳೂ.

ಯಾವುದೋ ಕಾರಣಕ್ಕೆ ಇಲ್ಲಿಯವರೆಗೂ ನಮ್ಮ ರಾಜ್ಯ ಸ್ವಂತ ಧ್ವಜವನ್ನು ರೂಪಿಸಿಕೊಂಡಿರಲಿಲ್ಲ ಎಂದಮಾತ್ರಕ್ಕೆ ಅದು ಮುಂದೆಂದೂ ಇರಬಾರದು ಎಂದಿಲ್ಲ.

ಈ ಹಿನ್ನೆಲೆಯಲ್ಲಿ ಕನ್ನಡಿಗರ ಮತ್ತು ಕರ್ನಾಟಕದ ಪ್ರಜೆಗಳ ಜನಾಭಿಪ್ರಾಯವನ್ನು ಗೌರವಿಸಿ ಈ ಕೂಡಲೇ ಕರ್ನಾಟಕ ರಾಜ್ಯ ಸರ್ಕಾರವು ಸ್ವತಂತ್ರ ಧ್ವಜವನ್ನು ಹೊಂದುವ ನಿಟ್ಟಿನಲ್ಲಿ ಕಾನೂನು ಪ್ರಕ್ರಿಯೆಗೆ ಮುಂದಾಗಬೇಕು ಎಂದು “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷವು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತದೆ. ರಾಜ್ಯದ “ಕನ್ನಡ ಮತ್ತು ಸಂಸ್ಕೃತಿ” ಇಲಾಖೆಯ ಸಚಿವರಾದ ಸಿ.ಟಿ.ರವಿಯವರು ಈ ಪ್ರಕ್ರಿಯೆಗೆ ಪೂರಕವಾಗಿ ತಮ್ಮ ಇಲಾಖೆಯ ವತಿಯಿಂದ ಯಾವುದೆಲ್ಲಾ ಕಾನೂನು ಮತ್ತು ಆಡಳಿತ ಪ್ರಕ್ರಿಯೆಗಳನ್ನು ಮಾಡಬೇಕಿದೆಯೋ ಅದನ್ನು ಶ್ರದ್ಧಾಭಕ್ತಿಯಿಂದ ಹಾಗೂ ಕರ್ತವ್ಯನಿಷ್ಠೆಯಿಂದ ನಿರ್ವಹಿಸಬೇಕೆಂದು ನಾವು ಅವರನ್ನು ಒತ್ತಾಯಿಸುತ್ತೇವೆ. ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡರೆ ಅದು ‘ಕರ್ನಾಟಕ ವಿರೋಧಿ ಕೃತ್ಯ’ ಎಂದು ಎಚ್ಚರಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Mr. ಸಿ.ಟಿ ರವಿ ಕನ್ನಡ ಬಾವುಟ ಹಾರಿಸಿದ್ದೇನೆ ಅದ್ ಯಾವಾ ಕೇಸ್ ಹಾಕೀಸ್ತೀಯೋ ಹಾಕ್ಸು. ನನ್ನ ಕನ್ನಡ ಭಾಷೆಗೆ ಪ್ರತ್ಯೇಕ ನಾಡಧ್ವಜ ಹೊಂದುವುದು ರಾಷ್ಟ್ರದ್ರೋಹವಾದರೆ ನಾನು ರಾಷ್ಟ ದ್ರೋಹಿಯಾಗಲು ಸಿದ್ದ….. ಎಂದು ಕನ್ನಡ ರಣಧೀರ ಪಡೆಯ ಹರೀಶ್ ಕುಮಾರ್ ಬಿ ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...