Homeಕರ್ನಾಟಕಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

ಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

- Advertisement -
- Advertisement -

ದೇಶಕ್ಕೊಂದು ಧ್ವಜವಿರುವಾಗ ಕನ್ನಡ ಧ್ವಜ ಬೇಕಿಲ್ಲ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿರುವ ಸಚಿವ ಸಿಟಿ ರವಿಗೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಫುಲ್ ಕ್ಲಾಸ್ ಕೊಟ್ಟಿದ್ದಾರೆ. ಯಾರು ಯಾರು ಏನೇನು ಹೇಳಿದ್ದಾರೆ ನೋಡಿ.

“ಚೀಟಿ ರವಿಯವರೆ, ದೇಶಕ್ಕೊಂದೆ ಧ್ವಜ ಅಂದಿದ್ದೀರಿ, ಬಟ್ ತ್ರಿವರ್ಣ ಧ್ವಜವೋ ಭಗವಾ ದ್ದಜವೋ ಕರೆಕ್ಟಾಗಿ ಹೇಳಿ… ತ್ರಿವರ್ಣ ಧ್ವಜವಾದರೆ ಭಗವಾಧ್ವಜಗಳನ್ನು ಯಾರೂ ಬಳಸೋ ಹಾಗಿಲ್ಲ ಎನ್ನಿ, ಭಗವಾ ಧ್ವಜ ಆಗಿದ್ದರೆ ತ್ರಿವರ್ಣ ಧ್ವಜ ನಮಗೆ ಬೇಡ ಎನ್ನಿ… ಈ ಬಗ್ಗೆ ಸ್ಪಷ್ಟ ನಿಲುವು ಹೇಳಲು ತಾಕತ್ತಿಲ್ಲದಿದ್ದರೆ ತೆಪ್ಪಗಿರಿ. ನಮ್ಮ ಕನ್ನಡ ಧ್ವಜದ ಉಸಾಬರಿ ನಿಮಗೆ ಬೇಡ. ಕನ್ನಡಿಗರುಂಟು ಅವರ ಕನ್ನಡ ಧ್ವಜ ಉಂಟು. ಮೊದಲು “ಕನ್ನಡ ಸಂಸ್ಕೃತಿ” ಮಂತ್ರಿಗಿರಿಗೆ ರಾಜೀನಾಮೆ ಕೊಟ್ಟು ಕೆಳಗಿಳೀರಿ… ಕನ್ನಡ ಸಂಸ್ಕೃತಿ, ಕನ್ನಡತನವನ್ನ ಗೌರವಿಸಲಾಗದ ನಿಮ್ಮಂತ ನಾಲಾಯಕ್ ಗಳಿಂದ ಕನ್ನಡ ಮಾತೆ ಪಡೆದುಕೊಳ್ಳೋದಕ್ಕಿಂದ ಕಳೆದುಕೊಳ್ಳೋದೇ ಹೆಚ್ಚು..ನಡೀರಿ ಆಚೆ..” ಎಂದು ಹರ್ಷಕುಮಾರ್ ಕುಗ್ವೆ ಕಿಡಿಕಾರಿದ್ದಾರೆ.

ಕೆಂಚನೂರು ಎನ್ ಶಂಕರರವರು ಫೇಸ್ ಬುಕ್ ನಲ್ಲಿ “C T ರವಿ ಮತ್ತು ಅವರ ಪಕ್ಷ ಹುಟ್ಟುವ ಮೊದಲೇ ಈ ಬಾವುಟ ಕನ್ನಡ ಮತ್ತು ಕರ್ನಾಟಕದ ಗುರುತಾಗಿ ಇತ್ತು ಮುಂದೆಯೂ ಇರಲಿದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ”. ಎಂದು ಬರೆದಿದ್ದಾರೆ.

“ಕರ್ನಾಟಕಕ್ಕೆ ಪ್ರತ್ಯೇಕ ನಾಡದ್ವಜ ಅಗತ್ಯವಿಲ್ಲ ಎಂದ ಬಿಜೆಪಿ ಪುಡಾರಿ ಚೀಟಿ ರವಿ
ನಿನ್ನ ಮೋದಿ ನಾಗಾಲ್ಯಾಂಡಿಗೆ ಪ್ರತ್ಯೇಕ ದ್ವಜ, ಪ್ರತ್ಯೇಕ ಸ್ಥಾನಮಾನ ಕೊಟ್ಟಿದ್ದೇತಕೆ? ಎಂದು ವಿನಯ್ ಕಸ್ವೆ ಪ್ರಶ್ನಿಸಿದ್ದಾರೆ.

ಎಂ.ಆರ್ ಕೃಷ್ಣರವರು ಕನ್ನಡ ಬಾವುಟ ನಮ್ಮ ಆಸ್ಮಿತೆ. ಹಿಂದಿ ಗುಲಾಮಿಗಳು ಮತ್ತು ಕನ್ನಡದ್ರೋಹಿಗಳ ವಿರುದ್ಧ ಕಸ್ತೂರಿ ಕನ್ನಡಿಗರ ಹೋರಾಟ ನಿತ್ಯ ನಿರಂತರ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರು ಈ ಕುರಿತು ವಿವರವಾಗಿ ಬರೆದಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ತನ್ನದೇ ಆದ ಸ್ವತಂತ್ರ ಲಾಂಛನವಿದೆ. ಈಗ ಸ್ವತಂತ್ರ ಧ್ವಜವನ್ನು ಹೊಂದುವ ಸಮಯ.

ಭಾರತ ಗಣರಾಜ್ಯವು ಒಕ್ಕೂಟ ವ್ಯವಸ್ಥೆಯ ದೇಶ (Federal, albeit a quasi). ಒಕ್ಕೂಟ ವ್ಯವಸ್ಥೆಯಲ್ಲಿ ಹಲವು ವಿಚಾರಗಳಲ್ಲಿ ಸ್ವತಂತ್ರ ಅಸ್ತಿತ್ವ ಮತ್ತು ಆಡಳಿತವ್ಯಾಪ್ತಿ ಇರುವ ರಾಜ್ಯಗಳಿರುತ್ತವೆ. ಆ ರಾಜ್ಯಗಳಿಗೆ ತಮ್ಮದೇ ಆದ ಲಾಂಛನ ಮತ್ತು ಧ್ವಜಗಳಿರುತ್ತವೆ. ಹಾಗೆಯೇ ಆಯಾ ರಾಜ್ಯಗಳ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ಕೆಲವು ಸ್ವತಂತ್ರ ಕಾಯ್ದೆ, ಕಾನೂನುಗಳೂ.

ಯಾವುದೋ ಕಾರಣಕ್ಕೆ ಇಲ್ಲಿಯವರೆಗೂ ನಮ್ಮ ರಾಜ್ಯ ಸ್ವಂತ ಧ್ವಜವನ್ನು ರೂಪಿಸಿಕೊಂಡಿರಲಿಲ್ಲ ಎಂದಮಾತ್ರಕ್ಕೆ ಅದು ಮುಂದೆಂದೂ ಇರಬಾರದು ಎಂದಿಲ್ಲ.

ಈ ಹಿನ್ನೆಲೆಯಲ್ಲಿ ಕನ್ನಡಿಗರ ಮತ್ತು ಕರ್ನಾಟಕದ ಪ್ರಜೆಗಳ ಜನಾಭಿಪ್ರಾಯವನ್ನು ಗೌರವಿಸಿ ಈ ಕೂಡಲೇ ಕರ್ನಾಟಕ ರಾಜ್ಯ ಸರ್ಕಾರವು ಸ್ವತಂತ್ರ ಧ್ವಜವನ್ನು ಹೊಂದುವ ನಿಟ್ಟಿನಲ್ಲಿ ಕಾನೂನು ಪ್ರಕ್ರಿಯೆಗೆ ಮುಂದಾಗಬೇಕು ಎಂದು “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷವು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತದೆ. ರಾಜ್ಯದ “ಕನ್ನಡ ಮತ್ತು ಸಂಸ್ಕೃತಿ” ಇಲಾಖೆಯ ಸಚಿವರಾದ ಸಿ.ಟಿ.ರವಿಯವರು ಈ ಪ್ರಕ್ರಿಯೆಗೆ ಪೂರಕವಾಗಿ ತಮ್ಮ ಇಲಾಖೆಯ ವತಿಯಿಂದ ಯಾವುದೆಲ್ಲಾ ಕಾನೂನು ಮತ್ತು ಆಡಳಿತ ಪ್ರಕ್ರಿಯೆಗಳನ್ನು ಮಾಡಬೇಕಿದೆಯೋ ಅದನ್ನು ಶ್ರದ್ಧಾಭಕ್ತಿಯಿಂದ ಹಾಗೂ ಕರ್ತವ್ಯನಿಷ್ಠೆಯಿಂದ ನಿರ್ವಹಿಸಬೇಕೆಂದು ನಾವು ಅವರನ್ನು ಒತ್ತಾಯಿಸುತ್ತೇವೆ. ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡರೆ ಅದು ‘ಕರ್ನಾಟಕ ವಿರೋಧಿ ಕೃತ್ಯ’ ಎಂದು ಎಚ್ಚರಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Mr. ಸಿ.ಟಿ ರವಿ ಕನ್ನಡ ಬಾವುಟ ಹಾರಿಸಿದ್ದೇನೆ ಅದ್ ಯಾವಾ ಕೇಸ್ ಹಾಕೀಸ್ತೀಯೋ ಹಾಕ್ಸು. ನನ್ನ ಕನ್ನಡ ಭಾಷೆಗೆ ಪ್ರತ್ಯೇಕ ನಾಡಧ್ವಜ ಹೊಂದುವುದು ರಾಷ್ಟ್ರದ್ರೋಹವಾದರೆ ನಾನು ರಾಷ್ಟ ದ್ರೋಹಿಯಾಗಲು ಸಿದ್ದ….. ಎಂದು ಕನ್ನಡ ರಣಧೀರ ಪಡೆಯ ಹರೀಶ್ ಕುಮಾರ್ ಬಿ ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...